Breaking News

ಯಾವುದೇ ಕಾರಣಕ್ಕೂ ನಾನು ಈ ಮಣ್ಣನ್ನ ಬಿಡೋದಿಲ್ಲ: ಸುಮಲತಾ

ಮಂಡ್ಯ, ಫೆ.18: ಮತ್ತೊಮ್ಮೆ ಮಂಡ್ಯ ಲೋಕ ಸಭಾ ಅಖಾಡಕ್ಕೆ (Mandya Lok Sabha) ಸುಮಲತಾ ಅಂಬರೀಶ್ (Sumalatha Ambarish) ಅವರು ಇಳಿಯುತ್ತಿರುವುದು ಬಹುತೇಕ ಫಿಕ್ಸ್ ಆಗಿದೆ. ಈ ಬಗ್ಗೆ ಅವರೇ ಕೇಳಿ ಕೊಂಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಚಂದನವನಕ್ಕೆ ಕಾಲಿಟ್ಟು 25 ವರ್ಷಗಳು ತುಂಬಿದ ಹಿನ್ನೆಲೆ ಸಕ್ಕರೆನಾಡು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ಬೆಳ್ಳಿಹಬ್ಬ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ರೆಬಲ್ ಲೇಡಿ ಸುಮಲತಾ ಅವರು ಮತ್ತೆ …

Read More »

ಕೃಷಿ ಪರಿಕರಗಳನ್ನ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತು

ಕಲಬುರಗಿ, ಫೆ.18: ಕೃಷಿ ಪರಿಕರಗಳನ್ನು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನುಅಮಾನತುಮಾಡಿ ಕಲಬುರಗಿ(Kalaburagi) ಜಂಟಿ ಕೃಷಿ ನಿರ್ದೇಶಕರು ಆದೇಶಿಸಿದ್ದಾರೆ. ಇದೇ ಫೆಬ್ರವರಿ 5 ರಂದು ಟ್ಯ್ಯಾಕ್ಟರ್‌ನಲ್ಲಿ 100 ಎರೆಹುಳು ಗೊಬ್ಬರದ ಚೀಲಗಳು, 30 ಪಿವಿಸಿ ಪೈಪ್‌ಗಳನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಗ್ರಾಮದ ಜನರೆಲ್ಲ ಸೇರಿ ಟ್ಯ್ಯಾಕ್ಟರ್​ನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಅಕ್ರಮವೆಸಗಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು …

Read More »

ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು

ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು ರಾಯಚೂರು, : ರಾಯಚೂರು (Raichur) ಜಿಲ್ಲೆಯ ಎಡ ಮತ್ತು ಬಲಭಾಗದಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ಹರಿಯುತ್ತಿದ್ದರೂ, ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ (Drinking Water Crisis). ನೀರಿಲ್ಲದೇ ಆ ಗ್ರಾಮದಲ್ಲಿ ಕಳೆದೊಂದು ವಾರದಿಂದ‌ ಶೇಕಡಾ 60% ರಷ್ಟು ಜನ ಸ್ನಾನವನ್ನೇ ಮಾಡಿಲ್ಲ. ಹೇಗಾದರೂ ಮಾಡಿ ಕುಡಿಯುವುದಕ್ಕಾದರೂ ನೀರಿನ ವ್ಯವಸ್ಥೆ ಮಾಡಿಸಿ ಎಂದು ಗ್ರಾಮಸ್ಥರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ. …

Read More »

ಶವಸಂಸ್ಕಾರಕ್ಕೆ ಜಮೀನು ಬಿಡದ ಮಾಲೀಕ, ಗ್ರಾಮಸ್ಥರ ಕಿತ್ತಾಟ

ಬೆಳಗಾವಿ, : ಸ್ಮಶಾನ ವಿಲ್ಲದ ಕಾರಣ ಈ ಹಿಂದೆ ಜಮೀನೊಂದರಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತಿತ್ತು. ಆದರೆ ಈಗ ಜಮೀನಿನ ಮಾಲೀಕ (Land Owner) ಕೋರ್ಟ್ ಆರ್ಡರ್ ತಂದಿದ್ದು ಅಂತ್ಯಸಂಸ್ಕಾರಕ್ಕೆ (Last Rites) ಅಡ್ಡಿಪಡಿಸಿದ್ದಾನೆ. ಈ ಹಿನ್ನೆಲೆ ಕುಟುಂಬಸ್ಥರು, ಸಂಬಂಧಿಗಳು ಕಳೆದ ಎರಡು ಗಂಟೆಗಳಿಂದ ಸ್ಥಳದಲ್ಲಿ ಶವ ಇಟ್ಟು ಆಕ್ರೋಶ ಹೊರ ಹಾಕಿದ್ದರು. ಸದ್ಯ ಗಲಾಟೆಯಿಂದ ಬೇಸತ್ತ ಮಹಿಳೆಯರು ಮುನ್ನುಗ್ಗಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಬೆಳಗಾವಿ (Belagavi) ತಾಲೂಕಿನ ಕಾವಳೇವಾಡಿ ಗ್ರಾಮದಲ್ಲಿ ಸ್ಮಶಾನವಿಲ್ಲದೆ, ಅಂತ್ಯಸಂಸ್ಕಾರ …

Read More »

ಮುಸ್ಲಿಮರಿಗೆ ಹೆಚ್ಚು ಅನುದಾನ ಕೊಟ್ರೆ ತಪ್ಪೇನು ಎಂದ ಪರಮೇಶ್ವರ: ಯತ್ನಾಳ ಆಕ್ರೋಶ

ವಿಜಯಪುರ: ಮುಸ್ಲಿಮರಿಗೆ ಸ್ವಲ್ಪ ಹೆಚ್ಚು ಅನುದಾನ ಕೊಟ್ಟರೆ ತಪ್ಪೇನು ಎಂದು ಗೃಹ ಸಚಿವ ಡಾ. ಪರಮೇಶ್ವರ ನೀಡಿರುವ ಹೇಳಿಕೆಯನ್ನು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಯತ್ನಾಳ, ಡಾ.ಪರಮೇಶ್ವರ್ ಅವರೇ, ಸರ್ವ ಧರ್ಮ ಸಹಿಷ್ಣುತೆ, ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷಣೆಗಳು ನಿಮ್ಮ ಭಾಷಣಕ್ಕೆ ಸೀಮಿತವಾಯಿತೇ? ತೆರಿಗೆ ದಾರರ ಹಣವನ್ನು equitable ಆಗಿ ಹಂಚಬೇಕಾಗಿದ್ದು ಸರ್ಕಾರದ ಹೊಣೆ. ಮುಸಲ್ಮಾನರಿಗೆ ಹೆಚ್ಚು, …

Read More »

ನೀರಿನ ಸಮಸ್ಯೆ ಉಲ್ಬಣ ಆತಂಕ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚತೊಡಗಿದೆ. ಮುಂದಿನ ದಿನಗಳಲ್ಲಿ ಇದು ತಾರರಕ್ಕೆ ಹೋಗುವ ಸಾಧ್ಯತೆ ಇದೆ. ಇದರ ನಿವಾರಣೆ ಮತ್ತು ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು ಜಿಲ್ಲೆಯ ಬರಪೀಡಿತ ಪ್ರತಿ ತಾಲ್ಲೂಕಿಗೆ ₹25 ಲಕ್ಷದಂತೆ 8 ತಾಲ್ಲೂಕುಗಳಿಗೆ ತಾತ್ಕಾಲಿಕವಾಗಿ ₹2 ಕೋಟಿ ಅನುದಾನ ಬಿಡುಗಡೆ ಮಾಡಿದೆ.   ಧಾರವಾಡ, ಅಳ್ನಾವರ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ಶಹರ, ಕುಂದಗೋಳ, ನವಲಗುಂದ, ಅಣ್ಣಿಗೇರಿ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಕುಡಿಯುವ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ಮೂರ್ತಿ ಪ್ರತಿಷ್ಠಾಪನೆ ಊರಿನ ಮುಖಂಡರಿಗೆ, ರೈತರಿಗೆ ಹಾಗೂ ಕಾರ್ಖಾನೆ ಸಿಬ್ಬಂದಿ ವರ್ಗದವರಿಗೆ ಸತ್ಕಾರ

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನ ಕಟ್ಟಡದ ಉದ್ಘಾಟನೆ ನಿಮಿತ್ತವಾಗಿ ಆಧ್ಯಾತ್ಮಿಕ ನಾಟಕವನ್ನು ಹಮ್ಮಿಕೊಂಡಿದ್ದರು.   ಈ ಸಂದರ್ಭದಲ್ಲಿ ಪೂಜ್ಯರಿಗೆ, ಊರಿನ ಮುಖಂಡರಿಗೆ, ರೈತರಿಗೆ ಹಾಗೂ ಕಾರ್ಖಾನೆ ಸಿಬ್ಬಂದಿ ವರ್ಗದವರಿಗೆ ಸತ್ಕಾರ ಮಾಡಿದರು.   ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಯುವ ನಾಯಕ ಸಂತೋಷ …

Read More »

ಕಲಘಟಗಿ: ಉಳವಿ ಪಾದಯಾತ್ರಿಗಳಿಗೆ ದಾಸೋಹ

ಕಲಘಟಗಿ: ಉಳವಿಯ ಚನ್ನಬಸವೇಶ್ವರರ ಜಾತ್ರಾ ಮಹೋತ್ಸವಕ್ಕೆ ಪಾದಯಾತ್ರೆಯಲ್ಲಿ ತೆರಳುವವರಿಗೆ ಪಟ್ಟಣದ ಹೊರವಲಯದ ತಡಸ ಕ್ರಾಸ್ ಹತ್ತಿರ ತಿಪ್ಪಣ್ಣ ಹಾಗೂ ಮಂಜುಳಾ ಕುರಗುಂದ ದಂಪತಿ ಪ್ರತಿ ವರ್ಷದಂತೆ ಈ ವರ್ಚವೂ ವಿಶ್ರಾಂತಿ ಮಂಟಪದಲ್ಲಿ ಅನ್ನ ದಾಸೋಹ ಹಮ್ಮಿಕೊಂಡಿದ್ದಾರೆ. ಭಕ್ತರ ಸಹಕಾರದಿಂದ ಈ ದಂಪತಿ 14 ವರ್ಷಗಳಿಂದ ಉಳವಿಗೆ ಪಾದಯಾತ್ರೆ ತೆರಳುವ ಭಕ್ತರಿಗೆ ಬೆಳಗಿನ ಉಪಾಹಾರ, ಚಹಾ, ಮಧ್ಯಾಹ್ನದ ಊಟ, ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಅವಕಾಶ ಮಾಡಿಕೊಡುತ್ತಿದ್ದಾರೆ. ದಾಸೋಹದ ಜೊತೆಗೆ ಶರಣರ …

Read More »

ಜೈಲಿನಿಂದಲೇ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೇಶ್ ಬಂಧಿತ ಆರೋಪಿಗಳು. ರೌಡಿಶೀಟರ್ ಮನೋಜ್ ಜೈಲಿನಲ್ಲಿ ಕುಳಿತು ಮಾರ್ಫ್ ಮಾಡಿದ ಮಹಿಳೆಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಕಳುಹಿಸಿ ಮಹಿಳೆಯ ತಾಯಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿನ್ನ ಅಳಿಯನಿಗೆ ಫೋಟೋ, ವಿಡಿಯೋ ಕಳುಹಿಸಿ …

Read More »

ನಾಲತವಾಡ: ಡಿಜಿಟಲ್ ಪೇ ಮೂಲಕ ಬಸ್‌ ಪ್ರಯಾಣ

ನಾಲತವಾಡ: ಬೆಳಗಾವಿಯಿಂದ ನಾಲತವಾಡಕ್ಕೆ ಹಲವು ವಿಶೇಷತೆ ಒಳಗೊಂಡ ಬೆಳಗಾವಿ ಡಿಪೊದ ನೂತನ ಬಸ್ ಓಡಿಸಲಾಗುತ್ತಿದೆ. ಈ ಬಸ್‌ನಲ್ಲಿ ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಬಸ್‍ನಲ್ಲಿ ಹೋಗೋಕೆ ಜೇಬ್‍ನಲ್ಲಿ ದುಡ್ಡು ಇರಲೇ ಬೇಕು ಎನ್ನುವಂತಿಲ್ಲ. ಬಸ್‍ಗಳಲ್ಲಿ ಟಿಕೆಟ್ ಪಡೆಯಲು ಬೆಳಗಾವಿಯ ಈ ಬಸ್ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದೆ. ಇನ್ಮುಂದೆ ನಿಮ್ಮ ಮೊಬೈಲ್‌ನಲ್ಲಿ ಯುಪಿಐ ಪೇಮೆಂಟ್ ಅವಕಾಶ ಇದ್ರೆ ಸಾಕು ಬಸ್‌ನಲ್ಲಿ …

Read More »