Breaking News

ಜಮೀರ್ ದರ್ಗಾವಾಲೆ ಕೊಲೆ ಪ್ರಕರಣ: ಪ್ರಮುಖ ಆರೋಪಿ ಸೇರಿ ಐವರು ಬಂಧನ; ಮೀಟರ್ ಬಡ್ಡಿ ದಂಧೆಯೇ ಹತ್ಯೆಗೆ ಕಾರಣ?

ಮುಂಡಗೋಡ ಪಟ್ಟಣದಲ್ಲಿ ನಡೆದ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದು, ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಬಂಧಿತರಿಂದ ಎರಡು ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.ಬಂಧಿತರನ್ನು ಮಂಜುನಾಥ ನಾಗೇಂದ್ರ ಕಾಜಗಾರ (35), ಶ್ರೀಕಾಂತ್ ಕಿರಣ್ಣನವರ್ (22), ಮಲ್ಲಿಕಾರ್ಜುನ ಬಡಶೆಟ್ಟಿ (22), ಮಂಜುನಾಥ ವಿಷ್ಣು ಬೆಳಗಾಂವ (20) ಹಾಗೂ …

Read More »

ಪತ್ನಿಯನ್ನು ಹತ್ಯೆ ಮಾಡಿ ಮರದ ಬಾಕ್ಸ್‌ಗೆ ಶವ ತುಂಬಿ ಸಿಮೆಂಟ್‌ನಲ್ಲಿ ಸೀಲ್‌ ಮಾಡಿದ ಪತಿ , ಪೊಲೀಸರ ಮುಂದೆ ಹೈಡ್ರಾಮಾ

ಗುಜರಾತ್‌: ಪತ್ನಿ ಯನ್ನು ಕ್ರೂರವಾಗಿ ಕೊಂದು ಕಟ್ಟಿಗೆಯ ಬಾಕ್ಸ್ ನಲ್ಲಿ ತುಂಬಿ ಅದನ್ನು ಸಂಪೂರ್ಣವಾಗಿ ಸಿಮೆಂಟ್ ನಿಂದ ಪ್ಯಾಕ್ ಮಾಡಿ ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ ಪತಿಯ ಖತರ್ನಾಕ್‌ ಕೃತ್ಯ ಪೊಲೀಸರು ಬಯಲು ಮಾಡಿದ್ದಾರೆ. ಈ ಘಟನೆ ಗುಜರಾತ್ ನಲ್ಲಿ ನಡೆದಿದ್ದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ಮರದ ಬಾಕ್ಸ್‌ಗೆ ಶವ ತುಂಬಿ ಸಿಮೆಂಟ್‌ನಲ್ಲಿ ಸೀಲ್‌ ಮಾಡಿ, ನಂತರ ಠಾಣೆಗೆ ತೆರಳಿ ನಾಪತ್ತೆ ನಾಟಕವಾಡಿದ್ದಾನೆ , ಪೊಲೀಸರಿಗೆ ಅದೇಕೋ ಆತನ …

Read More »

ಸಿದ್ದರಾಮಯ್ಯ 15 ದಿನಗಳ ನಂತರ ಸಿಎಂ ಆಗಿ ಇರಲ್ಲ: ಸಂಸದ ಗೋವಿಂದ ಕಾರಜೋಳ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಈ ನಡುವೆ, ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು, ಇಂದು ಬೆಂಗಳೂರಿನಲ್ಲಿ ಮಾತನಾಡಿ “15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಕುರ್ಚಿಗಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಸಿದ್ದರಾಮಯ್ಯರ ಕುರ್ಚಿ ಫಲಿತಾಂಶವು ಪ್ರಕಟವಾಗಲಿದೆ” …

Read More »

ಸಹೋದರಿ ಸಾವಿನ ಸರ್ಟಿಫಿಕೇಟ್ ‌ಕೇಳಿದ ಬ್ಯಾಂಕ್ ಸಿಬ್ಬಂದಿ ; ಅಸ್ಥಿಪಂಜರದ ಜೊತೆ ಬಂದ ಸಹೋದರ

ತನ್ನ ಮೃತ ಸಹೋದರಿಯ ಹೆಸರಿನಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಹಿಂಪಡೆಯಲು ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬ ಆಕೆಯ ಅಸ್ಥಿಪಂಜರವನ್ನು ಬ್ಯಾಂಕಿಗೆ ತಂದಿರುವ ವಿಚಿತ್ರ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಪಟಾನಾ ಬ್ಲಾಕ್‌ನಲ್ಲಿರುವ ಒಡಿಶಾ ಗ್ರಾಮೀಣ ಬ್ಯಾಂಕಿನ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ. ಆ ವ್ಯಕ್ತಿಯನ್ನು ಡಯಾನಾಲಿ ಗ್ರಾಮದ ಜೀತು ಮುಂಡಾ (50) ಎಂದು ಗುರುತಿಸಲಾಗಿದೆ. ಈತ ಜನವರಿ 26, 2026 ರಂದು ಮೃತಪಟ್ಟಿದ್ದ ತನ್ನ ಸಹೋದರಿ ಕಲ್ರಾ ಮುಂಡಾ (56) ಅವರ ಬ್ಯಾಂಕ್ …

Read More »

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

ಬೆಂಗಳೂರು: ಮೇ 15ರ ಒಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ ಅಂತ ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಆಗಲೇಬೇಕು. ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ವಿ. ಅವರು ನಮಗೆ ಭರವಸೆ ನೀಡಿದ್ದಾರೆ. ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟು ಹೊಸಬರನ್ನು ಸೇರಿಸಬೇಕು. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಆಗಲೇಬೇಕು. ಮಂತ್ರಿ ಸ್ಥಾನ …

Read More »

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ  ಜಿಲ್ಲೆಯ ಗುರುಮಠಕಲ್  ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ. ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

ನವದೆಹಲಿ: ಪೆಟ್ರೋಲ್  ಮತ್ತು ಡೀಸೆಲ್‌ನಂತಹ  ಪಳೆಯುಳಿಕೆ ಇಂಧನಗಳಿಂದ ಕಾರ್ಯನಿರ್ವಹಿಸುವ ವಾಹನಗಳಿಗೆ ದೀರ್ಘಾವಧಿಯಲ್ಲಿ ಭವಿಷ್ಯವಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ಹೇಳಿದ್ದಾರೆ. ಆಟೋಮೊಬೈಲ್ ಉದ್ಯಮವು ಶುದ್ಧ ಇಂಧನಗಳತ್ತ ಪರಿವರ್ತನೆಗೊಳ್ಳಲು ಕೆಲಸ ಮಾಡಬೇಕು. ಈ ಬದಲಾವಣೆಯು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ. ಜೈವಿಕ ಇಂಧನಗಳು, ಸಿಎನ್‌ಜಿ, ಎಲ್‌ಎನ್‌ಜಿ ಮತ್ತು ವಿದ್ಯುತ್ ಪವರ್‌ಟ್ರೇನ್‌ಗಳಂತಹ ಶುದ್ಧ ಇಂಧನ ಪರ್ಯಾಯಗಳ ಕಡೆಗೆ ಪರಿವರ್ತನೆಗೊಳ್ಳುವ ಅಗತ್ಯವಿದೆ. ಆಮದು, …

Read More »

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

ಬೆಂಗಳೂರು: ಜಿಬಿಎ  ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್  ಕಾನೂನು ಘಟಕದಿಂದ ದೂರು ನೀಡಲಾಗಿದೆ. ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ್ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದ್ದು, ಜಿಬಿಎ ಚುನಾವಣೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾರಿಗೆ ಮನವಿ ಮಾಡಿದ್ದಾರೆ. ಬಳಿಕ ಮಾತನಾಡಿದ ರಂಗನಾಥ್, ಕೋರ್ಟ್ ಆದೇಶ ಇದ್ದರೂ ಕೂಡಾ ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಜಿಬಿಎ ಚುನಾವಣೆ ಮುಂದೂಡಿಕೆ ಮಾಡುತ್ತಿದೆ. ಬೆಂಗಳೂರು ಜನರ ಕಷ್ಟ ಕೇಳುವವರಿಲ್ಲ. ಸ್ಥಳೀಯ ಸಂಸ್ಥೆಯಲ್ಲಿ …

Read More »

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.17ರಿಂದ ಶೇ.15ಕ್ಕೆ ಸೀಮಿತಗೊಳಿಸಿ ಒಳಮೀಸಲಾತಿ ಜಾರಿಗೊಳಿಸಲಾಗಿದೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್‌ಸಿ 101 ಉಪಜಾತಿಗಳಿಗೆ ಸರ್ಕಾರ ಒಳಮೀಸಲಾತಿ ಹಂಚಿಕೆ ಮಾಡಿತ್ತು. ಈ ಕೂಡಲೇ 56,432 ಹುದ್ದೆಗಳಿಗೆ ನೇರ ನೇಮಕಾತಿ ಕೈಗೊಳ್ಳಲು ಕ್ರಮ ವಹಿಸುವಂತೆ ನೇಮಕಾತಿ ಪ್ರಾಧಿಕಾರ, ಇಲಾಖೆಗಳಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಹೊರಡಿಸಿದ ನೇಮಕಾತಿ ಆದೇಶಗಳನ್ನು ಹಿಂಪಡೆದು ಹೊಸ ಅಧಿಸೂಚನೆಗಳನ್ನು …

Read More »

ಬಾಗಲಕೋಟೆ: ಬಾವಿಗೆ ಬಿದ್ದು ವ್ಯಕ್ತಿ ದಾರುಣ ಸಾವು – ಗಿಡ ಕತ್ತರಿಸುವಾಗ ತಪ್ಪಿದ ಆಯ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ದುರದೃಷ್ಟಕರ ಘಟನೆಯೊಂದು ನಡೆದಿದೆ. ಬಾವಿಯ ಪಕ್ಕದಲ್ಲಿದ್ದ ಗಿಡವನ್ನು ಕತ್ತರಿಸುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದವರು ಮೃತದೇಹವನ್ನು ಹೊರತೆಗೆದಿದ್ದು, ಸ್ಥಳದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಬಾದಾಮಿ ತಾಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ಸೋಮಲಿಂಗಪ್ಪ ದ್ಯಾಮಣ್ಣವರ್ (50) ಎಂಬವರು ಬಾವಿಗೆ ಬಿದ್ದು ಸಾವನ್ನಪ್ಪಿದ ದುರ್ದೈವಿ. ಸೋಮಲಿಂಗಪ್ಪ ಅವರು ಆಳವಾದ ಬಾವಿಯ ಪಕ್ಕದಲ್ಲಿದ್ದ ಗಿಡವನ್ನು ಕತ್ತರಿಸಲು ಪ್ರಯತ್ನಿಸುತ್ತಿದ್ದಾಗ, ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ವಿಷಯ …

Read More »