ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹಲಗತ್ತಿ ಗ್ರಾಮದ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಿ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ
ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ಬೆಳಗಾವಿ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ನೀಡಲಾಯಿತು. ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ …
Read More »ಹಾಸ್ಟೆಲ್ ನಿಂದ ಕಾಣೆಯಾಗಿದ್ದ ವಿದ್ಯಾರ್ಥಿಗಳು ವಿಜಯಪುರದಲ್ಲಿ ಪತ್ತೆ..!!! ಮೂರಾರ್ಜಿ ವಸತಿ ಶಾಲೆಯ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು..
ಹಾಸ್ಟೆಲ್ ನಿಂದ ಕಾಣೆಯಾಗಿದ್ದ ವಿದ್ಯಾರ್ಥಿಗಳು ವಿಜಯಪುರದಲ್ಲಿ ಪತ್ತೆ..!!! ಮೂರಾರ್ಜಿ ವಸತಿ ಶಾಲೆಯ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು.. ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆ.. ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ನಿರ್ಲಕ್ಷ್ಯ.. ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆಯ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಏಕಾಏಕಿ ನಾಪತ್ತೆಯಾಗಿದ್ದು, ಬಾಗಲಕೋಟೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಇಂದು ನಸುಕಿನ ಜಾವ ವಿಜಯಪುರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ …
Read More »ಅಧಿವೇಶನದ 4ನೇ ದಿನವೂ ಪ್ರತಿಭಟನೆ: ಸಮಸ್ಯೆಗಳಿಗೆ ಮುಕ್ತಿ ನೀಡುವಂತೆ ಮಾಜಿ ದೇವದಾಸಿಯರು, ಅಂ.ಕಾರ್ಯಕರ್ತೆಯರು, ರೈತರಿಂದ ಹೋರಾಟ
ಬೆಳಗಾವಿ: ಚಳಿಗಾಲ ಅಧಿವೇಶನದ 4ನೇ ದಿನವೂ ಸಾಲು ಸಾಲು ಪ್ರತಿಭಟನೆಗಳು ನಡೆದವು. ರೈತರು, ಅಂಗನವಾಡಿ ಕಾರ್ಯಕರ್ತೆಯರು, ಮಾಜಿ ದೇವದಾಸಿಯರು, ಗ್ರಂಥಪಾಲಕರು, ರೈತರು ಸೇರಿ ಮತ್ತಿತರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒಕ್ಕೊರಲಿನ ಆಗ್ರಹ ಮಾಡಿದರು. ಅತ್ತ ಸುವರ್ಣ ವಿಧಾನಸೌಧ ವಿಧಾನಸಭೆ ಮತ್ತು ವಿಧಾನಪರಿಷತ್ ಒಳಗೆ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿದ್ದರೆ, ಇತ್ತ ಹೊರಗಡೆ ಸುವರ್ಣ ಗಾರ್ಡನ್ ಬಳಿಯ ಟೆಂಟ್ ಮತ್ತು ಹಳೆ ಪಿ.ಬಿ.ರಸ್ತೆ ಧಾರವಾಡ ನಾಕಾ ಟೆಂಟ್ಗಳಲ್ಲಿ ಸರ್ಕಾರಕ್ಕೆ …
Read More »ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿ
ನಮ್ಮ ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಲಾಯಿತು. ನಮ್ಮ ಈ ಭಾಗಕ್ಕೆ ಬಂದಿದ್ದ ಬಿಜೆಪಿ ಕರ್ನಾಟಕದ ಮಾನ್ಯ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರರವರು ಸಸಿಗಳಿಗೆ ನೀರುಣಿಸುವ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಮಹಾಂತೇಶ ವಕ್ಕುಂದ, ರಾಮತೀರ್ಥ ನಗರದ ಪ್ರಮುಖರಾದ ಶ್ರೀ ಅಣ್ಣಾಸಾಹೇಬ ದೇಸಾಯಿ, ಶ್ರೀ ಮುಖ್ತಾರ ಪಠಾಣ, …
Read More »ಗೋಲಿ, ಲಗೋರಿ ಆಡಿದ ಸ್ಪೀಕರ್ ಖಾದರ್
ಬೆಳಗಾವಿ: ಕಳೆದ ಮೂರು ದಿನಗಳಿಂದ ಚಳಿಗಾಲ ಅಧಿವೇಶನ ಸುಗಮವಾಗಿ ನಡೆಸಲು ಶ್ರಮಿಸುತ್ತಿರುವ ಸ್ಪೀಕರ್ ಯು. ಟಿ. ಖಾದರ್ ಅವರು ಇಂದು ಬೆಳಗ್ಗೆ ಗೋಲಿ, ಲಗೋರಿ ಸೇರಿ ಬಾಲ್ಯದ ಕ್ರೀಡೆಗಳನ್ನು ಆಡುವ ಮೂಲಕ ಎಲ್ಲರ ಗಮನ ಸೆಳೆದರು. ಬೆಳಗಾವಿ ನಗರದ ಟಿಳಕವಾಡಿಯ ಲೇಲೇ ಮೈದಾನದಲ್ಲಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬಾಲ್ಯದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಗೋಲಿ ಆಡುವ ಮೂಲಕ ಸ್ಪೀಕರ್ ಯು. ಟಿ. ಖಾದರ್ ಚಾಲನೆ ನೀಡಿದರು. ಗೋಲಿ, ಬುಗುರಿ, …
Read More »ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು (ಜೆಎಕೆ) ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14 ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಎಲ್. ರಾಕೇಶ್ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಬಡವರಿಗೆ ನೀಡಲಾಗುವ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿರಲಿ ಅಥವಾ …
Read More »ವೀರಶೈವ ಲಿಂಗಾಯತ ಸಮಾಜವು ಕವಲುದಾರಿಯಲ್ಲಿ ಸಾಗಿದೆ, ಒಗ್ಗೂಡಬೇಕು: ಈಶ್ವರ ಖಂಡ್ರೆ
ವೀರಶೈವ ಲಿಂಗಾಯತ ಸಮಾಜವು ಕವಲುದಾರಿಯಲ್ಲಿ ಸಾಗಿದೆ, ಒಗ್ಗೂಡಬೇಕು: ಈಶ್ವರ ಖಂಡ್ರೆ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯ ಉದ್ಘಾಟನೆ ಹಾಗೂ “ಲಿಂ.ಶರಣೆ ಅನ್ನಪೂರ್ಣ ಬಸಲಿಂಗಪ್ಪ ಬೆಲ್ಲದ, ಕಬ್ಬೂರ” ನಾಮಕರಣ ಸಮಾರಂಭ ಬೆಳಗಾವಿ ಡಿ 11 : ವೀರಶೈವ ಲಿಂಗಾಯತ ಸಮಾಜವು ರಾಜ್ಯದಲ್ಲಿಯೇ ಬೃಹತ್ ಸಮಾಜವಾಗಿದ್ದು ಇಂದು ಅದು ಕವಲುದಾರಿಯಲ್ಲಿ ಸಾಗಿರುವುದು ದುರ್ದೈವದ ಸಂಗತಿ. ನಾವೆಲ್ಲ ಒಗ್ಗಟ್ಟಾಗಬೇಕು. ಶಿಕ್ಷಣ ಕ್ಷೇತ್ರಕ್ಕ ಸಮಾಜದ ಬೆಳವಣಿಗೆಗೆ ಮಠಮಾನ್ಯಗಳ ಹಾಗೂ ಸಂಘಸAಸ್ಥೆಗಳ ಕೊಡುಗೆ ಅಸದಳವಾದುದು. …
Read More »ನನ್ನ ಕುರ್ಚಿಯೂ ಸರಿಯಿಲ್ಲ – ಸಭಾಪತಿ ಹೊರಟ್ಟಿ
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿನ ವಿಧಾನಪರಿಷತ್ನಲ್ಲಿ ನಡೆಯುತ್ತಿದ್ದ ಗಂಭೀರ ಚರ್ಚೆ ಮಧ್ಯೆ ಕುರ್ಚಿ ಪ್ರಸಂಗವು ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಲಕ್ಷಾಂತರ ಸರ್ಕಾರಿ ಹುದ್ದೆಗಳನ್ನು ಯಾವಾಗ ತುಂಬುತ್ತೀರಿ? ಎಂದು ಮೇಲ್ಮನೆ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗೆ, ಸಿಎಂ ಸಿದ್ದರಾಮಯ್ಯ ಎದ್ದು ನಿಂತು ಉತ್ತರಿಸುತ್ತಿದ್ದಂತೆ, ಸರಿಯಾಗಿ ನಿಲ್ಲಲು ಸಾಧ್ಯವಾಗುತ್ತಿವಲ್ಲ ಎಂದು ಪರಿಷತ್ ಕಾರ್ಯದರ್ಶಿಗೆ ಪ್ರಶ್ನಿಸಿದರು. ಸಿಬ್ಬಂದಿಯಿಂದ ಕುರ್ಚಿಯನ್ನ ಸರಿಪಡಿಸಿಕೊಂಡು ಮಾತನಾಡಲು ಆರಂಭಿಸುತ್ತಿದ್ದಂತೆ, ಸದಸ್ಯ ಭೋಜೇಗೌಡ …
Read More »ಉತ್ತರ ಕರ್ನಾಟಕದ ಶಾಸಕರು ಭಿಕ್ಷುಕರ ತರ ಬೇಡಬೇಕು, ಈ ಭಾಗಕ್ಕೆ ₹5000 ಕೋಟಿ ನೀಡಿ: ಶಾಸಕ ರಾಜು ಕಾಗೆ
ಬೆಳಗಾವಿ: ಉತ್ತರ ಕರ್ನಾಟಕದ ಶಾಸಕರು ಬೆಂಗಳೂರಿಗೆ ಬಂದು ಭಿಕ್ಷುಕರ ತರ ಭಿಕ್ಷೆ ಬೇಡಬೇಕು. ಕೊನೆಗೆ ಹತ್ತು, ಇಪ್ಪತ್ತು ಪೈಸೆ ಸಿಗುತ್ತದೆ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅಸಹಾಯಕತೆ ಹೊರಹಾಕಿದರು. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರು ಇಲ್ಲಿಗೆ ಬಂದು ಕೈಮುಗಿದು ಎಲ್ಲರ ಮುಂದೆ ನಿಲ್ಲಬೇಕು. ನಾನು ಈ ಬಗ್ಗೆ ಧ್ವನಿ ಎತ್ತಿದ್ದೆ. ಆದರೆ ನಾನು ನನ್ನ ಪಕ್ಷದ ವಿರುದ್ಧ ಮಾತನಾಡಿದ್ದೆ …
Read More »
Laxmi News 24×7