ನವದೆಹಲಿ,ಮಾ.23- ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ರೂವಾರಿಗಳು ಮುಸಾಫಿರ್ ಮತ್ತು ಹುಸೇನ್ ಶಬೀದ್ ಎಂಬುದು ರಾಷ್ಟ್ರೀಯ ತನಿಖಾ ದಳ(ಎನ್ಐಎ) ತನಿಖೆಯಿಂದ ದೃಢಪಟ್ಟಿದೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಈ ಇಬ್ಬರು ಶಂಕಿತ ಉಗ್ರರು ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಎನ್ಐಎಯ ಹಿಟ್ ಲಿಸ್ಟ್ನಲ್ಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಗೆ ನಿರ್ದಿಷ್ಟ ಸಮುದಾಯದ ವಿದ್ಯಾವಂತ ಮತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕರನ್ನು …
Read More »ಗಣಿ ಇಲಾಖೆ ಡಿಡಿ ಹುದ್ದೆ ರದ್ದು
ಚಾಮರಾಜನಗರ, ಮಾರ್ಚ್, 23: ಉತ್ಕೃಷ್ಟ ಮಟ್ಟದ ಕರಿಕಲ್ಲಿಗೆ ಹೆಸರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ರಾಜಧನ, ಡಿಎಂಎಫ್ ಸಂಗ್ರಹಣೆ ನಿರೀಕ್ಷೆ ಮಟ್ಟದಲ್ಲಿರದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಹುದ್ದೆಯನ್ನು ರದ್ದು ಪಡಿಸಲಾಗಿದೆ. ಕಳೆದ ಮಾರ್ಚ್ 20ರಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಸುಮ ಗಣಿ ಇಲಾಖೆ ಉಪ ನಿರ್ದೇಶಕರ ಹುದ್ದೆ ನಿವಿಕರಿಸಿ ಹಿರಿಯ ಭೂ ವಿಜ್ಞಾನಿ ಹುದ್ದೆಯನ್ನಾಗಿ ಪರಿವರ್ತಿಸಲಾಗಿದೆ. ಕರ್ನಾಟಕ ಉಪ ಖನಿಜ ರಿಯಾಯಿತಿ …
Read More »ಕಾಂಗ್ರೆಸ್ ಪ್ರಚಾರಕ್ಕೆ ನಟಿ ರಮ್ಯಾ ಎಂಟ್ರಿ
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಸ್ಟಾರ್ ಕಾಂಪೈನರ್ ಗಳ ಲಿಸ್ಟ್ ರೆಡಿಯಾಗಿದೆ. ಈಗ ಸ್ಟಾರ್ ಕಾಂಪೈನರ್ ಗಳ ಪಟ್ಟಿಯಲ್ಲಿ ರಮ್ಯಾ ಹೆಸರೂ ಇದೆ ಎನ್ನಲಾಗಿದೆ. ನಟಿ ರಮ್ಯಾ ಈ ಹಿಂದೆ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದವರು, ಸಂಸದರಾಗಿಯೂ ಆಯ್ಕೆಯಾಗಿದ್ದರು. ಆದರೆ ಅದಾದ ಬಳಿಕ ರಮ್ಯಾ ರಾಜಕೀಯ, ಸಿನಿಮಾದಿಂದ ದೂರವುಳಿದಿದ್ದರು. ಈ ನಡುವೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಸ್ಟಾರ್ ಪ್ರಚಾರಕಿಯಾಗಿದ್ದರು. ಇದೀಗ ರಮ್ಯಾರನ್ನು ಮಂಡ್ಯ …
Read More »ಬಂಧನವಾದರೂ ಸಂತ್ರಸ್ತ ಬಾಲಕಿಯ ಫೋಟೊಗಳನ್ನು Instaದಿಂದ ಡಿಲೀಟ್ ಮಾಡದ ಸೋನು ಗೌಡ
ಬೆಂಗಳೂರು: ಬಾಲಕಿ ಒಬ್ಬರನ್ನು ಅಕ್ರಮವಾಗಿ ದತ್ತು ಪಡೆದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿಬಿಟ್ಟ ಆರೋಪದಡಿ ರೀಲ್ಸ್ ಸ್ಟಾರ್ ಹಾಗೂ ಕಿರು ತೆರೆ ನಟಿ ಸೋನು ಶ್ರೀನಿವಾಸ್ ಗೌಡ ಅಲಿಯಾಸ್ ಶಾಂಭವಿ (29) ಅವರನ್ನು ನಿನ್ನೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಕ್ರಮ ದತ್ತು ಪಡೆದಿದ್ದಲ್ಲದೇ ಸಂತ್ರಸ್ತ ಬಾಲಕಿ ಜೊತೆ ರೀಲ್ಸ್ ವಿಡಿಯೊಗಳನ್ನು ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕಿರುವುದು ಅವರ ಮೇಲೆ ಇರುವ ಗಂಭೀರ ಆರೋಪ. ಆದರೆ, ಸೋನು …
Read More »ಹಣಕ್ಕಾಗಿ ಮಗಳನ್ನು ಸೋನುಗೆ ದತ್ತು ಕೊಟ್ರಾ ಪೋಷಕರು?
ಬೆಂಗಳೂರು: ಬಾಲಕಿಯನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಬಿಗ್ಬಾಸ್ ಒಟಿಟಿ ಸೀಸನ್-1ರ ಸ್ಪರ್ಧಿ, ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ವಿರುದ್ಧ FIR ದಾಖಲಾಗಿದ್ದು, ಆಕೆಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಮಾರ್ಚ್ 25ರಂದು ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆದ್ದರಿಂದ ನ್ಯಾಯಾಲಯ ಅವರನ್ನು …
Read More »ಕೋಟ ಶ್ರೀನಿವಾಸ್ ಗೆ ಹಿಂದಿ, ಇಂಗ್ಲಿಷ್ ಬರಲ್ಲ, ಅವರನ್ನ ಗೆಲ್ಲಿಸಿದ್ರೆ ದಿಲ್ಲಿಯಲ್ಲಿ ಕೆಲಸಗಳಾಗಲ್ಲ: ಜಯಪ್ರಕಾಶ್ ಹೆಗ್ಡೆ
ಉಡುಪಿ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ (Kota srinivas poojary) ಕನ್ನಡ ಬಿಟ್ಟರೇ ಹಿಂದಿ ಅಥವಾ ಇಂಗ್ಲೀಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ (Delhi) ಕೆಲಸಗಳಾಗುವುದಿಲ್ಲ ಎಂದು ಜಯಪ್ರಕಾಶ್ ಹೆಗ್ಡೆ (Jayaprakash Hegde) ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು (Udupi-Chikkamagalur) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ (BJP) ತನ್ನ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕೆ ಇಳಿದಿದ್ದಾರೆ. ಈ ಹಿನ್ನೆಲೆ ಬ್ರಹ್ಮಾವರದ (Brahmavara) …
Read More »ಅಡಿವೆಪ್ಪನಿಗೆ ಒಲಿದಿದ್ದ 7 ಸರ್ಕಾರಿ ನೌಕರಿ
ಆಲಮಟ್ಟಿ: ಒಂದೇ ಒಂದು ಸರ್ಕಾರಿ ಹುದ್ದೆ ಗಿಟ್ಟಿಸಲು ಒದ್ದಾಡುವ ಈಗಿನ ಕಾಲದಲ್ಲಿ ಗ್ರಾಮೀಣ ಭಾಗದ, ಬಡತನದಲ್ಲಿ ಬೆಂದ ಯುವಕ ತನ್ನ ಪ್ರತಿಭೆಯಿಂದ ಪಡೆದಿದ್ದು ಬರೋಬ್ಬರಿ ಏಳು ಸರ್ಕಾರಿ ನೌಕರಿ. ಹೌದು, ಇವರು ಸಮೀಪದ ಬೇನಾಳ ಆರ್.ಎಸ್. ಗ್ರಾಮದ 35ರ ವಯೋಮಾನದ ಅಡಿವೆಪ್ಪ ಸಿದ್ರಾಮಪ್ಪ ಹಂಡಿ. ದುಡಿಯಲು ಹೋದರೆ ಮಾತ್ರ ಊಟ, ಇಲ್ಲದಿದ್ದರೆ ಉಪವಾಸ ಎನ್ನುವಂತಹ ಕುಟುಂಬದ ಸ್ಥಿತಿ. ಬೇನಾಳ ಗ್ರಾಮದ ಸಿದ್ರಾಮಪ್ಪ-ಲಕ್ಷ್ಮಿ ದಂಪತಿಯ ಪುತ್ರ ಅಡಿವೆಪ್ಪ, ಚಿಕ್ಕವನಿದ್ದಾಗಲಿನಿಂದಲೂ ಛಲ ಹಾಗೂ …
Read More »ಮಾರುಕಟ್ಟೆಗೆ ಬರುತ್ತಿದೆ ವಿಷಯುಕ್ತ ದ್ರಾಕ್ಷಿ!
ಯಾವುದೇ ಹಣ್ಣಾಗಾಲಿ, ತರಕಾರಿಯಾಗಲಿ ನಾವು ದೈರ್ಯವಾಗಿ ತಿನ್ನುವಂತಿಲ್ಲ, ನಾವು ಆರೋಗ್ಯಕ್ಕೆ ಒಳ್ಳೆಯದು ಎಂದು ತಿನ್ನುವುದರಿಂದ ಅನಾರೋಗ್ಯ ಬರಬಹುದು, ಲಿವರ್ಗೆ ಒಳ್ಳೆಯದು ಎಂದು ತಿಂದ್ರೆ ಲಿವರ್ ಫೈಲ್ಯೂರ್ ಆಗಬಹುದು. ಹೌದು ಅಂಥದ್ದೊಂದು ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. ಈ ದ್ರಾಕ್ಷಿ ಶರೀರಕ್ಕೆ ತುಂಬಾ ಒಳ್ಳೆಯದು ಎಂದು ನಾವು ದುಬಾರಿಯಾದರೂ ಪರ್ವಾಗಿಲ್ಲ, ಕೆಜಿಗೆ 100 ರುಪಾಯಿ, 150 ರುಪಾಯಿ ಅಷ್ಟೇ ಏಕೆ ಕೆಲವೊಂದು ದ್ರಾಕ್ಷಿಗೆ ಕೆಜಿ 400 ರುಪಾಯಿ …
Read More »ಜಗ್ಗೇಶ್ ಅವರಿಗೆ ಮಾರ್ಚ್ ತಿಂಗಳು ತುಂಬಾ ವಿಶೇಷ
ಬೆಂಗಳೂರು: ನವರಸ ನಾಯಕ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ಮಾರ್ಚ್ ತಿಂಗಳು ತುಂಬಾ ವಿಶೇಷ ಎಂದು ಹೇಳಬಹುದಾಗಿದೆ. ಮಾರ್ಚ್ 17ರಂದು ಆಪ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ 61ನೇ ಜನುಮದಿನವನ್ನು ಆಚರಿಸಿಕೊಂಡ ನಟ ಜಗ್ಗೇಶ್ಗೆ ಇದೀಗ ವಿವಾಹ ವಾರ್ಷಿಕೋತ್ಸವದ ದಿನವನ್ನೂ ಸಂಭ್ರಮಿಸಿದ್ದಾರೆ.ಪತ್ನಿ ಪರಿಮಳ ಜತೆಗಿನ 40 ವರ್ಷದ ಪ್ರಯಾಣವನ್ನು ನೆನೆಪು ಮಾಡಿಕೊಂಡಿದ್ದಾರೆ. 1982ರ ಕಾಲಘಟ್ಟಕ್ಕೆ ಮತ್ತೆ ಜಾರಿದ್ದಾರೆ. ಕನ್ನಡ ಚಿತ್ರರಂಗದ ತಾರಾ ಜೋಡಿಗಳಲ್ಲಿ ಹಲವರು ಲವ್ ಮಾಡಿ ಮದುವೆ ಆಗಿದ್ದಾರೆ. ನಟ …
Read More »ದಾಖಲೆ ಮಟ್ಟಕ್ಕೆ ಮಾರಾಟವಾದ ಬೆಳಗಾವಿ ರೈತ ಬೆಳೆದ ಅರಿಶಿಣ
ಬೆಳಗಾವಿ, ಮಾರ್ಚ್ 22: ಈ ಬಾರಿ ರಾಜ್ಯದಲ್ಲಿ ಎದುರಾದ ಬರಗಾಲ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಬೆಳೆಗೆ ನೀರಿಲ್ಲ, ಏನೇ ಮಾಡಿದರು ಉತ್ತಮ ಗುಣಮಟ್ಟದ ಬೆಳೆ ಸಿಗುತ್ತಿಲ್ಲ, ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಸಿಗುತ್ತಿಲ್ಲ ಈ ಎಲ್ಲಾ ಕಾರಣಗಳಿಂದ ರೈತರು ಹೈರಾಣಾಗಿ ಹೋಗಿದ್ದಾರೆ.ಆದರೆ ಈ ಎಲ್ಲಾ ಗೋಳಾಟಗಳ ನಡುವೆ ಇಲ್ಲೊಬ್ಬ ರೈತ ತಾವು ಬೆಳೆದ ಬೆಳೆಗೆ ನಿರೀಕ್ಷೆಗೂ ಮೀರಿದ ಲಾಭ ಗಳಿಸಿ ನೆಮ್ಮದಿಯ ನಗು ಬೀರಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ …
Read More »
Laxmi News 24×7