Breaking News

ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಕೆ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿ ಬಿಜೆಪಿ ಜಿಲ್ಲಾ ಘಟಕವು ಹೂಡಿರುವ ದಾವೆಯ ವಿಚಾರಣೆಯನ್ನು ಇಲ್ಲಿನ ಸಿವಿಲ್ ನ್ಯಾಯಾಲಯ ಏಪ್ರಿಲ್ 20ಕ್ಕೆ ಮುಂದೂಡಿದೆ. ದಾವೆ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಪರ ವಕೀಲರು ನ್ಯಾಯಾಲಯಕ್ಕೆ ಗುರುವಾರ ಸಂಜೆ ಪ್ರತಿ ವಾದ ಪತ್ರ ಸಲ್ಲಿಸಿದರು. ದಾವೆಯನ್ನು ವಜಾ ಮಾಡುವಂತೆ …

Read More »

ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

ಧಾರವಾಡ : ಇದೇ ಮೊದಲ ಬಾರಿಗೆ ಕಾವಿ ಧರಿಸಿ ಧಾರವಾಡ ಲೋಕಸಭಾ ಚುನಾವಣಾ ಕಣಕ್ಕಿಳಿದು ರಂಗೇರುವಂತೆ ಮಾಡಿರುವ ಶಿರಹಟ್ಟಿಯ ಫಕ್ಕೀರ ದಿಂಗಾಲೇಶ್ವರರು ಕೋಟ್ಯಧೀಶ್ವರರು..! ಅಷ್ಟೇಯಲ್ಲ, ಕೆಲ ಪ್ರಕರಣಗಳಲ್ಲಿ ಆರೋಪಿ ಕೂಡ. ಹೌದು…ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ತೊಡೆ ತಟ್ಟಿ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದಿರುವ ದಿಂಗಾಲೇಶ್ವರರು ಕೋಟಿ ಕೋಟಿ ಮೌಲ್ಯದ ಮಠದ ಟ್ರಸ್ಟ್ ಆಸ್ತಿಯನ್ನು ತಮ್ಮ ಹೆಸರಿನಲ್ಲಿ ಹೊಂದಿ ಕೋಟ್ಯಧಿಪತಿಯಾಗಿದ್ದಾರೆ.   ನಾಮಪತ್ರ ಸಲ್ಲಿಸುವ ವೇಳೆ ಸಲ್ಲಿಸಿರುವ ಆಸ್ತಿ ವಿವರದ ಅಫಿಡೆವಿಟ್‌ನಲ್ಲಿ …

Read More »

ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆ ವೇಳೆಯಲ್ಲಿ ಬಿಟ್ಟರೆ ಬೇರೆ ಸಮಯದಲ್ಲಿ ನಮ್ಮ ರಾಜ್ಯ ನೆನಪಾಗುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಾಗೇಪಲ್ಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಮೋದಿ ಪ್ರವಾಹ ಬಂದಾಗಲೂ ಈ ಕಡೆ ತಲೆ ಹಾಕಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ ಎಂದು ಕಿಡಿಕಾರಿದರು. ಚುನಾವಣೆ ವೇಳೆ ಭ್ರಷ್ಟರನ್ನು ಗೆಲ್ಲಿಸಲು ರಾಜ್ಯಕ್ಕೆ ಮೇಲಿಂದ ಬರುತ್ತಾರೆ ಅಂದರೆ ಅದು ರಾಜ್ಯದ …

Read More »

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

ಹೊಸದಿಲ್ಲಿ: ವಿಶ್ವದ ಖ್ಯಾತ ಆಹಾರೋತ್ಪನ್ನ ಕಂಪೆನಿ ನೆಸ್ಲೆ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಭಾರತದಲ್ಲಿ ವಿತರಿಸುವ ಶಿಶು ಆಹಾರವಾದ ಪ್ರತೀ ಸಿರಿಲ್ಯಾಕ್‌ ಪೊಟ್ಟಣದಲ್ಲಿ ಸಕ್ಕರೆ ಪ್ರಮಾಣವನ್ನು 3 ಗ್ರಾಮ್‌ನಷ್ಟು ಹೆಚ್ಚಿಸಿದೆ ಎಂದು “ಪಬ್ಲಿಕ್‌ ಐ’ ಸಂಸ್ಥೆಯ ವರ ದಿ ಆರೋಪಿಸಿದೆ. ಈ ಅಧ್ಯಯನ ವರದಿಯು ಕೇಂದ್ರ ಆರೋಗ್ಯ ಸಚಿವಾಲಯದ ಕೈಸೇರಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ ಎಂದು ಮೂಲಗಳು ತಿಳಿಸಿವೆ. ಆರೋಪವೇನು? ಭಾರತದಲ್ಲಿ ಮಾರಾಟವಾಗುವ 15 ವಿಧದ …

Read More »

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು ಮತಗಳು ಚಲಾವಣೆ ಆಗಿವೆ; ಯಾವುದೇ ಗುಂಡಿ ಅದುಮಿದರೂ ಬಿಜೆಪಿಗೆ ಮತ ಚಲಾವಣೆ ಆಗಿರುವ ಆರೋಪಗಳು ಕೇಳಿಬಂದಿವೆ. ಈ ಕುರಿತು ಚುನಾವಣ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಎಂ ನೇತೃತ್ವದ ಎಲ್‌ಡಿಎಫ್ ತಿಳಿಸಿದೆ. ಆದರೆ ಇದು ಸುಳ್ಳು ಆರೋಪ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣ ಆಯೋಗ ತಿಳಿಸಿದೆ. ಅಣಕು ಮತದಾನದ ವೇಳೆ ಎಲ್ಲ 190 ಇವಿಎಂಗಳಲ್ಲಿ …

Read More »

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆಯಾಗಿದ್ದು, ಈ ಮೂವರು ಕೊಪ್ಪಳ ಮೂಲದವರು ಎಂದು ತಿಳಿದು …

Read More »

ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಗದಗ: ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಎಸ್‌ಪಿ ಬಿ.‌ಎಸ್. ನೇಮಗೌಡ ಪ್ರತಿಕ್ರಿಯಿಸಿದ್ದು, ಮಧ್ಯರಾತ್ರಿ ನಾಲ್ಕು ಜನರಾದ ಪ್ರಕಾಶ ಬಾಕಳೆ ಮಗ ಕಾರ್ತಿಕ್, ಸಂಬಂಧಿಕರಾದ ಪರಶುರಾಮ್, ಲಕ್ಷ್ಮೀ, ಆಕಾಂಕ್ಷಾ ಹತ್ಯೆ ಆಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ 2 ರಿಂದ 3 ಗಂಟೆ ಆಗಿದೆ ಎನ್ನಲಾಗಿದ್ದು, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವುದು ಕಂಡು ಬರುತ್ತಿದೆ. ಯಾರು ಎಂಬುದು ಗೊತ್ತಾಗಿಲ್ಲ. ಪರಿಶೀಲನೆ ಮುಂದುವರೆದಿದೆ ಎಂದು ತಿಳಿಸಿದರು. ಮುಂದುವರೆದು ಮಾತನಾಡಿ, ಆದಷ್ಟು ಬೇಗ ದಸ್ತಗಿರಿ ಮಾಡುತ್ತೇವೆ. …

Read More »

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.   ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ …

Read More »

ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

ಪಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ. ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ …

Read More »

ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ

ಬೆಂಗಳೂರು, ಏಪ್ರಿಲ್ 19: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠರನ್ನು ಮುಸ್ಲಿಂ ಸಮುದಾಯದ ವ್ಯಕ್ತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ಕುರಿತು ಸ್ವತಃ ಮೃತಳ ತಂದೆ ಪ್ರತಿಕ್ರಿಯಿಸಿದ್ದಾರೆ. ಮಗಳು ಕಳೆದುಕೊಂಡ ತಂದೆಯ ಆಕ್ರಂದನ ಮುಗಿಲು ಮುಟ್ಟಿದೆ. ಈ ನೋವಿನಲ್ಲೇ ಮಗಳ ಕುರಿತು ಮಾತನಾಡಿರುವ ಅವರು, ನನ್ನ ಮಗಳ ಕೊಲೆ ಹಿಂದೆ ಲಬ್ ಜಿಹಾದ್ ಇದೆ. ಕೊಲೆಗಾರನ ಜೊತೆಗೆ ನಾಲ್ಲೈದು ಅದೇ …

Read More »