ಚಿಕ್ಕಮಗಳೂರು : ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಅವರು ನನ್ನ ಜೊತೆ 2 ಬಾರಿ ಫೋನ್ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. 15 ರ ರಾತ್ರಿವರೆಗೂ ಮಧ್ಯ ಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇದೆ. 15ಕ್ಕೆ ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ. ನಂತರ ಎಂ ಪಿ ರೇಣುಕಾಚಾರ್ಯ ಹೇಳಿಕೆಗೆ ಸಿ ಟಿ ರವಿ …
Read More »ಎಸ್ಎಂ ಕೃಷ್ಣ ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾದ ಸಂದರ್ಭದಲ್ಲಿ ‘ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪ ಶ್ರಮಿಸಿದ್ದಾರೆ ಎಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಹೇಳಿದ್ದಾರೆ. ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಇದೇ ವೇಳೆ, ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, …
Read More »ಸಿಎಂ, ಡಿಸಿಎಂರಿಂದ ತೆಲಂಗಾಣದಲ್ಲಿ ಮತಬೇಟೆ
ಬೆಂಗಳೂರು: ತೆಲಂಗಾಣ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಚುನಾವಣಾ ಮಾದರಿಯನ್ನೇ ತೆಲಂಗಾಣದಲ್ಲಿ ಕಾಂಗ್ರೆಸ್ ಅಳವಡಿಸಿಕೊಂಡಿದೆ. ರಾಜ್ಯ ಸಿಎಂ, ಡಿಸಿಎಂ ಸೇರಿ ಸಚಿವರುಗಳು, ಕೈ ಶಾಸಕರ ದಂಡೇ ತೆಲಂಗಾಣ ಅಖಾಡಕ್ಕಿಳಿದಿದೆ. ಆ ಮೂಲಕ ಕರ್ನಾಟಕದ ಭರ್ಜರಿ ಜಯಭೇರಿಯನ್ನು ತೆಲಂಗಾಣದಲ್ಲೂ ಪುನರಾವರ್ತಿಸಲು ಮುಂದಾಗಿದೆ. ತೆಲಂಗಾಣದ ಚುನಾವಣ ಅಖಾಡ ರಂಗೇರಿದೆ. ಆಡಳಿತಾರೂಢ ಬಿಆರ್ಎಸ್ ಹ್ಯಾಟ್ರಿಕ್ ಗೆಲುವಿಗೆ ಹೋರಾಟ ನಡೆಸಿದರೆ, ಕಾಂಗ್ರೆಸ್ ಮೊದಲ ಬಾರಿಗೆ ತೆಲಂಗಾಣದ ಗದ್ದುಗೆ ಹಿಡಿಯಲು ತನ್ನ ಎಲ್ಲ ಕಾರ್ಯತಂತ್ರ, …
Read More »ರಾಣಿಪೇಟೆಯಲ್ಲಿ ಪಟಾಕಿ ಸಿಡಿದು ಬಾಲಕಿ ಸಾವು; ಬೆಳಕಿನ ಹಬ್ಬದಲ್ಲಿ ಕತ್ತಲಾದ ಬದುಕು
ರಾಣಿಪೇಟೆ (ತಮಿಳುನಾಡು) : ಬೆಳಕಿನ ಹಬ್ಬದ ಸಂಭ್ರಮದಲ್ಲಿ ಅವಘಡವೊಂದು ನಡೆದು ಬದುಕು ಕತ್ತಲಾಗಿದೆ. ದೀಪಾವಳಿ ಸಂಭ್ರಮಾಚರಣೆಯಲ್ಲಿದ್ದ ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ಮಂಪಕ್ಕಂನ ಆದಿ ದ್ರಾವಿಡರ ವಸತಿ ಪ್ರದೇಶದಲ್ಲಿ ಸೂತಕದ ಛಾಯೆ ಆವರಿಸಿದೆ. ಭಾನುವಾರ ಪಟಾಕಿ ಸಿಡಿಸುವ ಸಮಯದಲ್ಲಿ ಪುಟ್ಟ ಬಾಲಕಿಯೋರ್ವಳು ಸಾವನ್ನಪ್ಪಿದ್ದಾಳೆ. ಆದಿ ದ್ರಾವಿಡರ ವಸತಿ ಪ್ರದೇಶದ ನಿವಾಸಿಗಳಾದ ರಮೇಶ್ (28) ಮತ್ತು ಅಶ್ವಿನಿ (25) ಎಂಬುವರ 4 ವರ್ಷದ ಕಂದಮ್ಮ ಮೃತ ದುರ್ದೈವಿ. ದೀಪಾವಳಿ ಹಬ್ಬದ ನಿಮಿತ್ತ ರಮೇಶ್ ಅವರ …
Read More »ವಯಸ್ಸಾದ ಪೋಷಕರ ರಕ್ಷಣೆ ಮಕ್ಕಳ ಜವಾಬ್ದಾರಿ: ಹೈಕೋರ್ಟ್ ಆದೇಶ
ಬೆಂಗಳೂರು: ವಯಸ್ಸಾದ ಪೋಷಕರನ್ನು ಸಂಧ್ಯಾಕಾಲದಲ್ಲಿ ಅವರ ಆರೈಕೆ ಮಾಡುವ ಜವಾಬ್ದಾರಿ ಕಾನೂನು, ಧರ್ಮ ಮತ್ತು ನೈತಿಕತೆಯು ಮಕ್ಕಳ ಮೇಲಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಂದೆಯಿಂದ ಆಸ್ತಿಯನ್ನು ಉಡುಗೊರೆಯಾಗಿ ಪಡೆದ ನಂತರ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದ ಪುತ್ರಿ ಮತ್ತು ಅಳಿಯನ ವರ್ತನೆ ಗಮನಿಸಿ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಪೋಷಕರು ಆಸ್ತಿಯನ್ನು ಉಡುಗೊರೆಯಾಗಿ ನೀಡಿದಾಗ ಈ ಜವಾಬ್ದಾರಿ …
Read More »ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ,
ಬಳ್ಳಾರಿ : ಜಿಲ್ಲೆಯ ತೋರಣಗಲ್ಲು ರೈಲು ನಿಲ್ದಾಣ ಪ್ರದೇಶದ 11ನೇ ವಾರ್ಡ್ನ ಘೋರ್ಪಡೆ ನಗರದಲ್ಲಿ ಎಚ್ಎಲ್ಸಿ ಕಾಲುವೆಯ ಬಳಿ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ದಾಳಿ ನಡೆದಿದೆ. ಪರಿಣಾಮ ಪುರಸಭೆ ಸದಸ್ಯ ನಾಗರಾಜ ನಾಯ್ಕ (32) ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೇ ವಾರ್ಡ್ ನಿವಾಸಿ ಶಿವಕುಮಾರ್ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪಿ. ನಾಗರಾಜ ನಾಯ್ಕ ಅವರಿಗೆ ತಲೆ, ಬೆನ್ನಿಗೆ ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಜಿಂದಾಲ್ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ …
Read More »ದೇವೇಗೌಡರ ಆಶೀರ್ವಾದ ಪಡೆದ ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಿ.ವೈ. ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಮಾಜಿ ಪ್ರಧಾನಮಂತ್ರಿ ದೇವೇಗೌಡರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿ, ಅವರ ಆಶೀರ್ವಾದ ಪಡೆದಿದ್ದೇನೆ ಎಂದರು. ಇಷ್ಟು ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟು ಚಿಕ್ಕ ವಯಸ್ಸಿಗೇ ದೊಡ್ಡ ಜವಾಬ್ದಾರಿ ಕೊಟ್ಟ ಬಗ್ಗೆ ಹೆಮ್ಮೆ …
Read More »ಬೆಂಗಳೂರಲ್ಲಿ ನಡೆದ ಸರಣಿ ಅಪಘಾತ
ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದ ಬಳಿ ಕಾರು ಚಾಲಕನೊಬ್ಬ ನಿಯಂತ್ರಣ ತಪ್ಪಿ ಸರಣಿ ಅಪಘಾತ ಎಸಗಿದ ಘಟನೆ ಭಾನುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಒಡಿಶಾ ಮೂಲದ ಸ್ಮಿತಾ, ಕಿರಣ್, ಮೊಯ್ಸಿನ್ ಎಂಬುವರು ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳ ಪೈಕಿ ಸ್ಮಿತಾಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಘಟನೆ ಸಂಬಂಧ ಕಾರು ಚಾಲಕ ಬನ್ನೇರುಘಟ್ಟ ರಸ್ತೆ ನಿವಾಸಿ ಅಗರ್ವಾಲ್ ಎಂಬಾತನನ್ನು ವಶಕ್ಕೆ …
Read More »ಟೈಗರ್ 3’ಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್: ಮೊದಲ ದಿನವೇ 44 ಕೋಟಿ ಕಲೆಕ್ಷನ್!
ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ ‘ಟೈಗರ್ 3’ ಚಿತ್ರ ಬಿಡುಗಡೆಯಾದ ಮೊದಲ ದಿನ 44.5 ಕೋಟಿ ರೂಪಾಯಿ ಗಳಿಸಿದೆ. ದೀಪಾವಳಿ ಹಬ್ಬದ ಉಡುಗೊರೆಯಾಗಿ ನವೆಂಬರ್ 12ರಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ನಟಿ ಕತ್ರಿನಾ ಕೈಫ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟೈಗರ್ 3’ ಬಿಡುಗಡೆ ಆಗಿದೆ. ಮನೀಶ್ ಶರ್ಮಾ ನಿರ್ದೇಶನದ ಸ್ಪೈ ಥ್ರಿಲ್ಲರ್ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಮೊದಲನೇ ದಿನವೇ ಬಾಕ್ಸ್ ಆಫೀಸ್ ಕೊಳ್ಳೆ …
Read More »ಪಟಾಕಿ ಅವಘಡ: ಬೆಂಗಳೂರಲ್ಲಿ ಗಾಯಗೊಂಡು 25 ಮಂದಿ
ಬೆಂಗಳೂರು: ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸಲು ನಗರದಲ್ಲಿ ಸಾಕಷ್ಟು ಕ್ರಮ ಕೈಗೊಂಡಿದ್ದರೂ 25 ಪಟಾಕಿ ಅವಘಡ ಪ್ರಕರಣಗಳು ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿಯಿಂದ ಇಲ್ಲಿಯವರೆಗೆ ಏಳು ಜನರು ಪಟಾಕಿ ಸಂಬಂಧಿತ ಗಾಯಗಳ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಗಾಯಾಳುಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಐವರಿಗೆ ಓಪಿಡಿಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇವರಲ್ಲಿ 10 ವರ್ಷದ ಬಾಲಕಿ ಮತ್ತು 18 …
Read More »
Laxmi News 24×7