Breaking News

ಶೀಘ್ರದಲ್ಲೇ ಹಿಜಾಬ್ ನಿಷೇಧ ವಾಪಸ್‌? ಸಿದ್ದರಾಮಯ್ಯ

ಮೈಸೂರು: ವಿರೋಧದ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್‌ (Hijab Row‌) ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಊಟ, ಉಡುಪು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳಲು ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.   ನಂಜನಗೂಡು ತಾಲೂಕಿ‌ನ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ …

Read More »

ಮೋಹನ್ ಕುಮಾರ್‌ ದಾನಪ್ಪರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಸಚಿವ ರಹೀಂ ಖಾನ್

ಬಳ್ಳಾರಿ: ದೇಶದ ಯುವಕರು ಸೇನೆ (Army) ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಕಾರ್ಗಿಲ್‌ನಲ್ಲಿ (Kargil) ಮ್ಯಾರಥಾನ್ (Marathon) ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲ ಮೋಹನ್ ಕುಮಾರ್ ದಾನಪ್ಪ ಅವರಿಗೆ ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವ ರಹೀಂ ಖಾನ್ ಅವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ.   ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಕರ್ನಾಟಕ …

Read More »

ರಾಕಿಂಗ್ ಸ್ಟಾರ್ ಯಶ್ ಅಭಿನಯದ ದಕ್ಷಿಣ ಭಾರತದ ಯಶಸ್ವಿ ಚಿತ್ರ ಯಾವುದು ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 14 ಏಪ್ರಿಲ್ 2022 ರಲ್ಲಿ ತೆರೆ ಕಂಡಿತು. ಕೆಜಿಎಫ್-2 ದಕ್ಷಿಣ ಭಾರತದ ಯಶಸ್ವಿ ಚಿತ್ರವಾಗಿ ಬಿಗ್ ಸಕ್ಸಸ್ ಕಂಡಿತ್ತು. 100 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಕೆಜಿಎಫ್ ಅಧ್ಯಾಯ 2 ಇದುವರೆಗಿನ ಅತ್ಯಂತ ದುಬಾರಿ ಕನ್ನಡ ಚಿತ್ರವಾಗಿದೆ . ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳಿದ್ದು, ಭುವನ್ ಗೌಡ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ ಮತ್ತು ರವಿ ಬಸ್ರೂರ್ ಚಿತ್ರ ಸಂಗೀತ ಮತ್ತು …

Read More »

ಕೌಟುಂಬಿಕ ಕಲಹ ಅಣ್ಣನಿಂದ ತಮ್ಮನ ಹತ್ಯೆ

ಹುಬ್ಬಳ್ಳಿ: ಒಡಹುಟ್ಟಿದ ಅಣ್ಣನೇ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಪವನ್ ಕಟವಾಟೆ (30) ಎಂದು ಗುರುತಿಸಲಾಗಿದೆ. ರಾಜು ಕೊಲೆಗೈದ ಆರೋಪಿ. ಪವನ್ ಮನೆ ಬಿಟ್ಟು ಹುಬ್ಬಳ್ಳಿಯ ವಿಜಯನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ. ಹೀಗಿದ್ದರೂ ಮದ್ಯ ಸೇವಿಸಿ ಅಣ್ಣನ ಜೊತೆ ಜಗಳವಾಡುತ್ತಿದ್ದ ಎಂದು ತಿಳಿದುಬಂದಿದೆ. ಬುಧವಾರ ಪವನ್​ ಅಣ್ಣನ ಮನೆಗೆ ಬಂದು ಕ್ಯಾತೆ ತೆಗೆದಿದ್ದಾನೆ. ಇದರಿಂದ ಕೋಪಗೊಂಡ ರಾಜು, ತಡರಾತ್ರಿ …

Read More »

ಜನವರಿ ಅಂತ್ಯದೊಳಗೆ ‘ಬಿಜೆಪಿ-ಜೆಡಿಎಸ್’ ಸೀಟು ಹಂಚಿಕೆ ಫೈನಲ್ – ಮಾಜಿ ಸಿಎಂ HDK

ನವದೆಹಲಿ: ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು.   ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ …

Read More »

ಗ್ರಾಹಕರ ಗಮನಕ್ಕೆ: ಇಲ್ಲಿದೆ ʻಜನವರಿʼ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿ

ನವದೆಹಲಿ: ದೇಶದಲ್ಲಿ ಹಣಕಾಸಿನ ವಹಿವಾಟುಗಳು ಮತ್ತು ಸೇವೆಗಳ ಲಯವನ್ನು ರೂಪಿಸುವಲ್ಲಿ ಬ್ಯಾಂಕ್ ರಜಾದಿನಗಳು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI), ಸಾಮಾನ್ಯವಾಗಿ ಸೆಂಟ್ರಲ್ ಬ್ಯಾಂಕ್ ಎಂದು ಕರೆಯಲ್ಪಡುತ್ತದೆ, ದೇಶಾದ್ಯಂತ ಎಲ್ಲಾ ಬ್ಯಾಂಕುಗಳು ಆಚರಿಸುವ ರಾಷ್ಟ್ರೀಯ ಮತ್ತು ಸರ್ಕಾರಿ ರಜಾದಿನಗಳ ವೇಳಾಪಟ್ಟಿಯನ್ನು ಸ್ಥಾಪಿಸುತ್ತದೆ.   ಭಾರತದಲ್ಲಿ ಸಹಕಾರಿ ಬ್ಯಾಂಕ್‌ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು (RRB), ಸಣ್ಣ ಹಣಕಾಸು ಬ್ಯಾಂಕ್‌ಗಳು (SMB), ಸ್ಥಳೀಯ ಪ್ರದೇಶ ಬ್ಯಾಂಕ್‌ಗಳು (LAB) ಮತ್ತು …

Read More »

ಬಳ್ಳಾರಿಯ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢ

ಬಳ್ಳಾರಿ: ಜಿಲ್ಲೆಯಲ್ಲಿರುವಂತ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಕಾರ್ಖಾನೆಯ ಇತರೆ ಸಿಬ್ಬಂದಿಗಳಿಗೆ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಬಳ್ಳಾರಿ ತಾಲೂಕಿನ ತೋರಣಗಲ್ ನಲ್ಲಿರುವಂತ ಜಿಂದಾಲ್ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅವರನ್ನು ಹೋಂ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಂದಾಲ್ ಕಾರ್ಖಾನೆಯಲ್ಲಿ 35 ಸಾವಿರ ಉದ್ಯೋಗಿಗಳಿದ್ದಾರೆ. ಇವರಲ್ಲಿ ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಆರೋಗ್ಯ ಇಲಾಖೆಯಿಂದ ಕೊರೋನಾ ಪರೀಕ್ಷೆ ಮಾಡೋದಕ್ಕೆ …

Read More »

ಇದು ಸ’ಮಜಾವಾದಿ’ ಸಿದ್ದರಾಮಯ್ಯನವರ ‘ಸಾಮಾನ್ಯ’ ಜೀವನ: ಸಿದ್ಧುಗೆ ಶಾಸಕ ಯತ್ನಾಳ್ ಟಾಂಗ್

ಬೆಂಗಳೂರು: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರನ್ನು ಭೇಟಿಯಾಗಿ ಬರ ಪರಿಹಾರಕ್ಕೆ ಮನವಿ ಮಾಡಿದ್ದರು. ಹೀಗೆ ಅವರು ತೆರಳಿದ್ದು, ವಾಪಾಸ್ ಬಂದಿದ್ದು ಮಾತ್ರ ಐಶಾರಾಮಿ ವಿಮಾನದಲ್ಲಿ ಆಗಿದೆ. ಇದನ್ನು ಸ’ಮಜಾವಾದಿ’ ಸಿದ್ಧರಾಮಯ್ಯನವರ ಸಾಮಾನ್ಯ ಜೀವನ ನೋಡಿ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಜೊತೆಗೆ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ಸಾಗುತ್ತಿರೋ …

Read More »

ನಾಳೆ ಬೆಂಗಳೂರಿನ ‘ಫ್ರೀಡಂ ಪಾರ್ಕ್’ನಲ್ಲಿ ‘ರಾಷ್ಟ್ರೀಯ ರೈತರ ಮಹಾ ಅಧಿವೇಶನ’

ಬೆಂಗಳೂರು: ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ರೈತರ ಮಹಾ ಅಧಿವೇಶನವನ್ನು ನಡೆಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ)ದ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ ಸಂಯುಕ್ತ ಕಿಸಾನ್ ಮೋರ್ಚ ರಾಜಕೀಯತರ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ …

Read More »

ಅಂಗವಿಕಲʼರಿಗೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದಿರಿ: ರಾಜಕೀಯ ಪಕ್ಷಗಳಿಗೆ ʻECIʼಯಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಬಳಸುವ ಪದಗಳ ಬಗ್ಗೆ ಭಾರತೀಯ ಚುನಾವಣಾ ಆಯೋಗವು (ECI) ರಾಜಕೀಯ ಪಕ್ಷಗಳು ಮತ್ತು ಅವರ ನಾಯಕರಿಗೆ ಮಾರ್ಗಸೂಚಿಗಳನ್ನು ನೀಡಿದೆ. ಕಟ್ಟುನಿಟ್ಟಿನ ನಿಲುವು ತಳೆದಿರುವ ಆಯೋಗವು ಎಲ್ಲಾ ಪಕ್ಷಗಳಿಗೆ ಅವಹೇಳನಕಾರಿ ಪದಗಳನ್ನು ಬಳಸದಂತೆ ಸೂಚನೆ ನೀಡಿದೆ. ವರದಿಯ ಪ್ರಕಾರ, ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ, ವಿಕಲಾಂಗ ವ್ಯಕ್ತಿಗಳ ಹಕ್ಕುಗಳ ಕಾಯ್ದೆ, 2016 ರ ಸೆಕ್ಷನ್ 92 ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು …

Read More »