ಬೆಂಗಳೂರು : ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ವಸಿಷ್ಠ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧವು ಸಿಬಿಐ ತನಿಖೆಗೆ ಅದೇಶಿಸಿದ್ದು, ಎರಡು ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಹಣ ಅವ್ಯವಹಾರ ನಡೆದಿತ್ತು. ಎರಡು ಬ್ಯಾಂಕಗಳಲ್ಲಿ ನೀಯಮ ಬಾಹಿರವಾಗಿ ಸಾಲ ನೀಡಿದ್ದ ಆರೋಪದ ಹಿನ್ನೆಲೆಯಿದ್ದು ಬ್ಯಾಂಕ್ ಹಣವನ್ನು ಖಾಸಗಿಯಾಗಿಯೂ ಸಾಲ ನೀಡಿದ್ದ ಆರೋಪದ ಹಿನ್ನೆಲೆ ಈ …
Read More »ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ. ಗೃಹ ಲಕ್ಷ್ಮಿಯರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ:ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್ನಲ್ಲಿ ಘೊಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಾಹಿತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಾಧ್ಯಮಗಳ ಎದುರು ಮಾತನಾಡಿದ ಅವರು, ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ. ಇವರು ಪದೇ ಪದೆ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ ಎಂದು ಆರೋಪಿಸಿದರು. …
Read More »ರಾಯಬಾಗ: ₹45.85 ಲಕ್ಷ ಅನುದಾನದ ಕೊಠಡಿಗಳ ಉದ್ಘಾಟನೆ
ರಾಯಬಾಗ: ತಾಲ್ಲೂಕಿನ ಕಂಕಣವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾನಂದ ನಗರ, ಮೊಳವಾಡ ತೋಟ ಹಾಗೂ ಖನದಾಳೆ ತೋಟದಲ್ಲಿ ₹45.85 ಲಕ್ಷ ಅನುದಾನದಲ್ಲಿ ವಿವೇಕ ಯೋಜನೆಯಡಿ ನಿರ್ಮಾಣವಾಗಿದ್ದ ನೂತನ ಕೊಠಡಿಗಳನ್ನು ಶುಕ್ರವಾರ ಶಾಸಕ ಡಿ.ಎಂ. ಐಹೊಳೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದ ಮಾತ್ರಕ್ಕೆ ನಿಮ್ಮ ಜವಾಬ್ಧಾರಿ ಕೊನೆಗೊಳ್ಳುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪಾಲಕ-ಪೋಷಕರಿಗೂ ಇರುತ್ತದೆ ಎಂದು ಹೇಳಿದರು. ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ …
Read More »ಡಿಸೆಂಬರ್ 4ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶ ಆರಂಭ ವಿಧಾನಸೌಧ ಸಜ್ಜು
ಬೆಳಗಾವಿ: ಡಿಸೆಂಬರ್ 4ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶ ಆರಂಭವಾಗಲಿದ್ದು, ಇದಕ್ಕೆ ಪೂರಕವಾಗಿ ಸಕಲ ಸಿದ್ಧತೆಗಳು ನಡೆದಿವೆ. ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಮುಖ್ಯಮಂತ್ರಿ, ವಿವಿಧ ಖಾತೆಗಳ ಸಚಿವರ ಕಚೇರಿಗಳು, ಅಧಿಕಾರಿಗಳ ಕೊಠಡಿಗಳನ್ನು ಶುಚಿಗೊಳಿಸಲಾಗಿದೆ. ಕಾರಿಡಾರ್ಗೆ ಬಣ್ಣ ಬಳಿದು, ಇಡೀ ಆವರಣ ಅಂದಗೊಳಿಸಲಾಗಿದೆ. ಸಿದ್ಧತೆ ಪರಿಶೀಲಿಸಲು ಸುವರ್ಣ ಸೌಧಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಳಪೆ …
Read More »ಬೈಲಹೊಂಗಲ: ಮರಡಿ ಬಸವೇಶ್ವರ ದೇವಸ್ಥಾನ ಜಾತ್ರೆಗೆ ಸಜ್ಜು
ಬೈಲಹೊಂಗಲ: ರೈತ ಸಮುದಾಯದ ಆಧ್ಯಾತ್ಮಿಕ ಕೇಂದ್ರವಾಗಿರುವ ಇತಿಹಾಸ ಪ್ರಸಿದ್ಧ ಮರಡಿ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಡಿ.4ರಿಂದ 8ರವರೆಗೆ ಅದ್ಧೂರಿ ಜಾತ್ರಾ ಮಹೋತ್ಸವ ನೆರವೇರಲಿದೆ. ಡಿ. 4ರಂದು ಸಂಜೆ 4.30ಕ್ಕೆ ನೆರವೇರಲಿರುವ ನವಿಲಿನ ಕಳಶ ಹೊತ್ತ ಮಹಾತೇರು ಎಳೆಯಲು ಈ ಭಾಗದ ಸದ್ಭಕ್ತರು ಆತುರದಿಂದ ಕಾಯುತ್ತಿದ್ದಾರೆ. ಲಕ್ಷಾಂತರ ಭಕ್ತರ ಆಗಮನ: ಸರ್ವಧರ್ಮೀಯರು ಶ್ರದ್ಧಾಭಕ್ತಿಯಿಂದ ಪೂಜಿಸುವ ಮರಡಿ ಬಸವೇಶ್ವರ ಜಾತ್ರೆಯ ಸೊಬಗನ್ನು ಕಣ್ತುಂಬಿಕೊಳ್ಳಲು ಭಕ್ತರು ತುದಿಗಾಲ ಮೇಲೆ ನಿಂತಿದ್ದಾರೆ. …
Read More »ರಕ್ಷಣಾ ಸವಾಲುಗಳನ್ನು ಎದುರಿಸಲು ಸಜ್ಜಾಗಿ: ಏರ್ ಮಾರ್ಷಲ್ ರಾಧಾಕೃಷ್ಣನ್
ಬೆಳಗಾವಿ: ತಾಲ್ಲೂಕಿನ ಸಾಂಬ್ರಾದ ಏರ್ಮೆನ್ ತರಬೇತಿ ಶಾಲೆ(ಎಟಿಎಸ್)ಯಲ್ಲಿ ಪುರುಷ ಅಗ್ನಿವೀರವಾಯುಗಳ ಎರಡನೇ ತಂಡದ ಮತ್ತು ಮಹಿಳಾ ಅಗ್ನಿವೀರವಾಯುಗಳ ಮೊದಲ ತಂಡದ ನಿರ್ಗಮನ ಪಥಸಂಚಲನ ಶನಿವಾರ ನಡೆಯಿತು. ಇಲ್ಲಿ 22 ವಾರ ತರಬೇತಿ ಪಡೆದ 2,127 ಪುರುಷರು, 153 ಮಹಿಳೆಯರು ಸೇರಿದಂತೆ 2,280 ಅಗ್ನಿವೀರವಾಯುಗಳು ಆಕರ್ಷಕ ಪಥಸಂಚಲನ ನಡೆಸಿದರು. ಈ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಏರ್ ಮಾರ್ಷಲ್ ರಾಧಾಕೃಷ್ಣನ್ ರಾಧಿಶ್, ‘ಪ್ರಸ್ತುತ …
Read More »ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿ
ಮೂಡಲಗಿ: ‘ಮನಸ್ಸಿದ್ದರೆ ಏನೆಲ್ಲ ಮಾಡಬಹುದು, ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಯುವ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿಯಾಗಿದ್ದಾರೆ. 2008ರಲ್ಲಿ ಬಿಎ ಪದವಿ ಮುಗಿಸಿ ನೌಕರಿ ದೊರೆಯದಿದ್ದಾಗ ಒಂದೇ ಆಕಳು ಸಾಕಿ ಹೈನುಗಾರಿಕೆ ಆರಂಭಿಸಿ ಹೊನ್ನಪ್ಪ ಅವರ ಹೊಲದಲ್ಲಿ ಇಂದು 20ಕ್ಕೂ ಅಧಿಕ ಎಚ್ಎಫ್ ತಳಿಯ ಹಸುಗಳು ಇವೆ. ಪ್ರತಿ ದಿನ ಬೆಳಿಗ್ಗೆ 100 ಲೀಟರ್, ಸಂಜೆ 100 ಲೀಟರ್ ಹೀಗೆ ನಿತ್ಯ 200 …
Read More »ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು. ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ
ಶಿರಸಿ(ಉತ್ತರ ಕನ್ನಡ): ರಾಜ್ಯದಲ್ಲಿ ದಲಿತ ಸಿಎಂ ಆಗಲೂ ಇನ್ನೂ ಕಾಲ ಕೂಡಿ ಬಂದಿಲ್ಲ, ಕಾಲ ಕೂಡಿ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾರ್ಯಕ್ರಮವೊಂದರ ನಿಮಿತ್ತ ಶಿರಸಿಗೆ ಶನಿವಾರ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು, ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ದಲಿತ ಸಿಎಂ ವಿಚಾರ ಇಲ್ಲ ಎಂದರು. ಪಕ್ಷದ ಮುಖಂಡ ಬಿ ಕೆ ಹರಿಪ್ರಸಾದ್ ಅವರನ್ನು …
Read More »ರಾಜ್ಯಕ್ಕೆ ಐಜಿಎಸ್ಟಿ ಕಡಿತ ಆಘಾತ: ಸ್ಪಷ್ಟನೆ ಕೋರಿ ಕೇಂದ್ರ ಸಚಿವರಿಗೆ ಸಿಎಂ ಪತ್ರ
ಬೆಂಗಳೂರು: ಬರ, ಗ್ಯಾರಂಟಿ ಯೋಜನೆಗಳಿಂದ ತೀವ್ರ ಆರ್ಥಿಕ ಹೊರೆ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇದೀಗ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಕೇಂದ್ರ ಸರ್ಕಾರ ಕರ್ನಾಟಕದ ಐಜಿಎಸ್ಟಿ ಸಂಗ್ರಹದಿಂದ 798 ಕೋಟಿ ರೂ. ಕಡಿತಗೊಳಿಸಿದೆ. IGST ಅಂದರೆ ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಆಗಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸರಕು ಮತ್ತು ಸೇವೆಗಳು ಚಲಿಸಿದಾಗ ಐಜಿಎಸ್ಟಿ ವಿಧಿಸಲ್ಪಡುತ್ತದೆ. ಐಜಿಎಸ್ಟಿ ಹಂತದಲ್ಲಿ ಬರುವ ಆದಾಯವನ್ನು ಕೇಂದ್ರ ಹಾಗೂ …
Read More »ವಿಜಯಪುರದಲ್ಲಿ ಭೀಕರ ಬರ ವಿಜಯಪುರದಲ್ಲಿ ಭೀಕರ ಬರ
ವಿಜಯಪುರ: ಬರಪೀಡಿತ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಈ ಬಾರಿಯೂ ಜನರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಹೀಗಾಗಿ ಕೆಲವೆಡೆ ಇಡೀ ಗ್ರಾಮದ ಮನೆಗಳಿಗೆ ಬೀಗ ಜಡಿದು ಜನ್ರು ದುಡಿಯೋಕೆ ಹೋಗಿರುವ ದೃಶ್ಯಗಳು ಕಂಡುಬಂದಿವೆ. ಹೌದು, ವಿಜಯಪುರ ಜಿಲ್ಲೆಯ ಬಹುತೇಕ ಗ್ರಾಮಗಳ ಜನರು ಉದ್ಯೋಗ ಅರಸಿ ಅನ್ಯ ರಾಜ್ಯಗಳಿಗೆ ಗುಳೇ ಹೋಗುತ್ತಾರೆ. ಅವರಲ್ಲಿ ಹೆಚ್ಚಿನವರು ತಾಂಡಾಗಳ ಜನರೇ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಕುಟುಂಬ ಸಮೇತ ತೆರಳುತ್ತಿದ್ದಾರೆ. ಹೀಗೆ ಹೋಗುವ …
Read More »