Breaking News

ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) ಅಧಿವೇಶನ (Belagavi Winter Session) ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ವಿಪಕ್ಷಗಳಿಂದ ನಿಲುವಳಿ ನೋಟಿಸ್ (Adjournment notice) ಜಾರಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಜಂಟಿ ನೋಟಿಸ್ ನೀಡಿದ್ದು, ಸದನದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರದ (Congress Government) ವೈಫಲ್ಯ ಚರ್ಚಿಸಲು ಆಗ್ರಹಿಸಿವೆ.   ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ …

Read More »

ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಕೇಸ್: ಹನೂರಿನ ರಾಮಪುರದಲ್ಲಿ ಕಾರು ಪತ್ತೆ

ಚಾಮರಾಜನಗರ: ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದ ತೋಟದ ಮನೆಯಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಸಂಬಂಧಿಯ ಕಾರು ಹನೂರು ತಾಲೂಕಿನ ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ದೊರೆತಿದೆ. ಯೋಗೇಶ್ವರ್ ಅವರ ಭಾವ ಚಕ್ಕರೆ ಗ್ರಾಮದ ಮಹದೇವಯ್ಯ ಮೂರು ದಿನಗಳ ಹಿಂದೆ ಬಿಳಿ ಬಣ್ಣದ ಬ್ರಿಜಾ ಕಾರುಸಮೇತ (KA-42 N0012) ಕಾಣೆಯಾಗಿದ್ದರು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ …

Read More »

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ, ಅರ್ಜಿ ಸಲ್ಲಿಕೆ, ವೇತನದ ವಿವರ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 540 ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಧಿಸೂಚನೆಹುದ್ದೆಗಳು- ಎಲ್ಲಿ, ಎಷ್ಟು?: ಬೆಂಗಳೂರು 49 ಬೆಳಗಾವಿ 12 ಬಳ್ಳಾರಿ 29 ಚಾಮರಾಜನಗರ 83 ಚಿಕ್ಕಮಗಳೂರು 52 ಧಾರವಾಡ 5 ಹಾಸನ 18 ಕಲಬುರಗಿ 58 ಕೆನಾರ 33 ಕೊಡಗು 26 ಮಂಗಳೂರು 62 ಮೈಸೂರು 47 ಶಿವಮೊಗ್ಗ 66 ವಿದ್ಯಾರ್ಹತೆ: ಅಧಿಕೃತ …

Read More »

ಹಾವೇರಿ: 7 ಜೀವಂತ ನಾಡ ಬಾಂಬ್‌ ಪತ್ತೆ, ಆರೋಪಿ ಬಂಧನ

ಹಾವೇರಿ: ಹಾನಗಲ್ ತಾಲೂಕಿನ ಆಡೂರು ಪೊಲೀಸರು ಕಾರ್ಯಾಚರಣೆ ನಡೆಸಿ 7 ಜೀವಂತ ನಾಡ ಬಾಂಬ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಡ ಬಾಂಬ್ ಇಟ್ಟಿದ್ದ ಆರೋಪದಡಿ ದುರ್ಗಪ್ಪ ತುರಬಿಗುಡ್ಡ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡು ಹಂದಿ ಬೇಟೆಯಾಡುವ ಉದ್ದೇಶದಿಂದ ಕುಸನೂರು ಅರಣ್ಯ ಪ್ರದೇಶದಲ್ಲಿ ಈತ ನಾಡ ಬಾಂಬ್‌ಗಳನ್ನು ಇಟ್ಟಿದ್ದ. ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪತ್ತೆಯಾದ 7 ಜೀವಂತ ನಾಡಬಾಂಬ್‌ಪ್ರತ್ಯೇಕ ಪ್ರಕರಣ- ಖಾಸಗಿ ಫೋಟೋ ಸೆರೆಹಿಡಿದು …

Read More »

2024ರ ಲೋಕಸಭೆಯ ಹ್ಯಾಟ್ರಿಕ್ ಗೆಲುವಿಗೆ ಗ್ಯಾರಂಟಿ ಸಿಕ್ಕಿದೆ : ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ಚುನಾವಣಾ ಫಲಿತಾಂಶ ಮತ್ತು ಇದಕ್ಕಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವು. ಸಬ್ಕಾ ಸಾಥ್​ ಸಬ್ಕಾ ವಿಕಾಸ್​ ಎಂಬ ಭಾವನೆ ಇಂದು ಗೆದ್ದಿದೆ. ಈ ಗೆಲುವು ಸ್ವಾವಲಂಬಿ …

Read More »

ಬೆಳಗಾವಿಯಲ್ಲಿ ಅಧಿವೇಶನದ ಸಂತಾಪ ಸೂಚನೆ ಮುಗಿಯುತ್ತಿದ್ದಂತೆ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಹಾಗು ಜೆಡಿಎಸ್ ಸಿದ್ಧ

ಬೆಂಗಳೂರು : ಕುಂದಾನಗರಿ ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಅಖಾಡಕ್ಕೆ ದುಮುಕಲು ಸಿದ್ಧವಾಗಿದ್ದು, ಪರಸ್ಪರ ಸಹಕಾರದಿಂದ ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಸನ್ನದ್ಧವಾಗಿವೆ.   ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪ್ರತಿಪಕ್ಷಗಳು ಜಂಟಿಯಾಗಿ ವಾಗ್ದಾಳಿ ನಡೆಸಲಿವೆ. …

Read More »

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.   ನಗರದಲ್ಲಿಂದು ಮಾಧ್ಯಮಗಳೊಂದಿಗೆ ನಾಲ್ಕು ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಡ್​ದಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ …

Read More »

ತೆಲಂಗಾಣದ ಎರಡನೇ ಸಿಎಂ ಆಗಿ ರೇವಂತ್​ ರೆಡ್ಡಿ ಪ್ರಮಾಣವಚನ

ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್​ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್​ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್​ ರಾವ್​ ನೇತೃತ್ವದ ಬಿಆರ್​ಎಸ್​ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್​ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಸೋಮವಾರ (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ …

Read More »

ತೆಲಂಗಾಣದಲ್ಲಿ ಬಿಆರ್​ಎಸ್​ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ತೆಲಂಗಾಣದಲ್ಲಿ ಬಿಎಸ್​ಆರ್​ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತ‌ನಾಡಿದ ಅವರು, “ನಾನು ಖುದ್ದಾಗಿ ತೆಲಂಗಾಣಕ್ಕೆ ಭೇಟಿ ನೀಡಿದ್ದೇನೆ. 10 ವರ್ಷದ ಕೆಸಿಆರ್ ಆಡಳಿತದಲ್ಲಿ 10 ಸ್ಕ್ಯಾಮ್ ಗಳಲ್ಲಿ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಳೇಶ್ವರಂ ನೀರಾವರಿ ಯೋಜನೆಯೊಂದರಲ್ಲೇ 1.50 ಲಕ್ಷ ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಅಲ್ಲಿನ …

Read More »

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಮೂರು ರಾಜ್ಯಗಳಿಗೆ ಬಿಜೆಪಿಯೇ ಬಾಸ್

ಪ್ರಚಂಡ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳು ಹಾಗೂ ಕಾರ್ಯಕರ್ತರಿಗೆ ಅಭಿನಂಧನೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನೇನೂ ಲೋಕಸಭೆಯ ಚುನಾವಣೆಯ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ ಮತದಾರರು ಬಿಜೆಪಿಗೆ ಫುಲ್ …

Read More »