ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ ಮುಧೋಳ: ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ ಹುಟ್ಟಿಸಿದ್ದು ಜನರು ಮನೆಯಿಂದ ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ಜಮೀನುಗಳಲ್ಲಿ ಪ್ರತ್ಯಕ್ಷವಾಗಿರುವ ಚಿರತೆ ಮೇಯಲು ಬಿಟ್ಟ ಎಮ್ಮೆ, ಕರುಗಾಲ ಮೇಲೆ ದಾಳಿ ನಡೆಸಿದ್ದು ಚಿರತೆ ಕಾಟದಿಂದ ಗ್ರಾಮದ ಜನ ರೋಸಿ ಹೋಗಿದ್ದಾರೆ. ಯಡಹಳ್ಳಿ ಚಿಂಕಾರ ರಕ್ಷಿತಾರಣ್ಯಕ್ಕೆ ಹೊಂದಿಕೊಂಡಿರುವ ಕಿಶೋರಿ ಗ್ರಾಮದ ಜಮೀನುಗಳಲ್ಲಿ ಓಡಾಡುತ್ತಿರುವ ಚಿರತೆ ನಾಯಿಯೊಂದನ್ನು ಕೊಂದು ತಿಂದಿದ್ದು, …
Read More »ನಾಳೆಯ ಬೆಂಗಳೂರಿನ ‘ಬಿಜೆಪಿ ಪ್ರತಿಭಟನೆ’ಗೆ ಪೊಲೀಸರಿಂದ ಅನುಮತಿ ನಿರಾಕರಣೆ
ಬೆಂಗಳೂರು: ರಾಜ್ಯ ಸರ್ಕಾದ ವಿರುದ್ಧದ ಹಗರಣಗಳು, ಮುಡಾ ಅಕ್ರಮ, ವಾಲ್ಮೀಕಿ ನಿಗದಮ ಅವ್ಯವಹಾರ ಸೇರಿದಂತೆ ವಿವಿಧ ಅಕ್ರಮಗಳ ವಿರುದ್ಧ ನಾಳೆ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿತ್ತು. ಆದ್ರೇ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ನಾಳೆ ಮುಡಾ ಸೈಟ್, ವಾಲ್ಮೀಕಿ ಅಕ್ರಮ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧರಿಸಿತ್ತು. ಆದ್ರೇ ಬಿಜೆಪಿ …
Read More »ಎಸ್ಸಿಪಿ, ಟಿಎಸ್ಪಿ ಯೋಜನೆ ಅನುದಾನ ಗ್ಯಾರಂಟಿಗೆ ಬಳಸಿದ್ದು ನಿಜ: ಜಿ.ಪಲ್ಲವಿ
ಬೆಳಗಾವಿ: ‘7ಸಿ ಸೆಕ್ಷನ್ ಯೋಜನೆಯಡಿ ಎಸ್ಸಿಪಿ, ಟಿಎಸ್ಪಿ ಯೋಜನೆ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಟಿಪಿ, ಟಿಎಸ್ಪಿ ಕಾರ್ಯಕ್ರಮ ದೇಶದಲ್ಲಿಯೇ ಅತ್ಯುತ್ತಮವಾದದ್ದು. ತಳಮಟ್ಟದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆಯೇ …
Read More »ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ:
ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ ಬೆಂಗಳೂರು, ಜುಲೈ 13: ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದ …
Read More »ಜುಲೈ 15 ರಿಂದ ವಿಧಾನ ಮಂಡಲ ಅಧಿವೇಶನ ಆರಂಭ
ಬೆಂಗಳೂರು : ಇದೆ ಜುಲೈ 15 ರಂದು ಸೋಮವಾರದಂದು ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಬಿಗ್ ಪ್ಲಾನ್ ಮಾಡಿಕೊಂಡಿದ್ದು, ಅಧಿವೇಶನ ಆರಂಭದಲ್ಲಿ ಯಾವುದೇ ಪ್ರತಿಭಟನೆ ಧರಣಿ ನಡೆಸಿದಂತೆ ಕೇಂದ್ರ ಸಚಿವರು ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸದನದಲ್ಲಿ ಮೂಡ ಸೈಟ್ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಎರಡು …
Read More »ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಒಂದೂವರೆ ವರ್ಷದಲ್ಲಿ ಸರ್ಕಾರ ಹಾಗೂ ರಾಹುಲ್ ಗಾಂಧಿ, ಇನ್ನಿತರ ನಾಯಕರಿಂದ ಭಯಂಕರ ಭ್ರಷ್ಟಾಚಾರ ಶುರುವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ ಎಂದಾಗ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ನೂರಾರು ಜನರಿಗೆ ವರ್ಗಾವಣೆ ಮಾಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಕೆಲ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ,ಮಾಲದಿನ್ನಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಮಾಲದಿನ್ನಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಅಪಹರಣ: ಸಮಯಪ್ರಜ್ಞೆ ಮೆರೆದ ಬಾಲಕ
ಖಾನಾಪುರ: ಪಟ್ಟಣದಲ್ಲಿ ಶಾಲೆಗೆ ಹೋಗುವಾಗ ಬುಧವಾರ ಅಪಹರಣವಾಗಿದ್ದ 8ನೇ ತರಗತಿ ವಿದ್ಯಾರ್ಥಿಯೊಬ್ಬ ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡು ಮನೆಗೆ ಬಂದು ಸೇರಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ. ಪಟ್ಟಣದ ಅಸೋಗಾ ರಸ್ತೆಯ ರೈಲು ನಿಲ್ದಾಣದ ಪೂರ್ವ ದಿಕ್ಕಿನ ಬಡಾವಣೆಯಲ್ಲಿ ವಾಸವಿದ್ದ ಆದಿತ್ಯ ಮಿಲಿಂದ ಶಿಂಧೆ (13) ಶಾಲೆಗೆ ಹೋಗಲು ರೈಲು ನಿಲ್ದಾಣದ ಬಳಿ ಬಂದಾಗ ಆತನ ಮೂಗಿಗೆ ಅಪರಿಚಿತರು ಹಿಂದಿನಿಂದ ಪ್ರಜ್ಞೆ ತಪ್ಪಿಸುವ ಔಷಧವಿರುವ ಕರವಸ್ತ್ರವನ್ನು ಹಿಡಿದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಬಾಲಕನನ್ನು …
Read More »ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಠಾಚಾರ ಸಹಿಸಲ್ಲ: ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಸಹಿಸಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು. ಇಲ್ಲಿನ ನಗರಸಭೆ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಹಾಗೂ ಗೋಕಾಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ …
Read More »ಜಿಎಸ್ಟಿ ವಂಚನೆ: ಉದ್ಯಮಿಗಳಿಗೂ ಕಂಟಕ
ಬೆಳಗಾವಿ: ಬೆಳಗಾವಿ ಕೇಂದ್ರಿತವಾಗಿ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಂಚನೆ ಪ್ರಕರಣದಲ್ಲಿ ರಾಜ್ಯದ ದೊಡ್ಡ ಉದ್ಯಮಿಗಳು, ಪ್ರಭಾವಿಗಳು ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪ್ರಕರಣದ ಆರೋಪಿ ಒಬ್ಬನೇ ಇದ್ದರೂ ಆತ ಹಲವು ಪ್ರಭಾವಿಗಳ ಹೆಸರು, ಜಿಎಸ್ಟಿ ಸಂಖ್ಯೆಗಳನ್ನು ಅಕ್ರಮಕ್ಕೆ ಬಳಸಿದ್ದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ನಕೀಬ್ ನಜೀಬ್ ಮುಲ್ಲಾ (24) ಎಂಬ ಆರೋಪಿಯನ್ನು ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ₹132 ಕೋಟಿಯ ನಕಲಿ ವ್ಯವಹಾರದ …
Read More »
Laxmi News 24×7