Breaking News

ಪೋಷಕರ ಜೀವ ಬೆದರಿಕೆ ಆರೋಪ ,ರಕ್ಷಣೆ ಕೋರಿ ರಕ್ಷಣೆ ಕೋರಿ ಬಳ್ಳಾರಿ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ಮನವಿ

ಬಳ್ಳಾರಿ, ಜನವರಿ 28: ಪ್ರೀತಿಸಿ ಮದುವೆಯಾಗಿದಕ್ಕೆ ನವ ಜೋಡಿಗಳಿಗೆ ವಧುವಿನ ಪೋಷಕರು ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಪೋಷಕರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನವಜೋಡಿರಕ್ಷಣೆ ಕೋರಿ ಬಳ್ಳಾರಿ (Bellary) ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ (SP) ಅವರಿಗೆ ಮನವಿ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದ ನಾರಾಯಣ, ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದ ಶಿಲ್ಪಾ ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದಾರೆ. ಶಿಲ್ಪಾ ಬಳ್ಳಾರಿಯಲ್ಲಿ ದೊಡ್ಡಮ್ಮನ ಮನೆಯಲ್ಲಿದ್ದುಗೊಂಡು, ಹೈಸ್ಕೂಲ್ ಓದುವ ವೇಳೆ ನಾರಾಯಣನನ್ನು …

Read More »

ಶಿಕ್ಷಣಕ್ಕಾಗಿ ಅಕ್ಷರಶಃ ಮುಳ್ಳಿನ ಹಾದಿ ತುಳಿಯುತ್ತಿರುವ 70 ಶಾಲಾ ಮಕ್ಕಳು

ಶಿಕ್ಷಣಕ್ಕಾಗಿ ಅಕ್ಷರಶಃ ಮುಳ್ಳಿನ ಹಾದಿ ತುಳಿಯುತ್ತಿರುವ 70 ಶಾಲಾ ಮಕ್ಕಳು ಕಾಲಲ್ಲಿ ಶೂ, ಚಪ್ಪಲಿ ಇಲ್ಲ, ನಡೆದುಕೊಂಡೇ ಬರುವ ಮಕ್ಕಳು, ಶಾಲೆಗೆ ಬರುವ ರಸ್ತೆ ಮಧ್ಯೆ ಮುಳ್ಳಿನ ಗಿಡಗಳನ್ನಿಟ್ಟಿರುವ ಅಕ್ಕಪಕ್ಕದ ಜಮೀನು ಮಾಲೀಕರು, ಶಾಲೆಗೆ ಹೋಗಲು ಇರುವ ಆ ದಾರಿಯಲ್ಲಿ ಮುಳ್ಳಿನಕಂಟಿಗಳಿದ್ರೂ ಅದನ್ನ ಸರಿಸಿ ದಾಟಿಕೊಂಡು ಮುನ್ನಡೆಯುತ್ತಿರುವ ಮಕ್ಕಳು… ಇದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಳ್ಳಿತೋಟ ಗ್ರಾಮದಲ್ಲಿನ ಸರ್ಕಾರಿ ಮಕ್ಕಳ ಸ್ಥಿತಿ. ಹೌದು ಇಲ್ಲಿ ಮಕ್ಕಳು ಶಾಲೆಗೆ ಹೋಗಬೇಕು …

Read More »

ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ;

ಹುಬ್ಬಳ್ಳಿ, ಜ.28: ವಾಣಿಜ್ಯ ನಗರಿ ಹುಬ್ಬಳ್ಳಿ ಅದ್ಧೂರಿ ಸಾಂಸ್ಕ್ರತಿಕ ಮಹೋತ್ಸವ ಮತ್ತು ಕ್ರೀಡೋತ್ಸವಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಪ್ರತಿವರ್ಷದಂತೆ ‘ಸಂಸದ ಸಾಂಸ್ಕೃತಿಕ ಮಹೋತ್ಸವ-24’ ಅಂಗವಾಗಿ 5ನೇ ಸಾಲಿನ ಹುಬ್ಬಳ್ಳಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ (Kite Festival) ಹಾಗೂ ಸಾಂಸ್ಕೃತಿಕ ಮಹೋತ್ಸವವನ್ನು ಏರ್ಪಡಿಸಿದ್ದು ನಿನ್ನೆ ಅದ್ದೂರಿ ಚಾಲನೆ ಸಿಕ್ಕಿದೆ. ಚೋಟಾ ಮುಂಬೈಯಲ್ಲಿ ಐತಿಹಾಸಿಕ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದ ಕಲರವ ಹರಡಿದೆ. ಹುಬ್ಬಳ್ಳಿ ಶಹರದಲ್ಲಿ ಸಂಸದ ಸಾಂಸ್ಕ್ರತಿಕ …

Read More »

ಹಳೆ ಸ್ನೇಹಿತರು ಬಿಜೆಪಿಗೆ ವಾಪಸ್ಸಾಗುವಂತೆ ಒತ್ತಡ ಹೇರುತ್ತಿರೋದು ಸತ್ಯ: ಲಕ್ಷ್ಮಣ ಸವದಿ

ಹಳೆ ಸ್ನೇಹಿತರು ಬಿಜೆಪಿಗೆ ವಾಪಸ್ಸಾಗುವಂತೆ ಒತ್ತಡ ಹೇರುತ್ತಿರೋದು ಸತ್ಯ ಅದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ: ಲಕ್ಷ್ಮಣ ಸವದಿ   ಬಿಜೆಪಿಯಲ್ಲಿರುವ ಹಳೆ ಸ್ನೇಹಿತರು ತನ್ನನ್ನು ವಾಪಸ್ಸು ಬರುವಂತೆ ಕರೆಯುತ್ತಿದ್ದಾರೆ, ಅವರ ಹೆಸರುಗಳನ್ನು ಮಾಧ್ಯಮಗಳಲ್ಲಿ ಹೇಳಿಕೊಂಡು ಸಾರ್ವಜನಿಕಗೊಳಿಸುವುದು ತನಗೆ ಇಷ್ಟವಿಲ್ಲ ಎಂದು ಲಕ್ಷ್ಮಣ ಸವದಿ ಹೇಳಿದರು.

Read More »

ಯಾರು ಹೋಗ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ, ಜನವರಿ 27: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish Shettar)ಅವರು ಬಿಜೆಪಿಗೆ ಘರ್​ವಾಪ್ಸಿ ಆಗಿದ್ದಾರೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ಸೇರ್ಪಡೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಮಾತು ಕೇಳಿಬರುತ್ತಿದೆ. ಸದ್ಯ ಈ ವಿಚಾರವಾಗಿ ನಗರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ PWD ಸಚಿವ ಸತೀಶ್ ಜಾರಕಿಹೊಳಿ, ಯಾರು ಹೋಗುತ್ತಾರೋ ಬಿಡುತ್ತಾರೋ ನಮ್ಮ ಕೈಯಲ್ಲಿ ಇಲ್ಲ. ಹೋಗುವ ಮನಸಿದ್ದರೆ ತಡೆಯಲು ಆಗಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ BJPಗೆ ಹೋಗಿದ್ದಾರೆ. ಮುಂದೆ ಯಾರು …

Read More »

ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಫೈನಲ್

ಬೆಂಗಳೂರು, ಜನವರಿ 25: ಮುಂಬರುವ ಲೋಕಸಭಾ ಚುನಾವಣೆಗೆ ( Lok Sabha Elections 2024) ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ (BJP, JDS seat sharing) ಶೀಘ್ರ ಅಂತಿಮಗೊಳ್ಳಲಿದೆ. ಜನವರಿ 27ರ ನಂತರ ದೆಹಲಿಯಲ್ಲಿ ಉಭಯ ಪಕ್ಷಗಳ ನಾಯಕರು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ನಾಯಕರು ಈಗಾಗಲೇ ಕ್ಷೇತ್ರದ ಹಂಚಿಕೆ ಕುರಿತು ಎರಡು ಸುತ್ತಿನ ಸಭೆ ನಡೆಸಿದ್ದಾರೆ. ಬಿಜೆಪಿ ನಾಯಕರ ಜೊತೆ ಹೆಚ್​ಡಿ ಕುಮಾರಸ್ವಾಮಿ ಎರಡು ಸುತ್ತಿನ ಚರ್ಚೆ ಮಾಡಿದ್ದಾರೆ. …

Read More »

ಸರ್ಕಾರ ಟೋಪಿ ಹಾಕುವ ಚಾಳಿ ಮುಂದುವರಿಸಿದೆ: ಹೆಚ್ ಡಿಕೆ ಟೀಕೆ

ಬೆಂಗಳೂರು: ರಾಜ್ಯ ಸರ್ಕಾರದ ನಾನಾ ಇಲಾಖೆಗಳ ಸುಮಾರು 11,366 ನೌಕರರು ಒಪಿಎಸ್ (ಹಳೆಯ ನಿಶ್ಚಿತ ಪಿಂಚಣಿ ಯೋಜನೆ) ವ್ಯಾಪ್ತಿಗೆ ಒಳಪಡಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಸರ್ಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿಯನ್ನು ಮುಂದುವರಿಸಿದೆ ಎಂದು ಹೇಳಿದ್ದಾರೆ.   ಈ ಬಗ್ಗೆ ಎಕ್ಸ್ ನಲ್ಲಿ (X) ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯ ಕಾಂಗ್ರೆಸ್ (Karnataka …

Read More »

ಶೆಟ್ಟರ್ ಬಿಜೆಪಿಗೆ ವಾಪಸ್ ಬೆನ್ನಲ್ಲೇ ಲಕ್ಷ್ಮಣ ಸವದಿ ಘರ್ ವಾಪಸಿ ಮಾಡ್ತಾರಾ? ಸಾಹುಕಾರ್ ಹೇಳಿದ್ದೇನು?

ಬೆಂಗಳೂರು,): ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಚ್ಚರಿ ಎಂಬಂತೆ ಕಾಂಗ್ರೆಸ್​ಗೆ ಕೈಕೊಟ್ಟು ವಾಪಸ್ ಬಿಜೆಪಿಗೆ ಸೇರ್ಪಡೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಲಕ್ಷ್ಮಣ ಸವದಿ ಅವರು ಸಹ ಬಿಜೆಪಿಗೆ ವಾಪಸ್ ಆಗುತ್ತಾರಾ ಎನ್ನುವ ಚರ್ಚೆಗಳು ನಡೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಇದೀಗ ಇದಕ್ಕೆ ಸ್ವತಃ ಲಕ್ಷ್ಮಣ ಸವಧಿ ಪ್ರತಿಕ್ರಿಯಿಸಿದ್ದು, ಮತ್ತೆ ಬಿಜೆಪಿ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕೂ ನಾನು ಮತ್ತೆ ಬಿಜೆಪಿಗೆ ಹೋಗಲ್ಲ. ಜಗದೀಶ್​ ಶೆಟ್ಟರ್ ಮತ್ತೆ ಬಿಜೆಪಿಗೆ …

Read More »

ಗಣರಾಜ್ಯೋತ್ಸವದ ಮಹತ್ವ, ಶುಭ ಸಂದೇಶಗಳು ಇಲ್ಲಿದೆ

ಭಾರತವು ಗಣರಾಜ್ಯೋತ್ಸವವನ್ನು ಆಚರಿಸಲು ಸಿದ್ಧವಾಗಿದೆ. 26 ಜನವರಿ 1950 ರಂದು ಭಾರತ ಮೊದಲ ಗಣರಾಜ್ಯೋತ್ಸವವನ್ನು ಆಚರಿಸಿತು. ದೇಶ 2024ರಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಿದೆ. ಭಾರತದ ಸಂವಿಧಾನ ಸಭೆಯು 26 ನವೆಂಬರ್ 1949 ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿತು ಮತ್ತು ಭಾರತದ ಸಂವಿಧಾನವು 26 ಜನವರಿ 1950 ರಂದು ಇಡೀ ದೇಶದಲ್ಲಿ ಜಾರಿಗೆ ಬಂದಿತು ಎಂಬುದು ಗಮನಾರ್ಹವಾಗಿದೆ.ಈ ದಿನದಂದು ದೇಶದಾದ್ಯಂತ ದೇಶಭಕ್ತಿ ಮತ್ತು ಉತ್ಸಾಹದ ವಾತಾವರಣವಿರುತ್ತದೆ. ಈ ದಿನದಂದು ಹೆಚ್ಚಿನ ಕಛೇರಿಗಳು …

Read More »

ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಶಿಫ್ಟ್ ಆಗಲು ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (National pension scheme-NPS) ವ್ಯಾಪ್ತಿಯಿಂದ ಹಳೆಯ ಪಿಂಚಣಿ ಯೋಜನೆಗೆ (Old Pension Scheme-OPS) ಬದಲಾಗಲು ಅವಕಾಶ ಮಾಡಿಕೊಟ್ಟಿದೆ.   ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ. ಹಳೆಯ …

Read More »