Breaking News

ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು: ಡಿಸಿಎಂ ಡಿಕೆಶಿ

ಬೆಂಗಳೂರು: ”ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಸಂಘಟನೆಗಳು ತಮಿಳುನಾಡಿಗೆ ನೀರು ಬಿಡದಂತೆ ಹೋರಾಟ ನಡೆಸ್ತಿವೆ ಧನ್ಯವಾದಗಳು. ಆದರೆ, ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ವು? ಆಗ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಅಂತ ಕೇಂದ್ರಕ್ಕೆ ಕೇಳಲಿಲ್ಲ? ಬಿಜೆಪಿ, ಜೆಡಿಎಸ್ ಪಕ್ಷದವರೂ ಕೇಂದ್ರಕ್ಕೆ ಮೇಕೆದಾಟು ಯೋಜನೆಯ ಅನುಮತಿಗೆ ಯಾಕೆ ಕೇಳ್ತಿಲ್ಲ? …

Read More »

ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಪ್ರತಿಭಟನೆ

ಚಾಮರಾಜನಗರ: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ತಮಿಳುನಾಡಿನ‌ ಸಚಿವ ಉದಯನಿಧಿ ಅವರನ್ನು ಬಂಧಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಆಗ್ರಹಿಸಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಸನಾತನ ಧರ್ಮ ಕೊರೊನಾ, ಡೆಂಘಿ ಇದ್ದಂತೆ ಎಂದು ಹೇಳಿಕೆ ಕೊಟ್ಟಿರುವುದು ಖಂಡನೀಯ, ಸನಾತನ ಧರ್ಮ ಎಂದರೆ ನಿನ್ನೆ- ಮೊನ್ನೆ ಹುಟ್ಟಿದ್ದಲ್ಲ, ಉದಯನಿಧಿ ಅಂತಹವರು ಕೋಟಿ ಮಂದಿ ಹುಟ್ಟಿದರೂ ಹಿಂದೂ ಧರ್ಮವನ್ನು ಕಿತ್ತುಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು. ಎಲ್ಲಾ ಧರ್ಮಗಳಿಗೂ ಅದರದೇ …

Read More »

ಒಂದು ದೇಶ ಒಂದು ಚುನಾವಣೆ ಹಿಂದೆ ಸಾಕಷ್ಟು ಅನುಮಾನಗಳಿವೆ: ಸಚಿವ ಹೆಚ್.ಕೆ ಪಾಟೀಲ್

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹೊರಟಿದ್ದು, ಇದರಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರು ರಾಜಕೀಯ ವಾಸನೆ ಇದ್ದವರಾಗಿದ್ದಾರೆ. ಕೇಂದ್ರ ಸರ್ಕಾರ ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ …

Read More »

ಮಳೆ ಬಂದಿಲ್ಲವೆಂದು ಹೂತಿದ್ದ ಶವ ಹೊರ‌ತೆಗೆದು ಅಂತ್ಯಸಂಸ್ಕಾರ.

ದಾವಣಗೆರೆ : ತಾಲೂಕಿನ ನಲ್ಕುಂದ ಗ್ರಾಮದ ಗ್ರಾಮಸ್ಥರು ಆಧುನಿಕ ಯುಗದಲ್ಲೂ ಮೂಢನಂಬಿಕೆ ಮೊರೆ ಹೋಗಿದ್ದಾರೆ. ತೊನ್ನು ಹತ್ತಿದ ಮಹಿಳೆಯ ಶವ ಹೊರತೆಗೆದು ಸುಟ್ಟರೆ ಮಳೆ ಬರುತ್ತೆ ಎಂದು ನಂಬಿ ಮಹಿಳೆ (ಲಕ್ಷ್ಮಿದೇವಿ)ಯ ಶವವನ್ನು ಹೊರತೆಗೆದು ಮರು ಅಂತ್ಯ ಸಂಸ್ಕಾರ ಮಾಡಿ, ಮಹಿಳೆಯ ಕುಟುಂಬಸ್ಥರ ಅನುಮತಿಯಂತೆ ಸುಟ್ಟಿದ್ದಾರೆ. ಆದರೆ ಅದೇನಾಯಿತೋ ಗೊತ್ತಿಲ್ಲ, ಕ್ಷಣಾರ್ಧದಲ್ಲೇ ಇಡೀ ನಲ್ಕುಂದ ಗ್ರಾಮ ರಣರಂಗವಾಗಿ ಮಾರ್ಪಟ್ಟಿದೆ. ದಾವಣಗೆರೆ ತಾಲೂಕಿನ ನಲ್ಕುಂದ ಗ್ರಾಮದಲ್ಲಿ ಎರಡು ಸಾವಿರಕ್ಕೂ‌ ಹೆಚ್ಚು ಜನ ಜೀವನ …

Read More »

ಸೂಪರ್​ ಸ್ಟಾರ್​’ ರಜನಿಕಾಂತ್‌ಗೆ ರಾಜ್ಯಪಾಲ ಹುದ್ದೆ?

ಮಧುರೈ (ತಮಿಳುನಾಡು): ”ಎಲ್ಲವೂ ದೇವರ ಕೈಯಲ್ಲಿದೆ. ರಜಿನಿ ಅವರಿಗೆ ಇದು (ರಾಜ್ಯಪಾಲರ ಹುದ್ದೆ) ಇಷ್ಟವಿಲ್ಲ. ಆದರೆ, ಬಹುಶಃ ಅವರು ಸಿಕ್ಕರೆ ಹಿಂಜರಿಯುವುದಿಲ್ಲ” ಎಂದು ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಹೇಳಿದ್ದಾರೆ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಬಳಿಕ, ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದ್ದಾರೆ. ರಜನಿಕಾಂತ್​ಗೆ ರಾಜ್ಯಪಾಲರ ಹುದ್ದೆ?: ”ರಜನಿಕಾಂತ್ ರಾಜಕೀಯಕ್ಕೆ ಬರಲು ಯೋಚಿಸಿಲ್ಲ” ಎಂದು ರಜನಿ ಸಹೋದರ ಸತ್ಯನಾರಾಯಣ ರಾವ್ …

Read More »

ಲಾಠಿ ಚಾರ್ಜ್ ಘಟನೆ​ ಬಳಿಕ ಅಧಿಕಾರ ವಹಿಸಿಕೊಂಡ ನೂತನ ಎಸ್​ಪಿ.. ಜಲ್ನಾದಲ್ಲಿ ಇಂದಿನಿಂದ ಸೆ. 17ರ ವರೆಗೆ ಕರ್ಫ್ಯೂ ಜಾರಿ

ಜಲ್ನಾ (ಮಹಾರಾಷ್ಟ್ರ) : ಮರಾಠಾ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದೋಷಿ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಅವರ ಸ್ಥಾನಕ್ಕೆ ಈಗ ನೂತನ ಎಸ್ಪಿ ಶೈಲೇಶ್ ಬಳಕವಾಡೆ ಅಧಿಕಾರ ವಹಿಸಿಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಭಿನ್ನಾಭಿಪ್ರಾಯವನ್ನು ಪರಿಹರಿಸಲಿದ್ದೇನೆ ಎಂದು ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಶೈಲೇಶ್ ಬಳಕವಾಡೆ, ನಾನು ಸಾಮಾನ್ಯ ಮನುಷ್ಯನಂತೆ ಕೆಲಸ ಮಾಡುತ್ತೇನೆ. ಅಂತರವಳ್ಳಿ ಸಾರತಿ ಗ್ರಾಮಕ್ಕೆ ತೆರಳಿ ಪ್ರತಿಭಟನಾಕಾರ ಮನೋಜ …

Read More »

‘ಸನಾತನ ಧರ್ಮ’ ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್​

ಚೆನ್ನೈ: ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ರೋಗಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ‘ತಾನು ನೀಡಿದ ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ರೀತಿಯ ಸವಾಲಿಗೆ ಸಿದ್ಧ’ ಎಂದು ಉದಯನಿಧಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಯುವ ಸಚಿವ, ಸನಾತನ ಧರ್ಮ ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರವಿದ್ದಂತೆ. ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು. ಸನಾತನ ಜಾತಿ …

Read More »

ಲೋಕಸಭಾ ಚುನಾವಣೆ 2024: ಬಾಗಲಕೋಟೆ ಟಿಕೆಟ್ ಆಕಾಂಕ್ಷಿಗಳ‌ ಪಟ್ಟಿ ಹೀಗಿದೆ

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಇನ್ನು 9 ತಿಂಗಳು ಬಾಕಿ ಇರುವಾಗಲೇ ‌ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನಮಂತನ ಬಾಲದಂತೆ ಬೆಳೆಯುತ್ತಿದ್ದು, ನಾನಾ..ನೀನಾ ಎಂಬ ಸ್ಪರ್ಧೆ ಏರ್ಪಟ್ಟಿದೆ. ಕಳೆದ‌ ಲೋಕಸಭಾ‌ ಚುನಾವಣೆಗೆ ಕಾಂಗ್ರೆಸ್ ‌ಪಕ್ಷದಿಂದ‌ ಸ್ಪರ್ಧೆ ಮಾಡಿ ಸೋಲು ಕಂಡಿರುವ ವೀಣಾ ಕಾಶಪ್ಪನವರ ಮತ್ತೆ ಅಖಾಡಕ್ಕಿಳಿಯುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಹಲವರು ತಾವೂ ಕೂಡ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಮೂಲಕ‌ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗೆ …

Read More »

ಮಂಗಸೂಳಿ ಗ್ರಾಮದ ಆರಾಧ್ಯ ದೈವ ಶ್ರೀ ಮಲ್ಲಯ್ಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾವಿರಾರು ಭಕ್ತರ ವಿಶೇಷ ಪೂಜೆ

ಕಾಗವಾಡದ ತಾಲೂಕಿನ ಮಂಗಸೂಳಿ ಗ್ರಾಮದ ಆರಾಧ್ಯ ದೈವ ಶ್ರೀ ಮಲ್ಲಯ್ಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾವಿರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಶ್ರಾವಣ ಮಾಸದ ನಾಲ್ಕನೇ ಭಾನುವಾರದಂದು ಎರಡೂ ರಾಜ್ಯಗಳ ಗಡಿ ಗ್ರಾಮಗಳ ಭಕ್ತರು ಆಗಮಿಸಿ ದೇವರಿಗೆ ಹರಕೆ ತೀರಿಸಿದರು.   ದೇವಸ್ಥಾನದ ಅರ್ಚಕ ಪ್ರಭು ಪೂಜಾರಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಮಂಗಸೂಳಿ ದಕ್ಷಿಣ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಮಲ್ಲಯ್ಯನ ದೇಗುಲಕ್ಕೆ ಹೆಸರುವಾಸಿಯಾಗಿದೆ. ಮಂಗಸೂಳಿ ಎಂಬ …

Read More »

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ : ಪ್ರದೀಪ್ ಶೆಟ್ಟರ್

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ.ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆ ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ತುಳದಿದ್ದೆ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ . ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ. ಮಾಜಿ ಸಚಿವರಾದ ಮುನೇನಕೊಪ್ಪ,ಮಾಧುಸ್ವಾಮಿ,ರೇಣುಕಾಚಾರ್ಯ,ಮಾಜಿ ಶಾಸಕ ಚಿಕ್ಕನಗೌಡರ ಒಂದು ಕಾಲ ಹೊರಗಡೆ ಇಟ್ಟಿದ್ದಾರೆ. ನಾನು ವಿಧಾನಪರಿಷತ್ …

Read More »