Breaking News

2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು, : 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ ಹಿನ್ನೆಲೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(nikhil kumaraswamy)ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಇನ್ನು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ …

Read More »

ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ: ಸಿಎಂ

ಬೆಂಗಳೂರು, : ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ. ಆಮೇಲೆ ಸ್ವೀಕಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರದಿಯಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದರೆ ಸರಿಪಡಿಸುತ್ತೇವೆ. ಜಾತಿಗಣತಿಗೆ ಕಾಂತರಾಜ ಸಮಿತಿ ರಚಿಸಿ ಹಣ ಬಿಡುಗಡೆ ಮಾಡಿದ್ದೆ. ಹೆಚ್​ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾಂತರಾಜ ಸಮಿತಿ ವರದಿ ಸ್ವೀಕರಿಸಲಿಲ್ಲ. ನಾನು ಕಾಂತರಾಜ ಸಮಿತಿ ವರದಿ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ. …

Read More »

ವಂಟಮೂರಿ ಮಹಿಳೆ‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನೆಗೆ ಕಾರಣವಾಗಿದ್ದ ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್

ಬೆಳಗಾವಿ, : ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು (Woman) ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ (Assault) ನಡೆಸಲಾಗಿತ್ತು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಸದ್ಯ ಈಗ ಈ ಘಟನೆಗೆ ಕಾರಣವಾಗಿದ್ದ ವಂಟಮೂರಿ ಗ್ರಾಮದ ಪ್ರೇಮಿಗಳ ಮದುವೆ ಮಾಡಿಸಲಾಗಿದೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ. ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ …

Read More »

ಧಾರವಾಡ ಬಣ ರಾಜಕೀಯ ಶಮನಕ್ಕೆ ಮುಂದಾದ ಬಿವೈ ವಿಜಯೇಂದ್ರ: ಶೆಟ್ಟರ್, ಮುನೇನಕೊಪ್ಪ, ಬೆಲ್ಲದ್ ಜೊತೆ ಸಭೆ

ಹುಬ್ಬಳ್ಳಿ, ಫೆಬ್ರುವರಿ 1: ಧಾರವಾಡದ ಬಣ ರಾಜಕೀಯವನ್ನು ಶಮನ ಮಾಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra)ಮುಂದಾಗಿದ್ದಾರೆ. ಆ ಮೂಲಕ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ವಿಧಾನಸಭಾ ಉಪನಾಯಕ ಅರವಿಂದ ಬೆಲ್ಲದ್​ ಅವರೊಂದಿಗೆ ಹುಬ್ಬಳ್ಳಿ ಪ್ರವಾಸಿ‌ ಮಂದಿರದಲ್ಲಿ ಪ್ರತ್ಯೇಕ ಸಭೆ ಮಾಡಿದ್ದಾರೆ. ಮೂವರು ನಾಯಕರೊಂದಿಗೆ ಬಿ.ವೈ.ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಧಾರಾವಾಡ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಘರವಾಪ್ಸಿಯಾದರೂ ಭಿನ್ನಮತವಿತ್ತು. ಶೆಟ್ಟರ್ ಮೆರವಣಿಗೆಯಲ್ಲೂ ಸ್ಥಳೀಯ ನಾಯಕರು …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರು ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು …

Read More »

ಕಲಬುರಗಿ: ಹೊಲದಿಂದ ಬರ್ತಿದ್ದ ಒಂಟಿ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಆಸ್ಪತ್ರೆಗೆ ದಾಖಲು

ಕಲಬುರಗಿ, : ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಇದೀಗಕಲಬುರಗಿ(Kalaburagi) ಜಿಲ್ಲೆಯ ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಒಂಟಿ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಲಿಂಗಮ್ಮ ಹಲ್ಲೆಗೊಳಾದ ಮಹಿಳೆ. ಇವರು ಹೊಲದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಂತೆ 6 ರಿಂದ 7 ಜನರ ಗುಂಪೊಂದು ಕಬ್ಬಿಣದ ರಾಡ್, ಚಾಕು ಹಾಗೂ ಕಲ್ಲಿನಿಂದ ಲಿಂಗಮ್ಮನ ಮೇಲೆ ಏಕಾಎಕಿ ಹಲ್ಲೆ ನಡೆಸಿದೆ. …

Read More »

ಬೆಂಗಳೂರು ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ನೇಮಕ

ಬೆಂಗಳೂರು,: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ (Bengaluru Jayadeva Hospital) ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ (Dr Ravindranath) ಅವರನ್ನು ನೇಮಕ ಮಾಡಲಾಗಿದೆ. ಡಾ.ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 69 ವಯಸ್ಸಿನ ರವೀಂದ್ರನಾಥ್ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ …

Read More »

ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್‌ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್

ತ್ರಿಪುರಾದಿಂದ 6E525 ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನಲ್ಲೇ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಕರ್ನಾಟಕ ಕ್ರಿಕೆಟ್‌ ತಂಡದ ಮ್ಯಾನೇಜರ್ ರಮೇಶ್ ಪ್ರತಿಕ್ರಿಯಿಸಿದ್ದು, ಮಯಾಂಕ್ ಅರ್ಗವಾಲ್ ಅವರು ಅಪಾಯದಿಂದ ಪಾರಾಗಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದು, ನಾಳೆ (ಫೆಬ್ರವರಿ 01) ಬೆಂಗಳೂರಿನಲ್ಲಿ ವೈದ್ಯರನ್ನ ಸಂಪರ್ಕಿಸಲಿದ್ದಾರೆ. ಥ್ರೋಟ್ ಇನ್ಪೇಕ್ಷನ್ ಆಗಿರುವ ಕಾರಣ ಅವರಿಗೆ ಮಾತನಾಡಲು ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು.   …

Read More »

ಬೆಂಗಳೂರು ವಿವಿ ಕ್ಯಾಂಪಸ್​ ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ ಪ್ರಕರಣ: ಅಡುಗೆ ಪಾಲಕ ಸಸ್ಪೆಂಡ್

ಬೆಂಗಳೂರು, : ಬೆಂಗಳೂರು ವಿವಿ ಕ್ಯಾಂಪಸ್​(Bengaluru VV campus)ನ ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡುಗೆ ನಿಲಯದ​ ಮಂಜುನಾಥ್​ನನ್ನು ಅಮಾನತು ಮಾಡಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆಯಾದ ಬಗ್ಗೆ ನಿನ್ನೆ ಟಿವಿ9 ಸುದ್ದಿ ಬಿತ್ತರಿಸಿತ್ತು. ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಇಂದು ಹಾಸ್ಟೆಲ್​ಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ತನಿಖೆಯಲ್ಲಿ ಮಂಜುನಾಥ್ ಕರ್ತವ್ಯ …

Read More »

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: 10 ಅಧಿಕಾರಿಗಳ ಬಳಿ ಏನೇನು ಸಿಕ್ಕಿದೆ? ಇಲ್ಲಿದೆ ವಿವರ

ಬೆಂಗಳೂರು, ಜನವರಿ 31: ಆದಾಯಕ್ಕೂ ಮೀರಿದ ಅಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 10 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 40 ಸ್ಥಳಗಳಲ್ಲಿ ಲೋಕಾಯುಕ್ತ(Lokayukta Raid)ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು, ತುಮಕೂರು, ಚಿಕ್ಕಮಗಳೂರು, ಮಂಡ್ಯ, ಹಾಸನ, ಕೊಪ್ಪಳ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ, ಮಂಗಳೂರಿನಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ಸದ್ಯ ಉಳಿದ ಭ್ರಷ್ಟರಿಗೂ ನಡುಕ ಶುರುವಾಗಿದೆ. 10 ಸರ್ಕಾರಿ ಅಧಿಕಾರಿಗಳ ಬಳಿ ಏನೇನು ಸಿಕ್ಕಿದೆ ಎಂಬುದಕ್ಕೆ ಇಲ್ಲಿದೆ ವಿವರ. ಕೋಟಿ ಕುಬೇರ …

Read More »