ಹುಬ್ಬಳ್ಳಿ: ತ್ವರಿತ ಹಾಗೂ ಸಂಘಟಿತ ಕಾರ್ಯಾಚರಣೆ ಮೂಲಕ ನೈಋತ್ಯ ರೈಲ್ವೆ ವ್ಯಾಪ್ತಿಯ ರೈಲ್ವೆ ಸಂರಕ್ಷಣಾ ಪಡೆ ಮೈಸೂರು, ಆರು ತಿಂಗಳ ಗಂಡು ಮಗುವನ್ನು ಅಪಹರಣಕಾರಳಿಂದ ಕೇವಲ 30 ನಿಮಿಷಗಳಲ್ಲಿ ರಕ್ಷಿಸಿ ಪೋಷಕರಿಗೆ ಒಪ್ಪಿಸಿದೆ. ಅಕ್ಟೋಬರ್ 22, 2025 ರಂದು ಬೆಳಗಿನ ಜಾವ 5:20ರ ಸುಮಾರಿಗೆ, ಆರ್.ಪಿ.ಎಫ್/ಮೈಸೂರು ಕಾನ್ಸ್ಟೇಬಲ್ ಸಿ.ಎಂ. ನಾಗರಾಜು ಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಮಗು ನಾಪತ್ತೆಯಾದ ಬಗ್ಗೆ ತಿಳಿಸಿ ಅಳುತ್ತಿದ್ದ ಮಹಿಳೆಯನ್ನು ಗಮನಿಸಿದರು. ತಕ್ಷಣ …
Read More »ಮದುವೆ ಮಕ್ಕಳಾಟವಲ್ಲ, ರಾಜಿ, ಹೊಂದಾಣಿಕೆ ಇರಬೇಕು: ಹೈಕೋರ್ಟ್
ಬೆಂಗಳೂರು: ಮದುವೆ ಎಂಬುದು ಕೇವಲ ಮಕ್ಕಳಾಟವಲ್ಲ ಎಂದು ಒತ್ತಿ ಹೇಳಿರುವ ಹೈಕೋರ್ಟ್, ವೈವಾಹಿಕ ಜೀವನದಲ್ಲಿ ಪತಿ – ಪತ್ನಿ ಒಬ್ಬರಿಗೊಬ್ಬರು ರಾಜಿ ಮತ್ತು ಹೊಂದಾಣಿಕೆ ಮಾಡಿಕೊಂಡು ಜೀವನ ಮುನ್ನಡೆಸಬೇಕಾಗುತ್ತದೆ ಎಂದು ತಿಳಿಸಿದೆ. ಪತ್ನಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ …
Read More »ಸಿಎಂ ಬದಲಾವಣೆ ಚರ್ಚೆ: ಹೈಕಮಾಂಡ್ ನಿರ್ಧಾರ ಅಂತಿಮ:ಡಾ.ಜಿ.ಪರಮೇಶ್ವರ್
ಬೆಂಗಳೂರು: “ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್ಪಿ ಸಭೆ ಕರೆಯುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, “ಹೈಕಮಾಂಡ್ ಸಂದರ್ಭ ಬಂದಾಗ ಸಿಎಲ್ಪಿ ಕರೆಯುತ್ತಾರೆ. ಆಗ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್ಗೆ ವರದಿ ಕೊಡುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ. ಇದನ್ನು ಶಾರ್ಟ್ ಕಟ್ ಆಗಿ ಹೇಗೆ …
Read More »ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಆದೇಶ ಪಾಲಿಸದಿದ್ರೆ ಕಠಿಣ ಕ್ರಮ- ಪ್ರಲ್ಹಾದ್ ಜೋಶಿ
ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಆದೇಶ ಪಾಲಿಸದಿದ್ರೆ ಕಠಿಣ ಕ್ರಮ- ಪ್ರಲ್ಹಾದ್ ಜೋಶಿ ನವದೆಹಲಿ/ಹುಬ್ಬಳ್ಳಿ: ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ತರಕಾರಿ ತೈಲ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ (ನಿಯಂತ್ರಣ) ಆದೇಶ-2011 (VOPPA)ಕ್ಕೆ …
Read More »ಸೂರ್ಯನಿಗೂ ಚಂದ್ರನಿಗೂ ಮತ್ತು ಅಮಾವಾಸ್ಯೆ – ಹುಣ್ಣಿಮೆಗೂ ವ್ಯತ್ಯಾಸ ತಿಳಿದು ಮಾತನಾಡಲಿ: ತೇಜಸ್ವಿ ಸೂರ್ಯ
ಬೆಂಗಳೂರು: “ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದುಕೊಂಡು ಸಿಎಂ ಮುಂದೆ ಆ ಥರ ಹೇಳಿಕೆ ಕೊಡಲಿ” ಎಂದು ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಹಲವು ಬಾರಿ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಅವರ ಸ್ಥಾನಕ್ಕೆ ಶೋಭೆ ತರದ ಹಾಗೆ ವೈಯಕ್ತಿಕ ಟೀಕೆ ಮಾಡ್ತಾರೆ. ಹಿಂದೆ ಚುನಾವಣೆ ವೇಳೆಯೂ ಟೀಕಿಸಿದ್ರು. ಅವರು ಹಿರಿಯರು, ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ …
Read More »ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲಿಗೆ ಬೀಗಮುದ್ರೆ ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ
ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಗರ್ಭಗುಡಿಯ ಬಾಗಿಲಿಗೆ ಬೀಗಮುದ್ರೆ ಹಾಕಲಾಯಿತು. ಈ ಕ್ಷಣಕ್ಕೆ ಸಾಕ್ಷಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸ್ವರೂಪ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಮಾಜಿ …
Read More »ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ:ಶ್ರೀರಾಮುಲು
ಹುಬ್ಬಳ್ಳಿ : ಪ್ರಿಯಾಂಕ್ ಖರ್ಗೆ ಅವರು ಇವತ್ತು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರ ವಿರುದ್ದ ಯಾರೇ ಮಾತನಾಡಿದ್ರೂ ಅವರನ್ನು ಜೈಲಿಗೆ ಹಾಕಿಸುತ್ತಾರೆ. ಅವರಿಗೆ ತೊಂದರೆ ಮಾಡುತ್ತಿದ್ದಾರೆ. ಆರ್ಎಸ್ಎಸ್ ಬೆಂಬಲಿಸುವವರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಮುಂದಕ್ಕೆ ಈ ರಾಜ್ಯದ ಉಪಮುಖ್ಯಮಂತ್ರಿಗಳಾಗಬೇಕು ಎಂಬ ಕನಸಿಟ್ಟುಕೊಂಡು ಈ ರೀತಿಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ …
Read More »ಧಾರವಾಡದ ನವಲಗುಂದದಲ್ಲಿ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಪ್ರಕರಣ.. ಹಲ್ಲೆ ನಡೆಸಿದ ಆರೋಪಿ ಬಂಧನ.
ಧಾರವಾಡದ ನವಲಗುಂದದಲ್ಲಿ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಪ್ರಕರಣ.. ಹಲ್ಲೆ ನಡೆಸಿದ ಆರೋಪಿ ಬಂಧನ. ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಿ ಪೊಲೀಸರು ಆತನನ್ನು ಜೈಲಿಗೆ ಅಟ್ಟುವಲ್ಲಿ ನವಲಗುಂದ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆದಿದ್ದ ವೇಳೆ ಅಣ್ಣಿಗೇರಿ ಪಿಎಸ್ಐ ಉಮಾದೇವಿಯ ಜೀಪಿಗೆ ಬೈಕ್ ಮೇಲೆ ಬಂದ ದ್ಯಾಮನಗೌಡ ಎಂಬುವವನು ಡಿಕ್ಕಿ ಹೊಡೆದಿದ್ದ. ದ್ಯಾಮನಗೌಡ ಕುಲಕರ್ಣಿ ಎಂಬಾತನೇ …
Read More »ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ನಾವು 2028ಕ್ಕೆ ಸಿಎಂ ಕ್ಲೈಮ್ ಮಾಡುತ್ತೇವೆ ಅಂತಾ ಈ ಮುಂಚೆಯೇ ಹೇಳಿದ್ದೇವೆ. ಅದನ್ನು ಪಕ್ಷ ತೀರ್ಮಾನ ಮಾಡಬೇಕು. ಇನ್ನು ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ಕಾಕತಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ
ವೀರನಾರಿಯ ಧೈರ್ಯ, ತ್ಯಾಗ ಮತ್ತು ನಾಡಪ್ರೀತಿಯ ಸಂಕೇತವಾದ ರಾಣಿ ಕಿತ್ತೂರ ಚನ್ನಮ್ಮನ ಸ್ಮರಣಾರ್ಥವಾಗಿ, ಅವರ ಹುಟ್ಟೂರಾದ ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಕಾಕತಿಯು ರಾಣಿ ಚೆನ್ನಮ್ಮನ ಇತಿಹಾಸದ ಪಾವನ ನೆಲವಾಗಿರುವ ಹಿನ್ನಲೆಯಲ್ಲಿ, ಪ್ರತಿವರ್ಷದಂತೆ ಕಿತ್ತೂರು ಉತ್ಸವದ ಸಾಂಕೇತಿಕ ಆರಂಭ ಇಲ್ಲಿ ನಡೆಯುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಈ ಬಾರಿ ಉತ್ಸವವನ್ನು ರಾಣಿ ಚನ್ನಮ್ಮಳ ಶೌರ್ಯ, …
Read More »
Laxmi News 24×7