Breaking News

ಸ್ಮಶಾನದಲ್ಲಿ ಸಮಾಧಿ ಮೇಲೆ ಕುಳಿತು ಕಳ್ಳೇಪುರಿ ತಿನ್ನುತ್ತಾ, ರಂಗಗೀತೆ: ಹುಲಿಕಲ್ ನಟರಾಜ್‌ ನೇತೃತ್ವದಲ್ಲಿ ಮೌಢ್ಯಕ್ಕೆ ಸೆಡ್ಡು

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಚಂದ್ರಗ್ರಹಣ ಸಮಯದಲ್ಲಿ ಸ್ಮಶಾನದಲ್ಲಿರುವ ಸಮಾಧಿಗಳ ಮೇಲೆ ಕುಳಿತು ಕಳ್ಳೇಪುರಿ ತಿನ್ನುತ್ತಾ, ರಂಗಗೀತೆಗಳನ್ನು ಹಾಡುವ ಮೂಲಕ ಜನರು ಮೌಢ್ಯತೆಗೆ ಸೆಡ್ಡು ಹೊಡೆದ ಘಟನೆ ದೇವನಹಳ್ಳಿಯ ದೊರೆಕಾವಲು ಗ್ರಾಮದಲ್ಲಿ ನಡೆದಿದೆ. ಪವಾಡ ಭಂಜಕ ಖ್ಯಾತಿಯ ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಗ್ರಾಮದ ಸ್ಮಶಾನದಲ್ಲಿ ಸೇರಿದ ಜನರು, ಗ್ರಹಣ ಸಂದರ್ಭದಲ್ಲಿ ಪ್ರಕೃತಿಯಲ್ಲಿ ನಡೆಯುವ ಕೌತುಕ ಕಣ್ತುಂಬಿಕೊಂಡರು. ಚಲನೆಯ ಕಾರಣದಿಂದ ನೆರಳುಬೆಳಕಿನ ಆಟದಲ್ಲಿ ಗ್ರಹಣಗಳು ಸಂಭವಿಸುತ್ತವೆ. ಇದು ಪ್ರಕೃತಿಯಲ್ಲಿ ನಡೆಯುವ ಸಹಜ ಪ್ರಕ್ರಿಯೆ. ನಾವು …

Read More »

ವಿಧಾನ ಪರಿಷತ್ ಚುನಾವಣೆ: 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ಕರ್ನಾಟಕ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಎರಡು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಅಭ್ಯರ್ಥಿಗಳಾಗಿ ರಾಮೋಜಿ ಗೌಡ, ಪುಟ್ಟಣ್ಣ, ಕೆ.ಕೆ.ಮಂಜುನಾಥ್, ಡಿ.ಟಿ.ಶ್ರೀನಿವಾಸ್, ಡಾ.ಚಂದ್ರಶೇಖರ್ ಪಾಟೀಲ್ ಹೆಸರುಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ಒಪ್ಪಿಗೆ ಸೂಚಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಐವರು ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, …

Read More »

ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ: ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟ​ ಪುನೀತ್​ ರಾಜ್​ಕುಮಾರ್​ ಅಕಾಲಿಕ ಸಾವು ಸಂಭವಿಸಿ ಇಂದಿಗೆ ಎರಡು ವರ್ಷವಾಗುತ್ತಿದೆ. ಸಿನಿಪ್ರಿಯರಿಗೆ ಮನರಂಜನೆಯ ರಸದೌತಣ ಉಣಬಡಿಸುವ ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದವರು ಅಪ್ಪು. ಹಾಗಾಗಿ ಇಂದಿಗೂ ಅಭಿಮಾನಿಗಳ ಮನದಲ್ಲಿ ಅವರು ಅಚ್ಚಳಿಯದ ನೆನಪಾಗಿದ್ದಾರೆ. ಪುಣ್ಯಸ್ಮರಣೆ ವಿಧಿವಿಧಾನಕ್ಕೆ ಸಿದ್ಧತೆ: ಅಪ್ಪುಪುಣ್ಯಸ್ಮರಣೆಗೆ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಬಳಿ ಶನಿವಾರವೇ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ರಾಜ್​ ಕುಟುಂಬಸ್ಥರು ಈ ಸಮಾಧಿ‌ ನಿರ್ಮಿಸಿದ್ದಾರೆ. ಪುನೀತ್ ರಾಜ್​ಕುಮಾರ್​ ಸಮಾಧಿಯನ್ನು ಬಿಳಿ ಮಾರ್ಬಲ್‌​​​​ನಲ್ಲಿ ನಿರ್ಮಿಸಲಾಗಿದೆ. …

Read More »

ಸತೀಶ್ ಜಾರಕಿಹೊಳಿ ಕೆಲ ಶಾಸಕರ ಜೊತೆ ದುಬೈಗೆ ಹೊರಟಿರೋ ವಿಚಾರ ನನಗೆ ಗೊತ್ತಿಲ್ಲ

ಧಾರವಾಡ: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಪಕ್ಷ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಿದೆ ಎಂಬ ವಿಚಾರಕ್ಕೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್​ ಕುಲಕರ್ಣಿ ಪ್ರತಿಕ್ರಿಯೆಸಿ, ನಾನು ಯಾವುದೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೇಳಿಲ್ಲ. ಕೊಟ್ಟರೆ ನೋಡೋಣ ಏನಾಗುತ್ತದೆ ಎಂದು ಹೇಳಿದರು. ಧಾರವಾಡ ಜಿಲ್ಲೆಯ ಹೊರವಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಕೆಲ ಶಾಸಕರ ಜೊತೆ ದುಬೈಗೆ ಹೊರಟಿರುವ ವಿಚಾರ ನನಗೆ ಗೊತ್ತಿಲ್ಲ, ನನಗಂತೂ ದೇಶ …

Read More »

ಇಂದಿನ ಪಂಚಾಂಗ ಹಾಗೂ ರಾಶಿ ಭವಿಷ್ಯ ಹೀಗಿದೆ..

  ಇಂದಿನ ಪಂಚಾಂಗ: ದಿನಾಂಕ : 29-10-2023, ಭಾನುವಾರ ಸಂವತ್ಸರ : ಶುಭಕೃತ್ ಆಯನ: ದಕ್ಷಿಣಾಯಣ ಋತು: ಹೇಮಂತ ಮಾಸ: ಅಶ್ವಿನ್ ಪಕ್ಷ: ಕೃಷ್ಣ ತಿಥಿ: ಪ್ರತಿಪದಾ ನಕ್ಷತ್ರ: ಅಶ್ವಿನಿ ಸೂರ್ಯೋದಯ: ಮುಂಜಾನೆ 06:11 ಗಂಟೆಗೆ ಅಮೃತಕಾಲ: ಮಧ್ಯಾಹ್ನ 02:1156 ರಿಂದ 4:24 ಗಂಟೆ ತನಕ ವರ್ಜ್ಯಂ : ಸಂಜೆ 06:15ರಿಂದ 07:50 ಗಂಟೆವರೆಗೆ ದುರ್ಮುಹೂರ್ತ: ಸಾಯಂಕಾಲ 4:35ರಿಂದ 5:23 ಗಂಟೆ ತನಕ ರಾಹುಕಾಲ: ಸಂಜೆ 04:24ರಿಂದ 5:51 ಗಂಟೆವರೆಗೆ …

Read More »

ಕೆಇಎ ಪರೀಕ್ಷೆ ಅಕ್ರಮದಲ್ಲಿ ಮತ್ತೆ ಮುನ್ನೆಲೆಗೆ ಬಂದ ಆರ್ ಡಿ‌ ಪಾಟೀಲ್ ಹೆಸರು

ಕಲಬುರಗಿ: ರಾಜ್ಯದ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಕೆಇಎ ಇಂದು ನಡೆಸಿದ ಪರಿಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಮುಖಾಂತರ ಅಕ್ರಮ ಎಸಗಿರುವ ಪ್ರಕರಣದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಮಾಸ್ಟರ್ ಮೈಂಡ್ ಆರ್. ಡಿ. ಪಾಟೀಲ್ ಹೆಸರು ಮತ್ತೆ ಮುಂಚೂಣಿಗೆ ಬಂದಿದೆ. ಹೌದು, ಕರ್ನಾಟಕ ಪರಿಕ್ಷಾ ಪ್ರಾಧಿಕಾರದಿಂದ ಇಂದು ವಿವಿಧ ನಿಗಮ ಮಂಡಳಿಗಳ ಖಾಳಿ ಇರುವ ಹುದ್ದೆಗಳ ನೇಮಕಾತಿಗೆ ಕನ್ನಡ ಇಂಗ್ಲಿಷ್ ಕಮ್ಯುನಿಕೇಶನ್ ಪರೀಕ್ಷೆ ನಡೆಸಿದೆ. ಕಲಬುರಗಿ ನಗರದ ಶರಣಬಸವೇಶ್ವರ …

Read More »

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರು ನಟಿಸಿರುವ ಸಾಮಾಜಿಕ ಸಂದೇಶ ಸಾರುವ ಕೆಲವು ಚಿತ್ರಗಳಿಲ್ಲಿವೆ. ಕನ್ನಡ ಚಿತ್ರರಂಗದ ರಾಜಕುಮಾರ, ನಗುಮೊಗದ ಒಡೆಯ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮೃತಪಟ್ಟು ಎರಡು ವರ್ಷ ಕಳೆಯುತ್ತಿದೆ. ಬಾಲ್ಯದಲ್ಲೇ ಸಿನಿಮಾ ಲೋಕ ಪ್ರವೇಶಿಸಿದ ಅಪ್ಪು, ಜನರಿಗೆ ಮನರಂಜನೆಯ ಔತಣವನ್ನೇ ಉಣಬಡಿಸಿದ್ದರು. ಎರಡನೇ ವರುಷದ ಪುಣ್ಯಸ್ಮರಣೆಯ ಈ ಸಂದರ್ಭದಲ್ಲಿ ಸಾಮಾಜಿಕ ಸಂದೇಶ ಸಾರುವ ಅವರ …

Read More »

ವಿಶ್ವಕಪ್‌ನಲ್ಲಿಂದು ಮತ್ತೊಂದು ರೋಚಕ ಫೈಟ್: ಭಾರತ ಗೆದ್ದರೆ ಸೆಮೀಸ್‌ಗೆ ಸನಿಹ; ಇಂಗ್ಲೆಂಡ್‌ ಸೋತರೆ ಕಪ್ ಕನಸು ಭಗ್ನ

ಲಖನೌನ ಏಕಾನಾ ಕ್ರಿಕೆಟ್​ ಸ್ಟೇಡಿಯಂ​​ನಲ್ಲಿ ಇಂದು ಭಾರತ ಮತ್ತು ಇಂಗ್ಲೆಂಡ್​ ಮುಖಾಮುಖಿ ಆಗಲಿವೆ. ಸತತ 5 ಗೆಲುವು ಕಂಡಿರುವ ಟೀಮ್​ ಇಂಡಿಯಾ ಒಂದು ವಾರದ ಬಿಡುವಿನ ನಂತರ ಮತ್ತೊಂದು ಜಯವನ್ನು ಎದುರು ನೋಡುತ್ತಿದೆ. ಇಂಗ್ಲೆಂಡ್‌ ತಂಡಕ್ಕೆ ಈ ಗೆಲುವು ಅನಿವಾರ್ಯವಾಗಿದ್ದು, ಇಂದಿನ ಪಂದ್ಯವನ್ನೂ ಸೋತರೆ ವಿಶ್ವಕಪ್ ಕನಸು ಬಹುತೇಕ ಭಗ್ನ.   ಲಖನೌ (ಉತ್ತರ ಪ್ರದೇಶ): ನ್ಯೂಜಿಲೆಂಡ್ ವಿರುದ್ಧದ ಗೆಲುವಿನ ನಂತರ ಸೆಮಿಫೈನಲ್‌ನಲ್ಲಿ ಸ್ಥಾನ ಗಳಿಸುವ ಗುರಿಯೊಂದಿಗೆ ರೆಡ್-ಹಾಟ್ ಮತ್ತು ಇನ್ …

Read More »

ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ.: R.V.ದೇಶಪಾಂಡೆ

ಕಾರವಾರ: “ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ, ಅದರರ್ಥ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ ಎಂದಲ್ಲ” ಎಂದು ಕಾಂಗ್ರೆಸ್​ನ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಸಿಎಂ ಬದಲಾವಣೆ ಕುರಿತು ಕೆಲವು ಕಾಂಗ್ರೆಸ್​ ಶಾಸಕರು ನೀಡಿರುವ ಹೇಳಿಕೆಗೆ ಶನಿವಾರ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಮನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಾ.ಹೆಚ್​.ಸಿ.ಮಹದೇವಪ್ಪ ಭೇಟಿ ನೀಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಕುರಿತು …

Read More »

ಕನ್ನಡ ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನೆಡುವಾಗ ವಿದ್ಯುತ್ ಶಾಕ್: ಬೆಳಗಾವಿ ಜಿಲ್ಲೆಯ ಯುವಕ ದುರ್ಮರಣ

ಬೆಳಗಾವಿ: ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜಸ್ತಂಭ ನೆಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಒಕ್ಕುಂದ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪ್ರಜ್ವಲ್ ಚನಗೌಡ ಮುನೇಪ್ಪನವರ(18) ಮೃತ ಯುವಕ. ಕನ್ನಡ ರಾಜ್ಯೋತ್ಸವ ಆಚರಣೆಗಾಗಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿರ್ಮಿಸಿ ನವೆಂಬರ್ 1ರಂದು ಧ್ವಜಾರೋಹಣಕ್ಕೆ ಗ್ರಾಮದ ಯುವಕರು ಸಿದ್ಧತೆ ನಡೆಸಿದ್ದರು. ಶನಿವಾರ ಸಂಜೆ ಧ್ವಜಸ್ತಂಭ ನೆಡುವಾಗ ಅಲ್ಲಿಯೇ ಹಾದು ಹೋಗಿದ್ದ …

Read More »