ಬೆಂಗಳೂರು: ದುಬಾರಿ ಬೆಂಗಳೂರು ದುನಿಯಾದಲ್ಲಿ ಬಾಡಿಗೆ ಮನೆ ಪಡೆದು ಜೀವನ ಸಾಗಿಸುವುದೇ ಕಷ್ಟ. ಅಂಥದ್ದರಲ್ಲಿ ಸ್ವಂತ ಮನೆಯನ್ನು ತೆಗೆದುಕೊಳ್ಳುವುದು ಬಡ ಹಾಗೂ ಮಧ್ಯಮ ವರ್ಗದವರಿಗೆ ಕನಸಿನ ಮಾತೇ ಸರಿ. ಇಂಥವರಿಗಾಗಿಯೇ ಸರ್ಕಾರ ಈಗ ಸ್ವಂತ ಮನೆಯನ್ನು ಕಡಿಮೆ ವೆಚ್ಚದಲ್ಲಿ ನೀಡಲು ಮುಂದಾಗಿದ್ದು, 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ (Housing Scheme) ಚಾಲನೆ ನೀಡಿದೆ. ಈ ಯೋಜನೆಗೆ ಈಗ ನೋಂದಣಿ ಪ್ರಕ್ರಿಯೆಯೂ ಆರಂಭವಾಗಿದೆ. ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹತೆ ಉಳ್ಳವರು …
Read More »ವರ್ಷದ ಮೊದಲ ದಿನವೇ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು: ಹೊಸ ವರ್ಷ (New Year Celebration) ಎಂದರೆ ಎಲ್ಲರೂ ಹೊಸ ಹೊಸ ಕನಸುಗಳನ್ನು ಹೊತ್ತು ಹೊಸ ಬದುಕಿಗೆ ಅಡಿ ಇಡುವ ದಿನ. ಆದರೆ ಇಲ್ಲೊಬ್ಬಳು ಹುಡುಗಿ ತನ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಳ್ಳುವ ಮೂಲಕ ತನ್ನ ಎಲ್ಲ ಕನಸುಗಳನ್ನು ಕೊಂದು ಹಾಕಿದ್ದಾಳೆ. ಬೆಂಗಳೂರಿನ ಸುಧಾಮ ನಗರದಲ್ಲಿ (Bangalore News) ಈ ಘಟನೆ ನಡೆದಿದ್ದು, ವರ್ಷಿಣಿ (21) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಈಕೆ ತನ್ನ ಮನೆಯಲ್ಲಿ ಫ್ಯಾನಿಗೆ …
Read More »ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು :ಸಂತೋಷ ಜಾರಕಿಹೊಳಿ
ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು :ಸಂತೋಷ ಜಾರಕಿಹೊಳಿ
Read More »ಶಕ್ತಿ ಯೋಜನೆ ಎಫೆಕ್ಟ್, ಬಸ್ನಲ್ಲಿ ಮಹಿಳೆಯರ ಫೈಟ್
ಹುಬ್ಬಳ್ಳಿ, ಡಿ.28: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್(Bus)ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ ಮಾಡಿದಹಿನ್ನಲೆ ಸೀಟ್ಗಾಗಿಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್ವೊಂದರಲ್ಲಿ ಯಾವುದೇ ಸೀಟ್ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ …
Read More »ಹೊಸ ವರ್ಷಾಚರಣೆಗೆ ಸಜ್ಜಾದ ಹುಬ್ಬಳ್ಳಿ: ಮೋಜು ಮಸ್ತಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ
ಹುಬ್ಬಳ್ಳಿ, ಡಿಸೆಂಬರ್ 31: ಕೊರೊನಾ ಭೀತಿಯ ನಡುವೆಯೂ ನಗರದ ಜನರು ಅದ್ಧೂರಿಯಾಗಿಹೊಸ ವರ್ಷಾಚರಣೆಗೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯ (Hubballi) ಅನೇಕ ಹೋಟೆಲ್ (Hotel) ಮತ್ತು ರೆಸ್ಟೋರೆಂಟ್ಗಳು (Restaurant) ವಿವಿಧ ಥೀಮ್ಗಳೊಂದಿಗೆ ಸ್ಮರಣೀಯ ಈವೆಂಟ್ಗಳನ್ನು ಆಯೋಜಿಸುತ್ತಿವೆ. ಮತ್ತು ಈವೆಂಟ್ಗಳಲ್ಲಿ ಪಾಲ್ಗೊಳ್ಳುವವರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ಕೆಲವು ಹೋಟೆಲ್ಗಳು ಯಾವುದೇ ಅದ್ಧೂರಿ ಕಾರ್ಯಕ್ರಮಗಳನ್ನು ನಡೆಸದಿರಲು ನಿರ್ಧರಿಸಿವೆ. ಹೊಸ ವರ್ಷಾಚರಣೆಗೆ ನಗರ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾತ್ರಿ 10 ಗಂಟೆಯ ನಂತರ ಯಾವುದೇ …
Read More »ಭಾರತ ದೇಶ ಆರ್ಥಿಕತೆಯಲ್ಲಿ ವಿಶ್ವದ ಟಾಪ್ ಮೂರನೇ ರಾಷ್ಟ್ರವಾಗಲಿದೆ.: ಪ್ರಲ್ಹಾದ ಜೋಶಿ
ಹುಬ್ಬಳ್ಳಿ, ಡಿಸೆಂಬರ್ 31: ಆರ್ಥಿಕ ಪ್ರಗತಿಯಲ್ಲಿ ಭಾರತ ವಿಶ್ವದ ಟಾಪ್ ಮೂರನೇ ಸ್ಥಾನಕ್ಕೆ ಬರೋದು ಸನ್ನಿಹಿತವಾಗಿದೆ ಎಂಬ ವಿಶ್ವಾಸವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷದಲ್ಲಿ (New Year) ಭಾರತ ದೇಶ ಆರ್ಥಿಕತೆಯಲ್ಲಿ ವಿಶ್ವದ ಟಾಪ್ ಮೂರನೇ ರಾಷ್ಟ್ರವಾಗಲಿದೆ. ಈಗಾಗಲೇ ನಾವು ಟಾಪ್ ಐದನೇ ಸ್ಥಾನದಲ್ಲಿದ್ದೇವೆ. ಹೊಸ ವರ್ಷದಲ್ಲಿ …
Read More »ಕಾಟೇರ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಸಾಥ್ ನೀಡಿದ್ದಾರೆ. ದರ್ಶನ್ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್ ಜೋಶಿ ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್ ಫ್ಯಾನ್ಸ್ ಖುಷಿ ಆಗಿದ್ದಾರೆ. ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ‘ಕಾಟೇರ‘ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್ (Darshan) ಅವರ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಅವರು …
Read More »ಹಣ ಡಬಲ್ ಮಾಡಿ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್ ಬಲೆಗೆ ಬಿದ್ದ 6 ಜನರ ಗ್ಯಾಂಗ್
ಬೆಳಗಾವಿ, ಡಿ.29: ಹಣ ಡಬಲ್ ಮಾಡಿ ಕೊಡುವುದಾಗಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್ನ್ನು ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್(Gokak)ನವಿದ್ಯಾನಗರದಲ್ಲಿವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್ನಲ್ಲಿ ವಂಚನೆ ಮಾಡಿದ್ದರು. ಈ ಹಿನ್ನಲೆ ಸಿದ್ದನಗೌಡ ಅವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಖದೀಮರ ಗ್ಯಾಂಗ್ನ್ನು ಅರೆಸ್ಟ್ ಮಾಡಿದ್ದಾರೆ. ಘಟನೆ ವಿವರ ಕೊಲ್ಹಾಪುರದಿಂದ ಬಸ್ನಲ್ಲಿ ಬರುವಾಗ ಸಿದ್ದನಗೌಡರಿಗೆ …
Read More »ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ
ಬೆಳಗಾವಿ, : ಬೆಳಗಾವಿ ( Belagavi ) ತಾಲೂಕಿನ ವಂಟಮೂರಿ ಗ್ರಾಮದಲ್ಲಿಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ( Belagavi City Police ) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು. ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. …
Read More »ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ:
ಭಕ್ತರಿಗೆ ವ್ಯವಸ್ಥೆ ಮಾಡದ ಕೇರಳ ಸರ್ಕಾರ: ಮುತಾಲಿಕ್ ಕಿಡಿ ಅಯ್ಯಪ್ಪ ದೇವಸ್ಥಾನದಲ್ಲಿ ಮೂರು ಸಾವಿರ ಕೋಟಿ ರೂಗಿಂತಲೂ ಆದಾಯ ಜಾಸ್ತಿ ಇದೆ. ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವಾಹನಕ್ಕೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ. ಐದು ಕೋಟಿ ಭಕ್ತರಿಗೆ ಅನೂಕೂಲವಾಗುವಂತಹ ಸೌಕರ್ಯ ಒದಗಿಸಿ ಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ …
Read More »
Laxmi News 24×7