Breaking News

15 ವರ್ಷದ ಬಾಲಕಿ ಜೊತೆ ಗ್ರಾ.ಪಂ ಅಧ್ಯಕ್ಷನ ಮದುವೆ ಆರೋಪ: ಪೋಕ್ಸೋ ಕೇಸ್ ದಾಖಲು

ಬೆಳಗಾವಿ: ಎರಡು ವರ್ಷದ ಹಿಂದೆ 15 ವರ್ಷದ ಬಾಲಕಿಯನ್ನು ಗ್ರಾಮ ‌ಪಂಚಾಯಿತಿ ಅಧ್ಯಕ್ಷರೊಬ್ಬರು ವಿವಾಹವಾಗಿದ್ದಾರೆ ಎಂಬ ಆರೋಪ ತಡವಾಗಿ ಕೇಳಿಬಂದಿದೆ. ಈ ಸಂಬಂಧ ಗ್ರಾಮ ‌ಪಂಚಾಯಿತಿ ಅಧ್ಯಕ್ಷರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ. ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದ ಪಂಚಾಯಿತಿ ಅಧ್ಯಕ್ಷ ‌ಭೀಮಶಿ ಕಳ್ಳಿಮನಿ ಬಾಲ್ಯ ವಿವಾಹ ಮಾಡಿಕೊಂಡ ಆರೋಪಿಯಾಗಿದ್ದಾರೆ. ಪೋಕ್ಸೋ ಪ್ರಕರಣ ದಾಖಲು: 2023 ನವೆಂಬರ್ 5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ …

Read More »

ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂದರು ಮಾತ್ರ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: “ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ಕುಂಟು ನೆಪ ಹುಡುಕುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದಸರಾ ಉನ್ನತ ಸಮಿತಿ ಸಭೆಯಲ್ಲಿ ದಸರಾ ಉದ್ಘಾಟಕರ ಆಯ್ಕೆ ಅಧಿಕಾರವನ್ನು ನನಗೆ ನೀಡಿತ್ತು. ಈ ಹಿನ್ನೆಲೆ ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದೇನೆ. …

Read More »

ಕೃಷಿ ಹೊಂಡದಲ್ಲಿ ಮಹಿಳೆ, ಜಮೀನು ಮಾಲೀಕನ ಶವ ಪತ್ತೆ; ಎಸ್ಪಿ ಹೇಳಿದ್ದು ಹೀಗೆ

ಚಾಮರಾಜನಗರ: ಕೃಷಿ ಹೊಂಡದಲ್ಲಿ ಮಹಿಳೆ ಹಾಗೂ ಯುವಕನ ಶವ ಪತ್ತೆಯಾದ ಘಟನೆ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಗುಳ್ಯದಬಯಲು ಎಂಬಲ್ಲಿ ನಡೆದಿದೆ. ಗುಳ್ಯದಬಯಲು ಗ್ರಾಮದ ಮೀನಾಕ್ಷಮ್ಮ (32) ಹಾಗೂ ರವಿ (30) ಮೃತರು. ಮೀನಾಕ್ಷಮ್ಮ ವಿವಾಹಿತೆಯಾಗಿದ್ದು, ಎರಡು ಮಕ್ಕಳು ಕೂಡ ಇದ್ದಾರೆ.‌ ರವಿ ಅವಿವಾಹಿತನಾಗಿದ್ದು, ತಂದೆ ಸಾವಿನ ಬಳಿಕ ಕೃಷಿ ಚಟುವಟಿಕೆಯನ್ನು ನೋಡಿಕೊಳ್ಳುತ್ತಿದ್ದರು. ಕಳೆದ 5 ವರ್ಷಗಳಿಂದ ಮೀನಾಕ್ಷಮ್ಮ ರವಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ‘ಶನಿವಾರ ಸಂಜೆ 5ರ ತನಕವೂ …

Read More »

ದೇಶದಲ್ಲೇ ಹೆಚ್ಚು ಸಕ್ಕರೆ ಕಾರ್ಖಾನೆ ಹೊಂದಿದ ಜಿಲ್ಲೆಗಳಲ್ಲಿ ಬೆಳಗಾವಿ ಮುಂಚೂಣಿಯಲ್ಲಿದೆ: ಸಚಿವ ಸತೀಶ್‌ ಜಾರಕಿಹೊಳಿ

ದೇಶದಲ್ಲೇ ಹೆಚ್ಚು ಸಕ್ಕರೆ ಕಾರ್ಖಾನೆ ಹೊಂದಿದ ಜಿಲ್ಲೆಗಳಲ್ಲಿ ಬೆಳಗಾವಿ ಮುಂಚೂಣಿಯಲ್ಲಿದೆ: ಸಚಿವ ಸತೀಶ್‌ ಜಾರಕಿಹೊಳಿ ನ್ಯೂಸ್​ಫಸ್ಟ್​ ಖಾಸಗಿ ವಾಹಿನಿಯ ಕೃಷಿ ದೇವೋಭವ ಹೆಸರಿನಡಿ ಕಬ್ಬು ಬೆಳಗಾರರ ವಿಚಾರ ಸಂಕಿರಣ ಕಾರ್ಯಕ್ರಮ ಬೆಳಗಾವಿ: ದೇಶದಲ್ಲೇ ಅತಿ ಹೆಚ್ಚು ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ ಜಿಲ್ಲೆಗಳಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ 28 ಸಕ್ಕರೆ ಕಾರ್ಖಾನೆಗಳಿದ್ದು, ಇನ್ನು ನಾಲ್ಕೈದು ಕಾರ್ಖಾನೆಗಳು ಮುಂದಿನ ದಿನಗಳಲ್ಲಿ ಆರಂಭಗೊಳ್ಳಲಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು …

Read More »

‘ಕೃಷಿ ದೇವೋಭವ’ ಕಬ್ಬು ಬೆಳೆಯ ವಿಚಾರ ಸಂಕಿರಣ ಕಾರ್ಯಕ್ರಮ

ಬೆಳಗಾವಿಯ ಕೆ.ಎಲ್.ಇ ಸಂಸ್ಥೆಯ ಡಾ. ಬಿ.ಎಸ್. ಜೀರಿಗೆ ಆಡಿಟೋರಿಯಂನಲ್ಲಿ ಕನ್ನಡದ ಪ್ರತಿಷ್ಠಿತ ಸುದ್ದಿ ವಾಹಿನಿ ನ್ಯೂಸ್ ಫರ್ಸ್ಟ್ ಕನ್ನಡ (NewsFirstKannada) ವತಿಯಿಂದ ಹಮ್ಮಿಕೊಳ್ಳಲಾದ ‘ಕೃಷಿ ದೇವೋಭವ’ ಕಬ್ಬು ಬೆಳೆಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದೆ. ಈ ವಿಶೇಷ ಕಾರ್ಯಕ್ರಮವು ರೈತರಿಗೆ — ಉತ್ತಮ ಕಬ್ಬು ಇಳುವರಿಗಾಗಿ ಅನುಸರಿಸಬೇಕಾದ ಆಧುನಿಕ ಕೃಷಿ ವಿಧಾನಗಳು, ಮಣ್ಣಿನ ಆರೋಗ್ಯ ಸಂರಕ್ಷಣೆ, ಗೊಣ್ಣೆ ಹುಳು ಸಮಸ್ಯೆಗೆ ಪರಿಹಾರಗಳು ಹಾಗೂ ತಂತ್ರಜ್ಞಾನ ಬಳಕೆಯಿಂದ ಕಬ್ಬು ಬೆಳೆ …

Read More »

ಹುಕ್ಕೇರಿ ಪಟ್ಟಣದಲ್ಲಿ ಇಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿಗಳನ್ನು ವಿತರಿಸಲಾಯಿತು.

ಹುಕ್ಕೇರಿ ಪಟ್ಟಣದಲ್ಲಿ ಇಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿಗಳನ್ನು ವಿತರಿಸಲಾಯಿತು. ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸತೀಶ ಜಾರಕಿಹೊಳಿ ಫೌಂಡೇಶನ್‌ನ ಸಮಾಜಮುಖಿ ಕಾರ್ಯಗಳಲ್ಲಿ ಇದು ಮತ್ತೊಂದು ಹೆಜ್ಜೆ. ಮುಂದೆಯೂ ಅಗತ್ಯವಿರುವ ಜನರಿಗೆ ಸಹಾಯ ಮಾಡಿ, ಸತೀಶ ಜಾರಕಿಹೊಳಿಯವರ ಆಶಯದಂತೆ ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲಾಗುವುದು. ಈ ಸಂದರ್ಭದಲ್ಲಿ ಹುಕ್ಕೇರಿ ಪುರಸಭೆ ಅಧ್ಯಕ್ಷರು, …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ ಹಾಗೂ ಬಿಸಿಲಿನ ತಾಪದಿಂದ ರಕ್ಷಣೆ ಪಡೆಯಲು ಈ ಸಹಾಯವು ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ನೆರವು ಮತ್ತು ನಿಜವಾದ ಸಾಂತ್ವನದ ನೆರಳಾಗಿ ಪರಿಣಮಿಸಿದೆ‌ ಎಂದು‌ ಭಾವಿಸುತ್ತೇನೆ. ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಸತೀಶ ಜಾರಕಿಹೊಳಿ ಫೌಂಡೇಶನ್‌ ಈಗಾಗಲೇ ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತನ್ನ ಕೊಡುಗೆಯನ್ನು ‌ನೀಡಿದೆ.‌ ಸಾಮಾನ್ಯ …

Read More »

ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ

ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ ಯಮಕಮರಡಿ: ನೇಕಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸ್ಥಳೀಯವಾಗಿ ನಿಮ್ಮ ಸಮಾಜದ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಹುಕ್ಕೇರಿ ತಾಲೂಕಿನ ಆನಂದಪೂರ ಗ್ರಾಮದಲ್ಲಿ ಸತೀಶ್‌ ಜಾರಕಿಹೊಳಿ ನೇಕಾರ ಕಾಲೋನಿ, ಬನಶಂಕರಿ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ದೇವಾಂಗ ಬನಶಂಕರಿ ಮಂಗಲ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾನು ಜವಳಿ ಖಾತೆ …

Read More »

ನೀಲಗಾರ_ಗಣಪತಿಯ_ದರ್ಶನ_ಬಂದ್_ಇರುತ್ತದೆ…

#ನೀಲಗಾರ_ಗಣಪತಿಯ_ದರ್ಶನ_ಬಂದ್_ಇರುತ್ತದೆ… ನಗರದ ನೀಲಗಾರ ಗಣಪತಿಯ ಹೆದ್ದುರಶೆಟ್ಟಿ ಮನೆತನದ ಅಶೋಕ್ ಹೆದ್ದುರಶೆಟ್ಟಿ ಇವರ ನಿಧನದ ಹಿನ್ನೆಲೆ ಸುಪ್ರಸಿದ್ಧ ನೀಲಗಾರ ಗಣಪತಿಯ ದರ್ಶನವನ್ನ ಇಂದು 31 ಅಗಸ್ಟ ಹಾಗೂ ನಾಳೆ 1 ಸಪ್ಟಂಬರ ರಂದು ಗಣಪತಿಯ ದರ್ಶನವನ್ನ ಬಂದ್ ಮಾಡಿರುತ್ತಾರೆ.

Read More »

ಶಂಕರ ಫಕೀರಪ್ಪ ಪರಸಣ್ಣವರ ನಿಧನ

ಶಂಕರ ಫಕೀರಪ್ಪ ಪರಸಣ್ಣವರ ನಿಧನ ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಜನಸಂಪರ್ಕಾಧಿಕಾರಿ ಮುಖ್ಯಸ್ಥ(ಪಿಆರ್‌ಓ) ಶಂಕರ ಫಕೀರಪ್ಪ ಪರಸಣ್ಣನವರ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ೫೬ ವರ್ಷ ವಯಸ್ಸಾಗಿತ್ತು. ಮೂಲತಃ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದರಾದ ಶಂಕರ ಅವರು ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಅವರ ಅಕಾಲಿಕ ಅಗಲಿಕೆ ಕೆಎಲ್‌ಇ ಆಸ್ಪತ್ರೆಗೆ ಆಘಾತವನ್ನುಂಟು ಮಾಡಿದೆ. ಭಗವಂತನು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲೆಂದು ಕೆಎಲ್‌ಇ …

Read More »