ಬೆಳಗಾವಿ: ‘ವಿಶೇಷ ಮಕ್ಕಳ ಪೊಲೀಸ್ ಘಟಕದಲ್ಲಿ ಕಾರ್ಯನಿರ್ವಹಿಸುವ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ತಮ್ಮ ಹತ್ತಿರ ಬರುವ ಮಕ್ಕಳ ಸಮಸ್ಯೆ ಸರಿಯಾಗಿ ಆಲಿಸಿ, ಅವರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು. ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ …
Read More »ರೈತರ ಬಾಳು ಬೆಳಗಿದ ಬಾಬೂಜಿ’
ಚಿಕ್ಕೋಡಿ: ‘ಬಾಬು ಜಗಜೀವನ ರಾಮ್ ಅವರು ತಮ್ಮ ಅಧಿಕಾರಾವಧಿಯಲ್ಲಿ ರೈತರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿದ್ದಾರೆ’ ಎಂದು ಚಿಕ್ಕೋಡಿ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಹೇಳಿದರು. ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಸಭಾ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಬಾಬು ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಚಿಕ್ಕೋಡಿಯ …
Read More »ಸಾಮಾನ್ಯ ಕಾರ್ಯಕರ್ತರನ್ನೂ ಬೆಳೆಸಿದ ಕಾಂಗ್ರೆಸ್’
ಅರಬಾವಿ: ’25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆ ಪ್ರತಿನಧಿಸಲು ಏಕೈಕ ಮಹಿಳಾ ಮಂತ್ರಿಯಾಗಿದ್ದೇನೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದು. ಇದನ್ನು ಗಮನಿಸಿ ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಅರಬಾವಿ ವಿಧಾನಸಭಾ ಕ್ಷೇತ್ರದ …
Read More »ನಾಮಪತ್ರ ಸಲ್ಲಿಸಲು ‘ಕಾಲ’ ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ‘ನಾಮಪತ್ರ ಸಲ್ಲಿಸುವಾಗ ಮೌಢ್ಯ ಅನುಸರಿಸಲ್ಲ. ಒಳ್ಳೆಯ ಕಾಲ, ಕೆಟ್ಟ ಕಾಲ ಎಂಬುದು ಇಲ್ಲ. ನಮ್ಮ ಎಲ್ಲ ಶಾಸಕರು ಲಭ್ಯವಿದ್ದ ದಿನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಗಳು ಪ್ರಿಯಾಂಕಾ ನಾಮಪತ್ರ ಸಲ್ಲಿಸುವರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಒಳ್ಳೆಯದು ಮಾಡಿದರೆ ಒಳ್ಳೆಯದಾಗುತ್ತದೆ. ಕೆಟ್ಟದ್ದು ಮಾಡಿದರೆ ಕೆಟ್ಟದ್ದಾಗುತ್ತದೆ. ಕಾಲದ ಮೇಲೆ ಯಾವುದೂ ಅವಲಂಬಿತವಲ್ಲ. ಬೇರೆಡೆ ಅಭ್ಯರ್ಥಿಗಳು ನಾಮಪತ್ರ …
Read More »ಡಾ.ಅಂಜಲಿ ನಾಮಪತ್ರ ಸಲ್ಲಿಕೆ ಏ.16ರಂದು
ಖಾನಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಏ.16ರಂದು ಕಾರವಾರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡ ಭರತೇಶ ತೋರೋಜಿ ಹೇಳಿದರು. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಡಾ.ಅಂಜಲಿ ಅವರೊಂದಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಶಾಸಕರಾದ …
Read More »ಲಾರಿ-ಟ್ರ್ಯಾಕ್ಟರ್ ಮಧ್ಯೆ ಅಪಘಾತ: ಚಾಲಕ ಸಾವು
ಹಿರೇಬಾಗೇವಾಡಿ: ಸಮೀಪದ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲಣ್ಣವರ(41) ಮೃತರು. ಬೆಳಗಾವಿಗೆ ಕೊತ್ತಂಬರಿ ಸೊಪ್ಪನ್ನು ಟ್ರ್ಯಾಕ್ಟರ್ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಹಿಂದಿನಿಂದ ಬಂದ ಮಹಾರಾಷ್ಟ್ರ ಮೂಲದ ಲಾರಿ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಟ್ರ್ಯಾಕ್ಟರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಎರಡೂ ವಾಹನಗಳನ್ನು ತೆರವುಗೊಳಿಸುವ …
Read More »ಏ.8ರಿಂದ 11ರ ವರೆಗೆ ಜರುಗಲಿದೆ ವಿಧ ದಾಸೋಹಿ ದುರದುಂಡೀಶ್ವರ ಜಾತ್ರೆ
ಮೂಡಲಗಿ: ತಾಲ್ಲೂಕಿನ ಅರಭಾವಿಯ ದುರದುಂಡೀಶ್ವರರ ಜಾತ್ರೆಯು 12ನೇ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಏ.8ರಿಂದ 11ರ ವರೆಗೆ ಜರುಗಲಿದೆ. ಗ್ರಾಮದಲ್ಲಿ ಈಗಾಗಲೇ ಹಬ್ಬದ ವಾತಾವರಣ ಮನೆ ಮಾಡಿದೆ. ಧಾರ್ಮಿಕ ಹಾಗೂ ಐತಿಹಾಸಿಕ ಹಿನ್ನೆಲೆಯಿರುವ ಮಠಗಳಲ್ಲಿ ಒಂದಾಗಿರುವ ಅರಭಾವಿಯ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠವು ಜಾಗೃತ ಸ್ಥಳವಾಗಿದೆ. ಆಧ್ಯಾತ್ಮಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಗಳೊಂದಿಗೆ ತ್ರಿವಿಧ ದಾಸೋಹದ ತಾಣ ಮತ್ತು ಭಾವೈಕ್ಯದ ಕ್ಷೇತ್ರವೆನಿಸಿದೆ. ಐತಿಹ್ಯ: 600 ವರ್ಷಗಳ ಪೂರ್ವ ಇತಿಹಾಸವನ್ನು …
Read More »ಕಲ್ಲೋಳಿ ಮಹಾಲಕ್ಷ್ಮಿ ಸೊಸೈಟಿಗೆ ₹2.51 ಕೋಟಿ ಲಾಭ: ಈರಣ್ಣ ಕಡಾಡಿ
ಮೂಡಲಗಿ: ‘ಕಲ್ಲೋಳಿಯ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹2.51 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು. ಸೊಸೈಟಿಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದ್ಯ ಸೊಸೈಟಿಯಲ್ಲಿ 12,612 ಸದಸ್ಯರಿದ್ದು, ₹20.12 ಲಕ್ಷ ಶೇರು ಬಂಡವಾಳ, ₹6.96 ಕೋಟಿ ಕಾಯ್ದಿಟ್ಟ ನಿಧಿ, ₹71.10 ಕೋಟಿ ಠೇವು ಸಂಗ್ರಹ ಹಾಗೂ ₹66.71 ಕೋಟಿ ಸಾಲವನ್ನು ವಿತರಿಸಲಾಗಿದೆ’ ಎಂದು …
Read More »ಹುಕ್ಕೇರಿ: ಸ್ಮಶಾನ ಜಾಗದಲ್ಲಿ ಸ್ವಚ್ಛತಾ ಅಭಿಯಾನ
ಹುಕ್ಕೇರಿ: ಪಟ್ಟಣದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೌಕರರ ಕಾಲೊನಿ ಪಕ್ಕದ ವೀರಶೈವ ಲಿಂಗಾಯತ ಸಮಾಜದ ಸ್ಮಶಾನ (ರುದ್ರಭೂಮಿ) ಜಾಗವನ್ನು ಸಮುದಾಯದ ಜನರು ಭಾನುವಾರ ಸ್ವಚ್ಛಗೊಳಿಸಿದರು. ಬಜಾರ್ ರಸ್ತೆ ಸೇರಿದಂತೆ ವಿವಿಧ ಬಡಾವಣೆಯ ಲಿಂಗಾಯತ ಒಳಪಂಗಡ ಸಮುದಾಯದ ಜನರು ಬೆಳಿಗ್ಗೆ ಸ್ಮಶಾನ ಭೂಮಿಗೆ ಬಂದು ಸ್ವಚ್ಛತಾ ಅಭಿಯಾನ ಹಮ್ಮಿಕೊಂಡರು. ಸ್ಮಶಾನದಲ್ಲಿ ಬೆಳೆದಿದ್ದ ಮುಳ್ಳು ಕಂಟಿ, ಗಿಡಗಂಟಿ, ಹುಲ್ಲು ಸೇರಿದಂತೆ ಕುರುಚಲ ಗಿಡಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು. ಒಣಗಿದ ಗಿಡದ ಬೊಡ್ಡೆ ದಂಡೆಗೆ …
Read More »ಕೇಜ್ರಿವಾಲ್ ಬಂಧನ ಖಂಡಿಸಿ AAPಯಿಂದ ಸಾಮೂಹಿಕ ಉಪವಾಸ,
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಎಎಪಿ ನಾಯಕರು ಭಾನುವಾರ ಜಂತರ್ ಮಂತರ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಎಎಪಿ ಆಡಳಿತವಿರುವ ಪಂಜಾಬ್ನಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ಅವರು, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟೂರಾದ ಖಟ್ಕರ್ ಕಲಾನ್ನಲ್ಲಿ ಸಾಮೂಹಿಕ ಉಪವಾಸದಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಡೆಪ್ಯೂಟಿ ಸ್ಪೀಕರ್ ರಾಖಿ ಬಿಲಾ, ಸಚಿವರಾದ ಅತಿಶಿ, ಗೋಪಾಲ್ ರೈ ಮತ್ತು …
Read More »
Laxmi News 24×7