Breaking News

ಅತ್ತಿಬೆಲೆ ಪಟಾಕಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಣೆ

ಆನೇಕಲ್​: ಅತ್ತಿಬೆಲೆ ಗಡಿಯ ಬಾಲಾಜಿ ಕ್ರ್ಯಾಕರ್ಸ್ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಸಾವಿಗೀಡಾದ 12 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ನಿನ್ನೆ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. “ಮೃತಪಟ್ಟ ಅಮಾಯಕ ಯುವಕರನ್ನು ಕಂಡರೆ ದುಃಖ ಉಮ್ಮಳಿಸಿ ಬರುತ್ತಿದೆ. 19 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು …

Read More »

ಹುಬ್ಬಳ್ಳಿ : ಬಾಲಕಿ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್

ಹುಬ್ಬಳ್ಳಿ : ಭಾರತ ತಂಡದ ಖ್ಯಾತ ಕ್ರಿಕೆಟ್​ ಆಟಗಾರ, ಕನ್ನಡಿಗ ಕೆ ಎಲ್​ ರಾಹುಲ್ ಹಲವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಿದ್ದಾರೆ. ಇದೀಗ ಸುಡಗಾಡು ಸಿದ್ಧರ ಸಮುದಾಯದ ವಿದ್ಯಾರ್ಥಿನಿಯೋರ್ವಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡಿರುವ ರಾಹುಲ್​, ವಿದ್ಯಾರ್ಥಿನಿ ಶಾಲೆಗೆ ಸೇರಲು ಸಹಕರಿಸಿದ್ದಾರೆ. ಈ ಹಿಂದೆ ಜಮಖಂಡಿಯ ವಿದ್ಯಾರ್ಥಿಯೊಬ್ಬನಿಗೆ ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ದಾಖಲಾಗಲು ರಾಹುಲ್​ ಹಣಕಾಸಿ‌ನ ನೆರವು ನೀಡಿದ್ದರು. ಧಾರವಾಡದ ಸಿದ್ದೇಶ್ವರ ಕಾಲೋನಿ ನಿವಾಸಿಯಾಗಿರುವ ಸೃಷ್ಟಿ ಕುಲಾವಿ ಎಂಬ ಬಾಲಕಿಯ ವಿದ್ಯಾಭ್ಯಾಸಕ್ಕೆ …

Read More »

ಅರಣ್ಯ ಇಲಾಖೆ ಕಚೇರಿಯಲ್ಲಿದ್ದ ಲಕ್ಷ ಮೌಲ್ಯದ ಶ್ರೀಗಂಧದ ಕಟ್ಟಿಗೆ ಕಳ್ಳತನ..!

ಯಾದಗಿರಿ, ಅ.06: ಅರಣ್ಯ ಇಲಾಖೆ ಕಚೇರಿಯಲ್ಲಿದ್ದ ಲಕ್ಷ ಮೌಲ್ಯದ ಶ್ರೀಗಂಧದ ಕಟ್ಟಿಗೆ (Sandal Wood) ಕಳ್ಳತನವಾದ ಘಟನೆ ಯಾದಗಿರಿ(Yadagiri) ನಗರದ ಅರಣ್ಯ ಕಚೇರಿಯಲ್ಲಿ ನಡೆದಿದೆ. ಹೌದು, ಕಳೆದ ತಿಂಗಳು ಖದೀಮರು ತಾಲೂಕಿನ ಬಾಲಗಮಡು-ಹಂದರಕಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಗಿಡಗಳನ್ನು ಕಡಿದು ಸಾಗಿಸುತ್ತಿದ್ದರು. ಈ ವೇಳೆ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಬರೊಬ್ಬರಿ 8 ಲಕ್ಷ ಮೌಲ್ಯದ 85 ಕೆ.ಜಿ ಕಟ್ಟಿಗೆಗಳನ್ನು ಹಾಗೂ ಕಳ್ಳನನ್ನು ವಶಕ್ಕೆ ಪಡೆದಿದ್ದರು. ಬಳಿಕ ಅದನ್ನು ನಗರದ ಅರಣ್ಯ ಕಚೇರಿಯಲ್ಲಿ …

Read More »

ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು

ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ   ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಸಡಗರ ದಿಂದ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಬೆಳಗಾವಿ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತುನಾಡಿ ಇಡೀ ರಾಜ್ಯದಲ್ಲಿ …

Read More »

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಯಾದವಾಡದಲ್ಲಿ ಎನ್‍ಆರ್‍ಎಂಎಲ್ ಯೋಜನೆಯಡಿ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ     ಮೂಡಲಗಿ : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ …

Read More »

ಆರ.ಎಂ.ಪಿ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾಳೆ.

ಆರ್. ಎಂ. ಪಿ. ವೈದ್ಯ ಮಹಾವೀರ ಬಂಕಾಪುರೆಯವರ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವನಪ್ಪಿದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿ ನಡೆದಿದೆ. ಮೃತ ಮಹಿಳೆಯ ಹೆಸರು ಶೇಜಲ ಅನಿಕೇತ್ ಮಾಳಿ (22) ಎಂದು ತಿಳಿದು‌ ಬಂದಿದೆ.‌ಆರ.ಎಂ.ಪಿ ವೈದ್ಯ ಬಂಕಾಪುರೆಯ ನಿರ್ಲಕ್ಷದಿಂದಲೇ ಆಗಿದೆ ಎಂದು ಪ. ಪಂ. ಸದಸ್ಯ ಪ್ರದೀಪ ಮಾಳಿ ಜತೆಗೆ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.ಶೇಜಲ್ ಮಾಳಿ ಎಂಬ ಗರ್ಭಿಣಿ ಮಹಿಳೆಯು ಬಂಕಾಪುರೆಯ ಆಸ್ಪತ್ರೆಗೆ ಹೆರಿಗೆಗಾಗಿ …

Read More »

ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ: ಪೊಲೀಸರ ಕೈಸೇರಿದ ಆರ್​ಟಿಒ ಅಧಿಕಾರಿಗಳ ವರದಿ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ನಾಗಭೂಷಣ್ ಅವರ ಕಾರು ಅಪಘಾತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳ ವರದಿ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರ ಕೈ ಸೇರಿದೆ.   ಆರ್​.ಟಿ.ಒ ಅಧಿಕಾರಿಗಳಿಂದ ಪೊಲೀಸರಿಗೆ ವರದಿ ಸಲ್ಲಿಕೆ: ಅಪಘಾತದ ಬಳಿಕ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ಪೊಲೀಸರು ನಟ ನಾಗಭೂಷಣ್ ಅವರ ಕಾರನ್ನು ವಶಕ್ಕೆ ಪಡೆದಿದ್ದರು. ಗಾಡಿಯನ್ನು ಪರಿಶೀಲನೆ ನಡೆಸಿದ್ದ ಆರ್.ಟಿ.ಒ ಅಧಿಕಾರಿಗಳು, ಕಾರಿನ ಟಯರ್, ಕಾರು ಜಖಂಗೊಂಡ ರೀತಿ, …

Read More »

100 ಕರ್ನಾಟಕ ಸಾರಿಗೆ ಹಾಗೂ 40 ನಾನ್​ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್​​​​ಗಳಿಗೆ ಸಿಎಂ, ಡಿಸಿಎಂ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಬಳಿ ಇಂದು ಆಯೋಜಿಸಿದ್ದ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್​​​ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು.   ‘ಪಲ್ಲಕ್ಕಿ’ಗೆ ಚಾಲನೆಇದೇ ವೇಳೆ ಪಾಯಿಂಟ್​ ಟು ಪಾಯಿಂಟ್ ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್​​​ಗಳಿಗೂ ಸಿಎಂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. …

Read More »

ಬಾಗಲಕೋಟೆ: RSS ಮುಖಂಡ ಹೃದಯಾಘಾತದಿಂದ ಕಾರಿನಲ್ಲೇ ಸಾವು

ಬಾಗಲಕೋಟೆ: ಆರ್​ಎಸ್​ಎಸ್​ ಮುಖಂಡರೊಬ್ಬರು ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ. ಸಿದ್ದು ಚಿಕ್ಕದಾನಿ ಮುಧೋಳ (55) ಮೃತರು. ಇವರು ಆರ್​​ಎಸ್​ಎಸ್​ನಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಿದ್ದು ಕಳೆದ ರಾತ್ರಿ ಬಾಗಲಕೋಟೆ ಹೋಗಿ ವಾಪಸ್​ ಬರುವಾಗ ಈ ಘಟನೆ ಸಂಭವಿಸಿದೆ. ಮುಧೋಳ ಪಟ್ಟಣದ ನಿವಾಸಿಯಾಗಿರುವ ಇವರು, ಶಿವಾಜಿ ಸರ್ಕಲ್ ಬಳಿ ಮಂಜುನಾಥ ಮೊಬೈಲ್ ಶಾಪ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಲೋಕಾಪೂರ ಪಟ್ಟಣದ ಸಮೀಪ ಇರುವ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »