ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು …
Read More »SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ
ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆಗೆ (525 ಅಂಕ ನೀಡುವ ನಿಯಮ ಬದಲಾವಣೆ ಮಾಡಿರುವ ವಿಚಾರದಲ್ಲಿ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 7 ದಿನ ಅವಕಾಶ ನೀಡಲಾಗಿದ್ದು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಅಧಿಸೂಚನೆಯಲ್ಲಿ 525 ಅಂಕಗಳ ಅನುಷ್ಠಾನ ಹೇಗೆ ನಡೆಯಲಿದೆ ಎಂಬುದನ್ನು ತಿಳಿಸಲಾಗಿದೆ. ಅದರಂತೆ ತೃತೀಯ ಭಾಷೆ ವಿಷಯದಲ್ಲಿ ಅಂಕಗಳ ಬದಲಾಗಿ ಗ್ರೇಡ್ ಸಿಸ್ಟಮ್ ವಿವರಿಸಲಾಗಿದೆ. ಈ ಮೊದಲು 625 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ …
Read More »ಧಾರವಾಡದ ಅಣ್ಣಿಗೇರಿ ಬಸಾಪುರದಲ್ಲಿ ಮನೆ ಕಳ್ಳತನ ಪ್ರಕರಣ, ವಾರದಲ್ಲಿ ಇಬ್ಬರು ಆರೋಪಿಗಳ ಬಂಧನ
ಧಾರವಾಡ- ಕಳೆದ ಏಪ್ರಿಲ್ 2ರಂದು ಧಾರವಾಡ ಜಿಲ್ಲೆ ಅಣ್ಣಿಗೇರಿ ತಾ. ಬಸಾಪುರ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಅಣ್ಣಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಣ್ಣಿಗೇರಿ ತಾಲ್ಲೂಕಿನ ನಿವಾಸಿಗಳಾದ ಉಮೇಶ ಹರಣಶಿಕಾರಿ(30), ಈರಪ್ಪ ಹರಣಶಿಕಾರಿ (25) ಇಬ್ಬರು ಬಂಧಿತ ಮನೆಗಳ್ಳರಾಗಿದ್ದಾರೆ. ಏಪ್ರಿಲ್ 2ರಂದು ಬಸಾಪುರ ಗ್ರಾಮದಲ್ಲಿ ಮನೆಯ ಡೋರ್ ಲಾಕ್ ಮುರಿದು ಮನೆ ಕಳ್ಳತನ ಮಾಡಲಾಗಿತ್ತು. ಈ ಕುರಿತು ಮನೆಯ ಮಾಲೀಕರು ಅಣ್ಣಿಗೇರಿ ಪೊಲೀಸ …
Read More »ಧಾರವಾಡ: ಇಸ್ಮಾಯಿಲ್ ತಮಟಗಾರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂ ಸಂಘಟನೆಗಳು
ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ವಿರುದ್ಧ ಇದೀಗ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಧಾರವಾಡದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಿ: ಕಳೆದ ಏಪ್ರಿಲ್ 7 ರಂದು ಧಾರವಾಡದ ಸುಭಾಷ್ ರಸ್ತೆಯಲ್ಲಿ ಲವ್ ಜಿಹಾದ್ ವಿರುದ್ಧ ‘ಜನಾಕ್ರೋಶ ಪ್ರತಿಭಟನೆ’ …
Read More »ಕ್ಷೇತ್ರದ ಸಹೋದರಿಯರ ಬಾಳಿಗೆ ಆಸರೆ: 28 ಕುಟುಂಬಗಳಿಗೆ “ಅಣ್ಣನ ಉಡುಗೊರೆ” ವಿತರಣೆ
ಸವದತ್ತಿ: ನನ್ನ ಕ್ಷೇತ್ರದ ಪ್ರತಿಯೊಂದು ಬಡ ಕುಟುಂಬದ ಕಷ್ಟ-ಸುಖಗಳಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಇಂದು ಮದುವೆಯ ಸಂಭ್ರಮದಲ್ಲಿರುವ ಸವದತ್ತಿ ಮತಕ್ಷೇತ್ರದ ಸುಮಾರು 28 ಬಡ ಕುಟುಂಬಗಳ ಹೆಣ್ಣುಮಕ್ಕಳ ವಿವಾಹಕ್ಕೆ “ಅಣ್ಣನ ಉಡುಗೊರೆ”ಯನ್ನು ನನ್ನ ಧರ್ಮಪತ್ನಿಯವರಾದ ಶ್ರೀಮತಿ Shruti Vaidya (ಶೃತಿ ವಿಶ್ವಾಸ್ ವೈದ್ಯ) ಅವರು ವಿತರಿಸಿದರು. ಹೊಸ ಬಾಳಿಗೆ ಪಾದಾರ್ಪಣೆ ಮಾಡುತ್ತಿರುವ ನನ್ನ ಕ್ಷೇತ್ರದ ಸಹೋದರಿಯರಿಗೆ ನೆರವಾಗಲು ಅಡುಗೆ ಮನೆಯ ಭಾಂಡೆ ಸಾಮಗ್ರಿಗಳು, ಟ್ರೇಸುರಿ, ಮಂಚ (ಕಾಟ್) ಹಾಗೂ …
Read More »ವಿವಾಹಿತೆಯ ಬ್ಲಾಕ್ಮೇಲ್ಗೆ ಸಿಲುಕಿ ಯುವಕ ಆತ್ಮಹತ್ಯೆ
ನೆಲಮಂಗಲದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ ವಿವಾಹಿತೆಯ ಬ್ಲಾಕ್ಮೇಲ್ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ಯುವಕನನ್ನು 28 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಇವರು ನೆಲಮಂಗಲ ಟೌನ್ನ ವಾಜರಹಳ್ಳಿಯಲ್ಲಿ ವಾಸವಾಗಿದ್ದು, ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ದಿಲೀಪ್ ಅವರಿಗೆ ಜಿಮ್ನಲ್ಲಿ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ಆರೋಪಿ ಯೋಗಿತಾ (42) ಮದುವೆಯಾಗಿದ್ದರೂ ದಿಲೀಪ್ ಜೊತೆ ಸಂಬಂಧ ಬೆಳೆಸಿ, …
Read More »ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ
ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡ ಬೆನ್ನಲ್ಲೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಟ್ರಸ್ಟಿಗಳು ಸಭೆಯಲ್ಲಿ ನಿರ್ಧರಿಸಿದ್ದಾರೆ. 10 ಕಾರಣಗಳನ್ನು ನೀಡಿ ಉಚ್ಚಾಟನೆ ಮಾಡಲಾಗಿದ್ದು, ಮಠದ ಕಚೇರಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ. ಟ್ರಸ್ಟಿಗಳು ಹೇಳೋದೇನು? ಸ್ವಾಮೀಜಿ ಶ್ವಾಸ ಪೀಠದಲ್ಲಿ ಇರಬೇಕು, ಇಲ್ಲವೇ ಹರಿಹರ ಪಂಚಮಸಾಲಿ ಪೀಠದಲ್ಲಿ ಇರಬೇಕು. ಆದರೆ ಎರಡೂ ಕಡೆ ಇರುವುದು ಸೂಕ್ತವಲ್ಲ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಈಗಾಗಲೇ …
Read More »2.50 ಕೋಟಿ ರೂ.ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಚಾಲನೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಹಾಗೂ ಕೋನೆವಾಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರಾಗಿದ್ದು, ಸುಮಾರು 2.50 ಕೋಟಿ ರೂ.ಗಳ ವೆಚ್ಚದಲ್ಲಿ 2.7 ಕಿ.ಮೀ ರಸ್ತೆ ನಿರ್ಮಾಣವಾಗಲಿದೆ. ರಸ್ತೆಯ ಗುಣಮಟ್ಟ …
Read More »ಬಸವೇಶ್ವರ ಜಯಂತಿ ನಿಮಿತ್ಯ ಲಿಂಗಾಯತ ಮುಖಂಡರು ಸಭೆ
ಬೆಳಗಾವಿ: ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ಯ ಬೆಳಗಾವಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಇಂದು ಸರ್ವಪಕ್ಷಗಳ ಲಿಂಗಾಯತ ಮುಖಂಡರು ಸಭೆ ನಡೆಸಿದರು. ಈ ಸಭೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ, ರಾಜ್ಯ ಸಭೆ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ, ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, ಈ …
Read More »ನಾಲ್ವಾರ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಸಿಎಂ ಭೇಟಿ – ಸಿದ್ದರಾಮಯ್ಯಗೆ ಚಿನ್ನದ ಉಂಗುರ ತೊಡಿಸಿ ಸತ್ಕಾರ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ನಾಲ್ವಾರ ಗ್ರಾಮದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ದಾಖಲೆ ಮಟ್ಟದಲ್ಲಿ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡನೆ ಮಾಡಿದ ಸಾಧನೆಗಾಗಿ, ಮಠದ ವತಿಯಿಂದ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಮರ್ಪಿಸಲಾಯಿತು. ಶ್ರೀ ಕೋರಿಸಿದ್ದೇಶ್ವರ ಮಠದ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಚಿನ್ನದ ಉಂಗುರ ತೊಡಿಸಿ, ಶಾಲು ಹೊದಿಸಿ …
Read More »
Laxmi News 24×7