Breaking News

ವೀರೇಶ್ ಪಟ್ಟಣಶೆಟ್ಟಿ ಅವರಿಗೆ ಪಿತೃ ವಿಯೋಗ ನಾಗಪ್ಪ ಪಟ್ಟಣಶೆಟ್ಟಿ ನಿಧನ

ವೀರೇಶ್ ಪಟ್ಟಣಶೆಟ್ಟಿ ಅವರಿಗೆ ಪಿತೃ ವಿಯೋಗ ನಾಗಪ್ಪ ಪಟ್ಟಣಶೆಟ್ಟಿ ನಿಧನ ಬೆಳಗಾವಿ ನಾನಾವಾಡಿಯ ರಹಿವಾಸಿ ನಾಗಪ್ಪ ಪಟ್ಟಣಶೆಟ್ಟಿ (84) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರೂ ಸುಪುತ್ರರು, ಸೊಸೆಯಂದಿರು, ಸುಪುತ್ರಿ, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಾಳೆ ಬೆಳಗಾವಿಯ ಸದಾಶಿವನಗರದ ರುದ್ರಭೂಮಿಯಲ್ಲಿ ಬೆಳಿಗ್ಗೆ 10.30ಕ್ಕೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

Read More »

ರಾಮತೀರ್ಥನಗರ ಉದ್ಯಾನಗಳ ಅಭಿವ್ರದ್ಧಿಗೆ ರಹವಾಸಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಣೆ

ರಾಮತೀರ್ಥನಗರ ಉದ್ಯಾನಗಳ ಅಭಿವ್ರದ್ಧಿಗೆ ರಹವಾಸಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಣೆ ಬೆಳಗಾವಿ. ೦೨- ಬಹುದಿನಗಳಿಂದ ರಾಮತೀರ್ಥನಗರದಲ್ಲಿಯ ಉದ್ಯಾನಗಳು ಅಭಿವ್ರದ್ಧಿಯಾಗದೇ ಇರುವದರಿಂದ ಹುಳ,ಹೂಪ್ಪಡಿಗಳು, ಹಾವು,ಚೇಳುಗಳು, ನಾಯಿ, ಹಂದಿಗಳ ತಾಣಗಳಾಗಿದ್ದು, ರಹವಾಸಿಗಳು ಭಯ ಭೀತರಾಗಿದ್ದು, ಬಡಾವಣೆಯಲ್ಲಿ ತಿರುಗಾಡದಂತಾಗಿದೆ. ಈ ಕುರಿತು ಅಭಿವ್ರದ್ಧಿಗೆ ತಕ್ಷಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಇಲ್ಲಿಯ ರಹವಾಸಿಗಳು ಬೆಳಗಾವಿ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಈಗಾಗಲೇ ರಾಮತೀರ್ಥನಗರ ಬೂಡಾದಿಂದ ಮಹಾನಗರ ಪಾಲಿಕೆ ಗೆ …

Read More »

ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ…

ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ… ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ… ಮದ್ಯದ ಬಾಟಲ್ ಗಳಿಗೆ ಬೆಂಕಿ ಹಾಕಿ ಆಕ್ರೋಶ ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮದಭಾವಿ ಗ್ರಾಮದಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ವಸತಿ ಪ್ರದೇಶದಲ್ಲಿ ಬಾರ್ ತಲೆಎತ್ತುತ್ತಿರುವುದನ್ನು ಖಂಡಿಸಿದ ನೂರಾರು ಮಹಿಳೆಯರು, ಮದ್ಯದ …

Read More »

ಮಾಜಿ ಸೈನಿಕರು ಸರ್ಕಾರದ ಸೌಲಭ್ಯ ಪಡೆಯಲಿ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ನಿಪ್ಪಾಣಿ: ಸೈನಿಕರು ದೇಶದ ಶಾಂತಿ ಹಾಗೂ ನಮ್ಮ ಜೀವ ಕಾಪಾಡುವ ರಕ್ಷಕರು. ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶ ಸೇವೆ ತೊಡಗಿರುವುದು ಶ್ಲಾಘನೀಯ ಎಂದು ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ತವಂದಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 20.00 ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಮಾಜಿ ಸೈನಿಕರ ಭವನದ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ದೇಶ ರಕ್ಷಣೆಗೆ ಅಮೂಲ್ಯ ಸೇವೆ …

Read More »

ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಕೊಲೆ

ಚಿಕ್ಕೋಡಿ, ಜನವರಿ 01: ಆಸ್ತಿ ವಿಚಾರಕ್ಕೆ ಒಡ ಹುಟ್ಟಿದವನನ್ನೇ ಕೊಂದಿದ್ದಲ್ಲದೆ ಆತ ಮೃತಪಟ್ಟಿರೋದು ಆಕಸ್ಮಿಕ ಸಾವಿನಿಂದ ಎಂದು ಬಿಂಬಿಸಿದ್ದ ಖತರ್ನಾಕ್​​ ವ್ಯಕ್ತಿಯನ್ನು ಸಿನಿಮೀಯ ಮಾದರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಸಲಿಂಗ ರಾಮಾಪುರೆ (38) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಸಿದ್ದಪ್ಪ ರಾಮಾಪುರೆಯೇ ಆರೋಪಿ ಎಂಬುದು ತನಿಖೆ ವೇಳೆ ಪೊಲೀಸರು ಬಯಲು ಮಾಡಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಡಿ.18ರಂದು ಬಸಲಿಂಗ ರಾಮಾಪುರೆ ಮೃತಪಟ್ಟಿದ್ದ. ಹಂಚು ಹಾಕುವಾಗ ಬಿದ್ದು ಆತ ಮೃತಪಟ್ಟಿರೋದಾಗಿ ಕುಟುಂಬಸ್ಥರು ತಿಳಿಸಿದ್ದರು. ಆದರೆ …

Read More »

ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ;

ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದ್ದೇನು? ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನದ …

Read More »

ಕೋಗಿಲು ಬಳಿಯ ವಾಸಿಂ, ಫಕೀರ್​ ಕಾಲೋನಿಯಲ್ಲಿ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು : ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಯಲಹಂಕ ಬಳಿಕ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಯಲ್ಲಿ ‌300 ಮನೆಗಳನ್ನು ನೆಲಸಮ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಕೋಗಿಲು ಬಡಾವಣೆ ನಿವಾಸಿಗಳಾದ ಜೈಬ ತಬಸಂ, ರೆಹಾನಾ ಮತ್ತು ಆರೀಫ್ ಬೇಗಂ ಎಂಬುವರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರ, ಬಿಬಿಎಂಪಿ, ಬೆಂಗಳೂರು ಪೊಲೀಸ್​ ಆಯುಕ್ತರು ಮತ್ತು ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಅವರನ್ನು …

Read More »

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರಿಗೆ ವಾಹನ ಸಂಚಾರ ಸುಗಮವಾಗಲಿದೆ. ಇದೇ ವೇಳೆ ಮಾತನಾಡಿದ ಅವರು, “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ …

Read More »

ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ : ಸಲೀಂ ಅಹ್ಮದ್

ಹುಬ್ಬಳ್ಳಿ : ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಅಂತಿಮವಾಗಿ ಪಕ್ಷದ ವರಿಷ್ಠರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಲಕ್ಷ್ಮಣ ರೇಖೆ ದಾಟಬಾರದು ಎಂದು ತಾಕೀತು ಮಾಡಿದ್ದಾರೆ. ನಾನು ಅದಕ್ಕೆ …

Read More »

ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಯುವಕನ ಹತ್ಯೆ

ಚಿಕ್ಕಮಗಳೂರು : ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ವಿಚಾರವೇ ಯುವಕನ ಕೊಲೆಗೆ ಕಾರಣವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಮೂಲದ ಮಂಜುನಾಥ್ (28) ಮೃತ ಯುವಕ. ಈ ಕುರಿತು ಅಡಿಷನಲ್ ಎಸ್ಪಿ ಜಯಕುಮಾರ್ ಅವರು ಮಾತನಾಡಿದ್ದು, ‘ಇಂದು ಬೆಳಗಿನ ಜಾವ ತರೀಕೆರೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಅದರಲ್ಲಿ ಕೋಟೆ ಮಂಜುನಾಥ್ ಎಂಬ ವ್ಯಕ್ತಿಗೆ ಆತನ ನಾಲ್ವರು ಸ್ನೇಹಿತರು ಅಡ್ಡಗಟ್ಟಿ ಚಾಕುವಿನಿಂದ …

Read More »