Breaking News

ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸವಿವರವಾಗಿ ಚರ್ಚಿಸಿ, ಅವರಿಗೆ ಶಾಶ್ವತ ಹಾಗೂ ಸಮಗ್ರ ಪರಿಹಾರ ಒದಗಿಸುವ ದಿಟ್ಟ ನಿರ್ಣಯದತ್ತ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲೇ ಫಲಪ್ರದ ಕ್ರಮಗಳ ಮೂಲಕ ರೈತರ ಹಿತ ಹಾಗೂ …

Read More »

ಕ್ರಾಂತಿ ಏನಿದ್ರೂ 2028ರಲ್ಲಿ ನವೆಂಬರ್ ,, ಡಿಸೆಂಬರ್ ಕ್ರಾಂತಿ ಇಲ್ಲ, : ಡಿಕೆಶಿ

ದೆಹಲಿ/ಬೆಂಗಳೂರು: “ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿಯೂ ಇಲ್ಲ. ಜನವರಿ, ಫೆಬ್ರವರಿಗೂ ಕ್ರಾಂತಿ ಆಗುವುದಿಲ್ಲ. ಕ್ರಾಂತಿ ಆಗುವುದೇನಿದ್ದರೂ 2028ರಲ್ಲಿ. ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂಬ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ …

Read More »

ಬಿಎಂಆರ್‌ಸಿಎಲ್ (ನಮ್ಮ ಮೆಟ್ರೋ) ಕೇಂದ್ರ ಸರ್ಕಾರದ ಅಧೀನ ಸಂಸ್ಥೆ: ಹೈಕೋರ್ಟ್‌

ಬೆಂಗಳೂರು: ಕೈಗಾರಿಕಾ ವಿವಾದಗಳ ಕಾಯಿದೆಯಡಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್)ದ ಮೇಲೆ ಕೇಂದ್ರ ಸರ್ಕಾರಕ್ಕೆ ವಿಶಾಲ ನಿಯಂತ್ರಣವಿದ್ದು, ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿ ಸೀಮಿತವಾಗಿದೆ. ಇದೊಂದು ‘ರೈಲ್ವೆ ಕಂಪೆನಿ’ಯಾಗಿದ್ದು ಕೇಂದ್ರದ ಸಮ್ಮತಿಯೊಂದಿಗೆ ಕಾರ್ಯನಿರ್ವಹಣೆ ಮಾಡಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರ 2019ರಲ್ಲಿ ಬಿಎಂಆರ್‌ಸಿಎಲ್ ಸಾರ್ವಜನಿಕ ಉಪಯುಕ್ತವಾದ ಸೇವೆ ಎಂಬುದಾಗಿ ಹೊರಡಿಸಿದ್ದ ಅಧಿಸೂಚನೆ ಮತ್ತು ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯಿದೆಯ(ಎಸ್ಮಾ) ಅಡಿಯಲ್ಲಿ ಬಿಎಂಆರ್‌ಸಿಎಲ್ ‘ಅಗತ್ಯ ಸೇವೆ’ಗಳು ಎಂಬುದಾಗಿ 2017ರಲ್ಲಿ ಹೊರಡಿಸಿದ್ದ …

Read More »

20ನೇ ವಯಸ್ಸಿಗೆ ಭಾರತಕ್ಕೆ ಬಂದು ಗಂಗಾವತಿಯಲ್ಲೇ ನೆಲೆಸಿದ್ದ ಬೆಲ್ಜಿಯಂ ಮಹಿಳೆ ಸಾವು

ಗಂಗಾವತಿ: ಪ್ರವಾಸಕ್ಕೆಂದು ಬಂದು ಇಲ್ಲಿನ ಪ್ರಕೃತಿಗೆ ಮಾರುಹೋಗಿ ಕಳೆದ ಹಲವು ದಶಕದಿಂದ ಇಲ್ಲೇ ಒಂಟಿಯಾಗಿ ಬದುಕು ನಡೆಸುತ್ತಿದ್ದ ಬೆಲ್ಜಿಯಂ ದೇಶದ ಮಹಿಳೆ ಚಿಯಾರೆಲ್ ಮೈಕೆಲ್ ಆಂಟೋನಿಯಾ(70) ಅಲಿಯಾಸ್ ಮೀರಮ್ಮ ಅವರು ಬುಧವಾರ ತಡರಾತ್ರಿ ನಿಧನರಾದರು. ಹನುಮನಹಳ್ಳಿ ಸಮೀಪ ಇರುವ ತನ್ನ ಆಧ್ಯಾತ್ಮಗುರು ಸುಬ್ರಹ್ಮಣ್ಯ ಅವರ ಸಮಾಧಿ ಪಕ್ಕದಲ್ಲಿಯೇ ಇಂದು (ಗುರುವಾರ) ಸ್ಥಳೀಯರು ಆಂಟೋನಿಯಾ ಅವರ ಇಚ್ಛೆಯಂತೆ ಸನಾತನ ಹಿಂದೂ ಪರಂಪರೆಯ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದರು. ಮಹಿಳೆ ಬೆಲ್ಜಿಯಂ ದೇಶಕ್ಕೆ ಸೇರಿದ್ದರಿಂದ ಆಕೆಯ …

Read More »

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

ಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. ಮೈಸೂರು ಮೂಲದ ಸಯ್ಯದ್ ಅಸ್ಲಾಂ ಪಾಷ (40) ಪೊಲೀಸರ ಬಲೆಗೆ ಬಿದ್ದವ. ಬಂಧಿತನಿಂದ 22 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮನೆಗಳ್ಳತನ ಮಾಡುವುದನ್ನು ಸಿದ್ದಿಸಿಕೊಂಡಿದ್ದ ಖದೀಮ ಹಾಡಹಾಗಲೇ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಐಷಾರಾಮಿ ಮನೆಗಳನ್ನು …

Read More »

ಬ್ಬು ಬೆಳೆಗಾರರ ಹೋರಾಟಕ್ಕೆ ಹಾವೇರಿ ಜಿಲ್ಲೆಯ 10ಕ್ಕೂ ಅಧಿಕ ಮಠಾಧೀಶರ ಬೆಂಬಲ

ಹಾವೇರಿ: ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಎಂಟು ದಿನ ಪೂರೈಸಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರೂ ಸಹ ಇದೀಗ ಸೂಕ್ತ ಬೆಲೆಗೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಹಾವೇರಿ ತಾಲೂಕಿನ ಸಂಗೂರು, ರಟ್ಟಿಹಳ್ಳಿ ತಾಲೂಕಿನ ಬೈರನಪಾದ ಮತ್ತು ಶಿಗ್ಗಾಂವ್ ತಾಲೂಕಿನ ಕೋಣನಕೆರೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿವೆ. ಈ ಕಾರ್ಖಾನೆಗಳ ಮಾಲೀಕರು ಹಾವೇರಿ ಜಿಲ್ಲೆಯ ರೈತರ ಕಬ್ಬಿಗೆ ಸೂಕ್ತ …

Read More »

ಬಿಡದಿ ಟೌನ್‌ಶಿಪ್: ಒಂದಿಂಚು ಭೂಮಿ ಕೊಡಬೇಡಿ, ನಿಮ್ಮೊಂದಿಗೆ ನಾನಿದ್ದೇನೆ- ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಬಿಡದಿ ಟೌನ್‌ಶಿಪ್‌ ಹೆಸರಿನಲ್ಲಿ ಈ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ನೀವು ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜೊತೆ ನಾನಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್‌‌ಶಿಪ್‌ಗೆ ರೈತರು ವಿರೋಧ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರಿಗೆ ಮಿಡಿಯುವುದು ಬಿಟ್ಟು ಈ ಸರ್ಕಾರ …

Read More »

ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ*

ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ* *ವಿಧಾನಸೌಧದಲ್ಲಿ ನಾಳೆಯೇ ಬೆಳಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಮಧ್ಯಾಹ್ನ ರೈತ ಹೋರಾಟಗಾರರ ಸಭೆ ಕರೆದ ಮುಖ್ಯಮಂತ್ರಿಗಳು* *FRP ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ* *ಪ್ರಧಾನಿ ಮೋದಿಯವರಿಗೆ ತಕ್ಷಣ ಪತ್ರ ಬರೆದು ರೈತರ ಬೇಡಿಕೆ ಬಗ್ಗೆ ಚರ್ಚಿಸಲು ಸಮಯ ಕೇಳಲು ಸಚಿವ ಸಂಪುಟ ಸಭೆ ನಿರ್ಧಾರ* FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: …

Read More »

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ* * *ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರು* *ಬೆಂಗಳೂರು* : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ …

Read More »

ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ

ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದೆದುರು ಪ್ರತಿಭಟನೆ ಡಿಸಿ ಮೂಲಕ ಸಿಎಂ’ಗೆ ಮನವಿ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ಹೇರಲಾಗಿರುವ ಜಿಲ್ಲಾ ಪ್ರವೇಶ ನಿರ್ಬಂಧವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ …

Read More »