ಬೆಂಗಳೂರು : ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ನಾಲ್ಕು ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡ್ದಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ …
Read More »ತೆಲಂಗಾಣದ ಎರಡನೇ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ
ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಸೋಮವಾರ (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ …
Read More »ತೆಲಂಗಾಣದಲ್ಲಿ ಬಿಆರ್ಎಸ್ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: ತೆಲಂಗಾಣದಲ್ಲಿ ಬಿಎಸ್ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಖುದ್ದಾಗಿ ತೆಲಂಗಾಣಕ್ಕೆ ಭೇಟಿ ನೀಡಿದ್ದೇನೆ. 10 ವರ್ಷದ ಕೆಸಿಆರ್ ಆಡಳಿತದಲ್ಲಿ 10 ಸ್ಕ್ಯಾಮ್ ಗಳಲ್ಲಿ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಳೇಶ್ವರಂ ನೀರಾವರಿ ಯೋಜನೆಯೊಂದರಲ್ಲೇ 1.50 ಲಕ್ಷ ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಅಲ್ಲಿನ …
Read More »ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಮೂರು ರಾಜ್ಯಗಳಿಗೆ ಬಿಜೆಪಿಯೇ ಬಾಸ್
ಪ್ರಚಂಡ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳು ಹಾಗೂ ಕಾರ್ಯಕರ್ತರಿಗೆ ಅಭಿನಂಧನೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನೇನೂ ಲೋಕಸಭೆಯ ಚುನಾವಣೆಯ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ ಮತದಾರರು ಬಿಜೆಪಿಗೆ ಫುಲ್ …
Read More »ಸುವರ್ಣಸೌಧದಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ ಸಭಾಧ್ಯಕ್ಷ&ಸಭಾಪತಿ
ಬೆಳಗಾವಿ/ಬೆಂಗಳೂರು: ವಿಧಾನಮಂಡಲದ ಚಳಿಗಾಲ ಅಧಿವೇಶನ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ವಿಧಾನಸಭಾಧ್ಯಕ್ಷ ಯು ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪರಿಶೀಲನೆ ನಡೆಸಿದರು. ಸುವರ್ಣಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ನೀಡಿದರು. ಸುವರ್ಣಸೌಧದ ಪ್ರವೇಶದ್ವಾರಗಳಲ್ಲಿನ ಸಿದ್ಧತೆ, ವಿಧಾನಸಭಾ ಸದನ, ವಿಧಾನ ಪರಿಷತ್ ಸದನಗಳನ್ನು ವೀಕ್ಷಿಸಿದ ಅವರು ಮೈಕ್ ವ್ಯವಸ್ಥೆ ಸೇರಿ …
Read More »ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್ಗೆ ಡಿಜಿ ಐಜಿಪಿ ಅಲೋಕ್ ಮೋಹನ್ ಭೇಟಿ
ಬೆಳಗಾವಿ: ತಾಲೂಕಿನ ಅಲಾರವಾಡ ಗ್ರಾಮದ ಹೊರ ವಲಯದಲ್ಲಿ ಚಳಿಗಾಲದ ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್ಗೆ ಡಿಜಿ – ಐಜಿಪಿ ಅಲೋಕ್ ಮೋಹನ್ ಅವರು ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದರು. 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಅಧಿವೇಶನ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ಜರ್ಮನ್ ಟೆಂಟ್ ಮೂಲಕ ಟೌನ್ ಶಿಪ್ ನಿರ್ಮಿಸಲಾಗಿದೆ. ಟೆಂಟ್ಗಳಿಗೆ ಭೇಟಿ ನೀಡಿದ ಅಲೋಕ್ ಮೋಹನ್ ಅವರು ಪೊಲೀಸ್ ಸಿಬ್ಬಂದಿಗಳನ್ನು ಮಾತನಾಡಿಸಿ ಇಲ್ಲಿ …
Read More »ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ಗೆ ಅನುಮತಿ ನಿರಾಕರಣೆ : ಪೊಲೀಸ್ ಕಮೀಷ್ನರ್ ಖಡಕ್ ಆದೇಶ
ಬೆಳಗಾವಿ : ಮಹಾಮೇಳಾವ್ ಸಿದ್ಧತೆಯಲ್ಲಿ ತೊಡಗಿದ್ದ ಎಂಇಎಸ್ಗೆ ಬೆಳಗಾವಿ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಹಾಮೇಳಾವ್ಗೆ ಅನುಮತಿ ನಿರಾಕರಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಖಡಕ್ ಆದೇಶ ಹೊರಡಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದಿದ್ದಾರೆ. ಟಿಳಕವಾಡಿ …
Read More »4 ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ಗೂ ಎಚ್ಚರಿಕೆ ಗಂಟೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ಗೂ ಇದು ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್.ಟಿ ನಗರ ನಿವಾಸದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆಗಿಂತ ಮೊದಲು ಬಂದಿರುವುದರಿಂದ ಸೆಮಿ ಫೈನಲ್ ಅಂತ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಂತೂ ಮೇಲಿಂದಮೇಲೆ ಹೇಳಿದ್ದಾರೆ. ಈ ಫಲಿತಾಂಶ ಲೋಕಸಭೆ …
Read More »ಸ್ವೀಟ್ ತಿನ್ನಿಸಿ ರೇವಂತ್ ರೆಡ್ಡಿ ಅಭಿನಂದಿಸಿದ ಡಿ ಕೆ ಶಿ
ಹೈದ್ರಾಬಾದ್ : ತೆಲಂಗಾಣದಲ್ಲಿ (Telanagana)ಅಭೂತಪೂರ್ವ ಗೆಲುವು ಸಾಧಿಸಿ ಕಾಂಗ್ರೆಸ್(Congress) ಭರ್ಜರಿ ಸಂಭ್ರಮಾಚರಣೆ ನಡೆಸುತ್ತಿದೆ. ಹೈದ್ರಾಬಾದ್ ಕಚೇರಿಯಲ್ಲಿ ರೇವಂತ್ ರಡ್ಡಿಯನ್ನು ಅಪ್ಪಿ ಸಿಹಿ ತಿನ್ನಿಸಿ ಡಿ ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಪಕ್ಕಾ ಆದ ಹಿನ್ನೆಲೆ ಡಿ ಕೆ ಶಿವಕುಮಾರ್ , ರೇವಂತ ರೆಡ್ಡಿ ನೇತೃತ್ವದಲ್ಲಿ ಪಕ್ಷದ ನಾಯಕರ ಸಭೆ ಆರಂಭವಾಗಿದ್ದು ಮುಂದಿನ ನಡೆ ಬಗ್ಗೆ ಚರ್ಚಿಸಲಾಗುತ್ತಿದೆ. ಕಾಂಗ್ರೆಸ್ ಅಧಿಕಾರ ಹಿಡಿದರೆ ಸಿಎಂ ಸ್ಥಾನಕ್ಕೆ …
Read More »SC/ST ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್ ಎಲ್ಲರಿಗೂ ಸಿಗಲಿದೆ ‘ಪ್ರೋತ್ಸಾಹ ಧನ’
ಬೆಂಗಳೂರು: ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಕಾರ್ಯಕ್ರಮ ಸಂಬಂಧ ಹಾಲಿ ಇರುವ ಆದೇಶವನ್ನು ಮಾರ್ಪಡಿಸಿ ಆದೇಶವನ್ನು ಹೊರಡಿಸಿದೆ. ಹೊಸ ಆದೇಶದಲ್ಲಿ ಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ ಜಾತಿಯ ವಿದ್ಯಾರ್ಥಿಗಳು ಶೇ.60 ರಿಂದ ಶೇ.74.99 ಅಂಕ ಪಡೆದಲ್ಲಿ ರೂ.7000/-ಗಳನ್ನು ಮತ್ತು ಶೇ.75 ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.15000/- ಗಳನ್ನು ಒಂದು …
Read More »