Breaking News

ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ

ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಶಾಲಾ, ಕಾಲೇಜುಗಳ 15 ವಿದ್ಯಾರ್ಥಿನಿಯರನ್ನು ಸಂಸತ್ ಕಲಾಪ ವೀಕ್ಷಣೆಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ಕರೆದೊಯ್ಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 15ರಂದು ಬೆಳಿಗ್ಗೆ 8.45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಸಂಸದೆ ಪ್ರಿಯಾಂಕಾ ಮತ್ತು ಎಲ್ಲ ಮಕ್ಕಳು ನವದೆಹಲಿಗೆ ಪ್ರಯಾಣ ಬೆಳೆಸುವರು. 2024-25ನೇ ಸಾಲಿನ …

Read More »

ಪಕ್ಷದ ಹೈಕಮಾಂಡ್‌ಗೆ ತಮ್ಮ ಬದ್ಧತೆಯನ್ನು ತಿಳಿಸುವ ಮೂಲಕ ಸಿಎಂ ಬದಲಾವಣೆ ಕುರಿತ ಚರ್ಚೆಗಳಿಗೆ ಮತ್ತೊಮ್ಮೆ ಸ್ಪಷ್ಟನೆ

ಗದಗ : ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಇಕ್ಬಾಲ್ ಹುಸೇನ್ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಪಕ್ಷದ ಒಳಗಿನ ಯಾವುದೇ ಗೊಂದಲಕ್ಕೂ ತಾವು ಕಾರಣರಲ್ಲ ಎಂದ ಸ್ಪಷ್ಟಪಡಿಸಿದರು. ಪಕ್ಷದ ಒಗ್ಗಟ್ಟು ಮತ್ತು ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ಯಾವಾಗಲೂ ಬದ್ಧನಿದ್ದೇನೆ ಎಂದು ತಿಳಿಸಿದ್ದಾರೆ. …

Read More »

ಜನವರಿಯಲ್ಲಿ‌ ದರ್ಶನ್​ಗೆ ಬೇಲ್‌ ಸಿಗುವ ನಿರೀಕ್ಷೆಯಿದೆ: ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌

ಹಾವೇರಿ: ಜನವರಿಯಲ್ಲಿ ದರ್ಶನ್‌ಗೆ ಬೇಲ್ ಸಿಗುವ ನಿರೀಕ್ಷೆ ಇದೆ. ಒಂದು ವೇಳೆ ಅವರು ಜೈಲಿನಿಂದ ಬಿಡುಗಡೆಯಾಗದಿದ್ದರೇ ನಾನೇ ವೈಯಕ್ತಿಕವಾಗಿ ಜೈಲ್‌ಗೆ ಹೋಗಿ ದರ್ಶನ್​ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದು ನಟ ಹಾಗೂ ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌ ತಿಳಿಸಿದರು. ಹಾವೇರಿಯಲ್ಲಿ ಕಲ್ಟ್‌ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಚಿತ್ರಮಂದಿರಗಳಲ್ಲಿ ದರ್ಶನ್​ ಅಭಿನಯದ ಡೆವಿಲ್ ಚಿತ್ರ ಪ್ರದರ್ಶನ ಕಾಣುತ್ತಿದೆ. ನಮ್ಮ ಕಲ್ಟ್ ಚಿತ್ರ ಜನವರಿ 23 …

Read More »

2ನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ …

Read More »

ಏರ್ ಗನ್​ನಿಂದ ಅಚಾನಕ್ಕಾಗಿ ಉದ್ಯಮಿಗೆ ಗುಂಡು ತಗುಲಿದ ಪ್ರಕರಣ: ಕಾನೂನು ವಿದ್ಯಾರ್ಥಿ ಬಂಧನ

ಬೆಂಗಳೂರು: ನಗರದ ಬಸನನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಏರ್ ಗನ್ ನಿಂದ ಗುಂಡು ಹಾರಿಸಿದ ಆರೋಪದಡಿ ಕಾನೂನು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಮೊಹಮ್ಮದ್ ಅಫ್ಜಲ್ ಬಂಧಿತ ವಿದ್ಯಾರ್ಥಿ. ಡಿ.10 ರಂದು ಸಂಜೆ ಪಾರ್ಕ್ ನಲ್ಲಿ ಉದ್ಯಮಿ ರಾಜಗೋಪಾಲ್ ಎಂಬುವರು ವಾಯು ವಿಹಾರ ಮಾಡುತ್ತಿದ್ದಾಗ ಕುತ್ತಿಗೆ ಹಿಂಭಾಗಕ್ಕೆ ಏರ್ ಗನ್ ನಿಂದ ಹಾರಿದ ಗುಂಡು ತಗುಲಿತ್ತು.‌ ಈ ಸಂಬಂಧ ದೂರು ದಾಖಲಿಸಿಕೊಂಡ ಬಸವನಗುಡಿ ಪೊಲೀಸರು ಆರೋಪಿಯನ್ನು …

Read More »

ಉತ್ತರ ಕರ್ನಾಟಕದೆಡೆ ಸರ್ಕಾರದ ನಿರ್ಲಕ್ಷ್ಯತನ ಖಂಡಿಸಿ 1 ರಿಂದ ಆಮರಣ ಉಪವಾಸ ಸತ್ಯಾಗ್ರಹ; ಗೋಲಶೆಟ್ಟಿ

ಉತ್ತರ ಕರ್ನಾಟಕದೆಡೆ ಸರ್ಕಾರದ ನಿರ್ಲಕ್ಷ್ಯತನ ಖಂಡಿಸಿ 1 ರಿಂದ ಆಮರಣ ಉಪವಾಸ ಸತ್ಯಾಗ್ರಹ; ಗೋಲಶೆಟ್ಟಿ ರಾಜ್ಯ ಸರಕಾರದ ಉತ್ತರ ಕರ್ನಾಟಕದ ನಿರ್ಲಕ್ಷ್ಯತನದ ವಿರುದ್ಧ ಬರುವ ಜ.1 ರಿಂದ ಆಮರಣ ಉಪವಾಸ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ನಾಗೇಶ ಗೊಲಶೆಟ್ಟಿ ತಿಳಿಸಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚಳಿಗಾಲದ ಅಧಿವೇಶನದಲ್ಲಿ ಅರ್ಧ ಭಾಗ ಅಧಿವೇಶನ ಮುಗಿದರೂ ಸಹ ಬೆಳಗಾವಿ ಎರಡನೇ ರಾಜ್ಯಧಾನಿ‌ ಘೋಷಣೆ …

Read More »

ಬಸವನ ಕುಡಚಿ, ಸರ್ದಾರ್ ಮೈದಾನಕ್ಕೆ ಗಣ್ಯರ ಭೇಟಿ! ಸಚಿವರಾದ ಸತೀಶ್, ಜಮೀರ್, ಸೇಠ್ ಭೇಟಿ

ಬಸವನ ಕುಡಚಿ, ಸರ್ದಾರ್ ಮೈದಾನಕ್ಕೆ ಗಣ್ಯರ ಭೇಟಿ! ಸಚಿವರಾದ ಸತೀಶ್, ಜಮೀರ್, ಸೇಠ್ ಭೇಟಿ ಶಾಸಕ ಆಸಿಫ್ ಸೇಠ್ ಅವರು ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರೊಂದಿಗೆ ಬಸವನ ಕುಡಚಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿ, ಅವರ ನಾಗರಿಕ ಮತ್ತು ಅಭಿವೃದ್ಧಿ ಸಮಸ್ಯೆಗಳನ್ನು ಆಲಿಸಿದರು. ಈ ಭೇಟಿಯ ಸಂದರ್ಭದಲ್ಲಿ, ಎಲ್ಲ ನಾಯಕರು ನಿವಾಸಿಗಳೊಂದಿಗೆ ಚರ್ಚೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಪರಿಶೀಲಿಸಿದರು …

Read More »

ವಿಜಯಪುರ…:ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ; ಸಕಲ ಸರ್ಕಾರಿ ಗೌರಗಳೊಂದಿಗೆ ಲಕ್ಷಾಂತರ ಭಕ್ತರು ಭಾವುಕ

ವಿಜಯಪುರ…:ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ; ಸಕಲ ಸರ್ಕಾರಿ ಗೌರಗಳೊಂದಿಗೆ ಲಕ್ಷಾಂತರ ಭಕ್ತರು ಭಾವುಕ ಬಸವಾದಿ ಶರಣರ ವಚನಗಳನ್ನ ಜನರಿಗೆ ತಲುಪಿಸಿ ಲಿಂಗೈಕ್ಕರಾದ ನಾಡಿನ ಹಿರಿಯ ಸಂತ, 95 ವರ್ಷದ ತಪಸ್ವಿ, ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರಗಳೊಂದಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಿತು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ‌ ವಿರಕ್ತಮಠದ ಚನ್ನಬಸವ ಶ್ರೀಗಳ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಶ್ರೀಗಳ …

Read More »

ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ

ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಡಿಸೆಂಬರ್ 20 ರಿಂದ 26 ರ ವರೆಗೆ ವಿಶೇಷ ಕಾರ್ಯಕ್ರಮ; ಅಧ್ಯಕ್ಷ ಅವಿನಾಶ್ ಪೋತದಾರ್ ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಡಿಸೆಂಬರ್ 20 ರಿಂದ 26 ರ ವರೆಗೆ ವಿಶೇಷ ಕಾರ್ಯಕ್ರಮ ವಿವಿಧ ಸಚಿವರು, ಶಾಸಕರು, ಉಪನ್ಯಾಸಕರು, ಗಣ್ಯರ ಉಪಸ್ಥಿತಿ ಅಧ್ಯಕ್ಷ ಅವಿನಾಶ್ ಪೋತದಾರ್ ಮಾಧ್ಯಮಗೋಷ್ಟಿ ಡಿಸೆಂಬರ್ 20 ರಿಂದ 26 ರ ವರೆಗೆ ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ …

Read More »

ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ;

ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ; ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ ಸಿ.ಎನ್.ಆರ್ ರಾವ್ ಈ ದೇಶ ಕಂಡ ಅಪರೂಪದ ವಿಜ್ಞಾನಿ ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸಲಾಗುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಭ್ರಾತೃತ್ವ, ಸ್ವಾತಂತ್ರ್ಯ , ಸಮಾನತೆಗಳನ್ನು ಸಂವಿಧಾನ ತಿಳಿಸಿದ್ದು, ಇದು ಅಕ್ಷರಶ: ಜಾರಿಯಾಗದೇ, ಜಾತಿ ವ್ಯವಸ್ಥೆಯಾಗಲಿ, ಅಸಮಾನತೆಯಾಗಲಿ …

Read More »