Breaking News

ಸುವರ್ಣಸೌಧದಿಂದ ಸಾವರ್ಕರ್ ಫೋಟೋ ತೆಗೆದರೆ ಸೂಕ್ತ, ನನಗೆ ಬಿಟ್ಟರೆ ಇವತ್ತೇ ತೆರವು ಮಾಡುವೆ: ಪ್ರಿಯಾಂಕ್ ಖರ್ಗೆ

ಬೆಳಗಾವಿ : ಸುವರ್ಣಸೌಧ ವಿಧಾನಸಭೆಯಿಂದ ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ತೆಗೆದರೆ ಸೂಕ್ತ. ನನಗೆ ಬಿಟ್ಟರೆ ಇವತ್ತೇ ತೆರವು ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು,‌ ಸಾವರ್ಕರ್ ಫೋಟೋ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ತತ್ವ ಸಿದ್ದಾಂತದಲ್ಲಿ ಸಮಾನತೆ‌ ಇಲ್ಲವೋ, ಸ್ವಾಭಿಮಾನದ ಬದುಕಿಲ್ಲವೋ‌ ಅದನ್ನು ನಾನು ಒಪ್ಪಲ್ಲ.‌ ಗಾಂಧಿ ಹತ್ಯೆಗೆ ಪ್ರೇರಣೆಯಾದ ತತ್ವವನ್ನು ಒಪ್ಪಲ್ಲ. ಹೀಗಾಗಿ ವಿಧಾನಸಭೆಯಿಂದ …

Read More »

ವಾಯುವ್ಯಸಾರಿಗೆ ಸಂಸ್ಥೆಗೆ ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಇಂದು ರಾಜ್ಯ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಆಗ್ರಹಿಸಿದೆ.

ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣವಾಗಿ ಎರಡು ವರ್ಷಗಳಾದರೂ ಇನ್ನೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೆಂದೇ ಕರೆಯಲಾಗುತ್ತಿದೆ.ಸಾರಿಗೆ ಸಂಸ್ಥೆಗೆ ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಇಂದು ರಾಜ್ಯ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಆಗ್ರಹಿಸಿದೆ. ಇಂದು ಮುಂಜಾನೆ ಸುವರ್ಣ ಸೌಧದಲ್ಲಿ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದ ನಿಯೋಗವು, 2019 ರ …

Read More »

ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ : ಸಿದ್ದರಾಮಯ್ಯ

ಬೆಳಗಾವಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಮ್ಮ ವಿರುದ್ಧ ಮಾಡಿರುವ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಗುರುವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ದ್ವೇಷ ರಾಜಕಾರಣ ಮಾಡುವುದೇ ಬಸನಗೌಡ ಪಾಟೀಲ್ ಯತ್ನಾಳ ಕೆಲಸ. ಮೌಲ್ವಿ ತನ್ವೀರ ಪೀರ್ ಹಾಶ್ಮಿ ನನಗೆ ಬಹಳ ವರ್ಷಗಳಿಂದ ಪರಿಚಯ ಇದ್ದಾರೆ. ಒಂದು ವೇಳೆ ಅವರಿಗೆ ಐಸಿಸ್ ಜೊತೆ ನಂಟಿದ್ದರೆ, ಕೇಂದ್ರದಲ್ಲಿ …

Read More »

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚನೆ ಪ್ರಕರಣ: ಜೈಲಿನಿಂದ ಚೈತ್ರಾ, ಶ್ರೀಕಾಂತ್​ ಬಿಡುಗಡೆ

ಆನೇಕಲ್(ಬೆಂಗಳೂರು): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್​ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ ಆರೋಪಿಗಳಾದ ಚೈತ್ರಾ ಹಾಗೂ ಶ್ರೀಕಾಂತ್​ ಇಂದು ಬಿಡುಗಡೆಯಾದರು. ಇದಕ್ಕೂ ಮೊದಲು ಚೈತ್ರಾ ಸೇರಿ ಇಬ್ಬರಿಗೆ ಮೂರನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಇವರು ಜೈಲು ಪಾಲಾಗಿದ್ದರು. ಆರೋಪಿಗಳಾದ ಚೈತ್ರಾ ಹಾಗೂ ಶ್ರೀಕಾಂತ್​ಗೆ …

Read More »

ತೃತೀಯ ಲಿಂಗಿಗಳು, ಮಾಜಿ ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀ ಕೃಷ್ಣದೇವರಾಯ ವಿವಿ

ಬಳ್ಳಾರಿ: ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತೃತೀಯ ಲಿಂಗಿಗಳಿಗೆ ಹಾಗೂ ಮಾಜಿ ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಸಮಾಜದಲ್ಲಿ ತೃತೀಯ ಲಿಂಗಿಗಳು ಗೌರವದ ಜೀವನ ನಡೆಸಲು ಸರಿಯಾದ ಸೌಕರ್ಯ ಸಿಗುತ್ತಿಲ್ಲ, ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಮನಗಂಡು ವಿಶ್ವವಿದ್ಯಾಲಯದ ಆಡಳಿತವರ್ಗ ಮುಂದಿನ ಶೈಕ್ಷಣಿಕ ವರ್ಷದಿಂದ ಅವರಿಗೆ ಉಚಿತ ಶಿಕ್ಷಣ ನೀಡಲು …

Read More »

ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ಸರ್ಕಾರ ಚಿಂತನೆ

ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಕೇಂದ್ರಗಳಾದ ಮಂಗಳೂರು, ಉಡುಪಿ, ಧಾರವಾಡ ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್ಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಬೆಂಗಳೂರು: ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್ಗಳನ್ನು …

Read More »

ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ “ಭ್ರಷ್ಟಾಚಾರ ಆರೋಪಿ” ಮೊದಲು “ನಾರಾಯಣ ಹೃದಯಾಲಯದಲ್ಲಿ” ಬೆಡ್ ಬುಕ್ ಮಾಡಿಕೊಳ್ಳಲಿ.

ನನ್ನನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದಿರುವ “ಭ್ರಷ್ಟಾಚಾರ ಆರೋಪಿ” ಮೊದಲು “ನಾರಾಯಣ ಹೃದಯಾಲಯದಲ್ಲಿ” ಬೆಡ್ ಬುಕ್ ಮಾಡಿಕೊಳ್ಳಲಿ. ಮತ್ತೆ ಜಾಮೀನು ಪಡೆಯೋಕ್ಕೆ ಇನ್ನೊಂದು ನಾಟಕ ಮಾಡಬೇಕಾಗುತ್ತೆ. ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದು ಸರ್ಕಾರ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ರಿಟ್​ …

Read More »

ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ.. ಇಬ್ಬರು ಸಜೀವ ದಹನ

ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತದಲ್ಲಿ ಟಿಪ್ಪರ್​​​​ನ ಡೀಸೆಲ್​​​ ಟ್ಯಾಂಕರ್​​​​​​ ಸ್ಫೋಟಿಸಿ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ-ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಕಾರು ಮತ್ತು ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದೆ. ಬಂಬರಗಾ …

Read More »

ಐಸಿಸ್‌ ಸಂಪರ್ಕವಿರುವ ವ್ಯಕ್ತಿ ವಿಜಯಪುರದಲ್ಲೇ ಇದ್ದಾನೆ..!- ಯತ್ನಾಳ್‌ ಗಂಭೀರ ಆರೋಪ

ಬೆಳಗಾವಿ : ಮುಸ್ಲಿಂ ಸಮಾವೇಶದಲ್ಲಿ ಐಸಿಸ್(ISIS) ಸಂಪರ್ಕ ಹೊಂದಿರುವ , ಇಸ್ಲಾಂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ವ್ಯಕ್ತಿ ಭಾಗಿಯಾಗಿದ್ದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌(Basanagowda patil yatnal) ಆರೋಪ ಮಾಡಿದ್ದರು. ಈ ಬಗ್ಗೆ ಸುವರ್ಣ ವಿಧಾನಸೌಧದ ಎದುರು ಮತ್ತಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.   ವಿಜಯಪುರದಲ್ಲಿರುವ ದರ್ಗಾಗಳಲ್ಲಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕವಿರುವ ಮೌಲ್ವಿಗಳಿದ್ದಾರೆ . ಮುಸ್ಲಿಂ ಸಮಾವೇಶದಲ್ಲಿ ಭಾಗಿಯಾಗಿದ್ದ ಒಬ್ಬ ಕಳೆದ 25 ವರ್ಷಗಳಿಂದ ವಿಜಯಪುರದಲ್ಲಿ ನೆಲೆಸಿದ್ದಾನೆ …

Read More »

ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ

ಬೆಳಗಾವಿ: ಕಾರು ಅಪಘಾತ ಪ್ರಕರಣವನ್ನು ಹಲ್ಲೆ ಎಂದು ಬಿಂಬಿಸಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದ ಮಣಿಕಠ ರಾಠೋಡ್ ಹಾಗೂ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಎಚ್ಚರಿಕೆ ನೀಡಿದ್ದಾರೆ.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಕಂಠ ರಾಠೋಡ್‌ ಮೇಲಿನ ಹಲ್ಲೆ ಪ್ರಕರಣದ ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅಪಘಾತವನ್ನು ಹಲ್ಲೆ ಎಂದು ಕಥೆ ಕಟ್ಟಿ, ನನ್ನ ವಿರುದ್ಧ ಆರೋಪ …

Read More »