Breaking News

ಕಲಬುರಗಿಯಲ್ಲಿ ಭಾರಿ ಮಳೆ

ಕಲಬುರಗಿ: ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೊಂದೆಡೆ ಮಳೆಯಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಿಡಿಲು ಬಡಿದು ಒಂದು ಪ್ರಾಣ ಹಾನಿ ಸಂಭವಿಸಿದ್ದು, ಕೆಲವು ಜಾನುವಾರುಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿದು ಕೆಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೆಪ್ಟೆಂಬರ್​ ಮೊದಲ ವಾರದಲ್ಲೇ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂದು ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿತ್ತು. …

Read More »

ಆದಿತ್ಯ ಎಲ್1 ಸೂರ್ಯನ ರಹಸ್ಯಗಳನ್ನು ಅನ್ವೇಷಿಸುವ ಗುರಿಯತ್ತ ಸಾಗುತ್ತಿದೆ.

ಬೆಂಗಳೂರು: ಆದಿತ್ಯ ಎಲ್1 ಸೂರ್ಯನ ರಹಸ್ಯಗಳನ್ನು ಅನ್ವೇಷಿಸುವ ಗುರಿಯತ್ತ ಸಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಇಸ್ರೋ ಮಂಗಳವಾರ ಎರಡನೇ ಭೂಕಕ್ಷೆ ಕಾಲಿಡುವ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿತ್ತು. ಬೆಂಗಳೂರಿನಲ್ಲಿರುವ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಪ್ರಸ್ತುತ ಆದಿತ್ಯ ಎಲ್-1 ಉಪಗ್ರಹವು 282 km x 40225 km ಹೊಸ ಕಕ್ಷೆಯನ್ನು ಪ್ರವೇಶಿಸಿದೆ. ಮುಂದಿನ ಕಕ್ಷೆ ಏರಿಸುವ ತಂತ್ರವನ್ನು ಸೆಪ್ಟೆಂಬರ್ 10 ರಂದು ನಡೆಸಲಾಗುವುದು ಎಂದು ಇಸ್ರೋ ಸಾಮಾಜಿಕ ಮಾಧ್ಯಮ …

Read More »

ಚಿಕ್ಕೋಡಿ ಫುಡ್ ಪಾಯಿಸನ್​ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೇ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಆಗಸ್ಟ್ 28ರಂದು ಫುಡ್ ಪಾಯಿಸನ್ ಪ್ರಕರಣದಲ್ಲಿ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕೋಡಿ ಪಟ್ಟಣದ ಶಬ್ಬಿರ್​ ಮಕಾಂದಾರ (58) ಮೃತರು. ಕಳೆದ ತಿಂಗಳು ಆಗಸ್ಟ್ 28 ರಂದು ಹಿರೇಕೋಡಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭೋಜನದ ಬಳಿಕ 100ಕ್ಕೂ ಹೆಚ್ಚು ಜನ ವಾಂತಿ ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. …

Read More »

IPS ಅಧಿಕಾರಿಗಳ ಮೇಜರಿ ಸರ್ಜರಿ ; ಮಿಡ್​ನೈಟ್​ನಲ್ಲೇ 35 IPS ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ..!

ಬೆಂಗಳೂರು :  IPS ಅಧಿಕಾರಿಗಳ ಮೇಜರಿ ಸರ್ಜರಿ ಮಾಡಲಾಗಿದ್ದು,  ಮಿಡ್​ನೈಟ್​ನಲ್ಲೇ ವರ್ಗಾವಣೆ ಲಿಸ್ಟ್​ ಹೊರಬಿದ್ದಿದೆ. ಸರ್ಕಾರ 35 IPS ಅಧಿಕಾರಿಗಳ ವರ್ಗಾವಣೆ ಮಾಡಿದೆ.  ಅನುಪಮ್​ ಅಗರವಾಲ್​​​-ಮಂಗಳೂರು ಕಮಿಷನರ್​​, ಶ್ರೀನಿವಾಸಗೌಡ-ಬೆಂಗಳೂರು CCB-2 ಡಿಸಿಪಿ, ಡಾ.ಶರಣಪ್ಪ-ಮೈಸೂರು ಪೊಲೀಸ್ ಅಕಾಡೆಮಿ ಡಿಐಜಿ, ವರ್ತಿಕಾ ಕಟಿಯಾರ್​​​- ಬೆಂಗಳೂರು ದಕ್ಷಿಣ ಟ್ರಾಫಿಕ್​​​​​ ಡಿಸಿಪಿ, ಭೀಮಾಶಂಕರ್​ ಗುಳೇದ್​- ಬೆಳಗಾವಿ ಎಸ್​ಪಿ ಮತ್ತು ಅಬ್ದುಲ್​ ಅಹಾದ್​-ಬೆಂಗಳೂರು ಕೇಂದ್ರ ಡಿಸಿಪಿ, ಎಸ್​.ಗಿರೀಶ್​- ಬೆಂಗಳೂರು ಪಶ್ಚಿಮ ಡಿಸಿಪಿ, ಸಂಜೀವ್​ ಪಾಟೀಲ್​​- ವೈಟ್​ಫೀಲ್ಡ್​ ಡಿಸಿಪಿ.  ಡೆಕ್ಕಾ ಕಿಶೋರ್​​ ಬಾಬು-ಕಲಬುರಗಿ ಪೊಲೀಸ್ ತರಬೇತಿ ಕೇಂದ್ರ, …

Read More »

ಬರ ಘೋಷಿತ ತಾಲೂಕುಗಳಲ್ಲಿ ಮನೆಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ: ಸಚಿವ ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಬರ ಘೋಷಣೆ ಆಗುವ ತಾಲೂಕುಗಳಿಗೆ ಪಡಿತರ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಎಂದು ಘೋಷಿಸುವ ಎಲ್ಲ ತಾಲೂಕಿನಲ್ಲಿ 10 ಕೆಜಿ ಅಕ್ಕಿ ವಿತರಣೆ ಮಾಡಲಿದ್ದೇವೆ. ಮನೆಯ ಪ್ರತೀ ಸದಸ್ಯರಿಗೆ 10 ಕೆಜಿ ಅಕ್ಕಿ ವಿತರಿಸಲು ನಿರ್ಧರಿಸಲಾಗಿದೆ. ಸುಮಾರು 114 ತಾಲೂಕುಗಳನ್ನ ಬರಪೀಡಿತ ತಾಲೂಕು ಎಂದು ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ 114 ತಾಲೂಕಿನ …

Read More »

ಎನ್​​ಎಸ್​ಇಯಲ್ಲಿ ಕನ್ನಡ ಮಾಧ್ಯಮ ಸೇರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು : ಭಾರತೀಯ ಭೌತಶಾಸ್ತ್ರ ಉಪನ್ಯಾಸಕರ ಒಕ್ಕೂಟ ನಡೆಸುತ್ತಿರುವ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯಲ್ಲಿ ಕನ್ನಡ ಮಾಧ್ಯಮ ಸೇರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.   ಭಾರತೀಯ ಭೌತಶಾಸ್ತ್ರ ಉಪನ್ಯಾಸಕರ ಒಕ್ಕೂಟ ನಡೆಸುವ ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯನ್ನು ಕನ್ನಡ ಮಾಧ್ಯಮದಲ್ಲಿ ಬರೆಯುವ ಆಯ್ಕೆ ನೀಡದಿರುವುದರಿಂದ ನಮಗೆ ನೋವಾಗಿದೆ. NSE ಭೌತಶಾಸ್ತ್ರ, ಕೆಮಿಸ್ಟ್ರಿ, ಜೀವಶಾಸ್ತ್ರ ಮತ್ತು ಖಗೋಳಶಾಸ್ತ್ರ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ …

Read More »

ಬೆಳಗಾವಿಯನ್ನು ಮೂರು ಜಿಲ್ಲೆಗಳನ್ನಾಗಿ ಮಾಡಿ ಎಂದು ಸತೀಶ್ ಜಾರಕಿಹೊಳಿ ಮನವಿ

ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು ಎಂದು ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆಯೇ ಎನ್ನುವ ಪ್ರಶ್ನೆಗೆ “ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆ ವಿಚಾರವಾಗಿ ಯಾವುದೇ ತೀರ್ಮಾನ ಸದ್ಯಕ್ಕಿಲ್ಲ. ಆಡಳಿತ ದೃಷ್ಟಿಯಿಂದ ಸುಲಭ ಆಗುತ್ತದೆ ಎಂದು ಮನವಿ ನೀಡಿದ್ದಾರೆ. ರಾಮನಗರ, ಗದಗ, ಚಾಮರಾಜನಗರ ನಾಲ್ಕು ಮತ್ತು ಕೊಡಗು ಎರಡು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿವೆ. ಯಾರೂ ಗಾಬರಿ ಮಾಡಿಕೊಳ್ಳುವ ಅಗತ್ಯವಿಲ್ಲ. ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಉತ್ತರಿಸಿದರು.  

Read More »

ಇದೇ ಸೆ.7ಕ್ಕೆ ಒಂದು ಗಂಟೆ ಕಾಲ ಪಾದಯಾತ್ರೆ : ಡಿಸಿಎಂ ಡಿ. ಕೆ ಶಿವಕುಮಾರ್

ಒಂದು ಗಂಟೆ ಕಾಲ ಪಾದಯಾತ್ರೆ : ಇದೇ ಸೆ.7ಕ್ಕೆ ಭಾರತ್ ಜೋಡೊ ಯಾತ್ರೆಗೆ 1 ವರ್ಷ ತುಂಬುತ್ತದೆ. ಇದರ ನೆನಪಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಬೇಕು ಎಂದು ನಿರ್ಧರಿಸಿದ್ದೇವೆ. ಸಂಜೆ 5 ರಿಂದ 6 ಗಂಟೆಯ ತನಕ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅಲ್ಲಿ ಅವರು ಹೆಜ್ಜೆ ಹಾಕಲಿದ್ದಾರೆ. ಪಾದಯಾತ್ರೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಬೇಕು …

Read More »

ಬಿಬಿಎಂಪಿಯಲ್ಲಿ ಪೂರ್ಣಗೊಂಡಿರುವ ಕೆಲಸಗಳಿಗೆ ಆದ್ಯತೆ ಮೇರೆಗೆ ಶೇ. 50ರಷ್ಟು ಹಣ ಬಿಡುಗಡೆ ಮಾಡಿ, ಬಾಕಿ ಹಣವನ್ನು ಸಮಿತಿಯ ವರದಿ ಬಂದ ನಂತರ ಬಿಡುಗಡೆಗೆ

ಬೆಂಗಳೂರು : ಪೂರ್ಣಗೊಂಡ ಬಿಬಿಎಂಪಿ ಕಾಮಗಾರಿಗಳ ಶೇ. 50ರಷ್ಟು ಹಣ ಬಿಡುಗಡೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೂರ್ಣಗೊಂಡಿರುವ ಕೆಲಸಗಳಿಗೆ ಆದ್ಯತೆ ಮೇರೆಗೆ ಶೇ.50ರಷ್ಟು ಹಣ ಬಿಡುಗಡೆ ಮಾಡಿ, ಬಾಕಿ ಹಣ ಸಮಿತಿಯ ವರದಿ ಬಂದ ನಂತರ ಬಿಡುಗಡೆಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.  

Read More »

ಸೆ.8 ರಿಂದ 10 ರವರೆಗೆ ವ್ಯಾಪಾರ ಚಟುವಟಿಕೆಗಳನ್ನು ಮತ್ತು ಆನ್​ಲೈನ್​ ವಿತರಣಾ ಸೇವೆಗಳನ್ನು ನಿಷೇಧಿಸಲಾಗಿದೆ.

ನವದೆಹಲಿ: ಸೆಪ್ಟೆಂಬರ್ 8 ರಿಂದ 10 ರವರೆಗೆ ಜಿ20 ಶೃಂಗಸಭೆಯ ನಡೆಯಲಿರುವ ಕಾರಣ ದೆಹಲಿಯಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಮತ್ತು ಆನ್​ಲೈನ್ ವಿತರಣಾ ಸೇವೆಗಳಿಗೆ ನಿಷೇಧ ಹೇರಲಾಗಿದೆ. ಈ ವೇಳೆ ದೆಹಲಿ ಪೊಲೀಸರು ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಮತ್ತು ರೈಲುಗಳು, ವಿಮಾನ ಪ್ರಮಾಣಿಕರಿಗೆ ಮಾತ್ರ ವಿನಾಯಿತಿ ನೀಡಲಿದ್ದಾರೆ. ಆದ್ದರಿಂದ, ಇತರ ಸಾರ್ವಜನಿಕರು ಮನೆಯಿಂದ ಹೊರ ಹೋಗದಿದ್ದರೆ ಉತ್ತಮ ಎಂದು ಪೊಲೀಸರು ತಿಳಿಸಿದ್ದಾರೆ.       ಇನ್ನು ಆಗಸ್ಟ್ 25 ರಂದು ಹೊರಡಿಸಲಾದ …

Read More »