Breaking News

ಆಕಾಶದಲ್ಲಿ ಜೀವ ಉಳಿಸಿದ ‘ಡಾಕ್ಟರ್’ ಶಾಸಕಿ: ಅಂಜಲಿ ನಿಂಬಾಳ್ಕರ್ ಕಾರ್ಯಕ್ಕೆ ಮನಸೋತ ಗಗನಸಖಿಯರು – ವಿಮಾನದಲ್ಲೇ ಅದ್ಧೂರಿ ಸನ್ಮಾನ

ಆಕಾಶ ಮಾರ್ಗದಲ್ಲಿ ಕಠಿಣ ಸಂದರ್ಭದಲ್ಲಿ ಒಬ್ಬರ ಜೀವ ಉಳಿಸಿದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರ ಮಾನವೀಯ ಕಾರ್ಯಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆಯ ಗಗನಸಖಿ ವಿಶೇಷವಾಗಿ ಗೌರವ ಸಲ್ಲಿಸಿದ್ದಾರೆ. ಪುದುಚೇರಿಯಿಂದ ಪ್ರಯಾಣಿಸುತ್ತಿದ್ದ ವೇಳೆ ವಿಮಾನದಲ್ಲಿದ್ದ ಗಗನಸಖಿಯೊಬ್ಬರು ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಭೇಟಿಯಾಗಿ, ಪ್ರೀತಿಯಿಂದ ಗುಲಾಬಿ ಹೂವು ಹಾಗೂ ಗ್ರೀಟಿಂಗ್ ಕಾರ್ಡ್ ನೀಡಿ ಹೃದಯಸ್ಪರ್ಶಿ ಸ್ವಾಗತ ಕೋರಿದರು. ಈ ವೇಳೆ ಅತೀವ ಭಾವುಕರಾದ ಅಂಜಲಿ …

Read More »

ಖಾಲಿ ಲೇಔಟ್‌ಗಳಲ್ಲಿ ದುಶ್ಚಟ – ಮಹಿಳೆಯರಿಗೆ ಕಿರಿಕಿರಿ: ಯುವಕರಿಗೆ ಪೊಲೀಸರ ಕಠಿಣ ಎಚ್ಚರಿಕೆ

ವಿಜಯಪುರ ನಗರದ ಖಾಲಿ ಲೇಔಟ್‌ಗಳಲ್ಲಿ ಸಂಜೆಯಾದೊಡನೆ ದುಶ್ಚಟಗಳಲ್ಲಿ ತೊಡಗಿಕೊಂಡು ಮಹಿಳೆಯರಿಗೆ ಕಿರಿಕಿರಿ ನೀಡುತ್ತಿದ್ದ ಯುವಕರ ವಿರುದ್ಧ ಗಾಂಧಿಚೌಕ್ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಗರದ ವಿವಿಧ ಲೇಔಟ್‌ಗಳಲ್ಲಿ ಪ್ರತಿದಿನ ಸಂಜೆ ವೇಳೆಯಲ್ಲಿ ಕೆಲ ಯುವಕರು ಗುಂಪುಗೂಡಿ ಸಿಗರೇಟ್ ಹಾಗೂ ಮದ್ಯ ಸೇವನೆ ಮಾಡುವುದು, ವಾಕಿಂಗ್‌ಗೆ ಬರುವ ಮಹಿಳೆಯರಿಗೆ ಕಿರಿಕಿರಿ ನೀಡುವುದು ಸೇರಿದಂತೆ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಪೊಲೀಸರಿಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಗಾಂಧಿಚೌಕ್ ಪೊಲೀಸ್ ಠಾಣೆ …

Read More »

ಹೆಸ್ಕಾಂ ‘ಪವರ್ ಮ್ಯಾನ್’ಗಳಿಗೆ ಸುರಕ್ಷತಾ ಮಂತ್ರ: ಬೆಳಗಾವಿಯಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹಕ್ಕೆ ಅದ್ಧೂರಿ ಚಾಲನೆ

ನಮ್ಮ ಮನೆಗಳನ್ನು ಬೆಳಗಲು ಜೀವದ ಹಂಗು ತೊರೆದು ಕೆಲಸ ಮಾಡುವ ಪವರ್ ಮ್ಯಾನ್‌ಗಳ ಹಿತರಕ್ಷಣೆಗಾಗಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೆಸ್ಕಾಂ ಅಧ್ಯಕ್ಷರಾದ ಖಾದ್ರಿ ಅವರ ನೇತೃತ್ವದಲ್ಲಿ ‘ಪವರ್ ಮ್ಯಾನ್ ದಿನ’ ಹಾಗೂ ‘ವಿದ್ಯುತ್ ಸುರಕ್ಷತಾ ಸಪ್ತಾಹ’ಕ್ಕೆ ಚಾಲನೆ ನೀಡಲಾಗಿದ್ದು, ಸುರಕ್ಷತೆಯೇ ಜೀವನದ ಮಂತ್ರ ಎಂಬ ಸಂದೇಶ ಸಾರಲಾಯಿತು. ಬೆಳಗಾವಿಯ ನಗರ ಉಪ ವಿಭಾಗ-3ರ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರದಂದು ಹೆಸ್ಕಾಂ ಅಧ್ಯಕ್ಷರಾದ ಶ್ರೀ ಖಾದ್ರಿ ಅವರ ಅಧ್ಯಕ್ಷತೆಯಲ್ಲಿ ಪವರ್ ಮ್ಯಾನ್ …

Read More »

ಬೆಳಗಾವಿಯಲ್ಲಿ ‘ಪವರ್‌ಮ್ಯಾನ್ ದಿನ’ ಆಚರಣೆ: ವಿದ್ಯುತ್ ಸಿಬ್ಬಂದಿಗಳ ಸೇವೆಗೆ ವಿಶೇಷ ಗೌರವ

ಬೆಳಗಾವಿಯ ಹೆಸ್ಕಾಂ (HESCOM) ಕಚೇರಿಯಲ್ಲಿ ವಿದ್ಯುತ್ ರಂಗದ ನಿಜವಾದ ಹೀರೋಗಳಾದ ಪವರ್‌ಮ್ಯಾನ್‌ಗಳ ಸೇವೆಗೆ ಗೌರವ ಸಲ್ಲಿಸುವ ಸಲುವಾಗಿ ‘ಪವರ್‌ಮ್ಯಾನ್ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಠಿಣ ಪರಿಸ್ಥಿತಿಯಲ್ಲೂ ಕರ್ತವ್ಯ ನಿರತರಾಗಿರುವ ಸಿಬ್ಬಂದಿಗಳ ಕಾರ್ಯವನ್ನು ಅಧಿಕಾರಿಗಳು ಶ್ಲಾಘಿಸಿದರು. ಬೆಳಗಾವಿಯ ಹೆಸ್ಕಾಂ ನಗರ ಉಪವಿಭಾಗ-1 ಮತ್ತು 2ರ ಕಚೇರಿಗಳಲ್ಲಿ ಮಾರ್ಚ್ 7, 2026 ರಂದು ‘ಪವರ್‌ಮ್ಯಾನ್ ದಿನ’ವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಇಇ ಮೋಹಿತೆ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಇಇ ಭಜಂತ್ರಿ, ನೌಕರರ …

Read More »

ಗಡಿ ಭಾಗದಲ್ಲಿ ಕನ್ನಡ ಶಾಲೆಗಳನ್ನು ಕಟ್ಟಿ ಕೆಎಲ್ಇ ಸಂಸ್ಥೆ ಮೌಲಿಕ ಸೇವೆ ಮಾಡಿದೆ: ಕಾಶಿ ಪೀಠದ ಪೂಜ್ಯ

ಬೆಳಗಾವಿ: ಜಾಗತಿಕವಾಗಿ ವಿಸ್ತರಿಸಿರುವ ಗಡಿಭಾಗದಲ್ಲಿ ಹತ್ತು ಹಲವಾರು ಕನ್ನಡ ಮಾಧ್ಯಮ ಶಾಲೆಗಳನ್ನು ಹುಟ್ಟುಹಾಕಿ ಕನ್ನಡ ಸೇವೆಯನ್ನು ನಿಸ್ವಾರ್ಥವಾಗಿ ಮಾಡಿದೆ. ಆಂಗ್ಲ ಮಾಧ್ಯಮದ ಭರಾಟೆಯಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಕೆಎಲ್ಇ ಸಂಸ್ಥೆಯ ಕೊಡುಗೆ ಅನನ್ಯ ಎಂದು ಕಾಶಿ ಪೀಠದ ಪೂಜ್ಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜೀ ನುಡಿದರು. ಅವರು ಯಡೂರಿನಲ್ಲಿ ಕೆಎಲ್ಇ ಕನ್ನಡ ಮಾಧ್ಯಮ ಶಾಲೆ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು. ಕೆಎಲ್ಇ ಸಂಸ್ಥೆಯು ಶಿಕ್ಷಣ ಆರೋಗ್ಯ …

Read More »

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಭಿವೃದ್ಧಿಯ ಬಜೆಟ್: ಸಂಸದೆ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ …

Read More »

ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾರ್ಚ್ 8. ರಂದು ವಿದ್ಯುತ್ ವ್ಯತ್ಯಯ

ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ. 8. ರಂದು ಬೆಳಗ್ಗೆ 9. ಘಂಟೆಯಿಂದ ಸಾಯಂಕಾಲ 4. ಘಂಟೆಯವರೆಗೆ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡನಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, …

Read More »

ಯುಪಿಎಸ್ಸಿ : ಗಿರಿ ಜಿಲ್ಲೆಗೆ ಮೂಡಿದ ಹೆಮ್ಮೆಯ ಗರಿ ಯುಪಿಎಸ್ಸಿ ಸಿವಿಲ್‌ ಸರ್ವೀಸ್ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆ

ಯಾದಗಿರಿ :ಯುಪಿಎಸ್ಸಿ (ಯೂನಿಯನ್‌ ಪಬ್ಲಿಕ್‌ ಸರ್ವೀಸ್‌ ಕಮೀಶನ್‌) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷಾ (ಸಿವಿಲ್‌ ಸರ್ವೀಸ್‌) ಪರೀಕ್ಷೆಯ ಅಂತಿಮ ಫಲಿತಾಂಶ ಇಂದು ಶುಕ್ರವಾರ (ಮಾ.6) ಪ್ರಕಟಗೊಂಡಿದ್ದು, ಅಖಿಲ ಭಾರತ ಮಟ್ಟದಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆಯಾಗಿ, ಹೆಮ್ಮೆಗೆ ಪಾತ್ರರಾಗಿದ್ದಾರೆ. ಯಾದಗಿರಿಯ ಸಂದೀಪ್ ಬಾಡದ್‌ ರಾಜ್ಯದಲ್ಲಿ 2ನೇ ಹಾಗೂ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್‌, ವೈದ್ಯೆ ಡಾ. ನಿವೇದಿತಾ ಭಾವಿಮನಿ 469ನೇ ರ್ಯಾಂಕ್‌, ಬಸವರಾಜ್‌ ಜವಳಿ 664ನೇ …

Read More »

ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕದ್ದೇನು?

ಬೆಳಗಾವಿ: ಆರ್ಧಕ್ಕೆ ನಿಂತ 7 ಏತನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಹಾಗೂ 8 ಶ್ರಮಿಕ ವಸತಿ ಶಾಲೆಗಳನ್ನು ನಿರ್ಮಿವುಸುವುದು; ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕ ಮಹತ್ವದ ಕೊಡುಗೆಗಳು. ಸವದತ್ತಿ ತಾಲ್ಲೂಕಿನ ಚಚಡಿ, ಮುರಗೋಡ, ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ, ಅಥಣಿ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ, ಗೋಕಾಕ ತಾಲ್ಲೂಕಿನ ಅಡವಿಸಿದ್ದೇಶ್ವರ ಏತ ನೀರಾವರಿ, ಶಂಕರಲಿಂಗ, ರಾಮದುರ್ಗ ತಾಲ್ಲೂಕಿನ ಸಾಲಾಪುರ ಏತ ನೀರಾವರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ …

Read More »