ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎನ್ನುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಬಂಡಾಯದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಮೊನ್ನೆಯಷ್ಟೇ ಖಾಸಗಿ ಮಾಧ್ಯಮದ ಜೊತೆ ಮಾತನಾಡುತ್ತಿದ್ದ ವೇಳೆ ನನ್ನ ಮೌನ ನನ್ನ ವೀಕ್ನೆಸ್ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ವಿಚಾರದ ಬಗ್ಗೆ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಉತ್ತರಿಸಿದರು. ಜಿಲ್ಲಾ ಕಾಂಗ್ರೆಸ್ನಲ್ಲಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಸೂಪರ್ ಸೀಡ್ ತೂಗುಗತ್ತಿ
ಬೆಳಗಾವಿ: ಒಂದು ಕಡೆ ತಮ್ಮದೇ ಸರ್ಕಾರದ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಮುನಿಸು ದೊಡ್ಡ ಸಂಚಲನ ಸೃಷ್ಟಿಸಿದರೆ, ಮತ್ತೊಂದೆಡೆ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್ಗೆ ಹುನ್ನಾರ ನಡೆದಿದೆಯಾ ಎಂಬ ಅನುಮಾನ ಮೂಡಿದೆ. ಇದರಿಂದ ಇಂದು ನಡೆಯಲಿರುವ ಪಾಲಿಕೆ ಸಾಮಾನ್ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಹೀಗೊಂದು ಅನುಮಾನ ದಟ್ಟವಾಗಲು ಕಾರಣ, ಪಾಲಿಕೆ ಮೆಯರ್ ಶೋಭಾ ಸೋಮನಾಚೆ ಅವರು. ಅಕ್ಟೋಬರ್ 17 ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ. …
Read More »ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ಖಚಿತಪಡಿಸಿದ ಮದ್ರಾಸ್ ಹೈಕೋರ್ಟ್: 15 ದಿನದಲ್ಲಿ ಶರಣಾಗಲು ಆದೇಶ
ಚೆನ್ನೈ (ತಮಿಳುನಾಡು): ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ಖಚಿತಪಡಿಸಿತು. 15 ದಿನದಲ್ಲಿ ಎಗ್ಮೋರ್ ಕೋರ್ಟ್ಗೆ ಶರಣಾಗುವಂತೆ ಹಾಗೂ 20 ಲಕ್ಷ ರೂ. ಠೇವಣಿ ಇಡುವಂತೆ ಸೂಚಿಸಿದೆ. ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಜಯಪ್ರದಾ, ಸಂಸತ್ ಸದಸ್ಯರಾಗಿದ್ದರು. ಚೆನ್ನೈನಲ್ಲಿ ರಾಮಕುಮಾರ್, ರಾಜ್ಬಾಬು ಎಂಬವರೊಂದಿಗೆ ಸೇರಿ ಚಿತ್ರಮಂದಿರವನ್ನು ನಡೆಸುತ್ತಿರುವ ಇವರು, …
Read More »ಮತ್ತೆ ಚಲಾವಣೆಗೆ ಬರುತ್ತಾ 1,000 ರೂಪಾಯಿ ನೋಟು?: ಹೀಗೊಂದು ವದಂತಿ
ನವದೆಹಲಿ: ಏಳು ವರ್ಷಗಳ ಹಿಂದೆ ರದ್ದಾದ 1,000 ರೂಪಾಯಿ ಮುಖಬೆಲೆಯ ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹಳೆಯ ನೋಟನ್ನು ಮತ್ತೆ ಪರಿಚಯಿಸುವ ಆಲೋಚನೆಯಲ್ಲಿಲ್ಲ ಎಂದೂ ವರದಿಯಾಗಿದೆ. 2016ರಲ್ಲಿ ನವೆಂಬರ್ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಎಂದು ಘೋಷಿಸಿತ್ತು. ಆರ್ಬಿಐ 500 ರೂ.ಗಳ ಹೊಸ ನೋಟುಗಳು ಹಾಗೂ 2000 ರೂ. ಬೆಲೆಯ ನೋಟುಗಳನ್ನು …
Read More »ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯುವ ವಿಚಾರ: ಕಡತ ಕ್ಯಾಬಿನೆಟ್ ಮುಂದಿಡಲು ಸಿಎಂ ಸೂಚನೆ
ಬೆಂಗಳೂರು: ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಕಡತವನ್ನು ಸಂಪುಟ ಸಭೆ ಮುಂದೆ ತರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಎಂಎಲ್ಸಿ ದಿನೇಶ್ ಗೂಳಿಗೌಡ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಸಿಎಂ, ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ …
Read More »ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ನಾನು ಬಿಜೆಪಿಗೆ ಸತ್ತರೂ ಹೋಗಲಾರೆ-ಕಾಂಗ್ರೆಸ್ ಶಾಸಕ ರಾಜು ಕಾಗೆ
ಬೆಳಗಾವಿ: ನಾವು ಸಾಯುವವರೆಗೂ ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ. ಇದು ನೂರಕ್ಕೆ ನೂರು ಸತ್ಯ. ಸತ್ತರೆ ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಅವರು, ಮರಳಿ ಬಿಜೆಪಿ ಸೇರ್ಪಡೆಯಾಗುತ್ತೀರಾ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು. ಮೈಸೂರು ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ಏನೂ ಇಲ್ಲ, ಪ್ರವಾಸಕ್ಕೆ ಹೋಗಿದ್ದೆವು. ಜೀವನದಲ್ಲಿ ಎಂದೂ ಮೈಸೂರಿಗೆ ಹೋಗಿರಲಿಲ್ಲ. ಹಾಗಾಗಿ, …
Read More »ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುತ್ತಾರೆಂಬುದು ಊಹಾಪೋಹ ಅಷ್ಟೇ: ಲಕ್ಷ್ಮಣ್ ಸವದಿ
ಚಿಕ್ಕೋಡಿ(ಬೆಳಗಾವಿ): “ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ನೀಡುತ್ತಾರೆಂಬ ವಿಚಾರ ಊಹಾಪೋಹ ಅಷ್ಟೇ. ಈ ಬಗ್ಗೆ ನನಗೆ ಮಾಹಿತಿಯೂ ಇಲ್ಲ” ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇದೆಲ್ಲಾ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ನಾನು ತಾಲೂಕಿನ ಅಭಿವೃದ್ಧಿ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಭೇಟಿಗೆ ಹೋಗಿದ್ದೆ. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ” ಎಂದರು. “ಪದಾಧಿಕಾರಿಗಳ ಪುನರ್ರಚನೆಯನ್ನು ಕೇಂದ್ರದ ವರಿಷ್ಠರು ಹಾಗೂ …
Read More »ಮೂರು ವರ್ಷಗಳ ಹಿಂದೆ ಮಹಿಳೆಯನ್ನು ಕೊಲೆಗೈದು ಕಿಡ್ನಾಪ್ ಕಥೆ ಕಟ್ಟಿದ್ದ ಸಹೋದರ ಮತ್ತು ಪತಿ ಸೇರಿ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಅನೈತಿಕ ಸಂಬಂಧ ಶಂಕೆಯಿಂದ ಮಹಿಳೆಯನ್ನು ಆಕೆಯ ಪತಿ, ಸಹೋದರರು ಹಾಗೂ ಸಂಬಂಧಿಕರು ಮೂರು ವರ್ಷಗಳ ಹಿಂದೆ ಕೊಲೆ ಮಾಡಿ, ಕಾಣೆಯಾಗಿರುವುದಾಗಿ ಕಥೆ ಕಟ್ಟಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಸಂಪೂರ್ಣ ವಿವರ: ಗೋಕಾಕ್ ಪಟ್ಟಣದ ಶಿವಲೀಲಾ ವಿಠ್ಠಲ್ ಬಂಗಿ (32) ಎಂಬವರು ಕೊಲೆಯಾದವರು. ರಾಯಬಾಗ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರಿಗೆ ಪತಿ ವಿಠ್ಠಲ ಮತ್ತು ಶಿವಲೀಲಾ ಸಹೋದರರು ನಿನ್ನ ನಡತೆ ಸರಿಯಿಲ್ಲ ಬದಲಾಗು ಎಂದು …
Read More »ಚನ್ನಮ್ಮನ ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸಿದ ವೀರಜ್ಯೋತಿ ಇಂದು ಬೆಳಗಾವಿ ಆಗಮಿಸಿತು.
ಬೆಳಗಾವಿ: ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಆಯೋಜಿಸಲಾಗಿದೆ. ಇದೇ 13ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ ವೀರಜ್ಯೋತಿ ರಾಜ್ಯದ ವಿವಿಧೆಡೆ ಸಂಚರಿಸಿ ಇಂದು ಬೆಳಗಾವಿಗೆ ಆಗಮಿಸಿತು. ವೀರಜ್ಯೋತಿಯನ್ನು ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನಗರದ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವೀರಜ್ಯೋತಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಶಾಸಕರಾದ ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಮೇಯರ್ ಶೋಭಾ ಸೋಮನ್ನಾಚೆ, ಉಪಮೇಯರ್ ರೇಷ್ಮಾ ಪಾಟೀಲ ಸೇರಿ ಇನ್ನಿತರ ಗಣ್ಯರು …
Read More »
Laxmi News 24×7