ವಿಜಯನಗರ : ಟಿಪ್ಪರ್, ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಸರಣಿ ಅಪಘಾತದಲ್ಲಿ ಓರ್ವ ಬಾಲಕ, ಮಹಿಳೆಯರು ಸೇರಿದಂತೆ 7 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ಬಳಿ ರಾಷ್ತ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಮಧ್ಯಾಹ್ನ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಕ್ರೂಸರ್ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ. ಟಿಪ್ಪರ್ ಮುಂಭಾಗ ಜಖಂಗೊಂಡಿದ್ದು, ಕಳಚಿ ಬಿದ್ದಿದೆ. ಮತ್ತೊಂದು ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಮೃತರನ್ನು ಹೊಸಪೇಟೆಯ ಉಕ್ಕಡ …
Read More »ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು
ಬೆಂಗಳೂರು: ನಾಗರಿಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಯಲ್ಲಿ ನಗರದ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ದಪಡಿಸಲಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ‘ಬ್ರ್ಯಾಂಡ್ ಬೆಂಗಳೂರು’ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್, ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ತೊಡೆದು ಹಾಕುತ್ತೇವೆ. ಪ್ರತಿ ರಸ್ತೆಯಲ್ಲಿ …
Read More »ಸೌಂದರ್ಯ ಕಳೆದುಕೊಂಡ ಕಾರವಾರದ ಪ್ರಸಿದ್ಧ ರಾಕ್ ಗಾರ್ಡನ್; ನಿರ್ವಹಣೆಗೆ ಬಜೆಟ್ ಕೊರತೆ
ಕಾರವಾರ : ಅದು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಜನಾಂಗಗಳ ಕಲೆ, ಸಂಸ್ಕೃತಿ ಬಿಂಬಿಸುವ ಶಿಲ್ಪಕಲಾಕೃತಿಗಳ ವನ. ಹೆದ್ದಾರಿಗೆ ಹೊಂದಿಕೊಂಡು ಕಡಲತೀರದಲ್ಲೇ ಈ ವನ ಇರುವುದರಿಂದ ಸಾಕಷ್ಟು ಮಂದಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿ ತೆರಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾದ ನಿರ್ವಹಣೆಯ ಕೊರತೆಯಿಂದ ಪ್ರವಾಸಿಗರ ಆಕರ್ಷಣೆಯ ತಾಣ ತನ್ನ ಕಳೆ ಕಳೆದುಕೊಳ್ಳುತ್ತಿದೆ. ಕಾರವಾರದಲ್ಲಿರುವ ರಾಕ್ಗಾರ್ಡನ್ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೀಡಾಗಿ ದುಸ್ಥಿತಿ ತಲುಪಿದೆ. ರವೀಂದ್ರನಾಥ ಟ್ಯಾಗೋರ್ …
Read More »ಸರ್ಕಾರ ಪತನವಾಗದಿದ್ದರೆ ರಾಜೀನಾಮೆ ಕೊಡ್ತಾರಾ..? ವಿಪಕ್ಷಗಳಿಗೆ ಶಿವಾನಂದ ಪಾಟೀಲ ಟಾಂಗ್
ಬೆಳಗಾವಿ : ಸರ್ಕಾರ ಪತನವಾಗುತ್ತದೆ ಎಂದು ಹೇಳುವವರನ್ನೇ ಕೇಳಿ. ಸರ್ಕಾರ ಪತನವಾಗದಿದ್ದರೆ ರಾಜೀನಾಮೆ ಕೊಡ್ತಾರಾ..? ಎಂದು ಸಕ್ಕರೆ, ಸಹಕಾರ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಪಕ್ಷಗಳಿಗೆ ಟಾಂಗ್ ಕೊಟ್ಟರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮಗಳ ಜೊತೆಗೆ ಸಂಕ್ರಾಂತಿ ನಂತರ ಸರ್ಕಾರ ಪತನವಾಗುತ್ತದೆ ಎಂಬ ವಿಪಕ್ಷಗಳ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾರು ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಾರೆ ಅವರಿಗೆ ಕೇಳಿ ಎಂದರು. ಕಬ್ಬಿನ ತೂಕದಲ್ಲಿ …
Read More »ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ… ಛತ್ತೀಸ್ಗಢದಲ್ಲಿ 2ಹಂತದ ವೋಟಿಂಗ್.. ಡಿಸೆಂಬರ್ 3ಕ್ಕೆ ಚುನಾವಣಾ ಫಲಿತಾಂಶ ಪ್ರಕಟ
Assembly elections 2023: ಚುನಾವಣಾ ಆಯೋಗವು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ. ನವೆಂಬರ್ 23 ರಂದು ರಾಜಸ್ಥಾನ, ಮಧ್ಯಪ್ರದೇಶ ನವೆಂಬರ್ 17, ತೆಲಂಗಾಣ ನವೆಂಬರ್ 30, ಛತ್ತೀಸ್ಗಢ ನವೆಂಬರ್ 7ರಂದು ಮೊದಲನೇ ಹಂತ ಹಾಗೂ 17 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ಜರುಗಲಿದೆ. ನವದೆಹಲಿ: ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗವು ಪ್ರಕಟಿಸಿದೆ. …
Read More »ಲೋಕಸಭೆ ಚುನಾವಣೆ ದೃಷ್ಠಿಯಿಂದ ನಮ್ಮ ಪಕ್ಷದ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ: ಮಾಜಿ ಸಚಿವ ಸಿ ಪಿ ಯೋಗೇಶ್ವರ್
ರಾಮನಗರ : ಮುಂದಿನ ಲೋಕಸಭಾ ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ನಮ್ಮ ಪಕ್ಷದ ಹೈಕಮಾಂಡ್ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಬಹಳ ವಿರೋಧ ಇದ್ದ ಕ್ಷೇತ್ರ. ಚನ್ನಪಟ್ಟಣ ನಾವು ಕುಮಾರಸ್ವಾಮಿಯನ್ನು ನೇರಾ ನೇರವಾಗಿ ಪರಸ್ಪರ ವಿರೋಧವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದೆವು. ಹೊಂದಾಣಿಕೆ ಅನ್ನೋದು ತಾಳ್ಮೆಯಿಂದ ಪರಸ್ಪರ ಒಂದಾಗಿ ಎಲ್ಲರ ಮನಸ್ಸನ್ನು ಒಗ್ಗೂಡಿಸುವುದು ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಹಿನ್ನೆಲೆ ಚನ್ನಪಟ್ಟಣದಲ್ಲಿಂದು ಮಾಧ್ಯಮದವರೊಂದಿಗೆ …
Read More »ಕರ್ನಾಟಕದಲ್ಲಿ 5 ವರ್ಷದಲ್ಲಿ 58 ಸಾವಿರ ಮಕ್ಕಳು ಶಾಲೆಗಳಿಂದ ದೂರ.. ಕೋಟಿಗಟ್ಟಲೇ ವ್ಯಯಿಸಿದರೂ ನಿಲ್ಲದ ಡ್ರಾಪ್ ಔಟ್
ಬೆಂಗಳೂರು: ಶಾಲೆ ತೊರೆದಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 7 ನೇ ಸ್ಥಾನ ಪಡೆದುಕೊಂಡಿದ್ದು, ರಾಜ್ಯಾದ್ಯಂತ ಕಳೆದ ಐದು ವರ್ಷಗಳಲ್ಲಿ 57,785 ವಿದ್ಯಾರ್ಥಿಗಳು ಶಿಕ್ಷಣ ತೊರೆದಿದ್ದಾರೆ. ವಿದ್ಯಾರ್ಥಿಗಳು ಶಾಲೆ ತೊರೆಯುವುದನ್ನು ತಡೆಯಲು ಐದು ವರ್ಷದಲ್ಲಿ ಸರ್ಕಾರದಿಂದ ಬರೋಬ್ಬರಿ 1,099.63 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಆದರೂ ಮಕ್ಕಳು ಶಾಲೆ ತೊರೆಯುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವೇನು, ಸರ್ಕಾರ ಏನೆಲ್ಲಾ ಕ್ರಮವಹಿಸಲು ಮುಂದಾಗಿದೆ ಎನ್ನುವ ಕುರಿತ ಒಂದು ವರದಿ ಇಲ್ಲಿದೆ. ಶಾಲೆ ತೊರೆದ …
Read More »ಕೇಂದ್ರ ತಂಡಕ್ಕೆ ನಮ್ಮ ವಸ್ತುಸ್ಥಿತಿಯ ಮನವಿ ಮನವರಿಕೆಯಾಗಿದೆ- ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ರಾಜ್ಯದ ಬರ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ತಂಡಕ್ಕೆ ನಾವು ಪರಿಸ್ಥಿತಿಯನ್ನು ವಸ್ತುಸ್ಥಿತಿಯಿಂದ ವಿವರಿಸಿದ್ದು, ಅವರಿಗೆ ಮನವರಿಕೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಬರ ಅಧ್ಯಯನ ತಂಡ ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಲಿದೆ. ಎಷ್ಟು ಪರಿಹಾರ ಕೊಡುತ್ತಾರೆ ನೋಡೋಣ. ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದ ತಂಡ ಪರಿಸ್ಥಿತಿ ಅವಲೋಕನ ಮಾಡಿದೆ. ಕುಡಿಯುವ …
Read More »ಯೋಗೇಶ್ ಗೌಡ ಹತ್ಯೆ ಪ್ರಕರಣ: ಹಿಂದಿನ ತನಿಖಾಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಬಂಧನಕ್ಕೆ ಹುಡುಕಾಟ
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಮತ್ತೆ ತನಿಖೆಗಿಳಿದಿದ್ದಾರೆ. ಪ್ರಕರಣದ ಹಿಂದಿನ ತನಿಖಾಧಿಕಾರಿ ಚೆನ್ನಕೇಶವ ಟಿಂಗರಿಕರ ಮನೆಗೆ ಇಂದು ಬೆಳಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಆಗಮಿಸಿ ಶೋಧ ಕಾರ್ಯ ನಡೆಸಿದರು. ಧಾರವಾಡ ಮಲಪ್ರಭಾ ನಗರದಲ್ಲಿರುವ ಚೆನ್ನಕೇಶವ ಟಿಂಗರಿಕರ್ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಆದ್ರೆ ಮನೆಯಲ್ಲಿ ಟಿಂಗರಿಕರ್ ಇಲ್ಲ ಎಂದು ಹೇಳಲಾಗುತ್ತಿದೆ. ಯೋಗೇಶ್ ಗೌಡ …
Read More »ಗ್ ಬಾಸ್ ಮನೆಗೆ ಎಂಎಲ್ಎ ಪ್ರದೀಪ್ ಈಶ್ವರ್ ಎಂಟ್ರಿ
ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಗೆ ಅಚ್ಚರಿಯ ಎಂಟ್ರಿ ಕೊಟ್ಟಿದ್ದಾರೆ. ‘ಬಿಗ್ ಬಾಸ್’.. ಕನ್ನಡದ ಜನಪ್ರಿಯ ರಿಯಾಲಿಟಿ ಶೋನ 10ನೇ ಸೀಸನ್ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್ ಸಾರಥ್ಯದ 100 ದಿನಗಳ ಕಾರ್ಯಕ್ರಮವು ನಿನ್ನೆ ಗ್ರ್ಯಾಂಡ್ ಲಾಂಚ್ ಆಗಿದೆ. ಈ ವೇಳೆಯೇ ಕಲರ್ಫುಲ್ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳು ಪ್ರವೇಶಿಸಿದ್ದಾರೆ. ಇದೀಗ ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಗೆ ಅಚ್ಚರಿಯ …
Read More »