Breaking News

ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ (91) ಅವರು ಇಂದು ಲಿಂಗೈಕ್ಯರಾದರು. ವಯೋಸಹಜ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರು ದಾಸೋಹ ಮಹಾ ಮನೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯ ಸುಮಾರಿಗೆ ಆಂಬ್ಯುಲೆನ್ಸ್ ಮೂಲಕ ದಾಸೋಹ ಮಹಾಮನೆಗೆ ಕರೆತರಲಾಗಿತ್ತು. ಬಳಿಕ ಆಂಬ್ಯುಲೆನ್ಸ್ ನಲ್ಲೇ …

Read More »

ಅರ್ಹರಿಗೆ ರೇಷನ್​ ಕಾರ್ಡ್​ ನೀಡಲು ಮುಂದಿನ ತಿಂಗಳಿಂದ ಅವಕಾಶ:

ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು. ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ನೀಡಲು ಮುಂದಿನ ತಿಂಗಳಿನಿಂದ ವೆಬ್‌ಸೈಟ್‌ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್‌. ಮುನಿಯಪ್ಪ ವಿಧಾನಸಭೆಯಲ್ಲಿ ಇಂದು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಡಾ. ವೈ.ಭರತ್‌ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೈದ್ಯಕೀಯ ಚಿಕಿತ್ಸೆಯ ತುರ್ತು ಸಂದರ್ಭಕ್ಕೆ ಅನುಕೂಲವಾಗಲು ಪಡಿತರ ಕಾರ್ಡ್‌ ನೀಡುವ ಸಲುವಾಗಿ ಪ್ರತ್ಯೇಕ ಪೋರ್ಟಲ್ …

Read More »

ಪುರಾತನ ಭಾರತದಿಂದ ಹಿಡಿದು ಆಧುನಿಕ ಭಾರತ ನಡೆದುಬಂದ ಹೆಜ್ಜೆಗಳನ್ನು ಮೆಲುಕು ಖಾದಿ ಬಟ್ಟೆಯಲ್ಲಿ

ಹಾವೇರಿ: ದೇಶವೆಲ್ಲಾ 79ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧವಾಗುತ್ತಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣಕಳೆದುಕೊಂಡವರ ತ್ಯಾಗಬಲಿದಾನಗಳನ್ನು ಕೊಂಡಾಡಲಾಗುತ್ತಿದೆ. ಪುರಾತನ ಭಾರತದಿಂದ ಹಿಡಿದು ಆಧುನಿಕ ಭಾರತ ನಡೆದುಬಂದ ಹೆಜ್ಜೆಗಳನ್ನು ಮೆಲುಕು ಹಾಕಲಾಗುತ್ತಿದೆ. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಕೋಟ್ಯಂತರ ಜನರು ಪ್ರಾಣತೆತ್ತಿದ್ದಾರೆ. ಲಕ್ಷಾಂತರ ಜನ ಮನೆಮಠ ಕಳೆದುಕೊಂಡಿದ್ದಾರೆ. ಸಹಸ್ರಾರು ಜನ ಅಂಗಾಂಗ ಕಳೆದುಕೊಂಡಿದ್ದಾರೆ. ಆದರೆ ಹಲವು ಹೋರಾಟಗಾರರ ಚಿತ್ರಗಳು ಕಣ್ಮುಂದೆ ಬರುವುದಿಲ್ಲಾ. ಇದಕ್ಕೆ ಕಾರಣ ಕಲಾವಿದರು ಉಳಿದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಬಿಡಿಸುವುದರಲ್ಲಿ ಆಸಕ್ತಿ ವಹಿಸದಿರುವುದೇ ಕಾರಣ ಎನ್ನುತ್ತಾರೆ …

Read More »

ಇಂದಿನಿಂದ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಜಾರಿ! ಟೋಲ್ ಪ್ಲಾಜಾ ಎಂಟ್ರಿಗೆ ಕೇವಲ 15 ರೂ., 7000 ಉಳಿತಾಯ

FASTag Annual Pass: ಕೇಂದ್ರ ಸರ್ಕಾರ ವಾಹನ ಚಾಲಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಆಗಸ್ಟ್ 15 ರಿಂದ ಅಂದ್ರೆ ಇಂದಿನಿಂದ ದೇಶಾದ್ಯಂತ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಆರಂಭವಾಗಲಿದೆ. ಈ ಪಾಸ್ ತೆಗೆದುಕೊಳ್ಳುವವರು ವರ್ಷವಿಡೀ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪಾಸ್ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಹೊಸ ವಾರ್ಷಿಕ ಪಾಸ್ ಮೂಲಕ ಕೇವಲ 15 ರೂ.ಗೆ …

Read More »

ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್, ಪವಿತ್ರಾಗೌಡ ಬಂಧನ

ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ಗೆ ಬಂದ ದರ್ಶನ್ ಅವರನ್ನ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರ ತಂಡ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪವಿತ್ರಾಗೌಡ, ದರ್ಶನ್ ತೂಗುದೀಪ, ಪ್ರದೋಶ್, ಲಕ್ಷ್ಮಣ್ ಹಾಗೂ ನಾಗರಾಜ್‌ನನ್ನ ಬಂಧಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಅವರು ಖಚಿತಪಡಿಸಿದ್ದಾರೆ. ಇನ್ನು ಆರೋಪಿಗಳಾದ ಜಗದೀಶ್, …

Read More »

ನಿಪ್ಪಾಣಿಯ ಶ್ರೀ ವೆಂಕಟೇಶ್ ಮಂದಿರದಲ್ಲಿ ಸ್ಪರ್ಧೆಅಶ್ಮೀತಾ ಟೇಕ್ವಾಂಡೋ ಲೀಗ್‌ನಲ್ಲಿ ಶ್ರದ್ಧಾಗೆ ಚಿನ್ನದ ಪದಕ 9ನೇ ತರಗತಿ ವಿದ್ಯಾರ್ಥಿನಿ 46 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ

ನಿಪ್ಪಾಣಿಯ ಶ್ರೀ ವೆಂಕಟೇಶ್ ಮಂದಿರದಲ್ಲಿ ಸ್ಪರ್ಧೆಅಶ್ಮೀತಾ ಟೇಕ್ವಾಂಡೋ ಲೀಗ್‌ನಲ್ಲಿ ಶ್ರದ್ಧಾಗೆ ಚಿನ್ನದ ಪದಕ 9ನೇ ತರಗತಿ ವಿದ್ಯಾರ್ಥಿನಿ 46 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬೆಳಗಾವಿಯ ಅಂಗಡಿ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿನಿಪ್ಪಾಣಿಯಲ್ಲಿ ಎರಡು ದಿನಗಳ ಕಾಲ ನಡೆದ ಅಶ್ಮೀತಾ ಟೇಕ್ವಾಂಡೋ ಲೀಗ್ ಸ್ಪರ್ಧೆಯಲ್ಲಿ ಶ್ರದ್ಧಾ ಸೂರ್ಯವಂಶಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ ನಿಪ್ಪಾಣಿಯ ಗಾಂಧಿ ಚೌಕ ಹತ್ತಿರವಿರುವ ಶ್ರೀ ವೆಂಕಟೇಶ್ ಮಂದಿರದಲ್ಲಿ ಎರಡು ದಿನಗಳ ಕಾಲ ನಡೆದ …

Read More »

17ರಂದು ಖಾನಾಪೂರ ತಾಲೂಕಿನಲ್ಲಿ ಮತದಾರರ ಹಕ್ಕು ಪಾದಯಾತ್ರೆ; ಡಾ.ಅಂಜಲಿ ನಿಂಬಾಳ್ಕರ್”

ಖಾನಾಪೂರ ತಾಲೂಕಿನಲ್ಲಿ ಮತದಾರರ ಹಕ್ಕು ಪಾದಯಾತ್ರೆ: ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್”ಅವರ ನೇತೃತ್ವದಲ್ಲಿ ದಿನಾಂಕ 17ರಂದು ಆಂಕರ್:- ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪರವಾಗಿ, ಮತದಾರರ ಹಕ್ಕುಗಳ ಸಲುವಾಗಿ ಪಾದಯಾತ್ರೆಯನ್ನು ಇಂದು ಬಿಹಾರದಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಾರಂಭಿಸಲಿದ್ದಾರೆ. ಈ ಅಭಿಯಾನವನ್ನು ಎಐಸಿಸಿ ದೇಶಾದ್ಯಂತ ಜಾರಿಗೆ ತರಲಿದೆ. ಆಗಸ್ಟ್ 17 ರ ಭಾನುವಾರ, ಖಾನಾಪೂರ ಪಟ್ಟಣದ ಶಿವಸ್ಮಾರಕ್ ಚೌಕ್‌ನಿಂದ ನಂದಗಡದ ಸಂಗೊಳ್ಳಿ ರಾಯಣ್ಣನ …

Read More »

ಮೂಡಲಗಿಯಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅಸಂಘಟಿತ ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟಿನ್ ವರದಾನವಾಗಿದ್ದು, ಕಡಿಮೆ ದರದಲ್ಲಿ ಉಪಹಾರ ಮತ್ತು ಊಟದ ಸೌಲಭ್ಯಗಳನ್ನು ಹೊಂದಿರುವ ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು. ಗುರುವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತೆರೆಯಲಾದ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ಬಡ ಬಗ್ಗರಿಗೆ ಇದು ಉಪಯುಕ್ತವಾಗಿದೆ ಎಂದು ತಿಳಿಸಿದರು. ಕಡಿಮೆ ದರದಲ್ಲಿ ಬೆಳಗಿನ ಉಪಹಾರ ಮತ್ತು …

Read More »

ದ್ವಿಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ. ಪರಿಣಾಮ, ದರ್ಶನ್ ಮತ್ತೆ ಜೈಲು ಸೇರಲಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ನೀಡಿದ್ದ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಇಂದು ಅರ್ಜಿಯ ತೀರ್ಪು ಪ್ರಕಟವಾಗಿದೆ. ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ 2024ರ ಜೂನ್ 11ರಂದು ನಟ ದರ್ಶನ್, ಪವಿತ್ರಾ ಗೌಡ …

Read More »

ತ್ರಿವರ್ಣ ಧ್ವಜವನ್ನು ನೇಯುವ ನೇಕಾರ ಮಹಿಳೆಯರ ಬದುಕು ಅತಂತ್ರ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಆದರೆ, ದೇಶದ ಹೆಮ್ಮೆಯ ಪ್ರತೀಕವಾದ ತ್ರಿವರ್ಣ ಧ್ವಜವನ್ನು ನೇಯುವ ನೇಕಾರ ಮಹಿಳೆಯರ ಬದುಕು ಮಾತ್ರ ಅತಂತ್ರವಾಗಿದೆ. ಇಷ್ಟು ವರ್ಷವಾದರೂ ಅವರಿಗೆ ಸರಿಯಾದ ಕೂಲಿ ಸಿಗದೇ ಪರಿದಾಡುವಂತಾಗಿಗೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ನಾಳೆ ಆಗಸ್ಟ್ 15 ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ. ಎಲ್ಲ ಕ್ಷೇತ್ರಗಳಲ್ಲಿ ಭಾರತ ಈಗ ಮುಂಚೂಣಿಯನ್ನು ಸಾಧಿಸಿದೆ. ನಾಳೆ ದೇಶಾದ್ಯಂತ ತ್ರಿವರ್ಣ ಧ್ವಜವನ್ನು ಹಾರಿಸಿ ಅದಕ್ಕೆ ಅತ್ಯಂತ …

Read More »