Breaking News

ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿ ಬಿಡುಗಡೆಗೊಳಿಸಿದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರವೇಶ ಪ್ರಕ್ರಿಯೆಯ ಸಮಯದಲ್ಲಿ ಉಂಟಾಗುವ ಗೊಂದಲ ಕಡಿಮೆ ಮಾಡುವ ಉದ್ದೇಶದಿಂದ ಸಮಗ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬಂದವರು, ಅರ್ಜಿ ಸಲ್ಲಿಸುವ ವಿಧಾನಗಳು, ಕೌನ್ಸೆಲಿಂಗ್ ಹಂತಗಳು ಮತ್ತು ಫಾರ್ಮ್ ಭರ್ತಿ ಮಾಡುವಾಗ ಅರ್ಥಮಾಡಿಕೊಳ್ಳಲು ಕಷ್ಟಪಡುತ್ತಾರೆ ಎಂದು ಹೇಳಿದರು. ಈ ಅಂತರ …

Read More »

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ

ಇ-ಸ್ವತ್ತು: ಆನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಕ್ರಮ- ಪ್ರಿಯಾಂಕ್‌ ಖರ್ಗೆ ಬೆಂಗಳೂರು: ಇ-ಸ್ವತ್ತು ಆನ್‌ಲೈನ್​​ ಅರ್ಜಿ ಸಲ್ಲಿಕೆಯಲ್ಲಿ NIC ತಾಂತ್ರಿಕ ದೋಷ ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು, ಆತಂಕ ಬೇಡ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ ರಾಜ್​​ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್​​ ಮತ್ತು ಪಂಚಾಯತ್​ ರಾಜ್​ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ …

Read More »

ಹಿಂದೂ ಉತ್ತರಾಧಿಕಾರ ಕಾಯಿದೆ ಸೆಕ್ಷನ್ 6ರ ಗೊಂದಲ ಸರಿಪಡಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಹಿಂದೂ ಉತ್ತರಾಧಿಕಾರ ಕಾಯಿದೆ-1956ರ ಸೆಕ್ಷನ್ 6ರಲ್ಲಿರುವ ತಿದ್ದುಪಡಿಯಲ್ಲಿ ಮೃತಪಟ್ಟ ವ್ಯಕ್ತಿಯ ತಾಯಿ ಮತ್ತು ವಿಧವಾ ಪತ್ನಿಯ ಹಕ್ಕುಗಳ ಕುರಿತ ಅಸ್ಪಷ್ಟತೆಗಳ ಕುರಿತಂತೆ ಕೇಂದ್ರ ಸರ್ಕಾರ ಕೆಲವು ನಿಬಂಧನೆಗಳಿಗೆ ಮರು ತಿದ್ದುಪಡಿ ಮಾಡಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್‌ ತಿಳಿಸಿದೆ. ತನ್ನ ಮೃತಪಟ್ಟ ಪತಿಗೆ ಸೇರಿದ ಆಸ್ತಿಗಳ ಮೇಲಿನ ಹಕ್ಕುಗಳ ಕುರಿತಂತೆ ಸಿವಿಲ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ, ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಕೊಪ್ಪದ ಶರಣವ್ವ ಎಂಬವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಸಫಾರಿಗೆ ಅನುಮತಿ ನೀಡುವ ಬಗ್ಗೆ ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ವನ್ಯಜೀವಿ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಿತು. ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ …

Read More »

ಕಾಲ್ತುಳಿತದಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಕ್ರಿಕೆಟ್ ಟೂರ್ನಿ ನಡೆಸಬೇಕು ಎಂದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

ಬೆಂಗಳೂರು: ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ ಎಂದು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಪಂದ್ಯಾವಳಿ ನಿಲ್ಲಿಸೋದು ಪರಿಹಾರವಲ್ಲ. ಮತ್ತೆ ಅಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಆಟವಾಡಿಸಬೇಕು. ಪಂದ್ಯಾವಳಿ ನಡೆಯಬೇಕೆಂಬುದು ಎಲ್ಲರ ಬಯಕೆ. ದುರಂತ ಆಗಬಾರದಾಗಿತ್ತು, ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ನೋವು ಸಾವನ್ನಪ್ಪಿದ ಕುಟುಂಬದವರಿಗೆ ಇದೆ” ಎಂದರು. ಕರ್ನಾಟಕ …

Read More »

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೆಂಗಳೂರು, ಜನವರಿ 2 : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ …

Read More »

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ ಹಾಗೂ ಓರ್ವನ ಸಾವಿನ ಹಿನ್ನೆಲೆಯಲ್ಲಿ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತುಗೊಳಿಸಲಾಗಿದೆ. ಗಲಭೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ವಿಫಲರಾದ ಆರೋಪ ಮತ್ತು ಪರಿಸ್ಥಿತಿ ಕುರಿತು ಮೇಲಧಿಕಾರಿಗಳಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಲು ವಿಫಲರಾದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.

Read More »

ಗಂಡನ ಸಾವಿನಿಂದ ಹೊರಬರಲಾರದೆ ಸಾವಿಗೆ ಶರಣಾದ ಮಹಿಳೆ

ಗಂಡನ ಸಾವಿನಿಂದ ಹೊರಬರಲಾರದೆ ಸಾವಿಗೆ ಶರಣಾದ ಮಹಿಳೆ ಇಸ್ರೇಲ್‌ನಲ್ಲಿ ಕೇ‌ರ್ ಟೇಕರ್ ಆಗಿದ್ದ ಕೇರಳ ಮೂಲದ ಜಿನೇಶ್‌ ಅನುಮಾನಾಸ್ಪದವಾಗಿ ಮೃತಪಟ್ಟ ಒಂದು ತಿಂಗಳಲ್ಲೇ, ಆಘಾತ ತಾಳಲಾರದೆ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಬುಧವಾರ ನಡೆದಿದೆ. ದಂಪತಿಯ ಸಾವಿನಿಂದ ಹತ್ತು ವರ್ಷದ ಪುತ್ರಿ ಈಗ ಅನಾಥಳಾಗಿದ್ದು, ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ. ರೇಷ್ಮಾಗೆ ಕೌನ್ಸಲಿಂಗ್ ಮಾಡಲಾಗಿತ್ತು. ಆದರೂ ಆಘಾತದಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಚೇತರಿಸಿಕೊಳ್ಳದ ರೇಷ್ಮಾ ಬದುಕು ಅಂತ್ಯಗೊಳಿಸಿದ್ದಾರೆ.

Read More »

ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ

ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಿತ ದುಷ್ಕೃತ್ಯ ಎಂದು ಖಂಡಿಸಿದ್ದಾರೆ. ಬ್ಯಾನ‌ರ್ ಅಳವಡಿಸುವುದನ್ನು ನೆಪವಾಗಿಸಿಕೊಂಡು ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬವನ್ನು ಗುರಿಯಾಗಿಸಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ, ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡವಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ದುಷ್ಕೃತ್ಯ ನಡೆದಿದೆ. ಜನಾರ್ದನ ರೆಡ್ಡಿ …

Read More »

ಹಿರಿಯ ಲೇಖಕರಾದ ಶ್ರೀ ಯುತ ಜಿಬಿ ಪಾಟೀಲ್ ಅವರ ಸಮಯೋಚಿತ ಲೇಖನವಿದು ವಿಜಾಪುರದ ‘ಸಂಜಿವಿನಿ’ಗೆ ಸಂಚಕಾರ:

ಇದು ಸರಕಾರವೋ ಅಥವಾ ಸಾರ್ವಜನಿಕ ಆಸ್ತಿಯ ದಲ್ಲಾಳಿಯೋ? “ಬಡವನ ಆಸ್ತಿ ನುಂಗುವವನೇ ನಾಯಕ, ನ್ಯಾಯ ಕೇಳುವವನೇ ದೇಶದ್ರೋಹಿ!” – ಇದೇನಾ ನವ ಭಾರತದ ಪರಿಕಲ್ಪನೆ? ವಿಜಾಪುರದ ಬಿಸಿಲ ನಾಡಿನಲ್ಲಿ ಬಡವರ ಪಾಲಿಗೆ ಆಸರೆಯಾಗಿದ್ದ ೧೫೦ ಎಕರೆ ವಿಸ್ತೀರ್ಣದ ಸರಕಾರಿ ಆಸ್ಪತ್ರೆಯ ಜಮೀನು ಇಂದು ರಾಜಕಾರಣಿಗಳ ಮತ್ತು ಭೂಮಾಫಿಯಾದ ಕೆಟ್ಟ ಕಣ್ಣಿಗೆ ಬಿದ್ದಿದೆ. ಬ್ರಿಟಿಷರ ಕಾಲದ ಮಹಾತ್ಮರು ಬಡವರಿಗಾಗಿ ದಾನ ನೀಡಿದ ಈ ‘ಬಂಗಾರದ ಭೂಮಿ’ಯನ್ನು ‘ಪಿಪಿಪಿ’ (PPP) ಎಂಬ ಮುಸುಕಿನಡಿ …

Read More »