Breaking News

ಧಾರವಾಡದಲ್ಲಿ ಕೊರೊನಾ ವರದಿಯಾಗಿಲ್ಲ, ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸ್ವರೂಪದ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊರೊನಾ ಬಗ್ಗೆ ಗಾಬರಿಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೋವಿಡ್ 19 ರ ಅಂಕಿಅಂಶಗಳು, ಕೇರಳದಲ್ಲಿನ ಕೋವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19 ರ ಉಪತಳಿ ಜೆಎನ್.1 (JN.1) …

Read More »

ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್​: ಎಂಎಲ್​ಸಿ ಸ್ಥಾನ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಡಾ.ಸೂರಜ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ಎಲ್.ಹನುಮೇಗೌಡ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ …

Read More »

ವ್ಯಕ್ತಿಯ ಹೊಟ್ಟೆಯಲ್ಲಿತ್ತು 99 ಕೊಕೇನ್ ಕ್ಯಾಪ್ಸುಲ್!

Cocaine smuggling: ಬೆಂಗಳೂರು ಡಿಆರ್‌ಐ ಅಧಿಕಾರಿಗಳು ಅತಿದೊಡ್ಡ ಕೊಕೇನ್ ಕಳ್ಳಸಾಗಣೆ ಭೇದಿಸಿದ್ದು, ಕಳ್ಳಸಾಗಾಣಿಕೆದಾರನ ಹೊಟ್ಟೆಯಲ್ಲಿದ್ದ 99 ಕೊಕೇನ್ ಕ್ಯಾಪ್ಸುಲ್ ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣ ಮೂಲಕ ಸುಮಾರು 20 ಕೋಟಿ ರೂಪಾಯಿ ಮೌಲ್ಯದ 2 ಕೆ.ಜಿ ಕೋಕೆನ್ ಕ್ಯಾಪ್ಸುಲ್ ಸಾಗಿಸುತ್ತಿದ್ದ ನೈಜಿರಿಯಾ ಮೂಲದ‌ ಪ್ರಯಾಣಿಕನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಬೆಂಗಳೂರು ಘಟಕದ (Directorate of Revenue Intelligence) ಅಧಿಕಾರಿಗಳು ಬಂಧಿಸಿದ್ದಾರೆ.   ಫ್ಲೈ ಇಥಿಯೋಪಿಯಾ ವಿಮಾನದಲ್ಲಿ …

Read More »

ಸೈಕಲ್ ಮೂಲಕ ದೇಶ ಪರ್ಯಟನೆ: ಹಾವೇರಿಗೆ ಆಗಮಿಸಿದ ಯುಪಿ ಯುವಕ​

ಹಾವೇರಿ: ಪರಿಸರ ಸಂರಕ್ಷಣೆಗಾಗಿ ಉತ್ತರ ಪ್ರದೇಶ ಇಟಾವಾ ನಗರದ ರಾಬಿನಸಿಂಗ್ ಸೈಕಲ್ ಮೇಲೆ ದೇಶ ಪರ್ಯಟನೆ ಕೈಗೊಂಡಿದ್ದಾರೆ. 2022 ಆಕ್ಟೋಬರ್ 6 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಇವರ ಸೈಕಲ್ ಯಾತ್ರೆ ಈಗಾಗಲೇ 26 ಸಾವಿರ ಕಿಲೋ ಮೀಟರ್ ಪ್ರವಾಸ ಪೂರ್ಣಗೊಂಡಿದೆ. ಸೈಕಲ್ ಜಾಥಾ ಆರಂಭಿಸಿ ಇಂದಿಗೆ 440 ದಿನವಾಗಿದ್ದು, ಈ ದಿನ ಹಾವೇರಿಗೆ ಆಗಮಿಸಿದ್ದಕ್ಕೆ ರಾಬಿನಸಿಂಗ್ ಸಂತಸ ವ್ಯಕ್ತಪಡಿಸಿದರು. ತಮಿಳನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಜಾರ್ಖಂಡ್​, ಪಶ್ಚಿಮ ಬಂಗಾಳ, …

Read More »

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು: ಹಿರಿಯ ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಇವರ ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ ಎಂಬ ಪ್ರಬಂಧ ಕೃತಿಗೆ ಪ್ರಶಸ್ತಿ ಸಂದಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರಾದ ಲಕ್ಷ್ಮೀಶ ತೋಳ್ಪಾಡಿಯವರದ್ದು ಸಂತನಂತಹ ಬದುಕು. ಸದಾ ಆಧ್ಯಾತ್ಮಿಕ ಚಿಂತನೆ ಹೊಂದಿರುವವರು. ಜೊತೆಗೊಂದಿಷ್ಟು ಬರಹ, ಮಾತು, ಮೌನ ಎಲ್ಲವನ್ನೂ ಒಳಗಿಟ್ಟುಕೊಂಡವರು. ಇವರು ಬರೆದಿರುವ ಅನೇಕ ಲೇಖನಗಳು ನಾಡಿನ …

Read More »

ದುನಿಯಾ ವಿಜಿ ಬಂಧಿಸಿದ ಖಾಕಿ ಪಡೆ..! ಇದು ‘ಭೀಮ’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ

ಅಕ್ಕ ಪಕ್ಕದ ಏರಿಯಾಗಳಲ್ಲಿ ನಡೆಯುವ ರೌಡಿಸಂ ಕಥೆಯನ್ನು ಒಳಗೊಂಡಿರುವ ಭೀಮ ಚಿತ್ರದ ಚಿತ್ರೀಕರಣ ಭಾಗಶಃ ಮುಗಿದಿದೆ. ‘ಸಲಗ’ ನಟ ದುನಿಯಾ ವಿಜಯ್​ ಅವರ ನಿರ್ದೇಶನದ ಬತ್ತಳಿಕೆಯಿಂದ ಹೊರಬಂದ ಮೊದಲ ಚಿತ್ರ. ಅವರಿಗೆ ಸ್ಯಾಂಡಲ್​​ವುಡ್ ಅಲ್ಲದೇ ಪರಭಾಷೆಯಲ್ಲಿಯೂ ಬೇಡಿಕೆ ತಂದುಕೊಟ್ಟ ಸೂಪರ್​ ಹಿಟ್​ ಸಿನಿಮಾ ಕೂಡ ಹೌದು. ಈ ಚಿತ್ರದ ಯಶಸ್ಸಿನ ಬಳಿಕ ವಿಜಯ್, ಇದೀಗ ‘ಭೀಮ’ ಚಿತ್ರದಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಚಿತ್ರದ ಚಿತ್ರೀಕರಣ ಭಾಗಶಃ ಮುಗಿದಿದ್ದು ಕ್ಲೈಮ್ಯಾಕ್ಸ್ …

Read More »

ರಾಜ್ಯ ಗಿಗ್ ಕಾರ್ಮಿಕರು ಮತ್ತು ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಜೀವ ವಿಮೆ ಹಾಗೂ ಅಪಘಾತ ಪರಿಹಾರ ಯೋಜನೆ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ಜೀವ ವಿಮೆ ಹಾಗೂ ಅಪಘಾತ ಪರಿಹಾರ ಯೋಜನೆ ಮತ್ತು ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.   ಗಿಗ್ ಕಾರ್ಮಿಕರುಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಎರಡು ಲಕ್ಷ ರೂ.ಗಳ ಜೀವ ವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ …

Read More »

ಪರೀಕ್ಷಾ ಅಕ್ರಮ: ಆರ್‌.ಡಿ.ಪಾಟೀಲ್ ಸೇರಿ 12 ಆರೋಪಿಗಳ ಮೇಲೆ ಕೋಕಾ ಆಯಕ್ಟ್‌ನಡಿ ಪ್ರಕರಣ

ಕಲಬುರಗಿ: ಪಿಎಸ್‌ಐ ನೇಮಕಾತಿ‌ ಪರೀಕ್ಷೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಎಸಗಿದ ಪ್ರಮುಖ ಆರೋಪಿ ಆರ್‌.ಡಿ.ಪಾಟೀಲ್ ಸೇರಿ 12 ಜನ ಆರೋಪಿಗಳ ಮೇಲೆ ಕೋಕಾ ಆಯಕ್ಟ್ ಜಾರಿಗೊಳಿಸಲಾಗಿದೆ. ಪದೇ ಪದೇ ಒಂದೇ ರೀತಿಯ ಅಪರಾಧ ಕೃತ್ಯ ಮುಂದುವರೆಸುವವರ ವಿರುದ್ದ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ) ಕೋಕಾ ಅಸ್ತ್ರ ಪ್ರಯೋಗಿಸಲಾಗುತ್ತದೆ.‌ ಅಶೋಕ ನಗರ ಠಾಣೆ ವ್ಯಾಪ್ತಿಯ ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಬಳಸಿದ …

Read More »

ಬೆಳಗಾವಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಿಎಂ ಘೋಷಣೆ

ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುತ್ತದೆ‌. ದಿನ ದಿನಕ್ಕೆ ಕುಂದಾನಗರಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಅದಕ್ಕೆ ತಕ್ಕುದಾಗಿ ಬೃಹತ್ ಕೈಗಾರಿಕೆಗಳು ಇಲ್ಲಿಲ್ಲ. ಪರಿಣಾಮ ಜಿಲ್ಲೆಯ ಯುವಕರು ಉದ್ಯೋಗ ಅರಸಿ ಬೆಂಗಳೂರು, ಮುಂಬೈ, ಪುಣೆ ಸೇರಿ ಇನ್ನಿತರ ಕಡೆ ವಲಸೆ ಹೋಗುವ ದುಸ್ಥಿತಿಯಿದೆ. ಹಾಗಾಗಿ, ಬೆಳಗಾವಿಯಲ್ಲಿ ಬೃಹತ್ ಕೈಗಾರಿಕೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಫೌಂಡ್ರಿ ಪಾರ್ಕ್ ನಿರ್ಮಿಸುವಂತೆ ಆಗ್ರಹಿಸಿದ್ದ ಈ ಭಾಗದ ಉದ್ಯಮಿಗಳಿಗೆ ಸಾಥ್ ಕೊಟ್ಟಿತ್ತು. ಫೈವ್ ಸ್ಟಾರ್ ಇಂಡಸ್ಟ್ರೀಸ್ …

Read More »

ಮಗ ಮದುವೆಯಾಗಿ ಯುವತಿಯನ್ನು ಮನೆಗೆ ಕರೆ ತಂದಿದ್ದಕ್ಕೆಯುವತಿಯ ಸಂಬಂಧಿಕರು ಯುವಕನ ತಂದೆಗೆ ಹಲ್ಲೆ

ಬೆಳಗಾವಿ: ಮಗ ಮದುವೆಯಾಗಿ ಯುವತಿಯನ್ನು ಮನೆಗೆ ಕರೆ ತಂದಿದ್ದಕ್ಕೆಯುವತಿಯ ಸಂಬಂಧಿಕರು ಯುವಕನ ತಂದೆಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಡಿಸೆಂಬರ್​ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ. ಯುವಕ ಪುಣೆ ಮೂಲದ ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡು ಮನೆಗೆ ಬಂದಿದ್ದ. ಮನೆಗೆ ಬರುತ್ತಿದ್ದಂತೆ ಯುವತಿಯ ಕಡೆಯವರು ಯುವಕನನ್ನು ಹುಡುಕಿ ಮನೆಗೆ …

Read More »