Breaking News

ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಪರಿಸರ ಸ್ನೇಹಿ ಗಣೇಶ ಅಭಿಯಾನ: ವಿಜೇತರಿಗೆ ಸಿಗಲಿದೆ ಬಹುಮಾನ

ಹುಬ್ಬಳ್ಳಿ, ಆಗಸ್ಟ್​ 26: ರಾಜ್ಯ ಸರ್ಕಾರ ಪಿಓಪಿ ಗಣೇಶ (POP Ganesha) ಮೂರ್ತಿಗಳನ್ನು ನಿಷೇಧಿಸಿದ್ದು, ಪರಿಸರ ಸ್ನೇಹಿ ಗಣೇಶ ಮೂರ್ತಿ (Eco Friendly Ganesha) ಪ್ರತಿಷ್ಟಾಪನೆ ಮಾಡಿ, ಪರಿಸರ ಉಳಿಸಿ ಅಂತ ಮನವಿ ಮಾಡಿದೆ. ಸರ್ಕಾರದ ಈ ಆಶಯವನ್ನು ಸಾಕಾರಗೊಳಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಇದೀಗ ವಿನೂತನ ಕಾರ್ಯ ಆರಂಭಿಸಿದೆ. ಅದಕ್ಕಾಗಿ ಇಕೋ ಭಕ್ತಿ ಸಂಭ್ರಮ ಅಭಿಯಾನ ಆರಂಭಿಸಿದ್ದು, ವಿಜೇತರಿಗೆ ಬಹುಮಾನ ನೀಡಲು ಮುಂದಾಗಿದೆ. ಪರಿಸರ ಸ್ನೇಹಿ ಗಣೇಶೋತ್ಸವ ಕುರಿತು …

Read More »

ಹಾವೇರಿ ಹೈವೇಯಲ್ಲಿ ಡ್ಯಾನ್ಸ್​ ಮಾಸ್ಟರ್​ ಮೃತದೇಹ ಪತ್ತೆ

ಹಾವೇರಿ: ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ರೀತಿಯಲ್ಲಿ ಯುವಕನ ಮೃತದೇಹ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ‌ ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಪತ್ತೆಯಾಗಿದೆ. ಮೃತ ಯುವಕನನ್ನು ಚಿತ್ರದುರ್ಗದ 25 ವರ್ಷದ ಡ್ಯಾನ್ಸ್​ ಮಾಸ್ಟರ್​ ಲಿಂಗೇಶ್ ಎಂದು ಗುರುತಿಸಲಾಗಿದೆ. ಯುವಕನ ಮೃತದೇಹದ ಬಳಿ ಆತ ತಂದಿದ್ದ ಕೆಟಿಎಂ ಡ್ಯೂಕ್ ಬೈಕ್, ವಾಟರ್ ಬಾಟಲ್, ಸಿಗರೇಟ್ ಪ್ಯಾಕ್ ಸಹಿತ ಚಾಕು ದೊರೆತಿದೆ. ಲಿಂಗೇಶನನ್ನು ಕೊಲೆ ಮಾಡಲಾಗಿದೆ ಎಂದು ಆತನ ಸಂಬಂಧಿಕರು ಆರೋಪಿಸಿದ್ದಾರೆ. ಮೃತ ಲಿಂಗೇಶ್ ಭಾನುವಾರ …

Read More »

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

ದಾವಣಗೆರೆ: ಗೋಮಾಳ‌ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮಸ್ಥರು ನ್ಯಾಮತಿ ತಾಲೂಕು ದಂಡಾಧಿಕಾರಿ ಕಚೇರಿ ಬಳಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿದ್ದ ಸುಮಾರು ಐದು ಸಾವಿರ ಕುರಿಗಳನ್ನು ತಹಶಿಲ್ದಾರ್ ಕಚೇರಿಗೆ ನುಗ್ಗಿಸಿ ವಿನೂತನ ಪ್ರತಿಭಟನೆ ಮಾಡಿದ ಗ್ರಾಮಸ್ಥರು, ದೊಡ್ಡೆತ್ತಿನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 32ರ ನಾಲ್ಕು ಎಕರೆ ಗೋಮಾಳ ಜಾಗದಲ್ಲಿ ಅಧಿಕಾರಿಗಳು ಸರ್ಕಾರಿ ಕಟ್ಟಡ ಕಟ್ಟಲು …

Read More »

ಗೋಕಾಕ ನ್ಯಾಯವಾದಿಗಳ ಸಂಘದ‌ ಸದಸ್ಯರಾದ ಶ್ರೀ ಶಿವಕುಮಾರ ಹತ್ತರವಾಟ ನಿಧನ

ನಮ್ಮ ಗೋಕಾಕ ನ್ಯಾಯವಾದಿಗಳ ಸಂಘದ‌ ಸದಸ್ಯರಾದ ಶ್ರೀ ಶಿವಕುಮಾರ ಹತ್ತರವಾಟ ರವರು ನಿಧನರಾಗಿದ್ದಾರೆಂದು ತಿಳಿಸಲು ವಿಷಾದವೆನಿಸುತ್ತದೆ, ಮೃತರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ನೀಡಲಿ ಮತ್ತು ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಆ ಭಗವಂತನು ನೀಡಲಿ

Read More »

ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆ

ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ.‌ ದಿವಂಗತ ಅಪ್ಪಣಗೌಡ ಪಾಟೀಲರು ಸ್ಥಾಪಿಸಿದ, ದೇಶದ ಏಕೈಕ ವಿದ್ಯುತ್ ಸಹಕಾರಿ ಸಂಸ್ಥೆಯನ್ನು ಕಾಪಾಡಿ, ಬಲಪಡಿಸುವುದು ನಮ್ಮೆಲ್ಲರ ಕರ್ತವ್ಯ. ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಚುನಾವಣೆ ತಾಲೂಕಿನ ಸಹಕಾರಿ ಸಂಸ್ಥೆಯ ಭವಿಷ್ಯ ನಿರ್ಧರಿಸುವ ಮಹತ್ವದ ಹಂತವಾಗಿದೆ. ಸುಮಾರು 30 ವರ್ಷಗಳ ಕಾಲ ಸ್ಥಗಿತಗೊಂಡಿದ್ದರೂ, ಹೊಸ …

Read More »

ಗಣೇಶ ಹಬ್ಬದಲ್ಲಿ ಡಿಜೆಗೆ ಅವಕಾಶ ನಿರಾಕರಣೆ: ದಾವಣಗೆರೆ ಜಿಲ್ಲಾಡಳಿತ-ಡಿಜೆ ಮಾಲೀಕರ ಹಗ್ಗಜಗ್ಗಾಟ

ದಾವಣಗೆರೆ: ಜಿಲ್ಲೆ ಗಣೇಶ ಚತುರ್ಥಿಗೆ ಸಿದ್ಧಗೊಳ್ಳುತ್ತಿದೆ. ಗಲ್ಲಿಗಲ್ಲಿಯಲ್ಲಿ ಗಣೇಶನ ಪೆಂಡಾಲ್​ಗಳು ನಿರ್ಮಾಣವಾಗುತ್ತಿವೆ. ಈ ಬಾರಿ ಗಣೇಶನನ್ನು ಬರಮಾಡಿಕೊಳ್ಳಲು ಹಾಗೂ ನಿಮಜ್ಜನದ ವೇಳೆ ವಿಪರೀತ ಶಬ್ದ ಮಾಡುವ ಡಿಜೆಗೆ ದಾವಣಗೆರೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಜಿಲ್ಲಾಡಳಿತದ ನಡೆಗೆ ಗಣೇಶ ಮಂಡಳಿಗಳು ಆಕ್ರೋಶ ವ್ಯಕ್ತಪಡಿಸಿವೆ. ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಿದ್ದಾಗ, ದಾವಣಗೆರೆ ಡಿಸಿ ಡಾ.ಗಂಗಾಧರ ಸ್ವಾಮಿ ಜಿ.ಎಂ. ಅವರು ಯಾವುದೇ ಕಾರಣಕ್ಕೂ ಡಿಜೆಗೆ ಅನುಮತಿ ಇಲ್ಲ ಎಂದು ಹೇಳಿದ್ದರು. ಹಾಗಾಗಿ …

Read More »

ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ

ಬೆಂಗಳೂರು: ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿರುವ ಇಲಾಖೆ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, …

Read More »

ಬಿಜೆಪಿಯ ಒಂದು ಗುಂಪಿಂದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ಬಿಜೆಪಿಯಲ್ಲಿ ಎರಡು ಗುಂಪುಗಳಿವೆ. ಅವರಲ್ಲಿಯೇ ಧರ್ಮಸ್ಥಳದ ವಿರುದ್ಧ ಪರ- ವಿರೋಧವಿದೆ. ಇದರಿಂದಾಗಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸೋಮವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎರಡು ತಂಡಗಳಿವೆ. ಅದರಲ್ಲಿ ಒಂದು ತಂಡ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಇದೆಲ್ಲವೂ ರಾಜಕೀಯ ಲಾಭ ಪಡೆಯಲು ಮಾಡಲಾಗುತ್ತಿದೆ ಎಂದರು. ಡಿಕೆಶಿ …

Read More »

ಕಬ್ಬಿನ ಹೊಸ ತಳಿಗಳ ಪ್ರದರ್ಶನ

ಕೃಷಿ ತೋ ನಾಸ್ತಿ ದುರ್ಭಿಕ್ಷಂ’ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಕೋ ಆಫ್ ಶುಗರ ಫ್ಯಾಕ್ಟರಿ ಲಿ.,(ಮಲ್ಟಿ – ಸ್ಟೇಟ್) ವಾರ್ಷಿಕ ಸರ್ವಸಾಧಾರಣ ಸಭೆಯ ಅಂಗವಾಗಿ ವಿಶೇಷವಾಗಿ ರೈತರಿಗೆ ಹೊಸ ತಂತ್ರಜ್ಞಾನದ ಬಗ್ಗೆ ಪರಿಚಯ ಮಾಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ‘ಕೃಷಿ ಪ್ರದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಿ,ಕೃಷಿ ಮಳಿಗೆಯನ್ನು ವೀಕ್ಷಿಸಲಾಯಿತು. ಅನ್ನದಾತರಿಗೆ ಅನುಕೂಲವಾಗುವ ಉದ್ದೇಶದಿಂದ ಹಲವಾರು ಕೃಷಿ ಔಷಧ,ಹೊಸ ಯಂತ್ರೋಪಕರಣ, ಸಲಕರಣೆಗಳು ಕಾರ್ಖಾನೆ ವತಿಯಿಂದ ರೈತರಿಗೆ ಪರಿಚಯಿಸಿದರು.ಕೃಷಿಯಲ್ಲಿ ಸಾಧನೆ ಮಾಡಿದ ರೈತರು ಬೆಳೆದ ಕಬ್ಬಿನ ಹೊಸ …

Read More »

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ ಯನ್ನು ಇಂದು ಅನಾವರಣಗೊಳಿಸಲಾಯಿ. ಈ ಸಂದರ್ಭದಲ್ಲಿ ಸಂಘಟಕರಿಂದ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ನಾಯಕ ರಾಹುಲ ಜಾರಕಿಹೊಳಿ.. ಈ ವೇಳೆ ಸಹೋದರ ಹಾಗೂ ಮುಖಂಡರಾದ ಶ್ರೀ ಸರ್ವೊತ್ತಮ‌ ಜಾರಕಿಹೊಳಿ, ಶ್ರೀ ವಿಶ್ವನಾಥ ಹಿರೇಮಠ ಸ್ವಾಮಿಗಳು, ಮುಖಂಡರಾದ ಡಾ. ರಾಜೇಂದ್ರ ಸಣ್ಣಕ್ಕಿ, ಶ್ರೀ‌ ಶಿವು ಪಾಟೀಲ, ಭೀಮ‌ ಆರ್ಮಿ …

Read More »