ಮಂಡಿ (ಹಿಮಾಚಲ ಪ್ರದೇಶ): ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಕಂಗನಾ ರಣಾವತ್ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವದಂತಿಗಳು ಇವೆ. ಈ ಬಗ್ಗೆ ಇದೀಗ ಕಂಗನಾ ತಂದೆ ಅಮರ್ದೀಪ್ ರಣಾವತ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಮಗಳು ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ. ಕಳೆದ ನವೆಂಬರ್ನಲ್ಲಿ ಕಂಗನಾ ತಮ್ಮ ರಾಜಕೀಯ ವಲಯದ ಆಕಾಂಕ್ಷೆಗಳ …
Read More »ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಕಡಿತ: ಕಾರಣ ಬಿಚ್ಚಿಟ್ಟ ಹೆಸ್ಕಾಂ ಎಂಡಿ
ಹುಬ್ಬಳ್ಳಿ : ಸಮರ್ಪಕವಾಗಿ ಮಳೆಯಾಗದೇ ಅನ್ನದಾತ ಕಂಗಾಲಾಗಿದ್ದಾನೆ. ಇದರ ಜೊತೆಗೆ ವಿದ್ಯುತ್ ನಂಬಿ ಕೃಷಿ ಮಾಡುವ ರೈತನ ಜೊತೆಗೆ ಹೆಸ್ಕಾಂ ಇಲಾಖೆ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ನೀರಾವರಿಗೆ ಬೇಕಾದ ವಿದ್ಯುತ್ ಪೂರೈಸಲು ಮೀನಮೇಷ ಎಣಿಸುತ್ತಿದ್ದು, ರೈತ ಸಮುದಾಯಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಧಾರವಾಡ ಜಿಲ್ಲೆಯ ರೈತರ ಪಂಪ್ಸೆಟ್ಗಳಿಗೆ ಕಳೆದ ಕೆಲ ದಿನಗಳಿಂದ ನಿಗದಿತ ಸಮಯಕ್ಕೆ ವಿದ್ಯುತ್ ನೀಡದಿರುವುದು ರೈತರಿಗೆ ಅನಾನುಕೂಲವಾಗುತ್ತಿದೆ. ರೈತರು ಮಳೆಯಿಲ್ಲದೇ ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಒಣಗುತ್ತಿದೆ. ಆದರೆ, ಬೋರ್ವೆಲ್ …
Read More »ಮೈಸೂರಲ್ಲಿ ಕೋವಿಡ್ ಆತಂಕ
ಮೈಸೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ಹಿನ್ನೆಲೆ ಹೆಚ್ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್.ಟಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯಾಧಿಕಾರಿ ಡಾ ರವಿಕುಮಾರ್ ಮಾತನಾಡಿ, “ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದ ಹಿನ್ನೆಲೆ ಇಂದು ಹೆಚ್ಡಿ ಕೋಟೆಯ ಬಾವಲಿ ಚೆಕ್ ಪೋಸ್ಟ್ಗೆ ಆಗಮಿಸಿ ಪರಿಶೀಲನೆ ನಡೆಸಿದ್ದೇನೆ. ನಾಳೆಯಿಂದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಹಾಗೂ …
Read More »ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಹೆಸರು ಪ್ರಸ್ತಾಪಿಸಿದ ಮಮತಾ, ಕೇಜ್ರಿವಾಲ್
ನವದೆಹಲಿ: ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಮಂಗಳವಾರ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಆದರೆ, ವರಿಷ್ಠ ನಾಯಕ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಾಗಿದೆ. ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆ ಜರುಗಿದ್ದು. 28 …
Read More »ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ನವದೆಹಲಿ/ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ …
Read More »ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪ ಚರ್ಚೆಗೆ ಬನ್ನಿ: ಶಾಸಕ ಹಲಗೇಕರ್ಗೆ ನಿಂಬಾಳ್ಕರ್ ಸವಾಲು
ಬೆಳಗಾವಿ: ಖಾನಾಪುರದ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಅವ್ಯವಹಾರ ಆರೋಪದಲ್ಲಿ ರಾಜಕೀಯ ಏನೂ ಇಲ್ಲ. ಈಗ ಚುನಾವಣೆ ಮುಗಿದಿದ್ದು, ನೀವು ದಾಖಲೆ ಸಮೇತ ಬಹಿರಂಗ ಚರ್ಚೆ ಬರುವಂತೆ ಶಾಸಕ ವಿಠ್ಠಲ ಹಲಗೇಕರ್ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸವಾಲ್ ಹಾಕಿದ್ದಾರೆ. ಖಾನಾಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಹಿತಿ ಹಕ್ಕಿನಡಿ ಯಾವುದೇ ದಾಖಲೆ ಕೊಡ್ತಿಲ್ಲ. ಕಳೆದ 6 ವರ್ಷಗಳಿಂದ ಬೆನ್ನು ಬಿದ್ದ ಮೇಲೆ ನಿವೃತ್ತ ನ್ಯಾಯಾಧೀಶ ಎಸ್.ಪಿ.ವಸ್ತ್ರದ ಅವರ ನೇತೃತ್ವದಲ್ಲಿ ತನಿಖೆ …
Read More »ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ಬೆಳಗಾವಿಯ ಸಂಜೀವ್ ಹಮ್ಮನ್ನವರ
ಬೆಳಗಾವಿ: ದೆಹಲಿಯ ಐಜಿ ಸ್ಟೇಡಿಯಂನಲ್ಲಿ ನಡೆದ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ನಲ್ಲಿ ಬೆಳಗಾವಿಯ ಕೆಪಿಟಿಸಿಎಲ್ ಮತ್ತು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಸಂಜೀವ್ ಹಮ್ಮನ್ನವರ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಡಿಸೆಂಬರ್ 10 ರಿಂದ 17ರ ವರೆಗೆ ನಡೆದ ಕ್ರೀಡಾಕೂಟದಲ್ಲಿ ಪ್ಯಾರಾ ಟೇಬಲ್ ಟೆನಿಸ್ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕದ ಸಂಜೀವ್ ಹಜೇರಿ ವಿರುದ್ಧ 3-0 ಅಂತರದಲ್ಲಿ ಗೆದ್ದಿದ್ದ ಸಂಜೀವ ಹಮ್ಮನ್ನವರ ಫೈನಲ್ನಲ್ಲಿ ಹರಿಯಾಣದ ಯಗೇಶ್ ನಾಡಾರ್ ವಿರುದ್ಧ 3-1 ಅಂತರದಿಂದ ಪರಾಭವಗೊಂಡು ಬೆಳ್ಳಿ ಪದಕ್ಕೆ …
Read More »2023ರಲ್ಲಿ ಯಶಸ್ವಿಯಾದ ಕನ್ನಡ ಚಿತ್ರರಂಗದ ಬ್ಯೂಟಿಫುಲ್ ನಟಿಯರು
ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅಮೃತಾ ಪ್ರೇಮ್ ಸೇರಿದಂತೆ ಸ್ಯಾಂಡಲ್ವುಡ್ನ ಕೆಲ ನಟಿಯರಿಗೆ ಈ ವರ್ಷವು ಲಕ್ಕಿ ಇಯರ್ ಎಂದೇ ಹೇಳಬಹುದು. ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ನೂರಾರು ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈ ವರ್ಷ ಕೂಡ ಇದಕ್ಕೆ ಹೊರತಾಗಿಲ್ಲ. 2023 ಕೊನೆಗೊಳ್ಳುವುದಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಚಂದನವನದಲ್ಲಿ 200ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಆಗಿವೆ. ಇವುಗಳಲ್ಲಿ ಕೆಲ ನಟಿಮಣಿಯರು ತಮ್ಮ ಅಭಿನಯ ಹಾಗೂ ಗ್ಲ್ಯಾಮರ್ನಿಂದ ಕನ್ನಡಿಗರ ಹೃದಯ …
Read More »ಒಂದು ವಾಹನದ ಮೇಲೆ ಪೋಸ್ಟರ್ ಅಂಟಿಸಿಕೊಳ್ಳಲು ಸಹ ನಾವು ಬಿಡಲ್ಲ. ಹಿಡಿದು ಕಿತ್ತಾಕಿಸುತ್ತೇವೆ. ಈ ಘಟನೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ತಡೆಯಬಹುದಿತ್ತು
ಬೆಳಗಾವಿ: ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ಆರೋಪ ಮಾಡುತ್ತಿರುವುದಕ್ಕೆ ತಿರುಗೇಟು ಕೊಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಗೃಹ ಸಚಿವರು ಸ್ಥಳಕ್ಕೆ ಭೇಟಿ ವಿಚಾರಣೆ ಮಾಡಿದ್ದಾರೆ. ಅವರು ಯಾಕೆ ರಾಜೀನಾಮೆ ಕೊಡಬೇಕು.? ಯಾರು ಕೂಡ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಏನು ಮಾಡಬೇಕು ಎಂದು ಸಲಹೆ ನೀಡಲಿ ಎಂದು ತಿಳಿಸಿದ್ದಾರೆ. ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಬಿಜೆಪಿ ವಂಟಮೂರಿ ಪ್ರಕರಣಕ್ಕೆ ಹೆಚ್ಚು ಆಸಕ್ತಿ ತೋರುತ್ತಿರುವ ವಿಚಾರಕ್ಕೆ …
Read More »ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ
ಬೆಂಗಳೂರು : ಹುಲಿ ಉಗುರು ವಿವಾದದ (Tiger claw controversy) ಬಳಿಕ ರಾಜ್ಯ ಸರ್ಕಾರ ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ ನೀಡಲು ಚಿಂತನೆ ನಡೆಸಿದೆ. ಈ ಕುರಿತು ಅರಣ್ಯ ಇಲಾಖೆ (Forest department) ಸಚಿವ ಈಶ್ವರ ಖಂಡ್ರೆ (Eshwar Khandre) ಎ.ಜಿ. ಶಶಿಕಿರಣ್ ಶೆಟ್ಟಿ ನೇತೃತ್ವದ ಅಧಿಕಾರಿಗಳೊಡನೆ ಚರ್ಚೆ ನಡೆಸಿದ್ದಾರೆ. ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ಕಾನೂನಿನ …
Read More »