Breaking News

ಮನೆ ಮನೆಗೆ ತೆರಳಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ಮನೆ ಮನೆಗೆ ತೆರಳಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಕೋಲ್ವಾ ಮತ್ತು ಬೆನೌಲಿಮ್ ಜಿಲ್ಲಾ ಪಂಚಾಯತ್ ಚುನಾವಣೆಯ ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಮನೆ ಮನೆಗೆ ತೆರಳಿ ಮತದಾರರಲ್ಲಿ ಮತ ಯಾಚನೆ ಮಾಡಿದರು ಈ ಸಂದರ್ಭದಲ್ಲಿ ಮತದಾರರು ಕೂಡಾ ಉತ್ತಮ ರೀತಿಯಲ್ಲಿ ಸ್ಪಂದಿಸುವ …

Read More »

ಏತ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿ ತಂಡದಿಂದ ಮಹಾಲಕ್ಷ್ಮಿ ಎತ್ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ

ಚಿಕ್ಕೋಡಿ:ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮುಖಾಂತರ ರೈತರಿಗೆ ನೀರು ಸಿಗಬೇಕು ಎಂದು ಶಾಸಕರಾದ ಗಣೇಶ್ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿಯವರ ಉದ್ದೇಶವಾಗಿದೆ. ಮತದಾರರ ಋಣವನ್ನು ತೀರಿಸುವ ಕಾರ್ಯ ಮಾಡುವ ಮುಖಂಡರಿಗೆ ಆಯ್ಕೆ ಮಾಡಿದ್ದೀರಾ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಅವರು ರಾಜ್ಯದ 224 ಕ್ಷೇತ್ರಗಳಲ್ಲಿ ನಿಜವಾದ ಜನ ಸೇವಕ ಹಾಗೂ ಜನರ ಬಗ್ಗೆ ಕಾಳಜಿ ಇರುವ ಶಾಸಕರಿದ್ದಾರೆ ಎಂದು ಎತ್ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿಯ ಅಧ್ಯಕ್ಷ …

Read More »

ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

ಖಾನಾಪೂರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಆಂಕರ್ -ಖಾನಾಪೂರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳ ಅಭಾವ ಉದ್ಭವಿಸಿದ್ದು ಆದ್ದರಿಂದ ಹೆಚ್ಚುವರಿ ಕೊಠಡಿ ಗಳೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಇದರಿಂದಾಗಿ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ‌ಸುಧಾರಿಸಲು …

Read More »

“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ”

“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ” ಫೆಬ್ರುವರಿ ಹಾಗೂ ಮಾರ್ಚ ತಿಂಗಳಿನ ಗ್ರಹಣ ಹಿಡಿದಿದ್ದ ಗೃಹಲಕ್ಷ್ಮೀಗೆ ಗ್ರಹಣ ಬಿಡಿಸಿ ಇಡೀ ಸದನದಲ್ಲಿ ಬಹಿರಂಗವಾಗಿ ತಪ್ಪೊಪ್ಪಿಗೆ ಮೂಲಕ ಕ್ಷಮೆಯಾಚಿಸುವಂತೆ ಮಾಡಿದ ಹುಬ್ಬಳ್ಳಿಯ ಜನಪ್ರೀಯ ಶಾಸಕ ಮಹೇಶ ಟೆಂಗಿನಕಾಯಿ. ಹೌದು 2 ತಿಂಗಳ ಗೃಹಲಕ್ಷ್ಮೀ ಹಣ ಹಾಕದೇ ಜನರ ಕಣ್ಣಿಗೆ ಮಣ್ಣು ಎರೆಚಲು ಯತ್ನಿಸಿದ ರಾಜ್ಯ ಕಾಂಗ್ರೇಸ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸದನಕ್ಕೆ ಸುಳ್ಳು ಮಾಹಿತಿ ನೀಡಿ ಸದನಕ್ಕೆ ಅಗೌರವ ತೋರಿದ ಮಹಿಳಾ …

Read More »

ಕಬ್ಬು ಕಟಾವು ಮಷಿನ್​ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವು

ಚಿಕ್ಕೋಡಿ(ಬೆಳಗಾವಿ): ಆಧುನಿಕ ಕಬ್ಬು ಕಟಾವು ಮಷಿನ್​ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …

Read More »

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಪತ್ತೆಯಾದ ಮೊಬೈಲ್ ಫೋನ್‌

ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ‌ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿದ ಬೆನ್ನಲ್ಲೆ ರಾಜ್ಯದ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ಮಂಗಳೂರು, ಮೈಸೂರು, ವಿಜಯಪುರ, ಬೆಳಗಾವಿ ಜಿಲ್ಲಾ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕೈದಿಗಳ ಬಳಿ ಮೊಬೈಲ್ ಫೋನ್‌ಗಳು, ಚಾಕು, ಮಾದಕ ಪದಾರ್ಥಗಳು ಪತ್ತೆಯಾಗಿವೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 6 ಮೊಬೈಲ್ …

Read More »

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಪಕ್ಷ ಸುವರ್ಣಸೌಧದಲ್ಲಿಂದು ಪ್ರತಿಭಟನೆ ನಡೆಸಿತು. ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ …

Read More »

ಧಾರವಾಡದಲ್ಲಿ ಯುವತಿ ಆತ್ಮಹತ್ಯೆ: ಅಪಪ್ರಚಾರ ಮಾಡದಂತೆ ಕಮಿಷನರ್ ಎಚ್ಚರಿಕೆ

ಹುಬ್ಬಳ್ಳಿ: ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಳನ್ನು ಬಳ್ಳಾರಿ ಜಿಲ್ಲೆಯ ಬಿ ಕಗ್ಗಲ್ ಗ್ರಾಮದ‌ ಪಲ್ಲವಿ (24) ಎಂದು ಗುರುತಿಸಲಾಗಿದೆ. ಈ ಯುವತಿ ಕಳೆದ ಕೆಲ ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗಾಗಿ ಧಾರವಾಡದಲ್ಲಿ ಇದ್ದರು. ಇತ್ತೀಚೆಗೆ ಧಾರವಾಡದಲ್ಲಿ ಯುವಕ‌, ಯುವತಿಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದರು. ಆದರೆ ಇಂದು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಪರೀಕ್ಷೆ ಕಿಮ್ಸ್ ಆಸ್ಪತ್ರೆಯಲ್ಲಿ …

Read More »

ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಬಂಧನ

ಬಾಗಲಕೋಟೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿ ಎಂದೇ ಖ್ಯಾತಿ ಪಡೆದಿರುವ ಜಾನಪದ ಕಲಾವಿದ ಮೈಲಾರಿಯನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. 2025ರ ಅಕ್ಟೋಬರ್​ 10ರಂದು 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಈತನ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಸಂಬಂಧ ಮೈಲಾರಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ …

Read More »

ಸಚಿವರ ಶಿಫಾರಸಿನ ಮೇಲೆ ಶಾಸಕರ ಸಂಬಂಧಿಯ ವರ್ಗಾವಣೆ: ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಹೋದರ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಜಿಐಎಂಎಸ್) ಪ್ರಾಧ್ಯಾಪಕ ಡಾ.ಕೇಶವ ಅಬ್ಬಯ್ಯ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಕಿಮ್ಸ್) ದಂತ ಚಿಕಿತ್ಸಾ ವಿಭಾಗಕ್ಕೆ ವರ್ಗಾವಣೆ ಮಾಡಿರುವ ಕ್ರಮಕ್ಕೆ ಹೈಕೋರ್ಟ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕ್ರಿಯೆ ಸಂಪೂರ್ಣ ನಿಯಮಗಳ ಉಲ್ಲಂಘನೆಯಾಗಿದೆ …

Read More »