ಹುಕ್ಕೇರಿ: ಸ್ಥಳೀಯ ಕೋರ್ಟ್ ಆವರಣದಲ್ಲಿರುವ ಇ- ಗ್ರಂಥಾಲಯದ ಸಂಗ್ರಹ ಕೊಠಡಿಯಲ್ಲಿ ವಕೀಲೆಯೊಬ್ಬರ ಪತಿ, ರೈತ ಲಗಮಪ್ಪ ಹೊಸೂರಿ(48) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ತಾಲ್ಲೂಕಿನ ನೇರ್ಲಿ ಗ್ರಾಮದವರಾದ ಲಗಮಪ್ಪ ಜಾಬಾಪುರದಲ್ಲಿ ವಾಸಿಸುತ್ತಿದ್ದರು. ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಕೈಗಡವಾಗಿ ₹5.20 ಲಕ್ಷ ಸಾಲ ಮಾಡಿದ್ದರು’ ಎಂದು ಅವರ ಪತ್ನಿ ಅನಿತಾ ಕುಲಕರ್ಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಸಾಲ ತೀರಿಸಲಾಗದೆ ಬೇಸತ್ತು ಮಧ್ಯಾಹ್ನದ ವೇಳೆ …
Read More »‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳಲು ನಾನು ಫುಟ್ಬಾಲ್ ಅಲ್ಲ: ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಇರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳಲು ನಾನು ಫುಟ್ಬಾಲ್ ಅಲ್ಲ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಪ್ರಶ್ನಿಸಿದರು. ತಾಲ್ಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2014ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದ ವೇಳೆ ಒಮ್ಮೆ ಒದ್ದರು, ದೆಹಲಿಗೆ ಹೋಗಿ ಬಿದ್ದೆ. ಅಲ್ಲಿಂದ ಒದ್ದರು, ವಿಧಾನ ಪರಿಷತ್ಗೆ ಬಂದೆ. ಈಗ ಮತ್ತೆ …
Read More »ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಬೆಳಗಾವಿ, ಫೆ.2(ಕರ್ನಾಟಕ ವಾರ್ತೆ): ರಾಯಬಾಗ ತಾಲೂಕಿನ ವಿವಿಧ ಇಲಾಖೆಯ ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಶನಿವಾರ (ಫೆ.03) ನಂದಿಕುರಳಿ ರಸ್ತೆಯಲ್ಲಿ ಬರುವ ಹೆಸ್ಕಾಂ ವಿಭಾಗೀಯ ಕಚೇರಿಯ ಸಭಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆದಕಾರಣ ತಾಲೂಕಿನ ಸಾರ್ವಜನಿಕರು ತಮಗೆ ಸಂಬಂಧಿಸಿದ ಕುಂದುಕೊರತೆಗಳ …
Read More »ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ
ಬೆಳಗಾವಿ: ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ಫೆ.5 ರಂದು ನಗರದ ಸರ್ದಾರ್ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಸಮಾವೇಶ ನಡೆಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು …
Read More »ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ.
ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್) ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ. ಎದೆಹಾಲಿನ ಕೊರತೆಯಿಂದ ಬಳಲುತ್ತಿರುವ ಶಿಶುಗಳಿಗೆ ನೆರವಾಗಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳಗಾವಿ, ಕಲಬುರಗಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಎದೆಹಾಲು ಸಂಗ್ರಹ ಬ್ಯಾಂಕ್ ಆರಂಭಿಸಲು ಮುಂದಾಗಿತ್ತು. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಗೆ ಬಂದಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2023ರ ಡಿಸೆಂಬರ್ 13ರಂದು ಉದ್ಘಾಟಿಸಿದ್ದರು. ‘ಬೆಳಗಾವಿಯೊಂದಿಗೆ …
Read More »ನೀರಾವರಿ ಜೋಳ: ಬಂಪರ್ ಕಾಳು
ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ್ ಗ್ರಾಮದ ಪ್ರಗತಿಪರ ಕೃಷಿಕ ಶಿವಾನಂದ ಸಿದ್ದಪ್ಪ ಅಗಸಿಮನಿ ಬಿತ್ತನೆ ಮಾಡಿರುವ ಹೈಬ್ರಿಡ್ ತಳಿಯ ಜೋಳ ತೆನೆಗಟ್ಟಿದ್ದು, ಸಹಸ್ರಾರು ಕಾಳುಗಳನ್ನು ಒಳಗೊಂಡಿರುವುದು ವಿಶೇಷವಾಗಿದೆ. ಕೈಕೊಟ್ಟ ಮುಂಗಾರು ಮಳೆಯಿಂದಾಗಿ ಕಂಗೆಡದ ಅವರು, ಹಿಂಗಾರಿನಲ್ಲಿ ವಾತಾವರಣ ಆಶ್ರಯಿಸಿ ಬರುವ ‘ಹವಾಜೋಳ’ ಬೀಜ ಬಿತ್ತನೆ ಮಾಡಲಿಲ್ಲ. ಬದಲಿಗೆ ನೀರಾವರಿ ಮೇಲೆ ಅವಲಂಬಿಸಿರುವ ಜೋಳದ ತಳಿ ಖರೀದಿಸಿ ಬಿತ್ತನೆ ಮಾಡಿದರು. ಅವರ ನಿರೀಕ್ಷೆಯೂ ಹುಸಿಯಾಗಲಿಲ್ಲ. ಹೆಚ್ಚಿನ ಇಳುವರಿಯ ಕನಸೂ ತೆನೆಗಟ್ಟಿ ಮುಖದಲ್ಲಿ ಮಂದಹಾಸ …
Read More »ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ:C.M.
ಬೆಂಗಳೂರು : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ …
Read More »ಬಿಯರ್ ದರ ಮತ್ತೆ ಹೆಚ್ಚಳ, ಮದ್ಯ ಪ್ರಿಯರಿಗೆ ಆಘಾತ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 2: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ (Karnataka government) ಮತ್ತೆ ಆಘಾತ ನೀಡಿದೆ. ಪದೇ ಪದೇ ದರ ಏರಿಕೆ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದ್ದು, ಕಿಸೆಯಲ್ಲಾ ಖಾಲಿಯಾದರೂ ಕಿಕ್ ಮಾತ್ರ ಏರದಂತಾಗಿದೆ.! ರಾಜ್ಯ ಸರ್ಕಾರ ಬಿಯರ್ (Beer) ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಅಂದ್ರೆ ಶೇ 10 ರಷ್ಟು ಹೆಚ್ಚಿಸಿದೆ. ಇದರಿಂದಾಗಿ, ಬಿಯರ್ ಬಾಟಲ್ ಬೆಲೆ …
Read More »ಹಲವಾರು ಅಕ್ರಮಗಳು ನಡೆಯುತ್ತಿದ್ದರೂ ಕಾನೂನಿನ ಕಣ್ಣು ಕೇವಲ ಹನುಮ ಧ್ವಜದ ಮೇಲೆ ಬಿದ್ದಿದ್ಯಾಕೆ? ಸುಮಲತಾ ಅಂಬರೀಶ್
ಬೆಂಗಳೂರು: ಮಂಡ್ಯದ ಕೆರಗೋಡುನಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದು ಬಹಳ ಸೂಕ್ಷ್ಮ ವಿಷಯವಾಗಿತ್ತು ಆದರೆ ಅದನ್ನು ಸೂಕ್ತವಾಗಿ ನಿರ್ವಹುಸುವಲ್ಲಿ ರಾಜ್ಯಸರ್ಕಾರ (state government) ಪ್ರಮಾದವೆಸಗಿದೆ ಎಂದುಮಂಡ್ಯ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಹೇಳಿದರು. ನಗರದ ಅವರ ನಿವಾಸದಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿರುವ ಸುಮಲತಾ, ಸರ್ಕಾರ ಕಟ್ಟುನಿಟ್ಟಾಗಿ ಕಾನೂನನ್ನು ಜಾರಿಗೊಳಿಸುತ್ತಿರುವ ಬಗ್ಗೆ ಹೇಳಿಕೊಳ್ಳುತ್ತ್ತಿರುವುದಾದರೆ, ಯಾರ ಭಾವನೆಗಗಳಿಗೂ (sentiments) ಧಕ್ಕೆ ಉಂಟು ಮಾಡದ ಹನುಮ ಧ್ವಜ ಮಾತ್ರ ಅದರ ಕಣ್ಣಿಗೆ ಬಿತ್ತೇ? ಮಂಡ್ಯ ಸೇರಿದಂತೆ …
Read More »ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಬೆಂಗಳೂರು, ಫೆಬ್ರುವರಿ 1: ನಾಲ್ವರು ಐಪಿಎಸ್ (IPS)ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. 4 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅಮಿತ್ ಸಿಂಗ್: ಡಿಐಜಿ, …
Read More »