Breaking News

ಮಾತಿನಿಂದ ಮೈತ್ರಿಗೆ ಧಕ್ಕೆ ತರಬೇಡಿ: ರಾಜ್ಯ ನಾಯಕರಿಗೆ ಶಾ ಎಚ್ಚರಿಕೆ

ಮೈಸೂರು: ಜೆಡಿಎಸ್ ನೊಂದಿಗೆ (JDS) ಮೈತ್ರಿ ಹೈಕಮಾಂಡ್ ನಿರ್ಧಾರ. ಈ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಕೇಂದ್ರ ಗೃಹ ಮಂತ್ರಿ (home minister) ಅಮಿತ್‌ ಶಾ (Amit Shah) ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದರು. ಬಿಜೆಪಿ (BJP) ನಾಯಕರ ಜೊತೆ ಮೈಸೂರಿನ (mysore) ಖಾಸಗಿ ಹೊಟೇಲ್ ನಲ್ಲಿ ಮೈಸೂರು, ಚಾಮರಾಜನಗರ (chamrajnagar), ಮಂಡ್ಯ (mandya), ಹಾಸನ (hassan) ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ನಡೆಸಿದ ಅವರು, ಮೈತ್ರಿ ಧರ್ಮ ಪಾಲಿಸುವಂತೆ …

Read More »

ಆರ್​ಎಸ್​ಎಸ್​ ಕಾರ್ಯಕರ್ತ ನಾರಾಯಣ ಭಾಂಡಗೆ ಬಿಜೆಪಿ ರಾಜಸಭೆ ಟಿಕೆಟ್​; ಇಲ್ಲಿದೆ ವ್ಯಕ್ತಿಚಿತ್ರ

ಬಾಗಲಕೋಟೆ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections) ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟ ಮಾಡಲಾಗಿದ್ದು, ಮಾಜಿ ಸಚಿವ ಸೋಮಣ್ಣಗೆರಾಜ್ಯಸಭೆ ಟಿಕೆಟ್​ ಕೈತಪ್ಪಿದೆ. ಅವರ ಬದಲು ಬಾಗಲಕೋಟೆಯ ನಾರಾಯಣ ಭಾಂಡ(Narayan Banda)ಗೆ ಟಿಕೆಟ್​​ ನೀಡಲಾಗಿದೆ. ಈ ಹಿನ್ನಲೆ ಬಾಗಲಕೋಟೆ ನಾರಾಯಣ ಬಾಂಡ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಬಾಂಡ ಅವರಿಗೆ ಕುಟುಂಬಸ್ಥರು ಸಿಹಿ ತಿನ್ನಿಸಿ ಸಂಭ್ರಮಪಟ್ಟಿದ್ದಾರೆ. ಮನೆಯಲ್ಲಿ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರ ಪರ ಘೋಷಣೆ …

Read More »

ಬಿವೈ ವಿಜಯೇಂದ್ರ ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಶಾಸಕ ಯತ್ನಾಳ್

​ಹಾವೇರಿ, ಫೆಬ್ರವರಿ 11: ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗ್ರಾಮದ ಕೋಡಿಯಾಲ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಮತ್ತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಅಟ್ಯಾಕ್ ಮಾಡಿದ್ದಾರೆ. ಬಿವೈ.ವಿಜಯೇಂದ್ರನಿಂದ ನನಗೇನೂ ಆಗಬೇಕಾಗಿಲ್ಲ. ಅವರೊಂದಿಗೆ ನನ್ನದು ಯಾವುದೇ ವ್ಯವಹಾರವಿಲ್ಲ​. ಅಪ್ಪ-ಮಕ್ಕಳ ಜೊತೆಗೆ ನಾನು ರಾಜಿಯಾಗಬೇಕಾ ಎಂದು ವಾಗ್ದಾಳಿ ಮಾಡಿದ್ದಾರೆ.ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ …

Read More »

ಮನೆ ಸುಡುವ ಬಿಜೆಪಿಯನ್ನು ಮುಸ್ಲಿಂ ಸಮುದಾಯ ತಿರಸ್ಕರಿಸುತ್ತದೆ: ಉದ್ಧವ್ ಠಾಕ್ರೆ

ಮುಂಬಯಿ: ಮುಸ್ಲಿಂ ಸಮುದಾಯವು (Muslim community) ತಮ್ಮ ಮನೆಯಲ್ಲಿ ಒಲೆ ಹೊತ್ತಿಸುವ ಹಿಂದುತ್ವದ ಬ್ರ್ಯಾಂಡ್ ಅನ್ನು ಬೆಂಬಲಿಸುತ್ತಿದೆ ಮತ್ತು ತಮ್ಮ ಮನೆಗಳನ್ನು ಸುಡುವ ಭಾರತೀಯ ಜನತಾ ಪಕ್ಷವನ್ನು (BJP) ತಿರಸ್ಕರಿಸುತ್ತಿದೆ ಎಂದು ಶಿವಸೇನಾ (Shivasena-UTB) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಹೇಳಿದರು.   ಮುಂಬಯಿ ನಲ್ಲಿ (mumbai) ಶಿವಸೇನಾ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ ನಮ್ಮೊಂದಿಗೆ ಬರುತ್ತಿದೆ. ನಾನು ಶಿವಸೇನೆಯ ಪಕ್ಷದ ಮುಖ್ಯಸ್ಥ ಮತ್ತು ಹಿಂದೂ …

Read More »

ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿಯೂ ಎನ್​ಡಿಎ ಗೆಲ್ಲುವ ವಿಶ್ವಾಸ: ಬಿವೈ ವಿಜಯೇಂದ್ರ

ಮೈಸೂರು, : ಬಿಜೆಪಿಯ (BJP) ಚುನಾವಣಾ ಚಾಣಕ್ಯ ಅಮಿತ್ ಶಾ (Amit Shah) ಅವರ ಮೈಸೂರು (Mysuru) ಪ್ರವಾಸ ಯಶಸ್ವಿಯಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಭಾನುವಾರ ಸಂಜೆ ತಿಳಿಸಿದರು. ಮೈಸೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಮುಖಂಡರ ಜತೆ ಚರ್ಚೆಯಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕೂಡ ಎನ್​ಡಿಎ ಮೈತ್ರಿಕೂಟ ಗೆಲ್ಲುವ ವಾತಾವರಣ ಇದೆ. ಪ್ರತಿ ಬೂತ್​ನಲ್ಲೂ ಶೇ 10ರ ವೋಟ್​ ಹೆಚ್ಚಳ ಮಾಡಬೇಕು …

Read More »

ನಾವು 20 ಸೀಟ್ ಗೆಲ್ಲೋದು ಗ್ಯಾರಂಟಿ : ಸಲೀಮ್ ಅಹ್ಮದ್

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್‌ (Congress) ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬುದು ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಗಳಲ್ಲಿ ಬಹಿರಂಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ (Saleem Ahmed) ತಿಳಿಸಿದ್ಧಾರೆ.   ಭಾನುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಗ್ಯಾರಂಟಿ ಹಾಗೂ ಕೇಂದ್ರದಲ್ಲಿ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್‌ಗೆ ಗೆಲುವು ತಂದುಕೊಡಲಿದೆ. ಈಗಾಗಲೇ ಬಿಜೆಪಿಯವರಿಗೆ …

Read More »

ವಿಧಾನಮಂಡಲ ಜಂಟಿ ಅಧಿವೇಶನಕದನ; 40 ಪರ್ಸೆಂಟ್‌ ಕಮಿಷನ್‌ ವರ್ಸಸ್‌ ಅನುದಾನ ತಾರತಮ್ಯ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ (Assembly Session) ನಡೆಯಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಆರೋಪ – ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಲಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಟ್ಟಿರುವ 40 ಪರ್ಸೆಂಟ್‌ ಕಮಿಷನ್ (40 percent commission) ಬಾಣವು ವಿಪಕ್ಷಗಳಿಗೆ ಅಸ್ತ್ರವಾದರೆ, ಈಗಾಗಲೇ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌ ಅದನ್ನೇ ಪುನರುಚ್ಚಾರ ಮಾಡಲು ಸಿದ್ಧವಾಗಿದೆ.   ನಾಳೆಯಿಂದ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಬೆಳಗ್ಗೆ …

Read More »

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು Electronic ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. *ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆಯನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ:* 2004 ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ …

Read More »

NSF ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ

ಗೋಕಾಕ : ನಗರದ ಎನ್.ಎಸ್.ಎಫ್ ವಸತಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎನ್.ಎಸ್.ಎಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎನ್.ಎಸ್.ಎಫ್ ವಸತಿ ನಿಲಯಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮವನ್ನು ಸಂಸ್ಥೆಯ ಟ್ರಸ್ಟಿಗಳಾದ ವಿ ಆರ್ ಪರಸನ್ನವರ ಅವರು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಮೌಲ್ಯಯುತ ಜೀವನ ಕಲಿಸುತ್ತದೆ ಪ್ರಸ್ತುತ ಸ್ಪರ್ಧಾತ್ಮಕ ಯುಗವಾಗಿರುವ ಕಾರಣ ಪಾಲಕರು …

Read More »

ಗಂಗಾವತಿ ಅಭಿವೃದ್ಧಿಗೆ ಜಾರಿಯಾಗಿದ್ದ ನೂರಾರು ಕೋಟಿ ರೂಪಾಯಿ ಲೂಟಿ

ಕೊಪ್ಪಳ, ಫೆಬ್ರವರಿ 11: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಭಿವೃದ್ದಿಗಾಗಿ ಪ್ರತಿವರ್ಷ ನೂರಾರು ಕೋಟಿ ಹಣವನ್ನು ಖರ್ಚು ಮಾಡುತ್ತದೆ. ಸರ್ಕಾರ ನೀಡಿರುವ ಹಣದಲ್ಲಿ ಸರಿಯಾಗಿ ಕಾಮಗಾರಿಗಳನ್ನು ಮಾಡಿದ್ದರೆ, ಅನೇಕ ನಗರಗಳು ಅಭಿವೃದ್ದಿಯಾಗುತ್ತಿದ್ದವು. ಗಂಗಾವತಿ (Gangavati) ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ ನೂರಾರು ಕೋಟಿ ಹಣ ಜಾರಿಯಾಗಿದೆ. ಆದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು ಕಳಪೆ ಕಾಮಾಗರಿ ಮಾಡಿ, ಕೋಟಿ ಕೋಟಿ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಹೀಗಾಗಿ ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ನಡೆದಿರುವ …

Read More »