ಹುಬ್ಬಳ್ಳಿ: ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಮಂಡಳಿಯು 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣ ಕೊನೆಗೊಳಿಲಿದೆ. ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ. …
Read More »ತಾಯಿ ಬದುಕಿದ್ದಾಗಲೇ ಮರಣ ಪ್ರಮಾಣ ಪತ್ರ ಸೃಷ್ಟಿಸಿದ ಮಗ
ಹಾವೇರಿ: ತಾಯಿ ಜೀವಂತವಿರುವಾಗಲೇ ಮಗನೋರ್ವ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿರುವ ಪ್ರಕರಣ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ವರದಿಯಾಗಿದೆ. ಶಿಗ್ಗಾಂವಿಯ ಖಾಜೇಖಾನ್ ಗಲ್ಲಿಯ ಶೌಕತ್ ಅಲಿ (39) ಜೀವಂತವಿರುವ ತಾಯಿಯ ಮರಣಪತ್ರ ಸೃಷ್ಟಿಸಿರುವ ಆರೋಪಿಯಾಗಿದ್ದಾನೆ. 60 ವರ್ಷದ ವಯೋವೃದ್ಧೆ ಹೂರಾಂಬಿ ಮುಲ್ಕಿ ಎಂಬವರು ಒಂಟಿಯಾಗಿ ಪಟ್ಟಣದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಮಗ ಶೌಕತ್ ತಾಯಿಯನ್ನು ತೊರೆದು ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾನೆ. ಸುಮಾರು 2 ಎಕರೆ ಜಮೀನು ಹೂರಾಂಬಿ ಹಾಗೂ ಪುತ್ರನ ಜಂಟಿ ಖಾತೆಯಲ್ಲಿತ್ತು. …
Read More »ನ್ಯಾಯಾಲಯಕ್ಕೆ ಶರಣಾದ ಶಾಸಕ ವಿನಯ್ ಕುಲಕರ್ಣಿ
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಶಾಸಕ ವಿನಯ್ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೆ, ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಸುಪ್ರೀಂ …
Read More »ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು
ಬೆಳಗಾವಿ ರಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶ್ ಸಂದೀಪ್ ಪಾಟೀಲ್ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದರು. ಲೋಕ ಅದಾಲತ್ ನಿಂದ ನೆಮ್ಮದಿಯ ಬದುಕು ಕಟ್ಟಿಕೊಳ್ಳಬಹುದು. ಕಕ್ಷಿದಾರರ ಸಮಯ, ಹಣ …
Read More »ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ
ಖಾನಾಪೂರದ ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಹೌದು ಖಾನಾಪೂರ ತಾಲೂಕಿನ ಕಾಡಂಚಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಒಂದು ಸವಾಲಿನ ಕೆಲಸ ಪ್ರತಿದಿನವೂ ಸುಮಾರು ಕಿಲೋಮೀಟರ್ ದೂರದಿಂದ ತಮ್ಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹರಸಾಹಸ ಪಡುವ ಕೆಲವು ಭಾಗಗಳಲ್ಲಿ ನಡೆಯುತ್ತಿದೆ. ಇಂತಹಾ ಒಂದು ಪರಿ ಬೆಳಗಾವಿ ಡಿಡಿಪಿಐ ಅವರಿಗೆ ಕಂಡಿತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಖಾನಾಪೂರ …
Read More »ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು
ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ …
Read More »ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ
ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ ಮಾಡಿದ ಮಲ್ಲಿಕಾರ್ಜುನ ವಿದ್ಯಾಪೀಠದ ಗುರುಗೌಡ ಪಾಟೀಲ್ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಶುಕ್ರವಾರ ಶ್ರೀನಗರದ ವೈಷ್ಣವಿ ಮಹಿಳಾ ಮಂಡಳದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸುಮಾರು 30ಜನ ಮಹಿಳೆಯರು ತರಬೇತಿ ಪಡೆದಿದ್ದಾರೆ. ಅವರಿಗೆ ಹೊಲಿಗೆ ಯಂತ್ರಗಳನ್ನು ಕೊಡುವುದಾಗಿ ಅನಗೋಳದಲ್ಲಿ ಕರೆದು ಮಹಿಳೆಯರಿಗೆ ಅವಮಾನ ಮಾಡಿರುವ ಗುರುಗೌಡ ಪಾಟೀಲ್ ಮೇಲೆ …
Read More »ಅಥಣಿಯಲ್ಲಿ ಸರಣಿ ಅಪಘಾತ
ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಣಜವಾಡ್ ಕಾಲೇಜು ಹತ್ತಿರ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ …
Read More »ಬೆಳಗಾವಿಯಲ್ಲಿ ಮಳೆ ಅವಾಂತರ (
ಬೆಳಗಾವಿ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮನೆ ಗೋಡೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿದ್ದರೆ, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಆಟೋ ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ ಚಾಲಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಮಣ್ಣಿನ ಗೋಡೆ ಕುಸಿದು ಫಕ್ಕೀರವ್ವ ಲಕ್ಷ್ಮಣ ಹಾವೇರಿ (65) ಎಂಬ ವೃದ್ಧೆ ಮೃತಪಟ್ಟಿದ್ದಾರೆ. ಮಣ್ಣಿನಲ್ಲಿ ಸಿಲುಕಿದ್ದ ಫಕ್ಕೀರವ್ವ ಅವರನ್ನು ಸ್ಥಳೀಯರು ಕೂಡಲೇ ಹೊರ ತೆಗೆದಿದ್ದಾರೆ. ಆದರೆ, ಅಷ್ಟರೊಳಗೆ ಅವರ ಪ್ರಾಣಪಕ್ಷಿ …
Read More »ಹತ್ಯೆ ಮಾಡಲು ಬಂದು ತಾನೇ ಹತನಾದ ರೌಡಿಶೀಟರ್
ಬೆಂಗಳೂರು: ಹತ್ಯೆಗೆ ಯತ್ನಿಸಿದ ರೌಡಿಶೀಟರನ್ನು ತಾನೇ ಹತ್ಯೆಗೈದಿದ್ದ ವ್ಯಕ್ತಿ ಸಹಿತ ನಾಲ್ವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್ 10ರಂದು ರಾತ್ರಿ ಕಾಡುಗೋಡಿಯ ವಿಜಯಲಕ್ಷ್ಮಿ ಲೇಔಟ್ನಲ್ಲಿ ಪುನೀತ್ (25) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೆ ಯತ್ನಿಸಿ ತಾನೇ ಬಲಿಯಾದ ರೌಡಿಶೀಟರ್: ರೌಡಿಶೀಟರ್ ಪುನೀತ್, ಆರೋಪಿ ಮಹೇಶ್ ಬಳಿ 40 ಸಾವಿರಕ್ಕೆ ಮಾತನಾಡಿ ಬೈಕ್ವೊಂದನ್ನು ಖರೀದಿಸಿದ್ದ. …
Read More »