Breaking News

ಚಾಕು ತೋರಿಸಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಕಲಬುರಗಿ: ಚಾಕು ತೋರಿಸಿ ಬೇದರಿಕೆ ಹಾಕಿ ಅಪ್ರಾಪ್ತೆ ಮೇಲೆ ಇಬ್ಬರು ಬಾಲಕರು ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಜರುಗಿದೆ. ಬಾಲಕಿ ಕುಟುಂಬಸ್ಥರು ದುಡಿಯಲು ಮುಂಬೈಗೆ ತೆರಳಿದ್ದು, ವಿದ್ಯಾಭ್ಯಾಸಕ್ಕಾಗಿ ಹತ್ತು ವರ್ಷದ ಬಾಲಕಿ ಸಂಬಂಧಿ‌ಕರ ಮನೆಯಲ್ಲಿದ್ದಾಳೆ. ಹೀಗಿರುವಾಗ 14 ಮತ್ತು 16 ವರ್ಷದ ಇಬ್ಬರು ಬಾಲಕರು ಸೇರಿ ಬಾಲಕಿಗೆ ಮಾರಕಾಸ್ತ್ರ ತೋರಿಸಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ಮಾಡಿರುವ ದೃಶ್ಯ ತಮ್ಮ‌ ಮೊಬೈಲ್​​​ನಲ್ಲಿ ವಿಡಿಯೋ …

Read More »

ತಮಿಳುನಾಡಿನಲ್ಲಿ ನಿಲ್ಲದ ಮಳೆ.. ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಚೆನ್ನೈ: ಕನ್ಯಾಕುಮಾರಿ ಸಮುದ್ರ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ವಿಶೇಷವಾಗಿ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇದರಿಂದಾಗಿ ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೀಗೆ ತೊಂದರೆಗೆ ಸಿಲುಕಿರುವ ಸಾರ್ವಜನಿಕರಿಗೆ ಸಹಾಯ ಮಾಡಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತೀವ್ರ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಭಾರತೀಯ ನೌಕಾಪಡೆಯು ಟುಟಿಕೋರಿನ್ ಜಿಲ್ಲೆಯಲ್ಲಿ ಸಂತ್ರಸ್ತರಿಗೆ …

Read More »

ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಚೇರಿ ಸೇರಿದಂತೆ 3 ಸರ್ಕಾರಿ ಆಫೀಸ್​​​​​​ಗೆ ವಿದ್ಯುತ್​ ಕಡಿತ

ಮಂಡ್ಯ: ರಾಜ್ಯಕ್ಕೆ ಉಚಿತ ವಿದ್ಯುತ್​ ಕೊಟ್ಟ ಸರ್ಕಾರದ ಶಾಸಕರ ಕಚೇರಿಯೇ ಕತ್ತಲಲ್ಲಿ ಮುಳುಗಿದೆ. ಹೌದು, ಕೆ.ಇ.ಬಿಗೆ ಕರೆಂಟ್​ ಬಿಲ್​ ಪಾವತಿಸದ ಹಿನ್ನೆಲೆ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಕಚೇರಿಗೆ ವಿದ್ಯುತ್​ ಕಡಿತಗೊಳಿಸಲಾಗಿದೆ. ವಿದ್ಯುತ್​ ಕಡಿತದಿಂದ ಶಾಸಕರ ಕಚೇರಿಯಲ್ಲದೇ ಸರ್ಕಾರಿ ಕಚೇರಿಗಳು ಬೆಳಕಿಲ್ಲದೇ ಕಾರ್ಯ ನಿರ್ವಹಿಸುತ್ತಿವೆ. ತಹಶೀಲ್ದಾರ್​ ​ ಹೇಳಿದ್ದಿಷ್ಟು: ಮೊದಲು ಈ ಕಟ್ಟಡವನ್ನು ಸೆಂಟ್ರಲ್​​ ಪೊಲೀಸ್​ ಠಾಣೆಗೆ ನೀಡಲಾಗಿತ್ತು. ಪೊಲೀಸ್​ ಠಾಣೆ ಇರುವ ತನಕ ಪೊಲೀಸ್​ ಇಲಾಖೆಯೆ ವಿದ್ಯುತ್​ ಬಿಲ್​ …

Read More »

ಕೋವಿಡ್​​ 19ರ ಹೊಸ ರೂಪಾಂತರ ತಳಿ JN.1 ಎಂದ WHO

ಹೈದರಾಬಾದ್​ ​: ಕೋವಿಡ್​ 19 ಉಪತಳಿಯಾಗಿರುವ ಜೆಎನ್.1 (JN.1) ಸದ್ಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಜೆಎನ್​. 1 ತಳಿಯನ್ನು ಬಿಎ.2.68 ವಂಶವಾಹಿನಿ ವೆರಿಯೆಂಟ್ ಆಫ್​ ಇಂಟ್ರೆಸ್ಟ್​​​ (ರೂಪಾಂತರ ತಳಿ) ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಈ ಹಿಂದೆ ಬಿಎ.2.86 ಉಪವರ್ಗಗಳ ಭಾಗದ ರೂಪಾಂತರ ತಳಿ​​ ಎಂದು ವರ್ಗೀಕರಿಸಲಾಗಿದೆ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ಪ್ರಸ್ತುತ ಹೊರ ಹೊಮ್ಮಿರುವ ಜೆಎನ್​ 1ತಳಿ ಕಡಿಮೆ ಸಾರ್ವಜನಿಕ ಆರೋಗ್ಯ ಅಪಾಯವನ್ನು ಹೊಂದಿದೆ. ಇದರ …

Read More »

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾದರೆ ನನ್ನ ಸಹಮತವಿದೆ ಎಂದು ಪರಿಷತ್ ಸದಸ್ಯ ಹೆಚ್ ​​ವಿಶ್ವನಾಥ್

ಮೈಸೂರು: ಇಂಡಿಯಾ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾದರೆ ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್​​ವಿಶ್ವನಾಥ್ ಹೇಳಿದರು. ಜಲದರ್ಶಿನಿ ಅತಿಥಿ ಗೃಹದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಸಾಮಾನ್ಯ ಕುಟುಂಬದಿಂದ ಬಂದವರು. ಎಲ್ಲ ರೀತಿಯ ಆಡಳಿತ ಅನುಭವ ಇರುವವರು. ದೇವೇಗೌಡರ ನಂತರ ರಾಜ್ಯದಿಂದ ಇನ್ನೊಬ್ಬರು ಪ್ರಧಾನಿ ಆಗಲಿ ಎಂಬುದು ನನ್ನ ಆಸೆ ಎಂದರು. ಅಡ್ವಾಣಿ ಬಂದರೆ ಮೋದಿಗೆ ಕ್ರೆಡಿಟ್ ಸಿಗುವುದಿಲ್ಲ: ರಾಮ …

Read More »

ರಾಜ್ಯದಲ್ಲಿ ಕೋವಿಡ್‌ ಹೈ ಅಲರ್ಟ್‌: ಕಿಮ್ಸ್​ ಕೈ ಸೇರದ ಸರ್ಕಾರದ ಮಾರ್ಗಸೂಚಿ

ಹುಬ್ಬಳ್ಳಿ: ಕೇರಳದಲ್ಲಿ ಕೋವಿಡ್​ ಉಪ ತಳಿ ಜೆಎನ್‌-1 ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಆತಂಕ ಆರಂಭವಾಗಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಕರ್ನಾಟಕದಲ್ಲಿ ಹೈಲರ್ಟ್ ಘೋಷಣೆ ಮಾಡಿದೆ. ಜತೆಗೆ, 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೊರೊನಾ ಲಕ್ಷಣ ಇರುವವರಿಗೂ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ಪ್ರಭಾರ ನಿರ್ದೇಶಕ ಡಾ. ಎಸ್.ಎಸ್.ಕಮ್ಮಾರ ಹೇಳಿದ್ದಾರೆ‌.‌ ಈಗಾಗಲೇ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ರಾಜ್ಯದಲ್ಲಿ ಕೊರೊನಾ …

Read More »

ಕೊರೊನಾ ಸೋಂಕು ತಗುಲಿದ್ದ ವೃದ್ಧ ಸಾವು: ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚನೆ ಕೊಟ್ಟ ಆರೋಗ್ಯ ಸಚಿವರು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕು ತಗುಲಿದ್ದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.   ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಇಂದು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್​​ನಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ 64 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. …

Read More »

ಕೊರೊನಾ ಟೆಸ್ಟಿಂಗ್ ಹೆಚ್ಚಳ; ನಿತ್ಯ 5,000 ಟೆಸ್ಟಿಂಗ್ ಗುರಿ : ದಿನೇಶ್ ಗುಂಡೂರಾವ್

ಬೆಂಗಳೂರು : ನಾಳೆಯಿಂದ ಕೊರೊನಾ ಟೆಸ್ಟಿಂಗ್ ಹೆಚ್ಚು ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಕಾಸಸೌಧ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು. ನಾಳೆ ಕೇಂದ್ರ ಆರೋಗ್ಯ ಸಚಿವರು ರಾಜ್ಯಗಳ‌ ಜೊತೆ ಕೊರೊನಾ ಸ್ಥಿತಿಗತಿ ಸಂಬಂಧ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. …

Read More »

ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದು, ಬರ ಪರಿಹಾರ ನೀಡಲು ಪ್ರಧಾನಿಗೆ ಒತ್ತಾಯಿಸಿದ್ದೇವೆ: ಸಿಎಂ

ನವದೆಹಲಿ/ಬೆಂಗಳೂರು: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಧಾನಿ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ, ನಾವು ಇದುವರೆಗೂ ಮೂರು ಬಾರಿ …

Read More »

ಮಹಾರಾಷ್ಟ್ರದಲ್ಲಿ ಜಾತಿ ಆಧಾರಿತ ಜನಗಣತಿ ವಿರೋಧಿಸಿದ ಆರ್‌ಎಸ್‌ಎಸ್

ನಾಗ್ಪುರ : ಮಹಾರಾಷ್ಟ್ರ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಜನರು ಬೇಡಿಕೆ ಇಟ್ಟಿದ್ದಾರೆ. ಆದರೆ, ಆರ್‌ಎಸ್‌ಎಸ್ ಜಾತಿ ಆಧಾರಿತ ಜನಗಣತಿ ವಿರೋಧಿಸಿದೆ ಎಂದು ವಿದರ್ಭ ವಲಯದ ಸಹ ಸಂಘಚಾಲಕ್ ಶ್ರೀಧರ ಗಾಡಗೆ ಇಂದು ನಾಗ್ಪುರದಲ್ಲಿ ಹೇಳಿದರು. ಜಾತಿ ಆಧಾರಿತ ಜನಗಣತಿಯನ್ನು ಆರ್​ಎಸ್​ಎಸ್​ ವಿರೋಧಿಸಿದ ನಂತರ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಜಾತಿವಾರು ಜನಗಣತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದರ್ಭ ಪ್ರದೇಶದ ಸಹಸಂಚಾಲಕ್ ಶ್ರೀಧರ್ ಗಾಡ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. …

Read More »