Breaking News

ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಇಂದು ಕ್ರಾಂತಿ ವೀರ ಶ್ರೀ ಸಂಗೊಳ್ಳಿ ರಾಯಣ್ಣ‌ ಅವರ ಕಂಚಿನ ಮೂರ್ತಿ ಲೋಕಾರ್ಪಣೆ

ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಇಂದು ಕ್ರಾಂತಿ ವೀರ ಶ್ರೀ ಸಂಗೊಳ್ಳಿ ರಾಯಣ್ಣ‌ ಅವರ ಕಂಚಿನ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ, ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪಾಲ್ಗೊಂಡು, ಮಾತನಾಡಿದರು ಈ‌‌ ಸಂದರ್ಭದಲ್ಲಿ ಕವಲಗುಡ್ಡದ ಪೂಜ್ಯ ಗುರುಗಳಾದ ಶ್ರೀ ಅಮರೇಶ್ವರ ಸ್ವಾಮೀಜಿಯವರು, ಹಡಗಿನಾಳದ ಶ್ರೀ ಮುತ್ತೇಶ್ವರ ಮಹಾಸ್ವಾಮಿಗಳು ಸೇರಿ ಜನಪ್ರತಿನಿಧಿಗಳು ಮತ್ತು ಮುಖಂಡರು ‌ಉಪಸ್ಥಿತರಿದ್ದರು.

Read More »

ಯತೀಂದ್ರ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ; ಲೀಡರ್ ಯಾರಾಗಬೇಕು ಅಂತಾ ಹೈಕಮಾಂಡ್ ತೀರ್ಮಾನಿಸುತ್ತೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮುಂದಿನ ಉತ್ತರಾಧಿಕಾರಿ ಸತೀಶ್​ ಜಾರಕಿಹೊಳಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ಅವರು ಹೇಳಿದ್ದು ಸೈದ್ಧಾಂತಿಕವಾಗಿ ಮಾತ್ರ. ಲೀಡರ್ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ ಕಿತ್ತೂರು ಉತ್ಸವದ ಸಮಾರೋಪ‌ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಹಿಂದ ಸಂಘಟನೆ ನಾನು ಮಾಡುತ್ತಿದ್ದೆ. ಈಗ ಅದನ್ನು ಸತೀಶ್ ಜಾರಕಿಹೊಳಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ. ಸತೀಶ್​ …

Read More »

ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಿಎಂ

ಬೆಳಗಾವಿ: ಕಿತ್ತೂರು ರಾಣಿ‌ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದು ಒಂದು‌ ವರ್ಷವಾದರೂ ಕೇಂದ್ರ‌ ಸರ್ಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.‌ ಕಿತ್ತೂರು ರಾಣಿ ಚನ್ನಮ್ಮ 1824ರ ಅಕ್ಟೋಬರ್ 23ರಂದು ಬ್ರಿಟಿಷರ ವಿರುದ್ಧ ಹೋರಾಡಿ ಜಯಗಳಿಸಿದ್ದರು. ಈ ವಿಜಯದ ಸವಿನೆನಪಿಗಾಗಿ ಪ್ರತೀ ವರ್ಷ …

Read More »

ಉತ್ತರ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆ: ಶಾಸಕ ಶಿವರಾಮ್ ಹೆಬ್ಬಾರ್ ಬಣಕ್ಕೆ ಮುನ್ನಡೆ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಯಲ್ಲಿ ಪ್ರಕಟಗೊಂಡ ಹಾಗೂ ಮುಂಚೂಣಿಯ ಫಲಿತಾಂಶಗಳ ಪ್ರಕಾರ ಹಾಲಿ ಅಧ್ಯಕ್ಷ ಹಾಗೂ ಶಾಸಕ ಶಿವರಾಮ್ ಹೆಬ್ಬಾರ್ ನೇತೃತ್ವದ ಬಣ ಮುನ್ನಡೆ ಸಾಧಿಸಿದೆ.‌ ಸದ್ಯ 16 ಕ್ಷೇತ್ರಗಳಲ್ಲಿ ಕೇವಲ 7 ಕ್ಷೇತ್ರಗಳ ಫಲಿತಾಂಶ ಅಧಿಕೃತವಾಗಿ ಪ್ರಕಟಗೊಂಡಿದೆ.‌ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿ ಚುನಾವಣೆಗೆ ಶನಿವಾರ 13 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಕಳೆದ ಎರಡು ತಿಂಗಳಿನಿಂದ ನಡೆದ ಚುನಾವಣಾ …

Read More »

ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳು ಅರೆಸ್ಟ್

ಗಂಗಾವತಿ (ಕೊಪ್ಪಳ): ಇಲ್ಲಿನ ಬಿಜೆಪಿ ಯುವ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಇಲ್ಲಿನ ಲಿಂಗರಾಜ್ ಕ್ಯಾಂಪಿನ ರವಿ ಬಸವರಾಜ ಹಾಗೂ ಗುಂಡಮ್ಮ ಕ್ಯಾಂಪಿನ ನಿವಾಸಿ ಗಂಗಾಧರ ಗೌಳಿ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಕಲಬುರಗಿಯ ಹೊರ ವಲಯದಲ್ಲಿ ಆರೋಪಿಗಳ ಚಹರೆ ಪತ್ತೆ ಹಚ್ಚಿ, ಪೊಲೀಸರು ಬಲೆ ಬೀಸಿ ಬಂಧಿಸಿದ್ದಾರೆ. ಈ ಮೂಲಕ ಬಿಜೆಪಿ …

Read More »

ಬೆಳಗಾವಿಯ ಜಿಐಟಿಯಲ್ಲಿ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟನೆ

ಬೆಳಗಾವಿಯ ಜಿಐಟಿಯಲ್ಲಿ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟನೆ ಬೆಳಗಾವಿಯ ಕೆಎಲ್‌ಎಸ್ ಜಿಐಟಿ ಮಹಾವಿದ್ಯಾಲಯ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟನೆ ಫಾಸ್‌ರಾಕ್ ಪ್ರಾಯೋಜಕತ್ವದಲ್ಲಿ ನಿರ್ಮಾಣ ವಿವಿಧ ಗಣ್ಯರಿಂದ ನೂತನ ಪ್ರಯೋಗಾಲಯಕ್ಕೆ ಚಾಲನೆ ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ನೂತನ ಮೆಟೀರಿಯಲ್ ಟೆಸ್ಟಿಂಗ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು. ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ …

Read More »

ಅ.30 ರಂದು ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ; ಅನೀಲ್ ಚೌಗುಲೆ ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ

ಅ.30 ರಂದು ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ; ಅನೀಲ್ ಚೌಗುಲೆ ರೆಡ್ ಕ್ರಾಸ್ ಬೆಳಗಾವಿ ಜಿಲ್ಲಾ ಶಾಖೆ ಚುನಾವಣೆ ಅಕ್ಟೋಬರ್ 30 ರಂದು ಮತದಾನ ಅನೀಲ್ ಚೌಗುಲೆ ಮಾಧ್ಯಮಗೋಷ್ಟಿ “ಮಾನವ ಸೇವೆ” ಎಂಬ ಧ್ಯೇಯದಡಿ ಸೇವೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬೆಳಗಾವಿ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ಚುನಾವಣೆಯೂ ಇದೇ ಅಕ್ಟೋಬರ್ 30 ನಡೆಯಲಿದೆ ಎಂದು ಅನೀಲ್ ಚೌಗುಲೆ ಹೇಳಿದರು. ಅವರು ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ …

Read More »

ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್’ಗೆ ಚಾಲನೆ

ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್’ಗೆ ಇಂದಿನಿಂದ ಚಾಲನೆ ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್ ಸುಮುಖ್- ನಾಗೇಶ್ ಛಾಬ್ರಿಯಾ ಅವರಿಂದ ಚಾಲನೆ ವಿವಿಧ ಶಾಲಾ ತಂಡಗಳ ಅತ್ಯುತ್ತಮ ಪ್ರದರ್ಶನ ಬೆಳಗಾವಿಯ ಪ್ರತಿಷ್ಠಿತ ಫೂಟ್’ಬಾಲ್ ಟೂರ್ನಾಮೆಂಟ್ ಎಂದೇ ಪ್ರಸಿದ್ಧವಾದ ಫಾದರ್ ಎಡ್ಡಿ ಮೆಮೋರಿಯಲ್ ಇಂಟರ್ ಸ್ಕೂಲ್ ನಾಕ್’ಔಟ್ ಫೂಟ್’ಬಾಲ್ ಟೂರ್ನಾಮೆಂಟ್’ಗೆ ಇಂದಿನಿಂದ ಚಾಲನೆ ದೊರೆತಿದೆ. ಬಿಗ್ ವೇಂಚರ್ಸ್, ಪ್ರಗತಿ ಇನಫೋಟೆಕ್, ದಿ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಸಿಬ್ಬಂದಿಗಳು, ಊರಿನ ಮುಖಂಡರು …

Read More »

ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದ್ರು ಇದು ವರೆಗೂ ಕ್ರಮವಹಿಸಿಲ್ಲ; ಸಿಎಂ ಅಸಮಾಧಾನ

ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದ್ರು ಇದು ವರೆಗೂ ಕ್ರಮವಹಿಸಿಲ್ಲ; ಸಿಎಂ ಅಸಮಾಧಾನ ಕಿತ್ತೂರು ರಾಣಿ‌ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದು ಒಂದು‌ ವರ್ಷವಾದರೂ ಕೇಂದ್ರ‌ ಸರ್ಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.‌ …

Read More »