Breaking News

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು ಮರಣ ಪ್ರಕರಣ: ಡಿಸಿ ಭೇಟಿ‌, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ

ಹಾವೇರಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಾರಿಡಾರ್​ನಲ್ಲಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆಯಲಾರಂಭಿಸಿದೆ. ಮಹಿಳಾ ಯೋಗ, ರಾಜ್ಯ ಉಚ್ಚನ್ಯಾಯಾಲಯ ಮತ್ತು ಮಕ್ಕಳ ರಕ್ಷಣಾ ಘಟಕದ ದೂರಿನ‌ ಮೇರೆಗೆ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್​ ಜಿಲ್ಲಾಸ್ಪತ್ರೆಗೆ ಭೇಟಿ‌ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು. ಘಟನೆ ಕುರಿತಂತೆ ತನಿಖಾ ತಂಡ ರಚಿಸಲಾಗಿದ್ದು ತಂಡದ ಸದಸ್ಯರು ಸಿಸಿಟಿವಿ ದೃಶ್ಯಗಳನ್ನು ವೀಕ್ಷಣೆ ನಡೆಸಿದರು. ಒಂದು ಗಂಟೆ ಕಾಲ ಸಿಸಿಟಿವಿ …

Read More »

ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರಕ್ಕೂ SIT ವರದಿ; ಬೆಳಗಾವಿ ಅಧಿವೇಶನದಲ್ಲಿ ತಿಳಿಸುತ್ತೇವೆ ಎಂದ ಜಿ.ಪರಮೇಶ್ವರ್

ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರಕ್ಕೂ SIT ವರದಿ; ಬೆಳಗಾವಿ ಅಧಿವೇಶನದಲ್ಲಿ ತಿಳಿಸುತ್ತೇವೆ ಎಂದ ಜಿ.ಪರಮೇಶ್ವರ್ ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್​ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳನ್ನು ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕೋರ್ಟ್​​ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗುತ್ತದೆ. …

Read More »

ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು.

ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ …

Read More »

ಬಿಎಂಟಿಸಿ ಬಸ್​ನಿಂದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ

ಬೆಂಗಳೂರು: ರಾಜಧಾನಿಯಲ್ಲಿ ಬಿಎಂಟಿಸಿ ಬಸ್​ಗಳಿಂದ ಆಗುತ್ತಿರುವ ಅವಾಂತರ ಮುಂದುವರೆದಿದ್ದು, ಇಂದು ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ 1: ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್​​​ ಆತನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವೆಂಕಟರಾಮಯ್ಯ (63) ಸಾವನ್ನಪ್ಪಿದ ವೃದ್ಧ. ಬೊಮ್ಮನಹಳ್ಳಿ ರೂಪೇನಾ ಅಗ್ರಹಾರ …

Read More »

ನನ್ನ ಸ್ಥಾನ ಈಗಲೂ ಗಟ್ಟಿ, ಮುಂದೆಯೂ ಗಟ್ಟಿ:ಸಿಎಂ: ಸಿದ್ದರಾಮಯ್ಯ

ಚಾಮರಾಜನಗರ: ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ‌ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು. ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ: ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, …

Read More »

ಆರ್.ಸಿ.ಬಿ ಕಾಲ್ತುಳಿತದ ರಿಪೋರ್ಟ್’ನಲ್ಲಿ ಯಾವುದೇ ಹುರುಳಿರಲ್ಲ; ಪ್ರತಿಪಕ್ಷ ನಾಯಕ ಆರ್. ಅಶೋಕ್ಕಾಂಗ್ರೆಸ್ ಮನೆಹಾಳ ಕೆಲಸಕ್ಕೆ ರಾಜ್ಯದ ತೆರಿಗೆಗೆ ಕೊಕ್ಕೆ!!!

ಕಾಂಗ್ರೆಸ್ ಮನೆಹಾಳ ಕೆಲಸಕ್ಕೆ ರಾಜ್ಯದ ತೆರಿಗೆಗೆ ಕೊಕ್ಕೆ!!! ಆರ್.ಸಿ.ಬಿ ಕಾಲ್ತುಳಿತದ ರಿಪೋರ್ಟ್’ನಲ್ಲಿ ಯಾವುದೇ ಹುರುಳಿರಲ್ಲ; ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರ್.ಸಿ.ಬಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ವರದಿ ನೀಡದಿದ್ದರೂ ನಡೆಯುತ್ತೆ. ಯಾಕೆಂದರೇ, ಅದರಲ್ಲಿ ಆರ್.ಸಿ.ಬಿಯನ್ನೇ ಗುರಿಯಾಗಿಸಲಾಗಿರುತ್ತದೆ. ಅದರಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್ ಸರ್ಕಾರದ ತಪ್ಪಿಗೆ ರಾಜ್ಯದ ಕ್ರಿಕೆಟ್ ಮ್ಯಾಚ್’ಗಳು ಬೇರೆ ರಾಜ್ಯಕ್ಕೆ ಶಿಫ್ಟ್ ಆಗಿ, ನಮ್ಮ ತೆರಿಗೆಗೆ ಕೊಕ್ಕೆ ಬಿದ್ದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ …

Read More »

ಅಕ್ರಮ ದನ ಸಾಗಾಟದ ವಾಹನ ಜಪ್ತಿ ಪ್ರಶ್ನಿಸಿ ಅಕ್ರಮ ಕೂಟ ಕಟ್ಟಿ ಪ್ರತಿಭಟನೆ: ಪ್ರಕರಣ ಹಿಂಪಡೆದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಅಕ್ರಮವಾಗಿ ದನ ಸಾಗಿಸುತ್ತಿದ್ದ ವಾಹನ ಜಪ್ತಿ ಮಾಡಿದ್ದವರ ಬಿಡುಗಡೆಗೆ ಆಗ್ರಹಿಸಿ ಒಂದು ಕೋಮಿನ ಜನ ಅಕ್ರಮ ಕೂಟ ನಿರ್ಮಿಸಿ ಕಲಬುರಗಿಯ ಚಿತ್ತಾಪುರ ಪೊಲೀಸ್‌ ಠಾಣೆ ಮುಂದೆ ಗುಂಪುಗಟ್ಟಿದ್ದ ಆರೋಪ ಸಂಬಂಧ ದಾಖಲಾದ ಪ್ರಕರಣ ಹಿಂಪಡೆಯಲು ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಪ್ರಕರಣ ಹಿಂಪಡೆಯಲು ಅನುಮತಿಸಿ ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದು ಕೋರಿ ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಸಲ್ಲಿಸಿರುವ ಕ್ರಿಮಿನಲ್‌ ಮರು ಪರಿಶೀಲನಾ …

Read More »

ಕೇಂದ್ರದಿಂದ ಸೊಸೈಟಿಗಳ ಪಡಿತರ ಕಮಿಷನ್‌ ಪರಿಷ್ಕರಣೆ: ಪ್ರತಿ ಕ್ವಿಂಟಾಲ್‌ಗೆ 27 ರೂ. ಹೆಚ್ಚಳ

ನವದೆಹಲಿ/ಹುಬ್ಬಳ್ಳಿ: ಕೇಂದ್ರ ಸರ್ಕಾರ ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳದ ಕಮಿಷನ್‌ ಅನ್ನು ಸಮಾನಾಂತರವಾಗಿ 27 ರೂ.ಗಳಿಗೆ ಹೆಚ್ಚಿಸಿ ಸೊಸೈಟಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ರಚಿಸಿದ ಸಮಿತಿಯು ಪಡಿತರ ಧಾನ್ಯಗಳ ಕಮಿಷನ್‌ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಅದರ ಅನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ಸೊಸೈಟಿಗಳ ಬಲವರ್ಧನೆ …

Read More »

ಸುಖಾನಂದ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ

ಮಂಗಳೂರು: 2006ರ ಡಿಸೆಂಬರ್ 1ರಂದು ನಡೆದಿದ್ದ ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 19 ವರ್ಷಗಳ ಬಳಿಕ ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಲಾಂ ಅಡ್ಡೂರು ಬಂಧಿತ ಆರೋಪಿಯಾಗಿದ್ದಾನೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಹತ್ಯೆ ಮಾಡಿ ಪರಾರಿಯಾಗಿದ್ದರು. ಪ್ರಕರಣದ ಪ್ರಮುಖ ಆರೋಪಿ ಕಬೀರ್​ಗೆ ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು …

Read More »

ಮೆಕ್ಕೆಜೋಳಕ್ಕೆ ಕೇಂದ್ರ ಕೊಡುವ 2,400 ರೂ. ಬೆಂಬಲ ಬೆಲೆಯೊಂದಿಗೆ ರಾಜ್ಯದಿಂದಲೂ 600 ರೂ. ಸೇರಿಸಿ ನೀಡುವಂತೆ ಒತ್ತಾಯ

ಹಾವೇರಿ: ರಾಜ್ಯದಲ್ಲಿ ಅತಿಹೆಚ್ಚು ಮೆಕ್ಕೆಜೋಳ ಬೆಳೆಯುವ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಒಂದು. ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ 2400 ರೂಪಾಯಿ ನಿಗದಿ ಮಾಡಿದೆ. ಇದಕ್ಕೆ ರಾಜ್ಯ ಸರ್ಕಾರ 600 ರೂಪಾಯಿ ಪ್ರೋತ್ಸಾಹಧನ ಸೇರಿಸಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಸರ್ಕಾರ 3000 ರೂಪಾಯಿ ನೀಡಬೇಕು ಎಂದು ಹಾವೇರಿ ರೈತರು ಒತ್ತಾಯಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 3 ಸಾವಿರ ರೂಪಾಯಿ ನೀಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು …

Read More »