ಲೋಕಸಭೆ ಚುನಾವಣೆ 2024ರ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಜಗತ್ತಿಗೆ ಜಗತ್ತೇ ಭಾರತದ ಲೋಕಸಭೆ ಚುನಾವಣೆಗೆ ಕಾಯುತ್ತಿದೆ. ಯಾಕಂದ್ರೆ ಭಾರತ ಈಗ ಜಾಗತಿಕ ಶಕ್ತಿ & ಪ್ರಬಲ ಆರ್ಥಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ಹೀಗಾಗಿ ಇಡೀ ಪ್ರಪಂಚ ಭಾರತದ ಲೋಕಸಭೆ ಚುನಾವಣೆ ಮೇಲೆ ಗಮನ ಇಟ್ಟು ಕೂತಿರುವ ಸಮಯದಲ್ಲೇ ಭಾರತೀಯ ಚುನಾವಣೆ ಆಯೋಗ ಮಹತ್ವದ ಘೋಷಣೆ ಹೊರಡಿಸಿದೆ. ಹಾಗಾದರೆ ಎಷ್ಟು ಕೋಟಿ ಭಾರತೀಯರು ವೋಟಿಂಗ್ ಮಾಡುತ್ತಿದ್ದಾರೆ ಗೊತ್ತಾ? ಯಾವಾಗ ಭಾರತದ ಲೋಕಸಭೆ …
Read More »ಚುನಾವಣೆ ಸಂದರ್ಭದಲ್ಲಿ ಬ್ಯಾಂಕುಗಳು ದೈನಂದಿನ ‘ಅನುಮಾನಾಸ್ಪದ ವಹಿವಾಟು ವರದಿ’ ಸಲ್ಲಿಸಬೇಕು : ಚುನಾವಣಾ ಆಯೋಗ
ನವದೆಹಲಿ: ಭಾರತದ ಚುನಾವಣಾ ಆಯೋಗವು ಶನಿವಾರ ಮೊದಲ ರೀತಿಯ ನಿರ್ಧಾರವನ್ನು ಪ್ರಕಟಿಸಿದ್ದು, ಇದರಲ್ಲಿ ಬ್ಯಾಂಕುಗಳು ದೈನಂದಿನ ಎಸ್ಟಿಆರ್ಗಳನ್ನು (ಅನುಮಾನಾಸ್ಪದ ವಹಿವಾಟು ವರದಿಗಳು) ಸಲ್ಲಿಸುವಂತೆ ಕೇಳಿದೆ. ಅನುಮಾನಾಸ್ಪದ ವಹಿವಾಟಿನ ಬಗ್ಗೆ ಎಲ್ಲಾ ಬ್ಯಾಂಕುಗಳು ದೈನಂದಿನ ವರದಿಗಳನ್ನು ಕಳುಹಿಸಬೇಕಾಗುತ್ತದೆ ಎಂದು ಸಿಇಸಿ ರಾಜೀವ್ ಕುಮಾರ್ ಘೋಷಿಸಿದರು. ಹಣದ ಶಕ್ತಿಯ ಪ್ರಭಾವವನ್ನ ನಿಗ್ರಹಿಸಲು, ನ್ಯಾಯಸಮ್ಮತ ಚುನಾವಣೆಗಳನ್ನ ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಕ್ರಮಗಳನ್ನ ತೆಗೆದುಕೊಳ್ಳುತ್ತದೆ ಎಂದು ಕುಮಾರ್ ಹೇಳಿದರು. “ವಿವಿಧ ರಾಜ್ಯಗಳಲ್ಲಿ ವಿಭಿನ್ನ ದುರ್ಬಲತೆಗಳಿವೆ …
Read More »ದ್ವೇಷ ಭಾಷಣ, ಜಾತಿ, ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ
ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಭ್ಯರ್ಥಿಗಳಿಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವಯುತವಾಗಿ ನಡೆದುಕೊಳ್ಳಬೇಕು. ದ್ವೇಷ ಭಾಷಣ, ಶತ್ರುಗಳ ರೀತಿ ವರ್ತಿಸುವಂತಿಲ್ಲ. ಚುನಾವಣೆಯಿಂದ ಶತ್ರುಗಳು ಸ್ನೇಹಿತರಾಗಬಹುದು. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ ಎಂದಿದ್ದಾರೆ. ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಗೆ …
Read More »ಲೋಕಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತದಲ್ಲಿ ಮತದಾನ, ಏಪ್ರಿಲ್ 19 ರಂದು ಆರಂಭ, ಜೂನ್ 4ಕ್ಕೆ ಫಲಿತಾಂಶ
ನವದೆಹಲಿ: ಬಹುನಿರೀಕ್ಷಿತ 18ನೇ ಲೋಕಸಭಾ ಚುನಾವಣೆಯು ಒಟ್ಟು 543 ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್ 19 ರಂದು ಮತದಾನ ಆರಂಭವಾಗಲಿದ್ದು ಜೂನ್ 4ಕ್ಕೆ ಫಲಿತಾಂಶ ಹೊರ ಬೀಳಲಿದೆ. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಯಿತು. ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ. ರಾಷ್ಟ್ರಕ್ಕೆ ನಿಜವಾದ ಹಬ್ಬ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು …
Read More »ದೇಶದಲ್ಲಿ ಇಂದಿನಿಂದ ‘ನೀತಿ ಸಂಹಿತೆ’ ಜಾರಿ, ಏನಿದು.? ಯಾವುದರ ಮೇಲೆ ನಿರ್ಬಂಧ.? ಇಲ್ಲಿದೆ, ಮಾಹಿತಿ
ನವದೆಹಲಿ : ನವದೆಹಲಿ : ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸುತ್ತಿದ್ದು, ಲೋಕಸಭೆ ಚುನಾವಣಾಗೆ ದಿನಾಂಕವನ್ನ ಪ್ರಕಟಿಸಲಿದ್ದಾರೆ. ಇದರೊಂದಿಗೆ, ದೇಶಾದ್ಯಂತ ಮಾದರಿ ನೀತಿ ಸಂಹಿತೆ (MCC) ಸಹ ಜಾರಿಗೆ ಬರಲಿದೆ.ದೇಶದಲ್ಲಿ ನೀತಿ ಸಂಹಿತೆಯ ಇತಿಹಾಸ ಬಹಳ ಹಳೆಯದು. ಇದರ ಮೂಲವನ್ನ 1960ರ ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಗುರುತಿಸಬಹುದು, ಆಗ ಆಡಳಿತವು ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆಯನ್ನ ರೂಪಿಸಲು ಪ್ರಯತ್ನಿಸಿತು. ಚುನಾವಣಾ ಆಯೋಗದ ಪ್ರಕಾರ, …
Read More »ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ನತ್ತ ಬರುತ್ತಿದ್ದಾರೆ: ಡಿ.ಕೆ. ಶಿ
ಬೆಂಗಳೂರು: ‘ಇಷ್ಟು ವರ್ಷಗಳ ಕಾಲ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಮಧ್ಯೆ ಸ್ಪರ್ಧೆ ಇತ್ತು. ಈಗ ಎಚ್.ಡಿ. ದೇವೇಗೌಡರ ಕುಟುಂಬವೇ ಬಿಜೆಪಿ ಸೇರಿರುವುದರಿಂದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ನತ್ತ ಬರುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಕ್ಷೇತ್ರದ ವ್ಯಾಪ್ತಿಯ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಮತ್ತು ಪ್ರಮುಖ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ …
Read More »ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ? ಸೇರಿಸೋದು ಹೇಗೆ? ಇಲ್ಲಿದೆ ವಿವರ
ನವದೆಹಲಿ(ಮಾ.16): 2024 ರ ಲೋಕಸಭಾ ಚುನಾವಣೆಗೆ ದೇಶದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಎಲ್ಲಾ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಸಕ್ರಿಯಗೊಂಡಿವೆ. ಮತದಾನ ಎಂಬುದು ದೇಶದ ಪ್ರಜೆಯ ಮೂಲಭೂತ ಹಕ್ಕು. ಪ್ರತಿಯೊಬ್ಬ ಭಾರತೀಯ ತನ್ನ ಹಕ್ಕು ಚಲಾಯಿಸಬೇಕು.ನಿಮ್ಮ ಹಕ್ಕು ನೀವು ಚಲಾಯಿಸಬೇಕೆಂದರೆ ನಿಮ್ಮ ಹೆಸರು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ದಾಖಲಾಗಿರಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೇ ನೀವು ಚುನಾವಣಾ ಆಯೋಗದ ಮತದಾರರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಪುಲಗಡ್ಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಗಜಾನನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ …
Read More »ಪುನೀತ್ ಹೆಸರಲ್ಲಿ ʻಹೃದಯ ಜ್ಯೋತಿ ಯೋಜನೆ’ ಜಾರಿ
ಬೆಂಗಳೂರು: ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು. ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ …
Read More »ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ನೇಮಕ
ಬೆಳಗಾವಿ : ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರಿಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಇಡಾ ಮಾರ್ಟಿನ್ ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಮರ್ಥವಾಗಿ ನಡೆಸಲು ಸಹಕಾರಿಯಾಗಿದ್ದರು. ಇವರು ಜನಸ್ನೇಹಿ ಪೊಲೀಸ್ ಆಡಳಿತಕ್ಕೆ ಮಾದರಿಯಾದವರು. ಈಗ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ. ಇಡಾ ಮಾರ್ಟಿನ್ ಅವರು 2009 ನೇ ಬ್ಯಾಚ್ ಕರ್ನಾಟಕ ಕೇರಡರನ ಐಪಿಎಸ್ ಅಧಿಕಾರಿಯಾಗಿರುವ ಇಡಾ ಮಾರ್ಟಿನ್ ಸದ್ಯ ನೇಮಕಾತಿ ವಿಭಾಗದಲ್ಲಿ ಡಿಐಜಿಪಿಯಾಗಿ ಕಾರ್ಯ …
Read More »
Laxmi News 24×7