ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ನಮ್ಮದೇನು ಹಠ ಇಲ್ಲ. ಹೈಕಮಾಂಡ್ಗೆ ರಿಕ್ವೆಸ್ಟ್ ಮಾತ್ರ ಮಾಡಿದ್ದೇನೆ. ಮುಂದಿನ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಹೋಗಿ ಹೈಕಮಾಂಡ್ಗೆ ಪ್ರಾರ್ಥನೆ ಮಾಡುವುದು ಮಾತ್ರ. ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ …
Read More »ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಪೂಜೆ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ.
ಖಾನಾಪೂರ : ಪಟ್ಟಣ ಪಂಚಾಯಿತಿ ಆವರಣದಲ್ಲಿ ಹಿಂದವೀ ಸ್ವರಾಜ್ಯ ಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಅವರ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಪಟ್ಟಣದ ನಾಗರೀಕರಿಗೆ ಮಹಾರಾಜರ ಜಯಂತ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಜಯಾ ಭುತಕಿ,ಸದಸ್ಯ ಪ್ರಕಾಶ್ ಬೈಲೂಲಕರ, ನಾರಾಯಣ ಓಗಲೆ, ವಿನೋದ್ ಪಾಟೀಲ್ ಸೇರಿದಂತೆ ಪಟ್ಟಣ ಪಂಚಾಯಿತಿಯ ಸಿಬ್ಬಂದಿ …
Read More »ವಿವಿಗಳ ರದ್ಧತಿಗೆ ಮುಂದಾದ ಸರ್ಕಾರ – ಸರ್ಕಾರದ ನಡೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಬಾಗಲಕೋಟ: ಈ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರಲು ಪಂಚಗ್ಯಾರೇಂಟಿ ಭರವಸೆ ನೀಡಿ ಅಧಿಕಾರ ಗದ್ದು ಏರಿದೆ.ಇದೀಗ ಗ್ಯಾರೆಂಟಿ ಯೋಜನೆ ಜಾರಿಯಲ್ಲಿವೆ.ಆದ್ರೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಾದಂತೆ ಕಾಣ್ತಿದೆ. ಅದನ್ನ ಸರಿದೂಗಿಸಲು ಹಿಂದಿನ ಬಿಜೆಪಿ ಸರ್ಕಾರ ಮುಂಜೂರು ಮಾಡಿದ 9 ವಿವಿಗಳನ್ನ ರದ್ದು ಮಾಡುವ ನಿರ್ಧಾರಕ್ಕೆ ಬಂದಿದೆ ಕಾಂಗ್ರೆಸ್ ಸರ್ಕಾರ. ಸರ್ಕಾರದ ನಡೆ ವಿರುದ್ಧ ಇದೀಗ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟಕ್ಕೆ ಧೂಮಿಕಿದ್ದಾರೆ.ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಒಂದೆಡೆ …
Read More »ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವಿಕೆ ಪ್ರಕ್ರಿಯೆ ವಿಸ್ತರಣೆ ಮಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ
ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ನಡೆದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು, ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ …
Read More »ಗಂಗಾವತಿ : ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ತೆಲಂಗಾಣದ ವೈದ್ಯೆ –
ಗಂಗಾವತಿ (ಕೊಪ್ಪಳ) : ಸ್ನೇಹಿತರೊಂದಿಗೆ ರಜೆ ಕಳೆಯಲು ಆಗಮಿಸಿದ್ದ ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆವೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಸಣಾಪುರದ ಬಳಿ ಸಂಭವಿಸಿದೆ. ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್ ರಾವ್ ಎಂದು ಗುತಿಸಲಾಗಿದೆ. ಇವರು ಹೈದರಾಬಾದ್ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ …
Read More »ಗರ್ಭಿಣಿಯರಿಗೆ ಸೇರಬೇಕಾದ ರೇಷನ್ ಕಿಟ್ ಗಳನ್ನು ಮಾರಾಟ ಮಾಡುತ್ತಿದ್ದ ಜಾಲ 26 ಜನರ ಬಂಧನ.
ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸೇರಬೇಕಾದ ರೇಷನ್ ಕಿಟ್ ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿ ಅಂಗನವಾಡಿ ಕಾರ್ಯಕರ್ತೆಯರು ಸೇರಿ ಒಟ್ಟು 26 ಜನರನ್ನು ಬಂಧನ ಮಾಡಿ ಜೈಲಿಗೆ ಅಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ ಹೊರವಲಯದ ಗೋಡೌನ್ ನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸೇರಿದ ಅಕ್ಕಿ,ಬೆಳೆ,ಬೆಲ್ಲ,ರವೆ,ಹೆಸರುಕಾಳು ಸೇರಿದಂತೆ ಲಕ್ಷಾಂತರ ಮೌಲ್ಯದ ರೇಷನ್ ಕಿಟ್ ಗಳು …
Read More »ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ; ಸಣ್ಣ ಪುಟ್ಟ ಪ್ರತಿಷ್ಠೆ ಇದೆ ಅಷ್ಟೇ; ದಿನೇಶ್ ಗುಂಡೂರಾವ್
ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಣ್ಣ ಪುಟ್ಟ ಪ್ರತಿಷ್ಠೆ. ಇದನ್ನು ಸರಿಪಡಿಸಿಕೊಂಡರೆ ಒಳ್ಳೆಯದಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕರು ಸಾರ್ವಕನಿಕರವಾಗಿ ಮಾತನಾಡಿದರೆ ಯಾವುದೇ ಉಪಯೋಗ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗವಾಗಿ ಪಕ್ಷದ ಬಗ್ಗೆ ಮಾತನಾಡದಂತೆ ಸೂಚಿಸಿದರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲವರು ಮಾತನಾಡುವುದು ಸರಿಯಲ್ಲ ಎಂದರು. ರಾಜ್ಯದಲ್ಲಿ ಸಿಎಂ …
Read More »ಬೆಳಗಾವಿ ಜಿಲ್ಲಾ ಟಿವ್ಹಿ ಮೀಡಿಯಾ ಸಂಘ ಅಸ್ತಿತ್ವಕ್ಕೆ
ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ, ಅಧ್ಯಕ್ಷ ಸ್ಥಾನಕ್ಕೆ ಪವರ್ ಟಿವಿ …
Read More »ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…
ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು… ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ. ವೇತನ ಪಾವತಿಯಲ್ಲಿ ವಿಳಂಬವಾಗುವುದು …
Read More »ಹಠಾತ್ ಹೋಟೆಲಗೆ ತೆರಳಿದ ಹುಕ್ಕೇರಿ ನ್ಯಾಯಾಧೀಶ ರೊಟ್ಟೆರ್
ಹುಕ್ಕೇರಿ : ಹುಕ್ಕೇರಿ ನಗರದ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಹಠಾತ್ ಹೋಟೆಲ್ ಗೆ ನುಗ್ಗಿ ಬಾಲ ಕಾರ್ಮಿಕರನ್ನು ರಕ್ಷಿಸಿದ ಘಟನೆ ಜರುಗಿದೆ. ಹೌದು ಇಂದು ಬೆಳಗಿನ ಜಾವ ಹುಕ್ಕೇರಿ ಕೋರ್ಟ ಸರ್ಕಲ್ ಬಳಿ ಇರುವ ಹೋಟೆಲ್ ಒಂದಕ್ಕೆ ಹಠಾತ್ ಆಗಿ ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಕೆ ಎಸ್ ರೋಟ್ಟೆರ ತೇರಳಿ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ …
Read More »
Laxmi News 24×7