Breaking News

ಆಯಾ ವರ್ಷವೇ ಪ್ರಶಸ್ತಿ ನೀಡಿ ಗೌರವಿಸಬೇಕು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ.31: ಪ್ರಶಸ್ತಿ ನೀಡಿಕೆ ಮುಂದೂಡಬಾರದು, ಆಯಾ ವರ್ಷವೇ ನೀಡಿ ಗೌರವಿಸಬೇಕು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ ಪ್ರದಾನಸಮಾರಂಭದಲ್ಲಿಮಾತನಾಡಿದ ಅವರು ‘ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ ನಾವು ಮೂಗು ತೀರಿಸುವುದಿಲ್ಲ. ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ ಎಂದರು.   4 …

Read More »

ಬಿಜೆಪಿ ಜೊತೆ ಹೊಂದಾಣಿಕೆಗೆ ಜನಾರ್ದನ್‌ ರೆಡ್ಡಿ ನಿರ್ಧಾರ

ಬೆಂಗಳೂರು: ಸದ್ಯ ಬಿಜೆಪಿ ಸೇರ್ಪಡೆ ಇಲ್ಲ, ಬದಲಿಗೆ ಪಕ್ಷ ಹೊಂದಾಣಿಕೆಗೆ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಈ ವೇಳೆ ಬಿಜೆಪಿ ಜೊತೆ ಹೊಂದಾಣಿಕೆಗೆ ನಾಯಕರು ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ರೆಡ್ಡಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ …

Read More »

ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ,

ಬೆಂಗಳೂರು, ಜನವರಿ : ಕೇಂದ್ರ ಸರ್ಕಾರ ನಿಷೇಧಿಸಿರುವ, ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ (E-cigarette) ಅನ್ನು ಸಿಸಿಬಿ (CCB Police) ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಇ-ಸಿಗರೇಟ್​ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್​​ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಕೊರಿಯರ್ ಮೂಲಕ ಬರುತ್ತಿತ್ತು ಇ-ಸಿಗರೇಟ್ ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. …

Read More »

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ

ಚಿಕ್ಕಮಗಳೂರು: ಲೋಕ ಸಭಾ (loksabha) ಚುನಾವಣೆ (election) ಹತ್ತಿರವಿರುವಾಗಲೇ ಇಲ್ಲೊಬ್ಬರು ಮದುವೆ ಆಮಂತ್ರಣ (wedding invitation) ಪತ್ರಿಕೆಯಲ್ಲಿ ಪ್ರಧಾನಿ (PM) ನರೇಂದ್ರ ಮೋದಿ (narendra modi) ಮೇಲಿನ ಅಭಿಮಾನವನ್ನು ತೋರ್ಪಡಿಸಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಾಮಾನ್ಯವಾಗಿ ಆಶೀರ್ವಾದವೇ ಉಡುಗೊರೆ ಅಥವಾ ಆಗಮನವೇ ಉಡುಗೊರೆ ಎಂದು ಬರೆಯುವುದು ಸಾಮಾನ್ಯ. ಆದರೆ ಇವರು ಮಾತ್ರ ಆಮಂತ್ರಣ ಪತ್ರಿಕೆಯಲ್ಲಿ 2024ರ ಲೋಕಸಭೆ ಚುನಾವಣೆ ಪರ ಪ್ರಚಾರ ಮಾಡಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ …

Read More »

ಪಾರ್ಕ್​ನಲ್ಲಿ ಟಿಪ್ಪು ಬಾವುಟ ಹಾಕಿದ್ದಾರಲ್ಲ, ಒಪ್ಪಿಗೆ ಪಡೆದಿದ್ದಾರಾ? ಸಿದ್ದರಾಮಯ್ಯ, ಪರಮೇಶ್ವರ್​ಗೆ ಪ್ರತಾಪ್​ ಸಿಂಹ ಪ್ರಶ್ನೆ

ಮೈಸೂರು, : ಮಂಡ್ಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಕೇಸ್ ಹಿನ್ನೆಲೆ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದರು. ಇದೀಗ ಸಂಸದ ಪ್ರತಾಪ್​ ಸಿಂಹ(Pratap Simha)ಕೂಡ ಸಾಮಾಜಿಕ ಜಾಲತಾಣದ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್​ಗೆ ಟಾಂಗ್​ ನೀಡಿದ್ದಾರೆ. ಮೈಸೂರಿನ ಕೈಲಾಸಪುರಂನ ಪಾರ್ಕ್​​ನಲ್ಲಿ ಟಿಪ್ಪು ಬಾವುಟ ಹಾಕಿದ್ದಾರಲ್ಲ, ಒಪ್ಪಿಗೆ …

Read More »

ಬಾಬಾ ಸಾಹೇಬರ ಸಂವಿಧಾನ ಓದಿದ ಪುಟಾಣಿ

ಬೆಂಗಳೂರು : ಕಾಂಗ್ರೆಸ್‌ (Congress) ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾಕಾಲೇಜುಗಳಲ್ಲಿ ಸಂವಿಧಾನ ಓದು (Constitution reading) ಎಂಬ ಹೊಸ ಕ್ರಮವನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳಿಗೆ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ರ (Dr BabaSaheb Ambedkar) ಸಂವಿಧಾನದ ಬಗ್ಗೆ ಅರಿವು ಮತ್ತು ಗೌರವ ಮೂಡಿಸುವ ಸಲುವಾಗಿ ಪ್ರಾರಂಭಿಸಿರುವ ಈ ಕಾರ್ಯಕ್ರಮದಲ್ಲಿ ಆರು ವರ್ಷದ ಬಾಲೆಯೊಬ್ಬಳು ಸ್ಪಷ್ಟವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಕಂಠಪಾಠದ ಮೂಲಕ ಓದಿ ಜನರ ಮೆಚ್ಚುಗೆ ಗಳಿಸಿದ್ದಾಳೆ.   ಸಚಿವ …

Read More »

ಕೃಷಿಗೆ ಮತ್ತೆ ಮನ್ನಣೆ ನೀಡುವ ದಿನ ಬರಲಿದೆ: ಬಾಬಾಸಾಹೇಬ ಪಾಟೀಲ

ಚನ್ನಮ್ಮನ ಕಿತ್ತೂರು: ‘ಒಕ್ಕಲುತನ ಮತ್ತು ಒಕ್ಕಲುತನ ಮಾಡುವವರು ಸಂಕಷ್ಟದಲ್ಲಿದ್ದಾರೆ. ಆದರೆ, ಕೃಷಿಗೆ ಒಳ್ಳೆಯ ಕಾಲ ಮತ್ತೆ ಬರಲಿದೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು. ಕೃಷಿ ಇಲಾಖೆಯಿಂದ ಇಲ್ಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಯಂತ್ರೋಪಕರಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.   ‘ಕೃಷಿಗೆ ಸದ್ಯ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಕೃಷಿಯಿಂದ ವಿಮುಖರಾದವರು ಮರಳಿ ಬರುವ ಸಾಹಸ ಮಾಡುತ್ತಿಲ್ಲ. ಬಿತ್ತನೆ ಮಾಡಿದ ಬೆಳೆ ಕೈಗೆ ಸೇರಬೇಕೆಂದರೆ …

Read More »

ರಸ್ತೆ ಮೇಲೆ ಮಲಗಿ ರೈತರ ಆಕ್ರೋಶ

ಬೆಳಗಾವಿ: ‘ಇಲ್ಲಿನ ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಸ್ಥಳೀಯ ರೈತರ ಬದಲಿಗೆ, ಹೊರರಾಜ್ಯದ ದಲ್ಲಾಳಿ ಗಜ್ಜರಿ ಖರೀದಿಸಿ ಮೋಸ ಮಾಡಲಾಗುತ್ತಿದೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಾರುಕಟ್ಟೆ ಎದುರು ರಸ್ತೆಯಲ್ಲೇ ಮಲಗಿ ಮಂಗಳವಾರ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಆವರಣದಲ್ಲಿ ಗಜ್ಜರಿ ಸುರಿದ ಆಕ್ರೋಶ ವ್ಯಕ್ತಪಡಿಸಿದ ರೈತರು, ‘ಬೆಳಗಾವಿ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಜ್ಜರಿ ಬೆಳೆಯಲಾಗುತ್ತಿದೆ. ಆದರೆ, ಇಲ್ಲಿನ ವರ್ತಕರು ಮಾರಾಟಕ್ಕಾಗಿ ಹೊರರಾಜ್ಯದಿಂದ …

Read More »

ಪ್ರೇಮ ಪ್ರಕರಣ, ನವ ದಂಪತಿ ಕೊಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಯಾಸಿನ್‌ ಬ್ಯಾಗೋಡೆ (21) ಹಾಗೂ ಹೀನಾಕೌಸರ್‌ (19) ಕೊಲೆಯಾದವರು. ಇದೇ ಊರಿನ ತೌಫಿಕ್‌ ಕ್ಯಾಡಿ (24) ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಯಾಸಿನ್‌ ಹಾಗೂ ಹೀನಾಕೌಸರ್‌ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ತಿಂಗಳ ಹಿಂದೆ ಹೀನಾಕೌಸರ್‌ ಅವರ ಮದುವೆಯನ್ನು ತೌಫಿಕ್‌ ಜತೆಗೆ …

Read More »

ಸುಗ್ರೀವಾಜ್ಞೆಗಿಲ್ಲ ಅಂಕಿತ; ಕನ್ನಡ ನಾಮಫಲಕ ನಿಯಮ ತಿದ್ದುಪಡಿ ರಾಜ್ಯಪಾಲರಿಂದ ವಾಪಸ್

ಬೆಂಗಳೂರು: ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ, ಶೇ.40ರಷ್ಟು ಅನ್ಯ ಭಾಷೆ ಬಳಕೆಗೆ ಅವಕಾಶ ಕಲ್ಪಿಸಲು ನಿಯಮಕ್ಕೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಬಜೆಟ್ ಅಧಿವೇಶನ ಹತ್ತಿರದಲ್ಲಿರುವಾಗ ವಿಧಾನಮಂಡಲದಲ್ಲೇ ವಿಧೇಯಕದ ಮೂಲಕ ಜಾರಿಗೆ ತರುವ ಬದಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ಔಚಿತ್ಯವೇನಿತ್ತು ಎಂದು ರಾಜ್ಯಪಾಲರು ಪ್ರಶ್ನಿಸಿದ್ದಾರೆ.   ಜ. 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ತರಲು ಅನುಮೋದನೆ ನೀಡಲಾಗಿತ್ತು. ನಾಮಫಲಕದಲ್ಲಿ ಕನ್ನಡ ಕಡೆಗಣನೆ ವಿರೋಧಿಸಿ ಹೋರಾಟ …

Read More »