ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್ ಬೆಳಗಾವಿಯ ಉಜ್ವಲ ನಗರ, ಶಾಮ್ಸ್ ಕಾಲೋನಿ ಹಾಗೂ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಆಸೀಫ್ ಸೇಠ್ ಚಾಲನೆ ನೀಡಿ ಜನತಾದರ್ಶನದಲ್ಲಿ ಅಹವಾಲು ಸ್ವೀಕರಿಸಿದರು ಹಲವಾರು ವರ್ಷಗಳಿಂದ ಬೆಳಗಾವಿ ಉಜ್ವಲ ನಗರದಲ್ಲಿ ರಸ್ತೆಗಳು ಹದಗೆಟ್ಟಿದ್ದವು ಒಳಚರಂಡಿ ದುರಸ್ತಿ ಸೇರಿದಂತೆ ಹಲವಾರು ಸಮಸ್ಯೆಗಳಿದ್ದವು. ಸೋಮವಾರ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು …
Read More »ಕಾಲ್ತುಳಿತ ಪ್ರಕರಣ, ಅಮೈಕಾಸ್ ಕ್ಯೂರಿ ನೇಮಿಸಿದ ಹೈಕೋರ್ಟ್
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಜಯ ಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ (ಕೋರ್ಟ್ಗೆ ನೆರವಾಗುವವರು) ಯನ್ನಾಗಿ ಹಿರಿಯ ವಕೀಲರಾದ ಸುಶೀಲಾ ಅವರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ …
Read More »ಮೆಡಿಕಲ್ ಸೀಟು ಕೊಡಿಸುವುದಾಗಿ ಖಾಸಗಿ ಕಂಪನಿ ಉದ್ಯೋಗಿಗೆ ₹10 ಲಕ್ಷ ವಂಚನೆ ಆರೋಪ
ದಾವಣಗೆರೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿ ಉದ್ಯೋಗಿಗೆ 10.64 ಲಕ್ಷ ರೂಪಾಯಿ ವಂಚಿಸಿರುವ ಘಟನೆ 2022ರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಭರುಣೇಂದ್ರ, ಗೌರವ ಚೌದ್ರಿ ಮತ್ತು ಉಮೇಶ್ ಎಂಬುವರ ವಿರುದ್ಧ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕಾಶ್ ಎಂಬವರು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪಿಜೆ ಬಡಾವಣೆ ನಿವಾಸಿ ಆಗಿರುವ ಪ್ರಕಾಶ್, ತಮ್ಮ ಸಂಬಂಧಿಕರೊಬ್ಬರ ಪುತ್ರನನ್ನು ಎಂಬಿಬಿಎಸ್ಗೆ ಸೇರಿಸಬೇಕೆಂದುಕೊಂಡಿರುವುದಾಗಿ ಸ್ನೇಹಿತರೊಬ್ಬರ ಬಳಿ …
Read More »ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಶಾಸಕ ಬಿ. ಆರ್. ಪಾಟೀಲ್ ಆರೋಪ
ಬೆಂಗಳೂರು : ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆಡಳಿತ ಪಕ್ಷದ ಶಾಸಕರ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಶಾಸಕ ಎ. ಮಂಜು ಮಾತನಾಡಿ, ಈಗಾಗಲೇ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ್ ಅವರು ಒಂದು ರೀತಿಯಲ್ಲಿ ಮಾತನಾಡಿದ್ದಾರೆ. ಬಿ. ಆರ್. ಪಾಟೀಲ್ ಅವರ ಮಾದರಿಯಲ್ಲೇ ಶಾಸಕ ರಾಜು ಕಾಗೆ ಹೇಳಿದ್ದಾರೆ. ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ. ಅದರ ಬಗ್ಗೆ ನನಗೂ …
Read More »ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ಪೋಷಕರಿಕೆ ಒಪ್ಪಿಸಿದ ಪೊಲೀಸರು
ಬೆಂಗಳೂರು: 5 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸಮ್ಮ ಹಾಗೂ ಸುಲೋಚನಾ ಎಂಬಿಬ್ಬರನ್ನು 24 ಗಂಟೆಗಳೊಳಗೆ ಬಂಧಿಸಿದ ಪೊಲೀಸರು, ಬಾಲಕಿಯನ್ನು ರಕ್ಷಿಸಿ ಆಕೆಯ ಪೋಷಕರಿಗೊಪ್ಪಿಸಿದ್ದಾರೆ. ಜೂನ್ 21ರಂದು ವಿಶ್ವೇರಯ್ಯ ಲೇಔಟ್ನಲ್ಲಿ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ, ಸಿಂಧನೂರಿಗೆ ಕರೆದೊಯ್ದಿದ್ದರು. ಸಿಂಧನೂರು ಮೂಲದವರೇ ಆದ ಬಾಲಕಿಯ ಪೋಷಕರು ಹಾಗೂ ಆರೋಪಿಗಳು ಪರಸ್ಪರ ಪರಿಚಿತರಾಗಿದ್ದು, 2 ವರ್ಷಗಳಿಂದಲೂ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಜೂನ್ …
Read More »ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!
ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು …
Read More »ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು, ಜೂನ್ 23: ಸಾಂಬಾರ್ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ರವಿವಾರ ತಡರಾತ್ರಿ ಘಟನೆ ನಡೆದಿದೆ. ನೇಪಾಳ ಮೂಲದ ಬಹದ್ದೂರ್ ಕೊಲೆಯಾದ ವ್ಯಕ್ತಿ. ಮಹೇಂದ್ರ ಕೊಲೆ ಮಾಡಿದ ಆರೋಪಿ. ಬಹದ್ದೂರ್ ಮತ್ತು ಮಹೇಂದ್ರ ನಡುವೆ ರವಿವಾರ (ಜೂ.22) ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. …
Read More »ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು:ಯತ್ನಾಳ್
ವಿಜಯಪುರ, ಜೂನ್ 23: ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರರನ್ನೇ (BY Vijayendra) ಮುಂದುವರಿಸಿದರೆ ತಾನು ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ರಾಜ್ಯಾಧ್ಯಕ್ಷನಾಗಬಹುದು ಎಂದು ಹೇಳಲಾಗುತ್ತಿರುವ ಮುರುಗೇಶ್ ನಿರಾಣಿಯವರು ತನ್ನ ಬಗ್ಗೆ ಧೋರಣೆ ಬದಲಾಯಿಸಿರುವ ಬಗ್ಗೆ ಯತ್ನಾಳ್ ಹೆಚ್ಚು ಮಾತಾಡಲಿಲ್ಲ. ನಿರಾಣಿ ಮನೆಯಲ್ಲಿನ ಮದುವೆ ಕಾರ್ಯ್ರಮ ಮತ್ತು ಬಿಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ-ಎರಡಕ್ಕೂ ತಾನು ಹೋಗಲಿಲ್ಲ, ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು, ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷರಾಗಬೇಕೆಂದು ತಾನು …
Read More »ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ
ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಬೆಳಗಾವಿ- ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ …
Read More »ಬೆಳಗಾವಿ ಅಂಚೆ ಇಲಾಖೆಯಿಂದ ಎಪಿಟಿ 2.0 ಸೇವೆ ಆರಂಭ…
ಬೆಳಗಾವಿ ಅಂಚೆ ಇಲಾಖೆಯಿಂದ ಎಪಿಟಿ 2.0 ಸೇವೆ ಆರಂಭ… ಇನ್ಮುಂದೆ ಗ್ರಾಹಕರಿಗೆ ತ್ವರಿತಗತಿಯಲ್ಲಿ ಸಿಗಲಿವೆ ಆನ್’ಲೈನ್ ಸೇವೆಗಳು ಭಾರತೀಯ ಅಂಚೆ ಇಲಾಖೆಯೂ ಭಾರತಾದ್ಯಂತ ಗ್ರಾಹಕರಿಗೆ ಶೀಘ್ರಗತಿಯಲ್ಲಿ ಸೇವೆಯನ್ನು ನೀಡುವ ಉದ್ಧೇಶದಿಂದ ಅಡ್ವಾನ್ಸ್ ಪೋಸ್ಟಲ್ ಟೆಕ್ನಾಲಜಿ 2.0 ಜಾರಿಗೊಳಿಸಿದ್ದು, ಇಂದು ಬೆಳಗಾವಿಯ ಪ್ರಧಾನ ಅಂಚೆ ಕಾರ್ಯಾಲಯದಲ್ಲಿ ಈ ನೂತನ ಸೇವೆಯನ್ನು ಆರಂಭಿಸಲಾಯಿತು. ಇಂದು ಬೆಳಗಾವಿ ಪ್ರಧಾನ ಅಂಚೆ ಕಾರ್ಯಾಲಯದಲ್ಲಿ ಬೆಳಗಾವಿ ಪ್ರಧಾನ ಅಂಚೆ ಕಾರ್ಯಾಲಯದ ಅಧೀಕ್ಷಕರಾದ ಎಸ್.ಕೆ. ಮುರನಾಲ್, ಸಹಾಯಕ ಅಧೀಕ್ಷಕರಾದ …
Read More »