Breaking News

ಪಟಾಕಿ ಅವಘಡ: ಬೆಂಗಳೂರಲ್ಲಿ ಗಾಯಗೊಂಡು 25 ಮಂದಿ

ಬೆಂಗಳೂರು: ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸಲು ನಗರದಲ್ಲಿ ಸಾಕಷ್ಟು ಕ್ರಮ ಕೈಗೊಂಡಿದ್ದರೂ 25 ಪಟಾಕಿ ಅವಘಡ ಪ್ರಕರಣಗಳು ಬೆಳಕಿಗೆ ಬಂದಿದೆ.   ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿಯಿಂದ ಇಲ್ಲಿಯವರೆಗೆ ಏಳು ಜನರು ಪಟಾಕಿ ಸಂಬಂಧಿತ ಗಾಯಗಳ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಗಾಯಾಳುಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಐವರಿಗೆ ಓಪಿಡಿಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇವರಲ್ಲಿ 10 ವರ್ಷದ ಬಾಲಕಿ ಮತ್ತು 18 …

Read More »

ದೇಶದ ಪಟಾಕಿ ಕೇಂದ್ರ ‘ಶಿವಕಾಶಿ’ಗೆ 50 ಕೋಟಿ ರೂಪಾಯಿ ವ್ಯವಹಾರ ನಷ್ಟ: ವರದಿ

ವಿರುದುನಗರ (ತಮಿಳುನಾಡು): ಪಟಾಕಿ ತಯಾರಿಕೆಗೆ ಹೆಸರುವಾಸಿಯಾದ ತಮಿಳುನಾಡಿನ ಶಿವಕಾಶಿ ಈ ಬಾರಿ ಭಾರಿ ವ್ಯವಹಾರ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ 6 ಸಾವಿರ ಕೋಟಿಯಷ್ಟು ಪಟಾಕಿ ಮಾರಾಟವಾಗಿದ್ದರೂ, ಇದು ಕಳೆದ ಬಾರಿಗಿಂತ ಅರ್ಧಕ್ಕಿಂತಲೂ ಕಡಿಮೆಯಾಗಿದೆ. ತಮಿಳುನಾಡಿನ ವಿರುದುನಗರ ಜಿಲ್ಲೆಯ ಶಿವಕಾಶಿ ಇಡೀ ದೇಶಕ್ಕೆ ಪಟಾಕಿ ಸರಬರಾಜು ಮಾಡುವ ಮುಖ್ಯ ಕೇಂದ್ರವಾಗಿದೆ. ಇಲ್ಲಿನ ಪಟಾಕಿಗಳಿಗೆ ಹೆಚ್ಚಿನ ಬೇಡಿಕೆಯಿದೆ. ಹೀಗಾಗಿ ಪ್ರಮುಖ ವ್ಯವಹಾರ ಕೇಂದ್ರವೂ ಆಗಿರುವ ಶಿವಕಾಶಿ ಈ ಬಾರಿಯ …

Read More »

ಹಳೆ ವೈಷಮ್ಯ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲಿ ನಡೆದಿದೆ.

ಬೆಳಗಾವಿ : ಹಳೇ ವೈಷಮ್ಯ ಹಿನ್ನೆಲೆ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್​ ಪಟ್ಟಣದ ಆದಿಜಾಂಬವ ನಗರದ ನಿವಾಸಿ ಶಾನೂರು ಪೂಜಾರಿ (27) ಕೊಲೆಯಾದ ಯುವಕ. ಘಟನೆಯಿಂದ ಕೆರಳಿದ ಮೃತ ಯುವಕನ ಕುಟುಂಬಸ್ಥರು ಅದೇ ಕಾಲೋನಿಯ ಯುವಕರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ, ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 1 ಬೈಕ್, …

Read More »

ಎರಡು ರಾಜ್ಯಗಳ ಚುನಾವಣೆಗೆ ಮತ ಹಾಕುವ ಜನರು: ಇವರಿಗೆ ಸಿಗುತ್ತೆ ಎರಡೆರಡು ಸರ್ಕಾರಗಳ ಸೌಲಭ್ಯ!

ಹೈದರಾಬಾದ್​: ಅಪರೂಪದ ವಿದ್ಯಮಾನವೊಂದರಲ್ಲಿ ತೆಲಂಗಾಣ ಮತ್ತು ಮಹಾರಾಷ್ಟ್ರ ಗಡಿಯಲ್ಲಿರುವ ಕೆಲ ಗ್ರಾಮಗಳ ಮತದಾರರು ಎರಡೂ ರಾಜ್ಯಗಳ ಚುನಾವಣೆಗಳಲ್ಲಿ ಮತದಾನ ಮಾಡುತ್ತಾರೆ. ಇವರಿಗೆ ಇಬ್ಬರು ಸಿಎಂಗಳು, ಎರಡು ಚುನಾವಣಾ ಗುರುತಿನ ಚೀಟಿ, ಎರಡು ಪಡಿತರ ಚೀಟಿ, ಎರಡು ಶಾಲೆಗಳು ಸೇರಿದಂತೆ ಎಲ್ಲವೂ ಇಲ್ಲಿ ಎರಡೆರಡು. ಮಹಾರಾಷ್ಟ್ರ ಮತ್ತು ತೆಲಂಗಾಣ ನಡುವಿನ ಗಡಿ ವಿವಾದ ಬಗೆಹರಿಯದ ಹಿನ್ನೆಲೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಲ್ಲಿನ ಜನರು ಎರಡು ರಾಜ್ಯಗಳ ಸರ್ಕಾರಗಳಿಂದ ಸವಲತ್ತುಗಳನ್ನು ಪಡೆದುಕೊಳ್ಳುತ್ತಾರೆ. ಆಂಧ್ರದ …

Read More »

ನೆದರ್ಲೆಂಡ್ಸ್​​​ ವಿರುದ್ಧ ಭಾರತ 160 ರನ್​ಗಳ ಗೆಲುವು

ಬೆಂಗಳೂರು: ಕಿವೀಸ್ ವಿರುದ್ಧದ ಸೆಮೀಸ್​ ಪಂದ್ಯಕ್ಕೂ ಮುನ್ನ ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತ ತಂಡ ನೆದರ್ಲೆಂಡ್ಸ್​ ಜೊತೆಗೆ ಉತ್ತಮ ಅಭ್ಯಾಸ ಪಂದ್ಯವನ್ನಾಡಿತು. 2023ರ ವಿಶ್ವಕಪ್​ನಲ್ಲಿ ಭಾರತ ತಂಡ ಲೀಗ್​ ಹಂತದಲ್ಲಿ ಒಂದೂ ಸೋಲನ್ನು ಕಾಣದೇ ಸೆಮಿ ಫೈನಲ್​ ಪ್ರವೇಶ ಪಡೆದುಕೊಂಡಿತು. ಬ್ಯಾಟಿಂಗ್​ ಮತ್ತು ಬೌಲಿಂಗ್ ತಂಡ ತನ್ನ ಪ್ರದರ್ಶನವನ್ನು ಹಾಗೇ ಮುಂದುವರೆಸಿದೆ.     ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 4 ವಿಕೆಟ್ ​ನಷ್ಟಕ್ಕೆ 410 ರನ್​ …

Read More »

ನ.15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ: ಬಿ.ವೈ ವಿಜಯೇಂದ್ರ

ತುಮಕೂರು: ಮುಂಬರುವ ಬುಧವಾರ 15 ನೇ ತಾರೀಖಿನಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕಾರ ಮಾಡುತ್ತಿದ್ದೇನೆ ಎಂದು ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರಾದ ಜೆ.ಪಿ ನಡ್ಡಾ, ಅಮಿತ್ ಶಾ, ಸಂತೋಷ್ ಸೇರಿದಂತೆ ಎಲ್ಲರೂ ಚರ್ಚೆ ಮಾಡಿ ರಾಜ್ಯಾಧ್ಯಕ್ಷನನ್ನಾಗಿ …

Read More »

ಪೊಲೀಸರ ಮೇಲೆ ಹಲ್ಲೆ 10 ಜನರ ಬಂಧನ

ಕಾರವಾರ (ಉತ್ತರ ಕನ್ನಡ): ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಗರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಶನಿವಾರ ರಾತ್ರಿ ಕಾರವಾರ ನಗರದ ಬೈತಖೋಲ್​​ನಲ್ಲಿ ಬೀಟ್ ಕರ್ತವ್ಯದಲ್ಲಿದ್ದ ನಗರ ಠಾಣೆಯ ಕಾನ್ಸ್ಟೇಬಲ್​ಗಳಾದ ಗಣೇಶ್ ಕುರಿಯವರ ಹಾಗೂ ಹರೀಶ್ ಗವಾಣಿಕರ ಎಂಬುವರ ಮೇಲೆ ಹಲ್ಲೆ ನಡೆದಿದೆ. ಬೈತಖೋಲ್ ಭೂದೇವಿ …

Read More »

ಎನ್​ಡಿಆರ್​ಎಫ್​, ಎಸ್​​ಡಿಆರ್​ಎಫ್​ ನಿಯಮಗಳ ಪ್ರಕಾರ ರೈತರ ಖಾತೆಗೆ ಹಣ ಹಾಕಿ: ಹಾವೇರಿ ರೈತರ ಆಗ್ರಹ

ಹಾವೇರಿ: ಜಿಲ್ಲೆಯು ಹಿಂದೆಂದೂ ಕಾಣರಿಯದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿವೆ ಎಂದು ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಆರೋಪಿಸಿದೆ. ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, “ಹಾವೇರಿ ಕೃಷಿ ಪ್ರಧಾನ ಜಿಲ್ಲೆ, ಆದ್ರೆ ಸತತ ಮೂರು ವರ್ಷ ಅತಿವೃಷ್ಟಿ ಇತ್ತು. ಈ ವರ್ಷ ಬರಗಾಲ ಉಂಟಾಗಿದೆ, …

Read More »

ಪ್ರಿಯಾಂಕಾ ಉಪೇಂದ್ರ ಹುಟ್ಟುಹಬ್ಬ: ಡ್ರೋನ್​ ಮೂಲಕ ರಿವೀಲ್ ಆಯ್ತು ‘ಕ್ಯಾಪ್ಚರ್’ ಪೋಸ್ಟರ್

‘ಕ್ಯಾಪ್ಚರ್​’ ಸಿನಿಮಾ ತಂಡ ಪ್ರಿಯಾಂಕಾ ಉಪೇಂದ್ರ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು. ಕನ್ನಡ ಚಿತ್ರರಂಗದ ನಟಿ ಪ್ರಿಯಾಂಕಾ ಉಪೇಂದ್ರ ಅವರಿಗಿಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ರಿಯಲ್​ ಸ್ಟಾರ್​ ಪತ್ನಿಗೆ ಸ್ನೇಹಿತರು, ಅಭಿಮಾನಿಗಳು, ಆತ್ಮೀಯರು ಹಾಗೂ ಸ್ಯಾಂಡಲ್​​ವುಡ್​​ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರುತ್ತಿದ್ದಾರೆ. ಇಂದು ಪ್ರಿಯಾಂಕಾ ಅವರು ಅಭಿಮಾನಿಗಳು ಹಾಗೂ ಕುಟುಂಬಸ್ಥರ ಜೊತೆ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಲ್ಲದೇ, ‘ಕ್ಯಾಪ್ಚರ್​’ ಸಿನಿಮಾ ತಂಡ ಪ್ರಿಯಾಂಕಾ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ …

Read More »

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ:H.D.K.

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ ಬೆಂಗಳೂರು: “ಕರ್ನಾಟಕದಲ್ಲಿ ಕಾಂಗ್ರೆಸ್ ತಂದಿರುವ ಪಂಚ ಗ್ಯಾರಂಟಿಗಳನ್ನು ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಜನತೆ ನಂಬಬಾರದು. ಈ ಗ್ಯಾರಂಟಿಗಳಿಗೆ ಯಾವ ಕಾರಣಕ್ಕೂ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ” ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತೆಲಂಗಾಣದಲ್ಲಿ ನಮ್ಮ ಟೆಂಪರರಿ ಚೀಫ್ ಮಿನಿಸ್ಟರ್, ಡೂಪ್ಲಿಕೇಟ್ ಚೀಫ್ ಮಿನಿಸ್ಟರ್​ಗಳು ಹಾಗೂ …

Read More »