Breaking News

ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ರಾಹುಲ್ ಜಾರಕಿಹೊಳಿ ಆಯ್ಕೆ: ಲಕ್ಷ್ಮಣ ಸವದಿಗೆ ಮುಖಭಂಗ

ಬೆಳಗಾವಿ: ಅತ್ತ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗಿದ್ದರೆ, ಇತ್ತ‌ ಸೈಲೆಂಟ್ ಆಗಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಿದೆ. ಮತ್ತೊಂದು ಅವಧಿಗೆ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿ ಆಗುವ ನಿರೀಕ್ಷೆಯಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕನಸಿಗೆ ಜಾರಕಿಹೊಳಿ ಸಹೋದರರು ತಣ್ಣೀರು ಎರಚಿದ್ದಾರೆ. ಹೌದು, ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಅವರ ಪುತ್ರ, ಬ್ಯಾಂಕ್ …

Read More »

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ : ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ : ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 …

Read More »

ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು:

ಬೆಳಗಾವಿ ವಿಧಾನಸೌಧ ಅಧಿವೇಶನ ಒಂದು ವಿಶ್ಲೇಷಣೆ! ಡಾಕ್ಟರ್ ಪ್ರಭಾಕರ ಕೋರೆ! ಸುವರ್ಣ ಸೌಧ ಉದ್ದೇಶ ಈಡೇರಿಲ್ಲ: ಮುಖಂಡರ ವಿಷಾದ ಉತ್ತರ ಕರ್ನಾಟಕ ಅಭಿವೃದ್ಧಿ; ನಿರೀಕ್ಷೆ ಹುಸಿಯಾಗಿದೆ ಅಧಿವೇಶನ ‘ಪಿಕ್ನಿಕ್ ‘ಸ್ಪಾಟ್’ ಆಗಬಾರದು: ಆಗ್ರಹ! ₹500 ಕೋಟಿ ಸೌಧ; ಫಲಶೃತಿ ಶೂನ್ಯ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧವನ್ನು ನಿರ್ಮಿಸಿ 13 ವರ್ಷಗಳಾದರೂ, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಿಸುವ ಮೂಲ ಉದ್ದೇಶಗಳು ಈಡೇರಿಲ್ಲ ಎಂದು ಹಿರಿಯ ಮುಖಂಡರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ …

Read More »

ದ್ವೇಷ ಭಾಷಣ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ 8 ವಿಧೇಯಕಗಳಿಗೆ ಸಂಪುಟ ಅಸ್ತು

ಬೆಂಗಳೂರು: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ತಡೆ, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಒಟ್ಟು 8 ಮಸೂದೆಗಳಿಗೆ ಒಪ್ಪಿಗೆ ಸೂಚಿಸಲಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು. ಪ್ರಮುಖವಾಗಿ ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) …

Read More »

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ ಇದೆ. ಈ ನಡುವೆ ಮಂಗಳೂರಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ವಂಚಕರು ಹಿರಿಯ ದಂಪತಿಗಳನ್ನು ಡಿಜಿಟಲ್ ಅರೆಸ್ಟ್​ ಮಾಡಿ ಹಣ ದೋಚುವುದನ್ನು ತಪ್ಪಿಸಲಾಗಿದೆ. ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನ್ಡ್ಡಿಕ್ ಪೆರ್ನಾಂಡಿಸ್ (84 ವರ್ಷ) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71 ವರ್ಷ) ರವರಿಗೆ ಡಿಸೆಂಬರ್ 1 ರಂದು ಯಾರೋ ಅಪರಿಚಿತರು ಉತ್ತರ …

Read More »

ವಿಶೇಷ ಚೇತನರು ಸುಲಭವಾಗಿ ವಿಮಾನ ಏರಲು “ಮೊಬಿಲಿಟಿ ಅಸಿಸ್ಟ್‌” ಪರಿಚಯಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು : ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಭಾರತದಲ್ಲೇ ಮೊದಲ ಬಾರಿಗೆ “ಮೊಬಿಲಿಟಿ ಅಸಿಸ್ಟ್‌” ಸಾಧನ ಪರಿಚಯಿಸಿದೆ. ಇದರ ಮೂಲಕ ಕೆಐಎಎಲ್ ಮೊಬಿಲಿಟಿ ಅಸಿಸ್ಟ್‌ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣವಾಗಿದೆ. ಮಕ್ಕಳು ಸೇರಿದಂತೆ ಪ್ರಯಾಣದ ವೇಳೆ ಹೆಚ್ಚಿನ ಸಹಾಯದ ಅಗತ್ಯವಿರುವವರು, ಕಡಿಮೆ ಚಲನಶೀಲತೆ ಹೊಂದಿರುವವರಿಗೆ ಸುರಕ್ಷಿತ, ಸುಗಮವಾಗಿ ವಿಮಾನದ ಬೋರ್ಡಿಂಗ್ ಮಾಡಲು ಮತ್ತು ವಿಮಾನದಿಂದ ಇಳಿಯಲು ಅತ್ಯಾಧುನಿಕವಾಗಿ ಬೆಂಬಲ ನೀಡುವ …

Read More »

ಯಾದಗಿರಿಯಲ್ಲಿ ಮನೆ ಬೀಗ ಮುರಿದು 45ಲಕ್ಷದ ಆಭರಣ ದೋಚಿದ ಕಳ್ಳರು: ಆನೇಕಲ್​ನಲ್ಲಿ 1.14 ಕೋಟಿ ಸಮೇತ ಆರೋಪಿಗಳನ್ನ ಬಂಧಿಸಿದ ಪೊಲೀಸರು!

ಯಾದಗಿರಿ: ಜಿಲ್ಲೆಯ ಸುರಪುರ ಪಟ್ಟಣದ ನಗರಸಭೆಯ ಕಿರಿಯ ಅಭಿಯಂತರ ಮಹೇಶ್ ಮಾಳಗಿ ಎಂಬುವರ ಬೊಂಬಾಯಿ ಬಸಣ್ಣ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ಮಂಗಳವಾರ ರಾತ್ರಿ ನಡೆದಿರುವ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬದವರು ಮನೆಯಿಂದ ಹೊರಗಿದ್ದ ಸಂದರ್ಭ ಮನೆಯ ಬೀಗ ಮುರಿದು ಚಿನ್ನ – ಬೆಳ್ಳಿ ಆಭರಣಗಳು ಹಾಗೂ ನಗದು ಸೇರಿದಂತೆ ಸುಮಾರು ₹46.11 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಮಂಗಳವಾರ ಸಂಜೆ 7.30ರಿಂದ ರಾತ್ರಿ 10.30ರ ನಡುವೆ …

Read More »

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಸಮನ್ಸ್​ಗೆ ಹೈಕೋರ್ಟ್ ತಡೆ (

ಬೆಂಗಳೂರು: ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಘನೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಚಾರಣಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕ ಸದಸ್ಯಪೀಠ ಈ ಮಧ್ಯಂತರ ಆದೇಶ …

Read More »

ರಾಜ್ಯ ಸರ್ಕಾರದ ವಿರುದ್ಧ ಡಿ.9ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಶಾಸಕ‌ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ರೈತರು ಮತ್ತು ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಡಿ.9ರಂದು ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ದೊಡ್ಡ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ. ಸುಮಾರು 20 ಸಾವಿರ ರೈತರು ಸೇರಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬೆಳಗಾವಿ ಖಾಸಗಿ ಹೋಟೆಲ್​​ನಲ್ಲಿ ಬುಧವಾರ ಬೆಳಗಾವಿ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. …

Read More »

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಮಹತ್ವದ ಸಭೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮತ್ತು 25 ಮಂದಿ ಸ್ವಾಮೀಜಿಗಳು ಸಭೆಯಲ್ಲಿ ಭಾಗವಹಿಸಿ ಪ್ರತ್ಯೇಕ ಜಿಲ್ಲೆ ರಚನೆಗಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡರು. ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿ ಸಭೆಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ರಚನೆ ಜನತೆಗೆ ವರ್ಷಗಳಿಂದಲೂ ಇರುವ …

Read More »