Breaking News

ಬೆಳಗಾವಿ ಸಮಸ್ಯೆಯಿಂದಲೇ ಮೈತ್ರಿ ಸರ್ಕಾರ ಪತನ… ಈಗಲೂ ಅಂತಹದ್ದೇ ಲಕ್ಷಣ ಗೋಚರಿಸ್ತಿದೆ: ಮುನಿರತ್ನ

ಬೆಂಗಳೂರು: ”ಬೆಳಗಾವಿ ರಾಜಕಾರಣದಲ್ಲಿ ಸಮಸ್ಯೆ ಮತ್ತೆ ಉಕ್ಕುತ್ತಿದೆ. ಬೆಳಗಾವಿಯಲ್ಲಿ ಸಮಸ್ಯೆ ಪ್ರಾರಂಭ ಆದರೇನೇ ಸರ್ಕಾರಗಳು ಉರುಳುತ್ತವೆ. ಈಗಲೂ ಅಂತಹದ್ದೇ ಲಕ್ಷಣ ಕಾಣಿಸುತ್ತಿದೆ. ಮಹಾಭಾರತದ ಯುದ್ಧ ಒಂದು ಸಲಕ್ಕೆ ನಿಂತಿಲ್ಲ. ನಡೀತನೇ ಇತ್ತು, ಅದೇ ರೀತಿ ಬೆಳಗಾವಿ ರಾಜಕಾರಣದಲ್ಲಿಯೂ ಶೀತಲ ಸಮರ ನಡೆಯುತ್ತಲೇ ಇದೆ. ಯಾವಾಗ ಏನಾಗಲಿದೆಯೋ ಗೊತ್ತಿಲ್ಲ” ಎಂದು ಮಾಜಿ ಸಚಿವ ಮುನಿರತ್ನ ಅವರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಪತನದ ಹಾದಿಯಲ್ಲಿದೆ ಎನ್ನುವುದನ್ನು ಹೇಳಿದ್ದಾರೆ. ವೈಯಾಲಿ ಕಾವಲ್​ನಲ್ಲಿರುವ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಮಹಾರಾಷ್ಟ್ರದಲ್ಲಿ ಜೋರಾದ ಮರಾಠಾ ಮೀಸಲಾತಿ ಹೋರಾಟ

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಬೇಡಿಕೆ ಜೋರಾಗಿದೆ. ಇದರ ನಡುವೆ ಮುಂಬೈನಲ್ಲಿ ಮೀಸಲಾತಿಗೆ ಒತ್ತಾಯಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ. ಜಲ್ನಾ ಜಿಲ್ಲೆಯ ಚಿಕಂಗಾವ್ ಮೂಲದ ಸುನೀಲ್​ ಬಾಬುರಾವ್ ಕಾವ್ಲೆ ಮೃತ ಎಂದು ಗುರುತಿಸಲಾಗಿದೆ. ಮರಾಠಾ ಮೀಸಲಾತಿಗಾಗಿ ಕೆಲ ದಿನಗಳ ಹಿಂದೆ 150 ಎಕರೆ ಜಾಗದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶಗೊಂಡಿದ್ದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರದಿಂದ ಮುಂಬೈ ಪ್ರವಾಸದಲ್ಲಿದ್ದಾರೆ. ಇಂದು ನವಿ ಮುಂಬೈ ಸೇರಿದಂತೆ ಹಲವು …

Read More »

ಬೆಳಗಾವಿ ಜಿಲ್ಲೆಯಲ್ಲಿ ಡಿಕೆಶಿ ಹಸ್ತಕ್ಷೇಪ ಮಾಡುತ್ತಿಲ್ಲ ,ಸುಮ್ಮನೆ ಮಾಧ್ಯಮಗಳು ಏನೆನೋ ಸೃಷ್ಟಿಸುತ್ತಿವೆ”: ಬಾಬಾಸಾಹೇಬ ಪಾಟೀಲ

ಬೆಳಗಾವಿ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಅವರ ಬೆಳಗಾವಿ ಪ್ರವಾಸ ಪೂರ್ವ ನಿಯೋಜಿತವಾಗಿರಲಿಲ್ಲ. ನಾನು ನನ್ನ ಕ್ಷೇತ್ರದ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ. ಅವರು ಬೆಳಗಾವಿಗೆ ಬರುವ ಮೊದಲೇ ನಾನು ಬೆಂಗಳೂರಿನಲ್ಲಿದ್ದೆ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಸ್ಪಷ್ಟಪಡಿಸಿದರು. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ಡಿ ಕೆ ಶಿವಕುಮಾರ್ ಅವರನ್ನು ಇಂದು ಭೇಟಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಬೆಂಗಳೂರಿನಿಂದ ಬಂದ ತಕ್ಷಣವೇ ಡಿಕೆಶಿ …

Read More »

ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ.: ಸತೀಶ್ ಜಾರಕಿಹೊಳಿ

ಬೆಂಗಳೂರು : ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ. ನನ್ನ ಮೌನ ದೌರ್ಬಲ್ಯವಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿ‌.ಕೆ ಶಿವಕುಮಾರ್ ಬೆಳಗಾವಿ ಜಿಲ್ಲೆ ಹಸ್ತಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿ, ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪವಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಆಗಿದೆ. ನಾನು ಕೂಡ ಕಾಂಪ್ರಮೈಸ್ ಮಾಡಿಕೊಂಡಿದ್ದೇನೆ. ನಾನು ಅನುಸರಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದರು. ಪಕ್ಷದ ಹಿತದೃಷ್ಟಿಯಿಂದ …

Read More »

ಸತೀಶ್​ ಜಾರಕಿಹೊಳಿ ಜೊತೆ ಭಿನ್ನಾಭಿಪ್ರಾಯವಿಲ್ಲ,: ಡಿಕೆಶಿ

ಬೆಳಗಾವಿ : ಜನರ ಆಸೆ, ಬಯಕೆ, ನಾನು ಸಿಎಂ ಆಗಬೇಕು ಎನ್ನುವುದು ಇದ್ದೇ ಇರುತ್ತದೆ. ಆ ವಿಚಾರ ಆಮೇಲೆ, ನಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದ ಜನರು ನಮಗೆ ಐದು ವರ್ಷ ಆಡಳಿತ ಮಾಡಲು ಅವಕಾಶ ಕೊಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಯಾವಾಗ ತೀರ್ಮಾನ ಮಾಡುತ್ತದೆಯೋ ಮಾಡಲಿ. ನಾವು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಮೊದಲು …

Read More »

ಬೆಂಗಳೂರು ನಗರದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು: ಅತ್ತಿಬೆಲೆ‌ ಪಟಾಕಿ ದುರಂತಕ್ಕೆ ನಾಲ್ಕೂ‌ ಇಲಾಖೆಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಹೀಗಾಗಿ ಇರುವ ಕಾಯಿದೆಗಳಿಗೆ ಇನ್ನೂ ಹೆಚ್ಚಿನ‌ ಶಕ್ತಿ ನೀಡಿ ಅಗ್ನಿ ದುರಂತ ಹಾಗೂ ಪಟಾಕಿ ಅವಘಡಗಳಿಗೆ ಅಂತ್ಯ ಹಾಡುವಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು. ಪಟಾಕಿ ದುರಂತ ರಾಜ್ಯಕ್ಕೊಂದು ಪಾಠ, ಇದರಿಂದ 17 ಮಂದಿ ಈ …

Read More »

ನೋಟುಗಳ ಸುರಿಮಳೆಯ ವಿಡಿಯೋ ವೈರಲ್: ಸಚಿವ ಶಿವಾನಂದ ಪಾಟೀಲ್ ಹೇಳಿದ್ದೇನು?

ಬೆಂಗಳೂರು: “ನಾನು ಮದುವೆಗೆ ಹೋಗಬಾರದೇ?. ಅದು ಅಲ್ಲಿಯವರ ಸಂಸ್ಕೃತಿ. ಅದಕ್ಕೆ ನಾನೇನು ಮಾಡುವುದಕ್ಕೆ ಆಗುತ್ತದೆ” ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ಹೈದರಾಬಾದ್​ನಲ್ಲಿ ಸಚಿವ ಶಿವಾನಂದ ಪಾಟೀಲ್ ಭಾಗವಹಿಸಿದ್ದ ಮದುವೆ ಸಮಾರಂಭವೊಂದರಲ್ಲಿ ನೋಟುಗಳ ಸುರಿಮಳೆಗೈದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಹೈದರಾಬಾದ್‌ನಲ್ಲಿ ಬರ ಇದೆಯಾ?. ಅಲ್ಲಿಯ ಗೃಹ ಸಚಿವರೇ ಕಾರ್ಯಕ್ರಮಕ್ಕೆ ಬಂದಿದ್ದರು. ಈಗ ವೈರಲ್ ಮಾಡ್ತೀರಾ ನೀವು?. ಯಾರೋ …

Read More »

ಆಯುಧಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ ಕುಂಕುಮ ಬಳಸದಂತೆ ಸುತ್ತೋಲೆ: ಸಿಎಂ ಸ್ಪಷ್ಟನೆ

ಬೆಂಗಳೂರು: ಆಯುಧಪೂಜೆಯ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ, ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊರಡಿಸಿರುವ ವಿಚಾರ ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುತ್ತವೆ. ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು …

Read More »

ಇಂದು ಭಾರತ-ಬಾಂಗ್ಲಾದೇಶ ಮಧ್ಯೆ ಕದನ.. ಬಲಾಬಲ

ಪುಣೆ(ಮಹಾರಾಷ್ಟ್ರ): ಮೊದಲ ಪಂದ್ಯದಲ್ಲಿ ಸ್ವಲ್ಪ ಕಷ್ಟವೆನಿಸಿದ್ರೂ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿತು. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಸುಲಭ ಜಯ ಸಾಧಿಸಿತ್ತು. ಆದ್ರೆ ಹೈವೋಲ್ಟೇಜ್​ ಪಂದ್ಯವಾಗಿದ್ದ ಪಾಕಿಸ್ತಾನ ವಿರುದ್ಧ ನಿಜವಾದ ಸ್ಪರ್ಧೆ ಇರಲಿಲ್ಲ. ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಸ್​ಗೆ ಫೇವರಿಟ್ ಎನಿಸಿಕೊಂಡಿದೆ. ಇಂದು ಬಾಂಗ್ಲಾದೇಶದೊಂದಿಗೆ ಹಣಾಹಣಿ ನಡೆಯಲಿದೆ. ಸಾಮರ್ಥ್ಯ ಮತ್ತು ಫಾರ್ಮ್‌ನಲ್ಲಿ ರೋಹಿತ್ ತಂಡಕ್ಕೆ ಬಾಂಗ್ಲಾದೇಶ ಯಾವುದೇ ಸಾಟಿಯಲ್ಲ. ಹಾಗಂತ ಕಡೆಗಣನೆ ಸಲ್ಲದು. ಯಾಕೆಂದರೆ ಇಂಗ್ಲೆಂಡ್‌ಗೆ ಅಫ್ಘಾನಿಸ್ತಾನ ಮತ್ತು …

Read More »

ಪಾದಚಾರಿಗಳಿಗೆ ಕಾರು ಡಿಕ್ಕಿ; ಯುವತಿ ಸಾವು, ನಾಲ್ವರಿಗೆ ಗಾಯ-

ಮಂಗಳೂರು: ಫುಟ್​ಪಾತ್​ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾರೆ. ಸುರತ್ಕಲ್​ನ ಕಾನ ಬಾಳದ ರೂಪಶ್ರೀ (23) ಸಾವನ್ನಪ್ಪಿದವರು. ಸ್ವಾತಿ, ಹಿತ್ನವಿ, ಕೃತಿಕಾ, ಯತಿಕಾ ಗಾಯಗೊಂಡಿದ್ದಾರೆ. ಸಂಜೆ 4 ಗಂಟೆಯ ಸುಮಾರಿಗೆ ಐವರು ಯುವತಿಯರು ಮಂಗಳೂರು ಕಾರ್ಪೊರೇಷನ್ ಈಜುಕೊಳದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಎಸ್.ಎಲ್.ಶೆಟ್ ಜ್ಯುವೆಲರ್ಸ್ ಬಳಿಯ ಫುಟ್‌ಪಾತ್‌ ಬಳಸಿ ಸಂಚರಿಸುತ್ತಿದ್ದಾಗ ಹಿಂದಿನಿಂದ ಫುಟ್‌ಪಾತ್‌ ಮೇಲೇರಿ ಬಂದ ಕಾರು …

Read More »