Breaking News

ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ. 9ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ಬಾಲಕ ಅರ್ಧ ವಾರ್ಷಿಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಈ ಘಟನೆ ಸಂಭವಿಸಿದೆ. ರಾಹುಲ್​ ಕೋಲಕಾರ (15) ಮೃತ ವಿದ್ಯಾರ್ಥಿ. ಅರ್ಧ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ ಬಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ತೀವ್ರವಾಗಿ ತೊಂದರೆ ಉಂಟಾದಾಗ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ …

Read More »

ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ

ಬೆಳಗಾವಿ: ಯಲ್ಲಮ್ಮದೇವಿ ಉತ್ತರ ಕರ್ನಾಟಕದ ಆರಾಧ್ಯ ದೇವಿ. ಲಕ್ಷಾಂತರ ಸಂಖ್ಯೆಯ ಭಕ್ತರು ಭೇಟಿ ಕೊಡುವ ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು. 40 ದಿನಗಳ ಅವಧಿಯಲ್ಲಿ ಬರೋಬ್ಬರಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಎರಡು ಹಂತದಲ್ಲಿ ಹುಂಡಿ ಎಣಿಕೆ ಕಾರ್ಯ: ಏಳುಕೊಳ್ಳದ ಯಲ್ಲಮ್ಮ ದೇವಿಯ ದರ್ಶನಕ್ಕೆ ಕರ್ನಾಟಕ ಅಷ್ಟೇ ಅಲ್ಲದೇ, ನೆರೆಯ ಮಹಾರಾಷ್ಟ್ರ, ಗೋವಾ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು …

Read More »

ಸತೀಶ ಜಾರಕಿಹೊಳಿ ಸೇರಿ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ: ಒಟ್ಟು 61 ಜನರಿಗೆ ಬೆದರಿಕೆ

ಬೆಳಗಾವಿ: ಚೆನ್ನಮ್ಮ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರು, ಸಾಹಿತಿಗಳು ಮತ್ತು ಚಿತ್ರ ನಟರಿಗೆ ಜೀವ ಬೆದರಿಕೆ ಹಾಕಿರುವ ಅನಾಮಧೇಯ ಪತ್ರವೊಂದು ಬಂದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪತ್ರದಲ್ಲಿ ಹಲವು ಪ್ರಗತಿಪರರು, ವಿಚಾರವಾದಿಗಳಿಗೂ, ಸಾಹಿತಿಗಳು, ನಟರು, ಸಚಿವರ ಹೆಸರುಗಳನ್ನು ಉಲ್ಲೇಖಿಸಿ ಆರೋಪಿಯು ಜೀವ ಬೆದರಿಕೆ ಹಾಕಿದ್ದಾನೆ ಸೆಪ್ಟೆಂಬರ್​ 20 ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲ ಮಂಟಪ ಆಶ್ರಮಕ್ಕೆ ಬೆದರಿಕೆ …

Read More »

ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಅರೆಸ್ಟ್​

ಬೆಂಗಳೂರು: ರಾಜ್ಯದ ಕೆಲ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಹಿಂದೂ ಸಂಘಟನೆ ಕಾರ್ಯಕರ್ತನಾಗಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಂತೆ ಸಾಹಿತಿಗಳ ನಿಯೋಗ ಇತ್ತೀಚೆಗೆ ಗೃಹ ಸಚಿವರಿಗೆ ಮನವಿ ಸಲ್ಲಿಸಿತ್ತು. ಅದರಂತೆ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಾಹಿತಿಗಳಾದ ಕುಂ. ವೀರಭಧ್ರಪ್ಪ, ಬಿ ಟಿ ಲಲಿತಾ ನಾಯಕ್, …

Read More »

ಬಿಎಸ್​ವೈ ಜೈಲಿಗೆ ಹೋಗಲು ಎಚ್ ಡಿ ಕುಮಾರಸ್ವಾಮಿ ಕಾರಣ: ಶಾಸಕ ಸವದಿ

ಚಿಕ್ಕೋಡಿ: ಮಾಜಿ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರು ಎಂದು ಆರೋಪ ಮಾಡಿ ದ್ವೇಷ ಸಾಧಿಸಲು ಯಡಿಯೂರಪ್ಪ ಹೋಗಿದ್ದವರು. ಅದೇ ಕುಮಾರಸ್ವಾಮಿ ಅವರು ಬಿಎಸ್​ವೈ ಅವರನ್ನು ಭ್ರಷ್ಟಾಚಾರ ಸುಳಿಯಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿದರು. ಆದರೆ, ಇವತ್ತು ಅಧಿಕಾರಿಗೋಸ್ಕರ ಇಬ್ಬರು ನಾಯಕರು ಸ್ವಾಭಿಮಾನ ಬದಿಗೆ ಒತ್ತಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, …

Read More »

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ತಂಬಾಕು ಅಂಗಡಿ ಮೇಲೆ ಪೊಲೀಸರ​ ದಾಳಿ

ಕಡಬ (ದಕ್ಷಿಣಕನ್ನಡ) : ಶಾಲೆ ಬಳಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಕಚೇರಿ ಸ್ಪಂದಿಸಿದೆ. ಈ ಸಂಬಂಧ ಕಡಬ ತಾಲೂಕಿನ ಬಿಳಿನೆಲೆ ಕೈಕಂಬ ಶಾಲೆಯ ಬಳಿ ಇರುವ ಅಂಗಡಿ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂಗಡಿಯಲ್ಲಿ ಮಾರಾಟ ಮಾಡುತ್ತಿದ್ದ ತಂಬಾಕು ಮತ್ತು ಸಿಗರೇಟ್​ ಮುಂತಾದವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ಇಲ್ಲಿನ …

Read More »

2000 ನೋಟುಗಳ ವಿನಿಮಯದ ಅವಧಿ ವಿಸ್ತರಿಸಿದ ಆರ್​ಬಿಐ: ಅಕ್ಟೋಬರ್​ 7 ಕೊನೆ ದಿನ

ನವದೆಹಲಿ: ಹಿಂಪಡೆಯಲಾಗಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ, ಠೇವಣಿ ಅವಧಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) ಇನ್ನಷ್ಟು ಕಾಲ ವಿಸ್ತರಿಸಿದೆ. ಇಂದೇ (ಸೆ.30)ಕೊನೆಯಾಗಿದ್ದ ಗಡುವನ್ನು ಅಕ್ಟೋಬರ್​ 7ರ ವರೆಗೆ ಕಾಲಾವಕಾಶ ನೀಡುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಆರ್​ಬಿಐ, ಬ್ಯಾಂಕ್​ ರಜೆಗಳಿಂದಾಗ ಅಡ್ಡಿ ಮತ್ತು ಜನರ ಅನುಕೂಲಕ್ಕಾಗಿ ಎರಡು ಸಾವಿರದ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಇನ್ನೂ 7 ದಿನಗಳ ಕಾಲಾವಕಾಶ ನೀಡಲಾಗಿದೆ. ಗ್ರಾಹಕರು ಬ್ಯಾಂಕ್​ಗಳಿಗೆ ತೆರಳಿ …

Read More »

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನೀರು ಬಿಡುವ ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು. ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ …

Read More »

ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಸಿಸಿಬಿ ಮಹಜರು

ದಾವಣಗೆರೆ: ಸಾಹಿತಿಗಳಿಗೆ ಎರಡು ವರ್ಷಗಳಿಂದ ಜೀವ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದ ಎಂಬ ಆರೋಪ ಎದುರಿಸುತ್ತಿರುವ ದಾವಣಗೆರೆಯ ಶಿವಾಜಿ ರಾವ್ ಜಾಧವ್ ಬಂಧನವಾಗಿದೆ. ಸಿಸಿಬಿ ಪೊಲೀಸರು ದಾವಣಗೆರೆ ನಗರದ ಈಡ್ಲ್ಯೂಎಸ್ ಕಾಲೋನಿಯ ಆರೋಪಿಯ ನಿವಾಸದಲ್ಲಿಂದು ಮಹಜರು ಮಾಡಿದರು. ಎರಡು ಕಾರುಗಳಲ್ಲಿ ಆಗಮಿಸಿದ ಸಿಸಿಬಿ ಅಧಿಕಾರಿಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಮಹಜರು ಮಾಡಿ ಮಾಹಿತಿ ಕಲೆ ಹಾಕಿ ಆರೋಪಿಗೆ ಸೇರಿದ ಪೆನ್ನು, ಡೈರಿ ಕೆಲ ಪುಸ್ತಕಗಳನ್ನು …

Read More »

‘ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ.

ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ …

Read More »