Breaking News

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್.

ಬೆಂಗಳೂರು : ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು …

Read More »

ಬೆಳಗಾವಿಯಲ್ಲಿ “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025 ಪೂರ್ವಭಾವಿ ಸಭೆ

 ಬೆಳಗಾವಿ: “ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025” ರ ಕುರಿತು ಮಾನ್ಯ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ ರವರ ಘನ ಉಪಸ್ಥಿತಿಯಲ್ಲಿ ಇಂದು ಅಪರಾಹ್ನ ಬೆಳಗಾವಿ ಜಿಲ್ಲೆಯ ಬೆಳವಡಿಯಲ್ಲಿರುವ ರಾಣಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಬೆಳವಡಿ ಮಲ್ಲಮ್ಮನ ಉತ್ಸವ ಆಚರಣೆ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ ರೋಷನ್ ರವರ ಅಧ್ಯಕ್ಷತೆಯಲ್ಲಿ ಜರುಗಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಭೀಮಾಶಂಕರ ಗುಳೇದ, ಬೆಳಗಾವಿ …

Read More »

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ.

ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.

Read More »

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ

ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕದ ಬ್ರಿಡ್ಜ್‌ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ವಿವಿಧ ಶೈಕ್ಷಣಿಕ ಒಡಂಬಡಿಕೆಗಳ ಒಪ್ಪಂದಕ್ಕೆ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಹಿ ಹಾಕಲಾಯಿತು. ಈ ಕುರಿತು ಮಾತುಕತೆಗಳು ನಡೆದ ನಂತರ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಿಎಂ ತ್ಯಾಗರಾಜ್ ಮತ್ತು ಅಮೆರಿಕಾದ ಬ್ರಿಡ್ಜ್ ವಾಟರ್ ಸ್ಟೇಟ ವಿವಿ ಅಧ್ಯಕ್ಷ ಫ್ರೆಡ್ರಿಕ್ ಡಬ್ಲ್ಯೂ.ಕ್ಲಾರ್ಕ್ ಅವರು ಸಹಿ ಮಾಡಿ ಒಪ್ಪಂದದ ದಾಖಲೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. …

Read More »

ಬೆಳಗಾವಿ ಆರ್ ಸಿ ಯು ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ

ಬೆಳಗಾವಿ ಆರ್ ಸಿ ಯು ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕದ ಬ್ರಿಡ್ಜ್‌ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ವಿವಿಧ ಶೈಕ್ಷಣಿಕ ಒಡಂಬಡಿಕೆಗಳ ಒಪ್ಪಂದಕ್ಕೆ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಹಿ ಹಾಕಲಾಯಿತು. ಈ ಕುರಿತು ಮಾತುಕತೆಗಳು ನಡೆದ ನಂತರ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಿಎಂ ತ್ಯಾಗರಾಜ್ ಮತ್ತು ಅಮೆರಿಕಾದ ಬ್ರಿಡ್ಜ್ ವಾಟರ್ ಸ್ಟೇಟ ವಿವಿ ಅಧ್ಯಕ್ಷ ಫ್ರೆಡ್ರಿಕ್ ಡಬ್ಲ್ಯೂ.ಕ್ಲಾರ್ಕ್ …

Read More »

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ

ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.

Read More »

ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿ ಕೊಡಲು ತೊಂದರೆ ಇದೆಯಾ: ಸಚಿವ ಸಂತೋಷ್​ ಲಾಡ್

ಅರಕಲಗೂಡು (ಹಾಸನ) : “ತುಂಬಾ ಪವರ್​ಫುಲ್​ ಪ್ರಧಾನಿ ಆಗಿರುವ ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿಯನ್ನು ಕೊಡಲು ತೊಂದರೆ ಇದೆಯಾ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಸಂತೋಷ್​ ಲಾಡ್​​​ ಅವರು ವಾಗ್ದಾಳಿ ನಡೆಸಿದ್ದಾರೆ. ಪಟ್ಟಣದಲ್ಲಿ ಖಾಸಗಿಯಾಗಿ ನಡೆಯುತ್ತಿರುವ ಸಿದ್ದರಾಮಯ್ಯ ಕ್ರಿಕೆಟ್ ಕಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಅಥವಾ ಚುನಾವಣಾ ಕಮಿಷನ್​ನವರಾಗಲಿ ಎಲೆಕ್ಷನ್ ವೋಟಿಂಗ್ ಪ್ಯಾಟರ್ನ್​ಅನ್ನು ಕೊಡದಂತೆ ಕಾನೂನನ್ನೇ ತಂದಿದ್ದಾರೆ. ಈ ಹೊಸ …

Read More »

ಹಾವೇರಿಯಲ್ಲಿ ಇಬ್ಬರು ರೈತರ ದುರ್ಮರಣ

ಹಾವೇರಿ: ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎರಡು ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ. ಒಂದೆಡೆ ರೈತ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟರೆ ಇನ್ನೊಂದೆಡೆ ಜೇನು ಹುಳು ಕಡಿದು ರೈತ ಮೃತಪಟ್ಟ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಮೃತಪಟ್ಟ ಘಟನೆ ಹಾನಗಲ್ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಮಹಿಳೆಯನ್ನು 45 ವರ್ಷದ ರೇಣುಕಾ ಮರೆಯಪ್ಪನವರ್ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು …

Read More »

ಸಚಿವ ಕೆ ಎನ್ ರಾಜಣ್ಣ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ:ಡಿ ಕೆ ಶಿ

ಮೈಸೂರು : ಸಚಿವ ಕೆ ಎನ್ ರಾಜಣ್ಣ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಸಣ್ಣ ಕಾರ್ಯಕರ್ತ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾರ್ಮಿಕವಾಗಿ ಹೇಳಿದರು. ಸಚಿವ ಕೆ.ಎನ್.ರಾಜಣ್ಣ ಅವರ ದಿಢೀರ್ ದೆಹಲಿ ಪ್ರವಾಸ, ಉದಯಗಿರಿ ಗಲಾಟೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಅವರ ಹೇಳಿಕೆಗೆ ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, ರಾಜಣ್ಣ ದೊಡ್ಡವರು, ನಾನು ಅವರ ಬಗ್ಗೆ ಮಾತನಾಡಲ್ಲ. ಕಾಂಗ್ರೆಸ್ …

Read More »

ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಪವಿತ್ರ ಸ್ನಾನ

ಮೈಸೂರು: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ದಿಯಾದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದು ಮಾಘ ಪೂರ್ಣಿಮೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಫೆಬ್ರವರಿ 10ರಿಂದ ತಿರುಮಕೂಡಲಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಕುಂಭಮೇಳದಲ್ಲಿ ಇಂದು ಕೊನೆಯ ದಿನ. ಸಂಗಮದಲ್ಲಿ ಈ ಸಲ 6 ವರ್ಷಗಳ ಬಳಿಕ ಕುಂಭಮೇಳ ನಡೆಯುತ್ತಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ನದಿಗಳು ಸಂಗಮವಾಗುವ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬುದು ಜನರ ನಂಬಿಕೆ. …

Read More »